Homeಮುಖಪುಟಫಡ್ನಾವೀಸ್ ಹೇಳಿಕೆ ವಿರೋಧಿಸಿ ದಿಢೀರ್ ಬಿಜೆಪಿ ಸಭೆ ಬಹಿಷ್ಕರಿಸಿದ ಶಿವಸೇನೆ

ಫಡ್ನಾವೀಸ್ ಹೇಳಿಕೆ ವಿರೋಧಿಸಿ ದಿಢೀರ್ ಬಿಜೆಪಿ ಸಭೆ ಬಹಿಷ್ಕರಿಸಿದ ಶಿವಸೇನೆ

- Advertisement -
- Advertisement -

ಐದು ವರ್ಷದವರೆಗೆ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನಾವೀಸ್ ಹೇಳಿಕೆ ನೀಡಿದ ಬೆನ್ನೆಲ್ಲೇ ಇಂದು ಕರೆದಿದ್ದ ಬಿಜೆಪಿ ಸಭೆಯನ್ನು ದಿಢೀರ್ ರದ್ದುಪಡಿಸಿದ್ದಾರೆ. ಬಿಜೆಪಿ ಸಭೆಗೆ ಹೋಗದ ಶಿವಸೇನೆ ಮುಖಂಡರು ಅಂತರ ಕಾಯ್ದುಕೊಂಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆಯೊಂದಿಗೆ ಯಾವುದೇ ಒಪ್ಪಂದ ಮಾಡಿಕೊಂಡಿರಲಿಲ್ಲ. ಲೋಕಸಭಾ ಚುನಾವಣೆ ವೇಳೆ ಆದ ಮೈತ್ರಿಯೇ ಮುಂದುವರೆದಿತ್ತೇ ಹೊರತು ಅಧಿಕಾರ ಹಂಚಿಕೆಯ ಕುರಿತು ಯಾವುದೇ ಮಾತುಕತೆ ನಡೆದಿಲ್ಲ. ಮುಂದಿನ ಐದು ವರ್ಷ ನಾನೇ ಮುಖ್ಯಮಂತ್ರಿಯಾಗುತ್ತೇನೆಂದು ಫಡ್ನಾವೀಸ್ ಮಂಗಳವಾರ ಬೆಳಗ್ಗೆ ಹೇಳಿದ್ದರು.

ಈ ಹೇಳಿಕೆಯಿಂದ ಅಸಮಾಧಾನಗೊಂಡಿರುವ ಶಿವಸೇನೆ ನಾಯಕರು 50:50 ಅಧಿಕಾರ ಹಂಚಿಕೆಗೆ ಬಿಜೆಪಿ ಒಪ್ಪುತ್ತಿಲ್ಲ. ಸಭೆಗೆ ಹೋಗುವುದರಿಂದ ಪ್ರಯೋಜನವೇನು ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಶಿವಸೇನೆ ಹಿಂದಿನಿಂದಲೂ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಬೇಕು ಎಂದರೆ ಎರಡೂವರೆ ವರ್ಷ ಬಿಜೆಪಿ ಮತ್ತೆ ಎರಡೂವರೆ ವರ್ಷ ಶಿವಸೇನೆಗೆ ಅಧಿಕಾರ ಬಿಟ್ಟುಕೊಡಬೇಕು ಎಂದು ಶಿವಸೇನೆ ಮುಖಂಡರು ಪ್ರತಿಪಾದಿಸುತ್ತಲೇ ಬರುತ್ತಿದ್ದಾರೆ. ಮಿತ್ರ ಪಕ್ಷ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕುತ್ತಿರುವುದು ಮುಂದುವರಿದಿದೆ.

ಆದರೆ ಶಿವಸೇನೆ 50:50 ಅಧಿಕಾರ ಹಂಚಿಕೆಯನ್ನು ತಳ್ಳಿಹಾಕಿರುವ ದೇವೇಂದ್ರ ಫಡ್ನಾವೀಸ್, ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ ಅಸ್ತಿತ್ವಕ್ಕೆ ಬರಲಿದೆ ಎಂಬುದನ್ನು ಖಚಿತಪಡಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ 105, ಶಿವಸೇನೆ-56, ಎನ್.ಸಿ.ಪಿ 54, ಕಾಂಗ್ರೆಸ್ 44 ಮತ್ತು ಇತರರು 20 ಮಂದಿ ಇದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಸೇನೆ ಪರ್ಯಾಯ ಹುಡುಕಿಕೊಂಡರೂ ಅಚ್ಚರಿ ಇಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...