Homeಮುಖಪುಟಮೇ 31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ ಮಹಾರಾಷ್ಟ್ರ, ತಮಿಳುನಾಡು: ಕರ್ನಾಟಕ?

ಮೇ 31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ ಮಹಾರಾಷ್ಟ್ರ, ತಮಿಳುನಾಡು: ಕರ್ನಾಟಕ?

- Advertisement -
- Advertisement -

ಕೊರೊನಾವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳು ಮೇ 31 ರವರೆಗೆ ರಾಜ್ಯದ ಲಾಕ್‌ಡೌನ್ ಅನ್ನು ವಿಸ್ತರಿಸಿವೆ. ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಸರ್ಕಾರವು ಪ್ರಕರಣಗಳ ಸಂಖ್ಯೆಯು ಸ್ಥಿರವಾಗಿ ಏರುತ್ತಿರುವುದರಿಂದ ಲಾಕ್‌ಡೌನ್ ಅನ್ನು ವಿಸ್ತರಿಸಲು ನಿರ್ಧರಿಸಿದೆ.

ಇಂದು ರಾಷ್ಟ್ರವ್ಯಾಪಿ ಲಾಕ್‌ಡೌನ್‌ನ ಮೂರನೇ ಹಂತ ಅಂತ್ಯಗೊಳ್ಳಲಿದೆ. ಕೇಂದ್ರವು ಇಂದು ಸಂಜೆ ಲಾಕ್‌ಡೌನ್‌ನ ನಾಲ್ಕನೇ ಹಂತದ ಮಾರ್ಗಸೂಚಿಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಮಹಾರಾಷ್ಟ್ರದ ವಿವರ

ಇಡೀ ರಾಜ್ಯಕ್ಕೆ ಲಾಕ್‌ಡೌನ್ ವಿಸ್ತರಿಸಲಾಗಿದ್ದರೂ, ಹಂತವಾರು ತೆರವುಗೊಳಿಸುವ ಅಥವಾ ನಿರ್ಬಂಧಗಳನ್ನು ಸಡಿಲಿಸುವ ಆದೇಶವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಅಜೋಯ್ ಮೆಹ್ತಾ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ದೇಶದ ಒಟ್ಟು COVID-19 ಪ್ರಕರಣಗಳಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟನ್ನು ಈ ರಾಜ್ಯವೊಂದೇ ವರದಿ ಮಾಡಿದೆ. ಒಂದೇ ದಿನದಲ್ಲಿ 1,606 ಹೊಸ ಪ್ರಕರಣಗಳು ವರದಿಯಾಗಿರುವುದರಿಂದ ರಾಜ್ಯದಲ್ಲಿ ಕರೋನವೈರಸ್ ಪ್ರಕರಣಗಳು ಶನಿವಾರ 30,000 ದಾಟಿದೆ. 884 ಪ್ರಕರಣಗಳ ಹೆಚ್ಚಳದೊಂದಿಗೆ, ಮುಂಬೈನ ಒಟ್ಟು ಪ್ರಕರಣಗಳು 18,555ಕ್ಕೆ ತಲುಪಿವೆ.

ತಮಿಳುನಾಡು ವರದಿ

74 ಸಾವುಗಳೊಂದಿಗೆ 10000 ಪ್ರಕರಣಗಳನ್ನು ದಾಖಲಿಸಿರುವ ತಮಿಳುನಾಡು ರಾಜ್ಯವೂ ಸಹ ಮೇ 31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದೆ. ಆದರೂ 25 ಜಿಲ್ಲೆಗಳಲ್ಲಿ ನಿಯಮಗಳನ್ನು ಸಡಿಲಗೊಳಿಸಿದ್ದು, ಇ ಪಾಸ್‌ ಇಲ್ಲದೆಯೂ ಅಗತ್ಯ ಸಾರಿಗೆ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಕರ್ನಾಟಕ ವರದಿ:

ಕರ್ನಾಟಕದಲ್ಲಿ ಲಾಕ್‌ಡೌನ್‌ ಮುಂದುವರೆಯುವ ಬಗ್ಗೆ ಸರ್ಕಾರ ಇನ್ನೂ ಅಧಿಕೃತ ತೀರ್ಮಾನ ತೆಗೆದಕೊಂಡಿಲ್ಲ. ಆದರೆ ನಿಯಮಗಳನ್ನು ಸಡಿಲಿಸುವ ಸಲುವಾಗಿ ಯೋಚಿಸುತ್ತಿದ್ದು ನಿಯಮಿತ ಪ್ರಮಾಣದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಿದೆ.

ಸದ್ಯಕ್ಕೆ 1146 ಪ್ರಕರಣಗಳು ವರದಿಯಾಗಿದ್ದು 37 ಜನ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ಮತ್ತು ತಮಿಳುನಾಡಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆಯ ದೃಷ್ಟಿಯಿಂದ ಕರ್ನಾಟಕ ಉತ್ತಮ ಸ್ಥಿತಿಯಲ್ಲಿದೆ. ಆದರೆ ಇಂದು ಒಂದೇ ದಿನಕ್ಕೆ 54 ಪ್ರಕರಣಗಳು ದಾಖಲಾಗಿದ್ದು ಆತಂಕ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ತೀರ್ಮಾನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.


ಇದನ್ನೂ ಓದಿ: ರಸ್ತೆಯಲ್ಲಿ ಕೊರೊನಾ ಸೋಂಕಿತರ ಶವ: ಗುಜರಾತ್‌ ಮಾಡೆಲ್ ಧ್ವಂಸ ಮಾಡಬೇಕೆಂದು ಜಿಗ್ನೇಶ್‌ ಮೇವಾನಿ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...