Homeಮುಖಪುಟಮಹಾರಾಷ್ಟ್ರ | ಕ್ಯಾಂಟೀನ್ ಸಿಬ್ಬಂದಿಗೆ ಥಳಿಸಿದ ಶಿವಸೇನೆ ಶಾಸಕ

ಮಹಾರಾಷ್ಟ್ರ | ಕ್ಯಾಂಟೀನ್ ಸಿಬ್ಬಂದಿಗೆ ಥಳಿಸಿದ ಶಿವಸೇನೆ ಶಾಸಕ

- Advertisement -
- Advertisement -

ಮುಂಬೈನ ಸರ್ಕಾರಿ ಕ್ಯಾಂಟೀನ್‌ವೊಂದರಲ್ಲಿ ಹಳಸಿದ ಆಹಾರ ನೀಡಿದ್ದಕ್ಕೆ ಆಡಳಿತಾರೂಢ ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್ ಸಿಬ್ಬಂದಿಗೆ ಥಳಿಸಿದ ಘಟನೆ ನಡೆದಿದೆ.

ಶಿವಸೇನೆ (ಯುಬಿಟಿ)ಯ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಈ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ, ಅದರಲ್ಲಿ ಗಾಯಕ್ವಾಡ್ ಕ್ಯಾಂಟೀನ್ ಸಿಬ್ಬಂದಿಯ ಕಪಾಳ ಬಾರಿಸಿರುವುದು ಮತ್ತು ಬಲವಾಗಿ ಗುದ್ದಿರುವುದನ್ನು ನೋಡಬಹುದು.

“ಶಾಹ್ ಸೇನಾದ ಶಾಸಕ ಸಂಜಯ್ ಗಾಯಕ್ವಾಡ್ ಅವರನ್ನು ನೋಡಿ. ಕಳೆದ ವರ್ಷ, ಅವರು ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದರು ಮತ್ತು ಬೆದರಿಕೆ ಹಾಕಿದ್ದರು. ಈಗ ಆ ವ್ಯಕ್ತಿ ಬಡ, ಅಸಹಾಯಕ ಕ್ಯಾಂಟೀನ್ ಸಿಬ್ಬಂದಿಗೆ ಹೊಡೆಯುತ್ತಿರುವುದು ಕಂಡುಬಂದಿದೆ. ಆದರೆ, ಸ್ವಲ್ಪ ಕಾಯಿರಿ – ಅವರು ಬಿಜೆಪಿ ಮಿತ್ರರಾಗಿರುವುದರಿಂದ ಯಾವುದೇ ಟಿವಿ ಸುದ್ದಿಗಳ ಆರ್ಭಟಿಸುತ್ತಿಲ್ಲ” ಎಂದು ಪ್ರಿಯಾಂಕಾ ಚತುರ್ವೇದಿ ಬರೆದುಕೊಂಡಿದ್ದಾರೆ.

ಈ ನಡುವೆ, ಹಲ್ಲೆ ಮಾಡಿರುವ ಬಗ್ಗೆ ತನಗೆ ‘ಯಾವುದೇ ವಿಷಾದವಿಲ್ಲ’ ಮತ್ತು ಯಾರಾದರೂ ಪ್ರಜಾಪ್ರಭುತ್ವದ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲವಾದರೆ ‘ಇದನ್ನು ಪುನರಾವರ್ತಿಸುತ್ತೇನೆ’ ಎಂದು ಶಾಸಕ ಗಾಯಕ್ವಾಡ್ ಹೇಳಿದ್ದಾರೆ.

