Homeಮುಖಪುಟಮಹಾರಾಷ್ಟ್ರ | ಕ್ಯಾಂಟೀನ್ ಸಿಬ್ಬಂದಿಗೆ ಥಳಿಸಿದ ಶಿವಸೇನೆ ಶಾಸಕ

ಮಹಾರಾಷ್ಟ್ರ | ಕ್ಯಾಂಟೀನ್ ಸಿಬ್ಬಂದಿಗೆ ಥಳಿಸಿದ ಶಿವಸೇನೆ ಶಾಸಕ

- Advertisement -
- Advertisement -

ಮುಂಬೈನ ಸರ್ಕಾರಿ ಕ್ಯಾಂಟೀನ್‌ವೊಂದರಲ್ಲಿ ಹಳಸಿದ ಆಹಾರ ನೀಡಿದ್ದಕ್ಕೆ ಆಡಳಿತಾರೂಢ ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್ ಸಿಬ್ಬಂದಿಗೆ ಥಳಿಸಿದ ಘಟನೆ ನಡೆದಿದೆ.

ಶಿವಸೇನೆ (ಯುಬಿಟಿ)ಯ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಈ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ, ಅದರಲ್ಲಿ ಗಾಯಕ್ವಾಡ್ ಕ್ಯಾಂಟೀನ್ ಸಿಬ್ಬಂದಿಯ ಕಪಾಳ ಬಾರಿಸಿರುವುದು ಮತ್ತು ಬಲವಾಗಿ ಗುದ್ದಿರುವುದನ್ನು ನೋಡಬಹುದು.

“ಶಾಹ್ ಸೇನಾದ ಶಾಸಕ ಸಂಜಯ್ ಗಾಯಕ್ವಾಡ್ ಅವರನ್ನು ನೋಡಿ. ಕಳೆದ ವರ್ಷ, ಅವರು ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದರು ಮತ್ತು ಬೆದರಿಕೆ ಹಾಕಿದ್ದರು. ಈಗ ಆ ವ್ಯಕ್ತಿ ಬಡ, ಅಸಹಾಯಕ ಕ್ಯಾಂಟೀನ್ ಸಿಬ್ಬಂದಿಗೆ ಹೊಡೆಯುತ್ತಿರುವುದು ಕಂಡುಬಂದಿದೆ. ಆದರೆ, ಸ್ವಲ್ಪ ಕಾಯಿರಿ – ಅವರು ಬಿಜೆಪಿ ಮಿತ್ರರಾಗಿರುವುದರಿಂದ ಯಾವುದೇ ಟಿವಿ ಸುದ್ದಿಗಳ ಆರ್ಭಟಿಸುತ್ತಿಲ್ಲ” ಎಂದು ಪ್ರಿಯಾಂಕಾ ಚತುರ್ವೇದಿ ಬರೆದುಕೊಂಡಿದ್ದಾರೆ.

ಈ ನಡುವೆ, ಹಲ್ಲೆ ಮಾಡಿರುವ ಬಗ್ಗೆ ತನಗೆ ‘ಯಾವುದೇ ವಿಷಾದವಿಲ್ಲ’ ಮತ್ತು ಯಾರಾದರೂ ಪ್ರಜಾಪ್ರಭುತ್ವದ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲವಾದರೆ ‘ಇದನ್ನು ಪುನರಾವರ್ತಿಸುತ್ತೇನೆ’ ಎಂದು ಶಾಸಕ ಗಾಯಕ್ವಾಡ್ ಹೇಳಿದ್ದಾರೆ.

“ರಾಜ್ಯದ ವಿವಿದೆಡೆಗಳಿಂದ ಜನರು ಇಲ್ಲಿಗೆ ಬರುತ್ತಾರೆ. ಕಾರ್ಮಿಕರು, ಅಧಿಕಾರಿಗಳು, ಎಲ್ಲರೂ ಇಲ್ಲಿಗೆ ಆಹಾರ ಸೇವಿಸಲು ಆಗಮಿಸುತ್ತಾರೆ. ಇದು ಸರ್ಕಾರಿ ಕ್ಯಾಂಟೀನ್ ಆಗಿರುವುದರಿಂದ ಇಲ್ಲಿ ಆಹಾರದ ಗುಣಮಟ್ಟ ಉತ್ತಮವಾಗಿರಬೇಕು. ನಾನು ಮಾಡಿದ್ದಕ್ಕೆ ನನಗೆ ಯಾವುದೇ ವಿಷಾದವಿಲ್ಲ. ನಾನು ಸಾರ್ವಜನಿಕ ಪ್ರತಿನಿಧಿ” ಎಂದು ಗಾಯಕ್ವಾಡ್ ಹೇಳಿದ್ದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

