Homeಮುಖಪುಟಮೇ 31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ ಮಹಾರಾಷ್ಟ್ರ, ತಮಿಳುನಾಡು: ಕರ್ನಾಟಕ?

ಮೇ 31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ ಮಹಾರಾಷ್ಟ್ರ, ತಮಿಳುನಾಡು: ಕರ್ನಾಟಕ?

- Advertisement -
- Advertisement -

ಕೊರೊನಾವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳು ಮೇ 31 ರವರೆಗೆ ರಾಜ್ಯದ ಲಾಕ್‌ಡೌನ್ ಅನ್ನು ವಿಸ್ತರಿಸಿವೆ. ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರವು ಪ್ರಕರಣಗಳ ಸಂಖ್ಯೆಯು ಸ್ಥಿರವಾಗಿ ಏರುತ್ತಿರುವುದರಿಂದ ಲಾಕ್‌ಡೌನ್ ಅನ್ನು ವಿಸ್ತರಿಸಲು ನಿರ್ಧರಿಸಿದೆ.

ಇಂದು ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ಮೂರನೇ ಹಂತ ಅಂತ್ಯಗೊಳ್ಳಲಿದೆ. ಕೇಂದ್ರವು ಇಂದು ಸಂಜೆ ಲಾಕ್‌ಡೌನ್‌ನ ನಾಲ್ಕನೇ ಹಂತದ ಮಾರ್ಗಸೂಚಿಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಮಹಾರಾಷ್ಟ್ರದ ವಿವರ

ಇಡೀ ರಾಜ್ಯಕ್ಕೆ ಲಾಕ್‌ಡೌನ್ ವಿಸ್ತರಿಸಲಾಗಿದ್ದರೂ, ಹಂತವಾರು ತೆರವುಗೊಳಿಸುವ ಅಥವಾ ನಿರ್ಬಂಧಗಳನ್ನು ಸಡಿಲಿಸುವ ಆದೇಶವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಅಜೋಯ್ ಮೆಹ್ತಾ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ದೇಶದ ಒಟ್ಟು COVID-19 ಪ್ರಕರಣಗಳಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟನ್ನು ಈ ರಾಜ್ಯವೊಂದೇ ವರದಿ ಮಾಡಿದೆ. ಒಂದೇ ದಿನದಲ್ಲಿ 1,606 ಹೊಸ ಪ್ರಕರಣಗಳು ವರದಿಯಾಗಿರುವುದರಿಂದ ರಾಜ್ಯದಲ್ಲಿ ಕರೋನವೈರಸ್ ಪ್ರಕರಣಗಳು ಶನಿವಾರ 30,000 ದಾಟಿದೆ. 884 ಪ್ರಕರಣಗಳ ಹೆಚ್ಚಳದೊಂದಿಗೆ, ಮುಂಬೈನ ಒಟ್ಟು ಪ್ರಕರಣಗಳು 18,555ಕ್ಕೆ ತಲುಪಿವೆ.

ತಮಿಳುನಾಡು ವರದಿ

74 ಸಾವುಗಳೊಂದಿಗೆ 10000 ಪ್ರಕರಣಗಳನ್ನು ದಾಖಲಿಸಿರುವ ತಮಿಳುನಾಡು ರಾಜ್ಯವೂ ಸಹ ಮೇ 31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದೆ. ಆದರೂ 25 ಜಿಲ್ಲೆಗಳಲ್ಲಿ ನಿಯಮಗಳನ್ನು ಸಡಿಲಗೊಳಿಸಿದ್ದು, ಇ ಪಾಸ್‌ ಇಲ್ಲದೆಯೂ ಅಗತ್ಯ ಸಾರಿಗೆ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಕರ್ನಾಟಕ ವರದಿ:

ಕರ್ನಾಟಕದಲ್ಲಿ ಲಾಕ್‌ಡೌನ್‌ ಮುಂದುವರೆಯುವ ಬಗ್ಗೆ ಸರ್ಕಾರ ಇನ್ನೂ ಅಧಿಕೃತ ತೀರ್ಮಾನ ತೆಗೆದಕೊಂಡಿಲ್ಲ. ಆದರೆ ನಿಯಮಗಳನ್ನು ಸಡಿಲಿಸುವ ಸಲುವಾಗಿ ಯೋಚಿಸುತ್ತಿದ್ದು ನಿಯಮಿತ ಪ್ರಮಾಣದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಿದೆ.

ಸದ್ಯಕ್ಕೆ 1146 ಪ್ರಕರಣಗಳು ವರದಿಯಾಗಿದ್ದು 37 ಜನ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ಮತ್ತು ತಮಿಳುನಾಡಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆಯ ದೃಷ್ಟಿಯಿಂದ ಕರ್ನಾಟಕ ಉತ್ತಮ ಸ್ಥಿತಿಯಲ್ಲಿದೆ. ಆದರೆ ಇಂದು ಒಂದೇ ದಿನಕ್ಕೆ 54 ಪ್ರಕರಣಗಳು ದಾಖಲಾಗಿದ್ದು ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ತೀರ್ಮಾನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.


ಇದನ್ನೂ ಓದಿ: ರಸ್ತೆಯಲ್ಲಿ ಕೊರೊನಾ ಸೋಂಕಿತರ ಶವ: ಗುಜರಾತ್‌ ಮಾಡೆಲ್ ಧ್ವಂಸ ಮಾಡಬೇಕೆಂದು ಜಿಗ್ನೇಶ್‌ ಮೇವಾನಿ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...