Homeಮುಖಪುಟಮರಾಠ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ

ಮರಾಠ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ

- Advertisement -
- Advertisement -

ಮಹಾರಾಷ್ಟ್ರದ ಜಲ್ನಾದಲ್ಲಿ ಮರಾಠ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪ್ರತಿಭಟನೆಯು  ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದು, ಸ್ಥಳದಲ್ಲಿ ಘರ್ಷಣೆ ಉಂಟಾಗಿದೆ.

ಅಂಬಾದ್ ತಹಸಿಲ್‌ನ ಅಂತರವಾಲಿ ಸಾರಥಿ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಸುಮಾರು 20 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ನಾಲ್ಕು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಹೆಚ್ಚುವರಿ ಎಸ್‌ಪಿ ಸೇರಿದಂತೆ 37 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಭಟನೆ ಘರ್ಷಣೆಗೆ ತಿರುಗಿದ ಹಿನ್ನೆಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಮತ್ತು ಅಶ್ರುವಾಯು ಸಿಡಿಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ, ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಸ್ಥಳೀಯ ಮರಾಠ ನಾಯಕ ಮನೋಜ್ ಜಾರಂಗೆ ನೇತೃತ್ವದಲ್ಲಿ ನೂರಾರು ಪ್ರತಿಭಟನಾಕಾರರು ಅಂತರವಾಲಿ ಸಾರಥಿ ಗ್ರಾಮದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಈ ಕುರಿತು ಜಲ್ನಾ ಎಸ್ಪಿ ತುಷಾರ್ ದೋಷಿ ಮಾಹಿತಿಯನ್ನು ನೀಡಿದ್ದು, ಘಟನೆ ಶುಕ್ರವಾರ ಸಂಜೆ 6 ರಿಂದ ರಾತ್ರಿ 8ರ ನಡುವೆ ನಡೆದಿದೆ. ಪ್ರತಿಭಟನಾಕಾರರು ದಿಡೀರ್ ಹಿಂಸಾಚಾರಕ್ಕೆ ಪ್ರಯತ್ನಿಸಿದ್ದಾರೆ. ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೆಲವು ಪ್ರತಿಭಟನಾಕಾರರಿಗೂ ಗಾಯಗಳಾಗಿದೆ. ಓರ್ವ ಎಸ್ಪಿ, ಇಬ್ಬರು ಡಿವೈಎಸ್ಪಿಗಳು ಸೇರಿ 37 ಪೊಲೀಸರಿಗೆ ಘಟನೆಯಲ್ಲಿ ಗಾಯಗಳಾಗಿದೆ. ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠೀ ಚಾರ್ಜ್ ಮಾಡಿದ್ದಾರೆ. 8 ಗಂಟೆಯ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಹೇಳಿದ್ದಾರೆ.

ಇದಾದ ಬಳಿಕವು ನಗರದ ವಿವಿಧೆಡೆ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿರುವುದು ಕಂಡು ಬಂದಿದೆ, ನಾವು ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಿಸುತ್ತೇವೆ. ಆರೋಪಿಗಳನ್ನು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಬಂಧಿಸಲಾಗುವುದು ಎಂದು ತುಷಾರ್ ದೋಷಿ ಹೇಳಿದ್ದಾರೆ.

ಘಟನೆಯ ಕುರಿತು ಎಕ್ಸ್‌ನಲ್ಲಿ(ಟ್ವಿಟ್ಟರ್) ಬರೆದಿರುವ ಶಿಂಧೆ, ಮರಾಠ ಮೀಸಲಾತಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆದಿರುವುದು ದುರದೃಷ್ಟಕರ. ಘಟನೆಯ ಕುರಿತು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆದು ತನಿಖೆಗೆ ಆದೇಶಿಸಿದ್ದೇನೆ. ಶಾಂತಿ ಕಾಪಾಡುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ದೆಹಲಿ: ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾದ ಕೇಂದ್ರ ಸರಕಾರ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...