Homeಮುಖಪುಟಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

ಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆಯ ಮಳೆಗಾಲದ ಅಧಿವೇಶನದ ಮೊದಲ ದಿನ ಸೋಮವಾರ ಗೊಂದಲಗಳ ಗೂಡಾಗಿತ್ತು. ಸ್ಪೀಕರ್ ಕಚೇರಿಯಲ್ಲಿ ಪ್ರಿಸಿಡಿಂಗ್ ಆಫೀಸರ್ ಭಾಸ್ಕರ್ ಜಾದವ್ ಅವರನ್ನು ನಿಂದಿಸಿದ ಮತ್ತು ದೈಹಿಕ ಹಲ್ಲೆ ನಡೆಸಿದ ಆರೋಪದಲ್ಲಿ ಬಿಜೆಪಿಯ 12 ಶಾಸಕರನ್ನು ಒಂದು ವರ್ಷದವರೆಗೆ ಸ್ಪೀಕರ್‌ ಅಮಾನತುಗೊಳಿಸಿದ್ದಾರೆ.

ಸದನದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ಇವು ಸುಳ್ಳು ಆರೋಪಗಳು. ಶಾಸಕರ ವಿರುದ್ಧ ಒಂದು ಕಥೆ ಕಟ್ಟಲಾಗುತ್ತಿದೆ. ಬಿಜೆಪಿಯಿಂದ ಯಾರೂ ನಿಂದನೆ ಮಾಡಿಲ್ಲ” ಎಂದು ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೊತೆಗೆ “ಒಬಿಸಿ (Other Backward Castes) ಮೀಸಲಾತಿಗಾಗಿ, ನಾವು ನಮ್ಮ 12 ಕ್ಕೂ ಹೆಚ್ಚು ಶಾಸಕರನ್ನು ತ್ಯಾಗಮಾಡಲು ಸಿದ್ಧರಿದ್ದೇವೆ” ಎಂದು ಹೇಳಿದ್ದಾರೆ. ಈ ಅಧಿವೇಶನದಲ್ಲಿ ತಮ್ಮ ಪಕ್ಷವು ಒಬಿಸಿ ಮೀಸಲಾತಿ ಕೂಡ ತಾವು ಹೈಲೈಟ್ ಮಾಡಲು ನಿರ್ಧರಿಸಿರುವ ಪ್ರಮುಖ ವಿಷಯಗಳಲ್ಲಿ ಒಂದು” ಎಂದು ಫಡ್ನವೀಸ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

“ಪ್ರತಿಪಕ್ಷದ ನಾಯಕರು ನನ್ನ ಕ್ಯಾಬಿನ್‌ಗೆ ಬಂದು ದೇವೇಂದ್ರ ಫಡ್ನವೀಸ್ ಮತ್ತು ಹಿರಿಯ ನಾಯಕ ಚಂದ್ರಕಾಂತ್ ಪಾಟೀಲ್ ಅವರ ಮುಂದೆಯೇ ಅಸಂಸದೀಯ ಭಾಷೆ ಬಳಸಿ ನನ್ನನ್ನು ನಿಂದಿಸಿದ್ದಾರೆ. ಕೆಲವು ನಾಯಕರು ನನ್ನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ” ಎಂದು ಭಾಸ್ಕರ್ ಜಾಧವ್ ಮಾಧ್ಯಮಗಳಿಗೆ ತಿಳಿಸಿದರು.

12 ಶಾಸಕರನ್ನು ಒಂದು ವರ್ಷ ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಾಬ್ ಮಂಡಿಸಿದ್ದು, ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಸಂಜಯ್ ಕುಟೆ, ಆಶಿಸ್ ಶೆಲಾರ್. ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗ್ ಅಲಾವ್ನಿ, ಹರೀಶ್ ಪಿಂಪಾಲೆ, ರಾಮ್ ಸತ್ಪುಟ್, ಯೋಗೇಶ್ ಸಾಗರ್, ಜಯ ಕುಮಾರ್ ರಾವತ್, ನಾರಾಯಣ್ ಕುಚೆ ಮತ್ತು ಕೀರ್ತಿಕುಮಾರ್ ಭಾಂಗ್ಡಿಯಾ ಅಮಾನತುಗೊಂಡ ಶಾಸಕರು.

ಶರದ್ ಪವಾರ್ ಅವರ ಎನ್‌ಸಿಪಿ ಮುಖಂಡ ನವಾಬ್ ಮಲಿಕ್ ಟ್ವಿಟ್ಟರ್‌ನಲ್ಲಿ ಗಲಾಟೆಯ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ದೇವೇಂದ್ರ ಫಡ್ನವಿಸ್ ನೇತೃತ್ವದ ಬಿಜೆಪಿ ಸದಸ್ಯರು, ಪ್ರತಿಪಕ್ಷಗಳು ಸದನದ ಕಲಾಪವನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಈ ಠಾಕ್ರೆ ಸರ್ಕಾರ ತಾಲಿಬಾನ್‌ನಂತೆ ವರ್ತಿಸುತ್ತಿದೆ. ನಾನು ಈ ಕ್ರಮವನ್ನು ಖಂಡಿಸುತ್ತೇನೆ. ನಾನು ಮತ್ತು ಇತರ ಯಾವುದೇ ಶಾಸಕರು ಭಾಸ್ಕರ್ ಜಾಧವ್ ಅವರನ್ನು ನಿಂದಿಸಲಿಲ್ಲ. ನಾನು ಅವರ ಬಳಿ ಕ್ಷಮೆಯಾಚಿಸಿದ್ದೇನೆ ಆದರೂ ಕುಡ ಅವರು ಅಮಾನತುಗೊಳಿಸಿದ್ದಾರೆ” ಎಂದು ಬಿಜೆಪಿ ಶಾಸಕ ಆಶಿಶ್ ಶೆಲಾರ್ ಹೇಳಿದ್ದಾರೆ.


ಇದನ್ನೂ ಓದಿ: ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...