Homeಮುಖಪುಟ24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ದಿಢೀರನೆ ಮುಂದೂಡಲಾಗಿದೆ.

ಶನಿವಾರ ಅಧಿಕೃತ ಪ್ರಕಟಣೆ ಹೊರಡಿಸಿರುವ ಮಹಾರಾಷ್ಟ್ರ ರಾಜ್ಯ ಪರೀಕ್ಷಾ ಮಂಡಳಿಯು, “ರಾಜ್ಯಾದ್ಯಂತ 1,028 ಕೇಂದ್ರಗಳಲ್ಲಿ ಜೂನ್ 28 ರಂದು ನಡೆಯಬೇಕಿದ್ದ ಟಿಇಟಿ 2026 ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಪರೀಕ್ಷಾ ಪ್ರಕ್ರಿಯೆಯ ನಂಬಿಕೆಯನ್ನು ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಮುಂದೂಡಲಾಗಿದೆ” ಎಂದು ತಿಳಿಸಿದೆ.

ಮಂಡಳಿಯ ಪ್ರಕಾರ, ಶನಿವಾರ ಮುಂಜಾನೆ ಸಿಕ್ಕ ರಹಸ್ಯ ಮಾಹಿತಿಯ ಮೇರೆಗೆ ಭಿವಾಂಡಿ ಪೊಲೀಸರು ನಿರ್ದಿಷ್ಟ ಸ್ಥಳವೊಂದರ ಮೇಲೆ ದಾಳಿ ನಡೆಸಿದಾಗ, ಕೆಲವು ವ್ಯಕ್ತಿಗಳ ಬಳಿ ಸೀಲ್ ಮಾಡಲಾಗಿದ್ದ ಟಿಇಟಿ 2026 ರ ಪ್ರಶ್ನೆ ಪತ್ರಿಕೆಯ ಪ್ಯಾಕೆಟ್‌ನ ಪುಟಗಳು ಪತ್ತೆಯಾಗಿವೆ. ತಕ್ಷಣವೇ ಮಹಾರಾಷ್ಟ್ರ ರಾಜ್ಯ ಪರೀಕ್ಷಾ ಮಂಡಳಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಆ ಪತ್ರಿಕೆಯನ್ನು ಪರಿಶೀಲಿಸಲಾಯಿತು. ಅದು ಅಸಲಿ ಪ್ರಶ್ನೆ ಪತ್ರಿಕೆ ಎಂಬುದು ಖಚಿತವಾದ ಬೆನ್ನಲ್ಲೇ ಭಿವಾಂಡಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ, ಪರೀಕ್ಷೆಗೂ 24 ಗಂಟೆಗಳ ಮುನ್ನವೇ ಥಾಣೆ ವಲಯದಲ್ಲಿ ಈ ಸೋರಿಕೆಯಾದ ಪ್ರಶ್ನೆ ಪತ್ರಿಕೆ ಹರಿದಾಡುತ್ತಿತ್ತು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರಶ್ನೆ ಪತ್ರಿಕೆಯನ್ನು ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಬಂಧಿತರ ಗುರುತನ್ನು ಸದ್ಯಕ್ಕೆ ಬಹಿರಂಗಪಡಿಸಲಾಗಿಲ್ಲ.

ಮಹಾರಾಷ್ಟ್ರದ ಈ ಟಿಇಟಿ ಪರೀಕ್ಷಾ ಅಕ್ರಮವು ಇತ್ತೀಚೆಗಷ್ಟೇ ದೇಶವನ್ನೇ ನಡುಗಿಸಿದ ‘ನೀಟ್’ (NEET) ಪರೀಕ್ಷಾ ಮಹಾ ಹಗರಣವನ್ನು ಮತ್ತೆ ನೆನಪಿಸುವಂತಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ವೈದ್ಯಕೀಯ ಆಕಾಂಕ್ಷಿಗಳು ಅನುಭವಿಸಿದ ನರಕಯಾತನೆ ಅಷ್ಟಿಷ್ಟಲ್ಲ. ಹಗಲಿರುಳು ಅನ್ನ ನಿದ್ದೆ ಬಿಟ್ಟು ವರ್ಷಗಟ್ಟಲೆ ಕಷ್ಟಪಟ್ಟು ಓದಿದ್ದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಶ್ರಮ, ಭ್ರಷ್ಟರ ದುರಾಶೆಯಿಂದಾಗಿ ಒಂದೇ ರಾತ್ರಿಯಲ್ಲಿ ಹರಾಜಾಗಿ ಹೋಯಿತು. ಪರೀಕ್ಷೆ ರದ್ದಾದ ಆಘಾತ ಮತ್ತು ಮರುಪರೀಕ್ಷೆಯ ಅನಿಶ್ಚಿತತೆಯ ನಡುವೆ ಸಿಲುಕಿದ ದೇಶದ ವಿವಿಧ ರಾಜ್ಯಗಳ 13 ಅಮೂಲ್ಯ ವಿದ್ಯಾರ್ಥಿ ಜೀವಗಳು ತೀವ್ರ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿದ್ದು ಇಡೀ ದೇಶದ ಸಾಕ್ಷಿಪ್ರಜ್ಞೆಯನ್ನು ಚುಚ್ಚುವಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...