Homeಮುಖಪುಟಅವಶ್ಯಕತೆ ಇದ್ದರಷ್ಟೇ ಮೊಬೈಲ್ ಬಳಸಿ: ಮಹಾರಾಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಮಾರ್ಗಸೂಚಿ

ಅವಶ್ಯಕತೆ ಇದ್ದರಷ್ಟೇ ಮೊಬೈಲ್ ಬಳಸಿ: ಮಹಾರಾಷ್ಟ್ರ ಸರ್ಕಾರಿ ಅಧಿಕಾರಿಗಳಿಗೆ ಮಾರ್ಗಸೂಚಿ

- Advertisement -
- Advertisement -

ಪೆಗಾಸಸ್ ಗೂಢಚರ್ಯೆ ಹಗರಣದ ನಡುವೆಯೇ ಮಹಾರಾಷ್ಟ್ರ ಸರ್ಕಾರ ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರಿಗೆ ಕಚೇರಿಗಳಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆಗೊಳಿಸುವಂತೆ ಮತ್ತು ಅಧಿಕೃತ ಲ್ಯಾಂಡ್‌ಲೈನ್ ಬಳಕೆ ಮಾಡುವಂತೆ ಮಾರ್ಗಸೂಚಿ ಹೊರಡಿಸಿದೆ.

ಜನರಲ್‌ ಅಡ್ಮಿನಿಸ್ಟ್ರೇಷನ್‌ ಡಿಪಾರ್ಟ್‌ಮೆಂಟ್‌ (General Administration Department ), ಪೆಗಾಸಸ್ ಹಗರಣದ ನಡುವೆ ಲ್ಯಾಂಡ್‌ಲೈನ್‌ಗಳು ಹೆಚ್ಚು ಯೋಗ್ಯವಾಗಿವೆ ಎಂದಿದೆ. ಅಧಿಕೃತ ಕೆಲಸಕ್ಕೆ ಅಗತ್ಯವಿದ್ದರೆ ಮಾತ್ರ ಮೊಬೈಲ್ ಫೋನ್ ಬಳಸಬೇಕು ಎಂದು ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ನೌಕರರಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮೊಬೈಲ್‌ನಲ್ಲಿ ಮಾತನಾಡುವಾಗ ಸಭ್ಯ ಭಾಷೆಯ ಬಳಕೆ ಮತ್ತು ಇತರರ ಉಪಸ್ಥಿತಿಯ ಬಗ್ಗೆ ಗಮನಗೊಡುವುದು ಮುಖ್ಯವೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. “ಮೊಬೈಲ್ ಫೋನ್‌ನಲ್ಲಿ ಮಾತನಾಡುವಾಗ, ಮೃದು ಧ್ವನಿಯಲ್ಲಿ ಮಾತನಾಡಬೇಕು, ವಾದ ಮಾಡಬಾರದು ಮತ್ತು ಅಸಂವಿಧಾನಿಕ ಭಾಷೆಯನ್ನು ಬಳಸಬಾರದು” ಎಂದು ಮಾರ್ಗಸೂಚಿಯಲ್ಲಿ ತಿಳಿಸಿರುವುದಾಗಿ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಕಚೇರಿ ಬಳಕೆಗಾಗಿ ಸಾಮಾಜಿಕ ಮಾಧ್ಯಮವನ್ನು ಬಳಸುವಾಗ ಸಮಯ ಮತ್ತು ಭಾಷೆಯತ್ತ ಗಮನಹರಿಸಲು ತಿಳಿಸಲಾಗಿದೆ. ಜೊತೆಗೆ ಸರ್ಕಾರದ ಅಧಿಕೃತ ಕೆಲಸಗಳಿಗೆ ಸಂಬಂಧಿಸಿದಂತೆ ಪಠ್ಯ ಸಂದೇಶಗಳನ್ನು (text messages) ಬಳಸಲು ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಸೂಚನೆ ನೀಡಲಾಗಿದೆ.

ಅಧಿಕಾರಿಗಳು ಮತ್ತು ಉದ್ಯೋಗಿಗಳು ಮತ್ತೊಂದು ಕರೆಯಲ್ಲಿ ಕಾರ್ಯನಿರತವಾಗಿದ್ದಾಗ ಹಿರಿಯ ಅಧಿಕಾರಿಗಳು ಕರೆ ಮಾಡಿದರೆ ತ್ವರಿತವಾಗಿ ಸ್ಪಂದಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರಿ ಕಚೇರಿಗಳ ವರ್ಚಸ್ಸಿಗೆ ಕಳಂಕವಾಗದಂತೆ ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದೆ. ಎಲ್ಲಾ ಉದ್ಯೋಗಿಗಳು ಈ ನಿಯಮಾವಳಿಗಳನ್ನು ಅನುಸರಿಸಲು ಬದ್ಧರಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಕೃತ ಸಭೆಗಳಲ್ಲಿ ಅಥವಾ ಹಿರಿಯ ಅಧಿಕಾರಿಗಳ ಕೋಣೆಗಳ ಒಳಗೆ ಇರುವಾಗ ಮೊಬೈಲ್ ಫೋನ್‌ಗಳನ್ನು ಸೈಲೆಂಟ್ ಮೋಡ್‌ನಲ್ಲಿಇಟ್ಟಿರಬೇಕು. ಅಂತೆಯೇ, ಇಂಟರ್‌ನೆಟ್‌ ಬ್ರೌಸ್‌ ಮಾಡುವುದು, ಸಂದೇಶಗಳನ್ನು ಪರಿಶೀಲಿಸುವುದು ಮತ್ತು ಇಯರ್‌ಫೋನ್‌ಗಳ ಬಳಕೆಯನ್ನು ಇಂತಹ ಸಂದರ್ಭಗಳಲ್ಲಿ ತಪ್ಪಿಸಬೇಕು ಎಂದು ಸರ್ಕಾರ ಸಲಹೆ ನೀಡಿದೆ.


ಇದನ್ನೂ ಓದಿ: ಪೆಗಾಸಸ್ ಕಣ್ಗಾವಲು ಪಟ್ಟಿಯಲ್ಲಿ ಮಾಜಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅನಿಲ್ ಅಂಬಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...