Homeಮುಖಪುಟಅವಶ್ಯಕತೆ ಇದ್ದರಷ್ಟೇ ಮೊಬೈಲ್ ಬಳಸಿ: ಮಹಾರಾಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಮಾರ್ಗಸೂಚಿ

ಅವಶ್ಯಕತೆ ಇದ್ದರಷ್ಟೇ ಮೊಬೈಲ್ ಬಳಸಿ: ಮಹಾರಾಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಮಾರ್ಗಸೂಚಿ

- Advertisement -
- Advertisement -

ಪೆಗಾಸಸ್ ಗೂಢಚರ್ಯೆ ಹಗರಣದ ನಡುವೆಯೇ ಮಹಾರಾಷ್ಟ್ರ ಸರ್ಕಾರ ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರಿಗೆ ಕಚೇರಿಗಳಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆಗೊಳಿಸುವಂತೆ ಮತ್ತು ಅಧಿಕೃತ ಲ್ಯಾಂಡ್‌ಲೈನ್ ಬಳಕೆ ಮಾಡುವಂತೆ ಮಾರ್ಗಸೂಚಿ ಹೊರಡಿಸಿದೆ.

ಜನರಲ್‌ ಅಡ್ಮಿನಿಸ್ಟ್ರೇಷನ್‌ ಡಿಪಾರ್ಟ್‌ಮೆಂಟ್‌ (General Administration Department ), ಪೆಗಾಸಸ್ ಹಗರಣದ ನಡುವೆ ಲ್ಯಾಂಡ್‌ಲೈನ್‌ಗಳು ಹೆಚ್ಚು ಯೋಗ್ಯವಾಗಿವೆ ಎಂದಿದೆ. ಅಧಿಕೃತ ಕೆಲಸಕ್ಕೆ ಅಗತ್ಯವಿದ್ದರೆ ಮಾತ್ರ ಮೊಬೈಲ್ ಫೋನ್ ಬಳಸಬೇಕು ಎಂದು ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮೊಬೈಲ್‌ನಲ್ಲಿ ಮಾತನಾಡುವಾಗ ಸಭ್ಯ ಭಾಷೆಯ ಬಳಕೆ ಮತ್ತು ಇತರರ ಉಪಸ್ಥಿತಿಯ ಬಗ್ಗೆ ಗಮನಗೊಡುವುದು ಮುಖ್ಯವೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. “ಮೊಬೈಲ್ ಫೋನ್‌ನಲ್ಲಿ ಮಾತನಾಡುವಾಗ, ಮೃದು ಧ್ವನಿಯಲ್ಲಿ ಮಾತನಾಡಬೇಕು, ವಾದ ಮಾಡಬಾರದು ಮತ್ತು ಅಸಂವಿಧಾನಿಕ ಭಾಷೆಯನ್ನು ಬಳಸಬಾರದು” ಎಂದು ಮಾರ್ಗಸೂಚಿಯಲ್ಲಿ ತಿಳಿಸಿರುವುದಾಗಿ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಕಚೇರಿ ಬಳಕೆಗಾಗಿ ಸಾಮಾಜಿಕ ಮಾಧ್ಯಮವನ್ನು ಬಳಸುವಾಗ ಸಮಯ ಮತ್ತು ಭಾಷೆಯತ್ತ ಗಮನಹರಿಸಲು ತಿಳಿಸಲಾಗಿದೆ. ಜೊತೆಗೆ ಸರ್ಕಾರದ ಅಧಿಕೃತ ಕೆಲಸಗಳಿಗೆ ಸಂಬಂಧಿಸಿದಂತೆ ಪಠ್ಯ ಸಂದೇಶಗಳನ್ನು (text messages) ಬಳಸಲು ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಸೂಚನೆ ನೀಡಲಾಗಿದೆ.

ಅಧಿಕಾರಿಗಳು ಮತ್ತು ಉದ್ಯೋಗಿಗಳು ಮತ್ತೊಂದು ಕರೆಯಲ್ಲಿ ಕಾರ್ಯನಿರತವಾಗಿದ್ದಾಗ ಹಿರಿಯ ಅಧಿಕಾರಿಗಳು ಕರೆ ಮಾಡಿದರೆ ತ್ವರಿತವಾಗಿ ಸ್ಪಂದಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರಿ ಕಚೇರಿಗಳ ವರ್ಚಸ್ಸಿಗೆ ಕಳಂಕವಾಗದಂತೆ ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದೆ. ಎಲ್ಲಾ ಉದ್ಯೋಗಿಗಳು ಈ ನಿಯಮಾವಳಿಗಳನ್ನು ಅನುಸರಿಸಲು ಬದ್ಧರಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಕೃತ ಸಭೆಗಳಲ್ಲಿ ಅಥವಾ ಹಿರಿಯ ಅಧಿಕಾರಿಗಳ ಕೋಣೆಗಳ ಒಳಗೆ ಇರುವಾಗ ಮೊಬೈಲ್ ಫೋನ್‌ಗಳನ್ನು ಸೈಲೆಂಟ್ ಮೋಡ್‌ನಲ್ಲಿಇಟ್ಟಿರಬೇಕು. ಅಂತೆಯೇ, ಇಂಟರ್‌ನೆಟ್‌ ಬ್ರೌಸ್‌ ಮಾಡುವುದು, ಸಂದೇಶಗಳನ್ನು ಪರಿಶೀಲಿಸುವುದು ಮತ್ತು ಇಯರ್‌ಫೋನ್‌ಗಳ ಬಳಕೆಯನ್ನು ಇಂತಹ ಸಂದರ್ಭಗಳಲ್ಲಿ ತಪ್ಪಿಸಬೇಕು ಎಂದು ಸರ್ಕಾರ ಸಲಹೆ ನೀಡಿದೆ.


ಇದನ್ನೂ ಓದಿ: ಪೆಗಾಸಸ್ ಕಣ್ಗಾವಲು ಪಟ್ಟಿಯಲ್ಲಿ ಮಾಜಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅನಿಲ್ ಅಂಬಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...