“ಯಾರಾದರೂ ಪ್ರಜಾಪ್ರಭುತ್ವ ಭಾಷೆಯನ್ನು ಅರ್ಥಮಾಡಿಕೊಳ್ಳಲು ವಿಫಲರಾದಾಗ ನಾನು ಈ ರೀತಿಯ ಭಾಷೆಯನ್ನು ಬಳಸಬೇಕಾಗುತ್ತದೆ. ಅವರು ಮರಾಠಿ ಮಾತನಾಡುತ್ತಾರಾ ಅಥವಾ ಹಿಂದಿ ಮಾತನಾಡುತ್ತಾರಾ ಎಂದು ನೋಡಿ ನಾನು ಥಳಿಸಲಿಲ್ಲ” ಎಂದಿದ್ದಾರೆ.

ನಾನು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವಾರು ಬಾರಿ ದೂರು ನೀಡಿದ್ದೇನೆ. ನಾನು ಅದನ್ನು ಪುನರಾವರ್ತಿಸುತ್ತೇನೆ ಶಾಸಕ ಸಂಜಯ್ ಗಾಯಕ್ವಾಡ್ ಹೇಳಿದ್ದಾರೆ.

ಕಳೆದ ವರ್ಷ, ರಾಹುಲ್ ಗಾಂಧಿಯವರ ನಾಲಿಗೆಯನ್ನು ಕತ್ತರಿಸಿದವರಿಗೆ 11 ಲಕ್ಷ ರೂಪಾಯಿಗಳ ಬಹುಮಾನ ನೀಡುವುದಾಗಿ ಘೋಷಿಸುವ ಮೂಲಕ ಗಾಯಕ್ವಾಡ್ ಸುದ್ದಿಯಾಗಿದ್ದರು.

ಈ ವರ್ಷದ ಮಹಾರಾಷ್ಟ್ರದಲ್ಲಿ ಭಾಷಾ ವಿವಾದ ಭುಗಿಲೆದ್ದಿರುವ ಮಧ್ಯೆ ಶಾಸಕ ಹಲ್ಲೆ ಮಾಡಿದ್ದಾರೆ. ಹಾಗಾಗಿ, ಇಲ್ಲಿ ಹಿಂದಿ vs ಮರಾಠಿ ಚರ್ಚೆಗಳು ತೀವ್ರಗೊಂಡಿದೆ. ರಾಜ್ಯದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗಳಿಗೆ ರಾಜಕೀಯ ನಾಯಕರು ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮಂಗಳವಾರ ಮುಂಬೈ ಬಳಿಯ ಮೀರಾ ಭಯಂದರ್ ಪ್ರದೇಶದಲ್ಲಿ ಮರಾಠಿ ಅಸ್ಮಿತೆ ರಕ್ಷಿಸಲು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ಮರಾಠಿಯಲ್ಲಿ ಮಾತನಾಡಲು ನಿರಾಕರಿಸಿದ್ದಕ್ಕಾಗಿ ಅಂಗಡಿಯವನ ಮೇಲೆ ಹಲ್ಲೆ ನಡೆಸಿದ ನಂತರ ಉಂಟಾದ ರಾಜಕೀಯ ಉದ್ವಿಗ್ನತೆಯ ನಡುವೆ ಪ್ರತಿಭಟನೆ ನಡೆದಿದೆ.

ಗುಜರಾತ್‌ನಲ್ಲಿ ಮತ್ತೊಂದು ಸೇತುವೆ ಕುಸಿತ: ನದಿಗೆ ಬಿದ್ದ ವಾಹನಗಳು; 9 ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...