Homeಮುಖಪುಟಮಹಾರಾಷ್ಟ್ರ:’ತಮ್ಮವರೇ ಬೆನ್ನಿಗೆ ಚೂರಿ ಹಾಕಿದರು’; ಚಿತ್ರವನ್ನು ಟ್ವೀಟ್‌ ಮಾಡಿದ ಸಂಜಯ್ ರಾವತ್

ಮಹಾರಾಷ್ಟ್ರ:’ತಮ್ಮವರೇ ಬೆನ್ನಿಗೆ ಚೂರಿ ಹಾಕಿದರು’; ಚಿತ್ರವನ್ನು ಟ್ವೀಟ್‌ ಮಾಡಿದ ಸಂಜಯ್ ರಾವತ್

- Advertisement -
- Advertisement -

ಬುಧವಾರ (ಜೂನ್ 29) ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉದ್ಧವ್ ಠಾಕ್ರೆ ಅವರಿಗೆ ಶಿವಸೇನೆಯ ಸ್ವಂತ ನಾಯಕರು ಹೇಗೆ ಬೆನ್ನಿಗೆ ಚೂರಿ ಹಾಕಿದರು ಎಂಬುದನ್ನು ಸೂಚಿಸುವ ಚಿತ್ರವನ್ನು ಶಿವಸೇನೆಯ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಯಾಗಿದ್ದ ಉದ್ಧವ್ ಠಾಕ್ರೆ ಅವರು ಕಳೆದ ವಾರ ಸುಮಾರು 40 ಶಿವಸೇನಾ ಶಾಸಕರಿಂದ ಬಂಡಾಯವನ್ನು ಎದುರಿಸಿದ್ದರು. ಅಂದೇ ಮಾತನಾಡಿದ್ದ ಅವರು ತಮ್ಮದೇ ಪಕ್ಷದ ನಾಯಕರು ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಬಯಸದಿದ್ದರೆ ರಾಜೀನಾಮೆ ನೀಡುವುದಾಗಿ ಸ್ಪಷ್ಟಪಡಿಸಿದ್ದರು.

ಕಳೆದ ಶುಕ್ರವಾರ ವರ್ಚುವಲ್ ಭಾಷಣದಲ್ಲಿ ಉದ್ಧವ್‌ ಠಾಕ್ರೆ, ಬಂಡಾಯ ಶಾಸಕರನ್ನು ಉಲ್ಲೇಖಿಸಿ “ಸ್ವಂತ ಜನರಿಂದ ದ್ರೋಹ”ವಾಗಿದೆ. ಅದರ ಹೊರತಾಗಿಯೂ ತನಗೆ ಬೆಂಬಲ ನೀಡಿದ ಶಿವಸೇನಾ ಕಾರ್ಯಕರ್ತರು ಮತ್ತು ಪಕ್ಷದ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಜುಬೇರ್‌ ಬಂಧನ: ಬರವಣಿಗೆ, ಟ್ವೀಟ್ ಆಧಾರದಲ್ಲಿ ಪತ್ರಕರ್ತರನ್ನು ಜೈಲಿಗೆ ಹಾಕಬಾರದು- ವಿಶ್ವಸಂಸ್ಥೆ

ಇಂದು ಟ್ವೀಟ್‌ ಮಾಡಿರುವ ಸಂಜಯ್‌ ರಾವತ್, ಉದ್ಧವ್ ಠಾಕ್ರೆಯನ್ನು ಪ್ರತಿನಿಧಿಸುವ ಬಿಳಿ ಕುರ್ತಾದ ವ್ಯಕ್ತಿಯ ಚಿತ್ರಣವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಕುರ್ತಾ ಹಿಂಭಾಗದಲ್ಲಿ ಹರಿದಿದ್ದು, ಮೂರು ಉದ್ದನೆಯ ಉಗುರು ಗುರುತುಗಳು ಮತ್ತು ರಕ್ತ ತೊಟ್ಟಿಕ್ಕುತ್ತಿದೆ. ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ಬಿಜೆಪಿಯ ನೇರ ಬೆಂಬಲದೊಂದಿಗೆ ಮಾಜಿ ಮುಖ್ಯಮಂತ್ರಿಗೆ ಹೇಗೆ ಬೆನ್ನಿಗೆ ಚೂರಿ ಹಾಕಿದರು ಎಂಬುದು ಎಂದು ಮಾರ್ಮಿಕವಾಗಿ ಸಂಜಯ್ ರಾವತ್‌ ತಿಳಿಸಿದ್ದಾರೆ.

ಚಿತ್ರಕ್ಕೆ “ಇದು ನಿಖರವಾಗಿ ಏನಾಯಿತು ಎಂಬುದು” ಎಂದು ಸಂಜಯ್ ರಾವತ್ ವಿವರಣೆ ನೀಡಿದ್ದಾರೆ.

ಬಂಡಾಯ ಶಾಸಕರು ಗುಜರಾತ್‌ನ ಸೂರತ್‌ಗೆ ತೆರಳಿದ ನಂತರ ಕಳೆದ ವಾರ ಬಿಜೆಪಿ ಆಡಳಿತದ ಅಸ್ಸಾಂನಲ್ಲಿ ಪಂಚತಾರಾ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು. ಆಗಲೇ ಠಾಕ್ರೆ ಅವರು ತಮ್ಮ ಮುಖ್ಯಮಂತ್ರಿಗಳ ಅಧಿಕೃತ ನಿವಾಸ “ವರ್ಷ” ದಿಂದ ತಮ್ಮ ಕುಟುಂಬದ ಮನೆಯಾದ “ಮಾತೋಶ್ರೀ” ಗೆ ಮರಳಿದ್ದರು.

ಮುಖ್ಯಮಂತ್ರಿ ಸ್ಥಾನಕ್ಕೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಬುಧವಾರ ರಾತ್ರಿ ಘೋಷಿಸಿದ ಬೆನ್ನಲ್ಲೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಉನ್ನತ ನಾಯಕರು ತಮ್ಮ ಮುಂದಿನ ನಡೆಯನ್ನು ಕಾರ್ಯತಂತ್ರ ರೂಪಿಸಲು ದಕ್ಷಿಣ ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ ಸಭೆ ನಡೆಸಿದ್ದಾರೆ.

39 ಬಂಡಾಯ ಶಾಸಕರು ಮತ್ತು ಸ್ವತಂತ್ರ ಶಾಸಕರನ್ನು ಒಳಗೊಂಡಿರುವ ಶಿವಸೇನೆಯ ಏಕನಾಥ್ ಶಿಂಧೆ ಬಣದ ಬೆಂಬಲದೊಂದಿಗೆ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಹಕ್ಕು ಚಲಾಯಿಸಲಿದೆ. ಶಿಂಧೆ ಮತ್ತು ಬಂಡಾಯ ಶಾಸಕರು ಇಂದು ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ಉದ್ಧವ್‌ ಠಾಕ್ರೆ ರಾಜೀನಾಮೆ: ಸರ್ಕಾರ ರಚನೆಗೆ ಬಿಜೆಪಿ ನಾಯಕರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...