Homeಮುಖಪುಟಮಹಾರಾಷ್ಟ್ರ:’ತಮ್ಮವರೇ ಬೆನ್ನಿಗೆ ಚೂರಿ ಹಾಕಿದರು’; ಚಿತ್ರವನ್ನು ಟ್ವೀಟ್‌ ಮಾಡಿದ ಸಂಜಯ್ ರಾವತ್

ಮಹಾರಾಷ್ಟ್ರ:’ತಮ್ಮವರೇ ಬೆನ್ನಿಗೆ ಚೂರಿ ಹಾಕಿದರು’; ಚಿತ್ರವನ್ನು ಟ್ವೀಟ್‌ ಮಾಡಿದ ಸಂಜಯ್ ರಾವತ್

- Advertisement -
- Advertisement -

ಬುಧವಾರ (ಜೂನ್ 29) ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉದ್ಧವ್ ಠಾಕ್ರೆ ಅವರಿಗೆ ಶಿವಸೇನೆಯ ಸ್ವಂತ ನಾಯಕರು ಹೇಗೆ ಬೆನ್ನಿಗೆ ಚೂರಿ ಹಾಕಿದರು ಎಂಬುದನ್ನು ಸೂಚಿಸುವ ಚಿತ್ರವನ್ನು ಶಿವಸೇನೆಯ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಉದ್ಧವ್ ಠಾಕ್ರೆ ಅವರು ಕಳೆದ ವಾರ ಸುಮಾರು 40 ಶಿವಸೇನಾ ಶಾಸಕರಿಂದ ಬಂಡಾಯವನ್ನು ಎದುರಿಸಿದ್ದರು. ಅಂದೇ ಮಾತನಾಡಿದ್ದ ಅವರು ತಮ್ಮದೇ ಪಕ್ಷದ ನಾಯಕರು ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಬಯಸದಿದ್ದರೆ ರಾಜೀನಾಮೆ ನೀಡುವುದಾಗಿ ಸ್ಪಷ್ಟಪಡಿಸಿದ್ದರು.

ಕಳೆದ ಶುಕ್ರವಾರ ವರ್ಚುವಲ್ ಭಾಷಣದಲ್ಲಿ ಉದ್ಧವ್‌ ಠಾಕ್ರೆ, ಬಂಡಾಯ ಶಾಸಕರನ್ನು ಉಲ್ಲೇಖಿಸಿ “ಸ್ವಂತ ಜನರಿಂದ ದ್ರೋಹ”ವಾಗಿದೆ. ಅದರ ಹೊರತಾಗಿಯೂ ತನಗೆ ಬೆಂಬಲ ನೀಡಿದ ಶಿವಸೇನಾ ಕಾರ್ಯಕರ್ತರು ಮತ್ತು ಪಕ್ಷದ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಇಂದು ಟ್ವೀಟ್‌ ಮಾಡಿರುವ ಸಂಜಯ್‌ ರಾವತ್, ಉದ್ಧವ್ ಠಾಕ್ರೆಯನ್ನು ಪ್ರತಿನಿಧಿಸುವ ಬಿಳಿ ಕುರ್ತಾದ ವ್ಯಕ್ತಿಯ ಚಿತ್ರಣವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಕುರ್ತಾ ಹಿಂಭಾಗದಲ್ಲಿ ಹರಿದಿದ್ದು, ಮೂರು ಉದ್ದನೆಯ ಉಗುರು ಗುರುತುಗಳು ಮತ್ತು ರಕ್ತ ತೊಟ್ಟಿಕ್ಕುತ್ತಿದೆ. ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ಬಿಜೆಪಿಯ ನೇರ ಬೆಂಬಲದೊಂದಿಗೆ ಮಾಜಿ ಮುಖ್ಯಮಂತ್ರಿಗೆ ಹೇಗೆ ಬೆನ್ನಿಗೆ ಚೂರಿ ಹಾಕಿದರು ಎಂಬುದು ಎಂದು ಮಾರ್ಮಿಕವಾಗಿ ಸಂಜಯ್ ರಾವತ್‌ ತಿಳಿಸಿದ್ದಾರೆ.

ಚಿತ್ರಕ್ಕೆ “ಇದು ನಿಖರವಾಗಿ ಏನಾಯಿತು ಎಂಬುದು” ಎಂದು ಸಂಜಯ್ ರಾವತ್ ವಿವರಣೆ ನೀಡಿದ್ದಾರೆ.

ಬಂಡಾಯ ಶಾಸಕರು ಗುಜರಾತ್‌ನ ಸೂರತ್‌ಗೆ ತೆರಳಿದ ನಂತರ ಕಳೆದ ವಾರ ಬಿಜೆಪಿ ಆಡಳಿತದ ಅಸ್ಸಾಂನಲ್ಲಿ ಪಂಚತಾರಾ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು. ಆಗಲೇ ಠಾಕ್ರೆ ಅವರು ತಮ್ಮ ಮುಖ್ಯಮಂತ್ರಿಗಳ ಅಧಿಕೃತ ನಿವಾಸ “ವರ್ಷ” ದಿಂದ ತಮ್ಮ ಕುಟುಂಬದ ಮನೆಯಾದ “ಮಾತೋಶ್ರೀ” ಗೆ ಮರಳಿದ್ದರು.

ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಬುಧವಾರ ರಾತ್ರಿ ಘೋಷಿಸಿದ ಬೆನ್ನಲ್ಲೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಉನ್ನತ ನಾಯಕರು ತಮ್ಮ ಮುಂದಿನ ನಡೆಯನ್ನು ಕಾರ್ಯತಂತ್ರ ರೂಪಿಸಲು ದಕ್ಷಿಣ ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಸಭೆ ನಡೆಸಿದ್ದಾರೆ.

39 ಬಂಡಾಯ ಶಾಸಕರು ಮತ್ತು ಸ್ವತಂತ್ರ ಶಾಸಕರನ್ನು ಒಳಗೊಂಡಿರುವ ಶಿವಸೇನೆಯ ಏಕನಾಥ್ ಶಿಂಧೆ ಬಣದ ಬೆಂಬಲದೊಂದಿಗೆ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಹಕ್ಕು ಚಲಾಯಿಸಲಿದೆ. ಶಿಂಧೆ ಮತ್ತು ಬಂಡಾಯ ಶಾಸಕರು ಇಂದು ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಉದ್ಧವ್‌ ಠಾಕ್ರೆ ರಾಜೀನಾಮೆ: ಸರ್ಕಾರ ರಚನೆಗೆ ಬಿಜೆಪಿ ನಾಯಕರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...