Homeಮುಖಪುಟಮಹಾರಾಷ್ಟ್ರ:’ತಮ್ಮವರೇ ಬೆನ್ನಿಗೆ ಚೂರಿ ಹಾಕಿದರು’; ಚಿತ್ರವನ್ನು ಟ್ವೀಟ್‌ ಮಾಡಿದ ಸಂಜಯ್ ರಾವತ್

ಮಹಾರಾಷ್ಟ್ರ:’ತಮ್ಮವರೇ ಬೆನ್ನಿಗೆ ಚೂರಿ ಹಾಕಿದರು’; ಚಿತ್ರವನ್ನು ಟ್ವೀಟ್‌ ಮಾಡಿದ ಸಂಜಯ್ ರಾವತ್

- Advertisement -
- Advertisement -

ಬುಧವಾರ (ಜೂನ್ 29) ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉದ್ಧವ್ ಠಾಕ್ರೆ ಅವರಿಗೆ ಶಿವಸೇನೆಯ ಸ್ವಂತ ನಾಯಕರು ಹೇಗೆ ಬೆನ್ನಿಗೆ ಚೂರಿ ಹಾಕಿದರು ಎಂಬುದನ್ನು ಸೂಚಿಸುವ ಚಿತ್ರವನ್ನು ಶಿವಸೇನೆಯ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಉದ್ಧವ್ ಠಾಕ್ರೆ ಅವರು ಕಳೆದ ವಾರ ಸುಮಾರು 40 ಶಿವಸೇನಾ ಶಾಸಕರಿಂದ ಬಂಡಾಯವನ್ನು ಎದುರಿಸಿದ್ದರು. ಅಂದೇ ಮಾತನಾಡಿದ್ದ ಅವರು ತಮ್ಮದೇ ಪಕ್ಷದ ನಾಯಕರು ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಬಯಸದಿದ್ದರೆ ರಾಜೀನಾಮೆ ನೀಡುವುದಾಗಿ ಸ್ಪಷ್ಟಪಡಿಸಿದ್ದರು.

ಕಳೆದ ಶುಕ್ರವಾರ ವರ್ಚುವಲ್ ಭಾಷಣದಲ್ಲಿ ಉದ್ಧವ್‌ ಠಾಕ್ರೆ, ಬಂಡಾಯ ಶಾಸಕರನ್ನು ಉಲ್ಲೇಖಿಸಿ “ಸ್ವಂತ ಜನರಿಂದ ದ್ರೋಹ”ವಾಗಿದೆ. ಅದರ ಹೊರತಾಗಿಯೂ ತನಗೆ ಬೆಂಬಲ ನೀಡಿದ ಶಿವಸೇನಾ ಕಾರ್ಯಕರ್ತರು ಮತ್ತು ಪಕ್ಷದ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಇಂದು ಟ್ವೀಟ್‌ ಮಾಡಿರುವ ಸಂಜಯ್‌ ರಾವತ್, ಉದ್ಧವ್ ಠಾಕ್ರೆಯನ್ನು ಪ್ರತಿನಿಧಿಸುವ ಬಿಳಿ ಕುರ್ತಾದ ವ್ಯಕ್ತಿಯ ಚಿತ್ರಣವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಕುರ್ತಾ ಹಿಂಭಾಗದಲ್ಲಿ ಹರಿದಿದ್ದು, ಮೂರು ಉದ್ದನೆಯ ಉಗುರು ಗುರುತುಗಳು ಮತ್ತು ರಕ್ತ ತೊಟ್ಟಿಕ್ಕುತ್ತಿದೆ. ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ಬಿಜೆಪಿಯ ನೇರ ಬೆಂಬಲದೊಂದಿಗೆ ಮಾಜಿ ಮುಖ್ಯಮಂತ್ರಿಗೆ ಹೇಗೆ ಬೆನ್ನಿಗೆ ಚೂರಿ ಹಾಕಿದರು ಎಂಬುದು ಎಂದು ಮಾರ್ಮಿಕವಾಗಿ ಸಂಜಯ್ ರಾವತ್‌ ತಿಳಿಸಿದ್ದಾರೆ.

ಚಿತ್ರಕ್ಕೆ “ಇದು ನಿಖರವಾಗಿ ಏನಾಯಿತು ಎಂಬುದು” ಎಂದು ಸಂಜಯ್ ರಾವತ್ ವಿವರಣೆ ನೀಡಿದ್ದಾರೆ.

ಬಂಡಾಯ ಶಾಸಕರು ಗುಜರಾತ್‌ನ ಸೂರತ್‌ಗೆ ತೆರಳಿದ ನಂತರ ಕಳೆದ ವಾರ ಬಿಜೆಪಿ ಆಡಳಿತದ ಅಸ್ಸಾಂನಲ್ಲಿ ಪಂಚತಾರಾ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು. ಆಗಲೇ ಠಾಕ್ರೆ ಅವರು ತಮ್ಮ ಮುಖ್ಯಮಂತ್ರಿಗಳ ಅಧಿಕೃತ ನಿವಾಸ “ವರ್ಷ” ದಿಂದ ತಮ್ಮ ಕುಟುಂಬದ ಮನೆಯಾದ “ಮಾತೋಶ್ರೀ” ಗೆ ಮರಳಿದ್ದರು.

ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಬುಧವಾರ ರಾತ್ರಿ ಘೋಷಿಸಿದ ಬೆನ್ನಲ್ಲೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಉನ್ನತ ನಾಯಕರು ತಮ್ಮ ಮುಂದಿನ ನಡೆಯನ್ನು ಕಾರ್ಯತಂತ್ರ ರೂಪಿಸಲು ದಕ್ಷಿಣ ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಸಭೆ ನಡೆಸಿದ್ದಾರೆ.

39 ಬಂಡಾಯ ಶಾಸಕರು ಮತ್ತು ಸ್ವತಂತ್ರ ಶಾಸಕರನ್ನು ಒಳಗೊಂಡಿರುವ ಶಿವಸೇನೆಯ ಏಕನಾಥ್ ಶಿಂಧೆ ಬಣದ ಬೆಂಬಲದೊಂದಿಗೆ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಹಕ್ಕು ಚಲಾಯಿಸಲಿದೆ. ಶಿಂಧೆ ಮತ್ತು ಬಂಡಾಯ ಶಾಸಕರು ಇಂದು ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಉದ್ಧವ್‌ ಠಾಕ್ರೆ ರಾಜೀನಾಮೆ: ಸರ್ಕಾರ ರಚನೆಗೆ ಬಿಜೆಪಿ ನಾಯಕರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...