“ರಾಜ್ಯದ ವಿವಿದೆಡೆಗಳಿಂದ ಜನರು ಇಲ್ಲಿಗೆ ಬರುತ್ತಾರೆ. ಕಾರ್ಮಿಕರು, ಅಧಿಕಾರಿಗಳು, ಎಲ್ಲರೂ ಇಲ್ಲಿಗೆ ಆಹಾರ ಸೇವಿಸಲು ಆಗಮಿಸುತ್ತಾರೆ. ಇದು ಸರ್ಕಾರಿ ಕ್ಯಾಂಟೀನ್ ಆಗಿರುವುದರಿಂದ ಇಲ್ಲಿ ಆಹಾರದ ಗುಣಮಟ್ಟ ಉತ್ತಮವಾಗಿರಬೇಕು. ನಾನು ಮಾಡಿದ್ದಕ್ಕೆ ನನಗೆ ಯಾವುದೇ ವಿಷಾದವಿಲ್ಲ. ನಾನು ಸಾರ್ವಜನಿಕ ಪ್ರತಿನಿಧಿ” ಎಂದು ಗಾಯಕ್ವಾಡ್ ಹೇಳಿದ್ದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ಯಾರಾದರೂ ಪ್ರಜಾಪ್ರಭುತ್ವ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲರಾದಾಗ ನಾನು ಈ ರೀತಿಯ ಭಾಷೆಯನ್ನು ಬಳಸಬೇಕಾಗುತ್ತದೆ. ಅವರು ಮರಾಠಿ ಮಾತನಾಡುತ್ತಾರಾ ಅಥವಾ ಹಿಂದಿ ಮಾತನಾಡುತ್ತಾರಾ ಎಂದು ನೋಡಿ ನಾನು ಥಳಿಸಲಿಲ್ಲ” ಎಂದಿದ್ದಾರೆ.

ನಾನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವಾರು ಬಾರಿ ದೂರು ನೀಡಿದ್ದೇನೆ. ನಾನು ಅದನ್ನು ಪುನರಾವರ್ತಿಸುತ್ತೇನೆ ಶಾಸಕ ಸಂಜಯ್ ಗಾಯಕ್ವಾಡ್ ಹೇಳಿದ್ದಾರೆ.

ಕಳೆದ ವರ್ಷ, ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂಪಾಯಿಗಳ ಬಹುಮಾನ ನೀಡುವುದಾಗಿ ಘೋಷಿಸುವ ಮೂಲಕ ಗಾಯಕ್ವಾಡ್ ಸುದ್ದಿಯಾಗಿದ್ದರು.

ಈ ವರ್ಷದ ಮಹಾರಾಷ್ಟ್ರದಲ್ಲಿ ಭಾಷಾ ವಿವಾದ ಭುಗಿಲೆದ್ದಿರುವ ಮಧ್ಯೆ ಶಾಸಕ ಹಲ್ಲೆ ಮಾಡಿದ್ದಾರೆ. ಹಾಗಾಗಿ, ಇಲ್ಲಿ ಹಿಂದಿ vs ಮರಾಠಿ ಚರ್ಚೆಗಳು ತೀವ್ರಗೊಂಡಿದೆ. ರಾಜ್ಯದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗಳಿಗೆ ರಾಜಕೀಯ ನಾಯಕರು ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮಂಗಳವಾರ ಮುಂಬೈ ಬಳಿಯ ಮೀರಾ ಭಯಂದರ್ ಪ್ರದೇಶದಲ್ಲಿ ಮರಾಠಿ ಅಸ್ಮಿತೆ ರಕ್ಷಿಸಲು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಮರಾಠಿಯಲ್ಲಿ ಮಾತನಾಡಲು ನಿರಾಕರಿಸಿದ್ದಕ್ಕಾಗಿ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ ನಂತರ ಉಂಟಾದ ರಾಜಕೀಯ ಉದ್ವಿಗ್ನತೆಯ ನಡುವೆ ಪ್ರತಿಭಟನೆ ನಡೆದಿದೆ.

ಗುಜರಾತ್‌ನಲ್ಲಿ ಮತ್ತೊಂದು ಸೇತುವೆ ಕುಸಿತ: ನದಿಗೆ ಬಿದ್ದ ವಾಹನಗಳು; 9 ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...