Homeಮುಖಪುಟಇಂದು ಮಹಾರಾಷ್ಟ್ರದ 3 ದಿನದ ಬಿಜೆಪಿ ಸರ್ಕಾರಕ್ಕೆ ಮೊದಲ ಪುಣ್ಯತಿಥಿ: ಸಂಜಯ್ ರಾವತ್

ಇಂದು ಮಹಾರಾಷ್ಟ್ರದ 3 ದಿನದ ಬಿಜೆಪಿ ಸರ್ಕಾರಕ್ಕೆ ಮೊದಲ ಪುಣ್ಯತಿಥಿ: ಸಂಜಯ್ ರಾವತ್

"ಎರಡು-ಮೂರು ತಿಂಗಳಲ್ಲಿ ನಮ್ಮ (ಬಿಜೆಪಿ) ಸರ್ಕಾರ ರೂಪುಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ರಾವ್ ಸಾಹೇಬ್ ಪಾಟೀಲ್ ಸ್ಪೋಟಕ ಹೇಳಿಕೆ ನೀಡಿದ್ದರು"

- Advertisement -
- Advertisement -

ಇನ್ನು 2-3 ತಿಂಗಳಿನಲ್ಲಿ ಸರ್ಕಾರ ರಚಿಸುತ್ತೇವೆ ಎಂದ ಬಿಜೆಪಿ ನಾಯಕ ರಾವ್ ಸಾಹೇಬ್ ಪಾಟೀಲ್ ಧಾನ್ವೆ ಹೇಳಿಕೆಗೆ ತಿರುಗೇಟು ನೀಡಿದ ಶಿವಸೇನೆ ಮುಖಂಡ ಸಂಜಯ್ ರಾವತ್, “ಕಳೆದ ವರ್ಷ ರೂಪುಗೊಂಡಿದ್ದ 3 ದಿನದ ಸರ್ಕಾರದ ತಿಥಿ ಇಂದು” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಂಜಯ್ ರಾವತ್ ಅವರ ಹೇಳಿಕೆಯನ್ನು ಎಎನ್‌ಐ ಟ್ವೀಟ್ ಮಾಡಿದ್ದು, “ಕಳೆದ ವರ್ಷ ರೂಪುಗೊಂಡ 3 ದಿನಗಳ ಸರ್ಕಾರದ ತಿಥಿ ಇಂದು. ನಮ್ಮ ಸರ್ಕಾರ ಉಳಿದ 4 ವರ್ಷಗಳನ್ನು ಪೂರ್ಣಗೊಳಿಸುತ್ತದೆ. ತಮ್ಮ ಎಲ್ಲಾ ಪ್ರಯತ್ನಗಳು ವಿಫಲವಾದ ಕಾರಣ ಹತಾಶೆಯಿಂದ ಪ್ರತಿಪಕ್ಷದ ನಾಯಕರು ಇಂತಹ ವಿಷಯಗಳನ್ನು ಹೇಳುತ್ತಾರೆ. ಮಹಾರಾಷ್ಟ್ರದ ಜನರು ನಮ್ಮ ಸರ್ಕಾರದೊಂದಿಗೆ ಇದ್ದಾರೆ ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ ಎಂದಿದ್ದಾರೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ನಾವು ಟ್ರಂಪ್ ಹುಚ್ಚ ಎನ್ನುವುದಿಲ್ಲ; ರಾಹುಲ್ ಗಾಂಧಿ ಬಗ್ಗೆ ಮಾತನಾಡಲು ಒಬಾಮ ಯಾರು?- ಶಿವಸೇನೆ ಪ್ರಶ್ನೆ

ಇದನ್ನೂ ಓದಿ: ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ನಿನ್ನೆ ಸ್ಫೋಟಕ ವಿಷಯವನ್ನು ಹೇಳಿದ್ದ ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ರಾವ್ ಸಾಹೇಬ್ ಪಾಟೀಲ್, “ನಮ್ಮ ಸರ್ಕಾರ ರಚನೆಯಾಗುವುದಿಲ್ಲ ಎಂದು ನೀವು ಭಾವಿಸಬೇಡಿ. ಎರಡು-ಮೂರು ತಿಂಗಳಲ್ಲಿ ನಮ್ಮ ಸರ್ಕಾರ ರೂಪುಗೊಳ್ಳುತ್ತದೆ. ಈ ಮತದಾನದ ಫಲಿತಾಂಶಕ್ಕಾಗಿ ನಾವು ಕಾಯುತ್ತಿದ್ದೇವೆ” ಎಂದು ಪರಭಾನಿಯ ವಿಧಾನ ಪರಿಷತ್ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು.

ಇಂದು ಬೆಳಿಗ್ಗೆ ಶಿವಸೇನೆ ಶಾಸಕರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದನ್ನು ಖಂಡಿಸಿದ್ದ ಸಂಜಯ್ ರಾವತ್, “ಮುಂದಿನ 25 ವರ್ಷಗಳ ಕಾಲ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಬಿಜೆಪಿ ಪಕ್ಷವು ಮರೆತುಬಿಡಬೇಕು. ನೀವು ಇಂದು ಪ್ರಾರಂಭಿಸಿದ್ದೀರಿ, ಅದನ್ನು ಹೇಗೆ ಕೊನೆಗೊಳಿಸಬೇಕು ಎಂದು ನಮಗೆ ತಿಳಿದಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

“ಶಾಸಕರು ಮನೆಯಲ್ಲಿ ಇಲ್ಲದಿದ್ದಾಗ ಅವರ ಆಸ್ತಿಗಳ ಮೇಲೆ ದಾಳಿ ನಡೆಸಲಾಗಿದೆ. ನೀವು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಜನರಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದೀರಿ. ಈ ಕ್ರಮಗಳು ನಿಮಗೆ ಹಿನ್ನಡೆ ಉಂಟುಮಾಡುತ್ತವೆ. ನಿಮ್ಮ ಸಮಯ ಹತ್ತಿರವಾಗಿದೆ ಎಂದು ನಾನು ಭಾವಿಸುತ್ತೇನೆ. ಅದು ಸಿಬಿಐ ಅಥವಾ ಇ.ಡಿ ಆಗಿರಲಿ. ನಮ್ಮ ಸರ್ಕಾರ, ಶಾಸಕರು ಮತ್ತು ನಾಯಕರು ಯಾರಿಗೂ ಶರಣಾಗುವುದಿಲ್ಲ. ನಾವು ಹೋರಾಟ ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದರು.

ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆ ವಿವಾದದ ನಂತರ ಶಿವಸೇನೆ ಕಳೆದ ವರ್ಷ ಬಿಜೆಪಿಯೊಂದಿಗಿನ ತನ್ನ ದೀರ್ಘಕಾಲದ ಸಂಬಂಧವನ್ನು ಕಡಿದುಕೊಂಡಿತು. ನಂತರ ಸೈದ್ಧಾಂತಿಕ ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆಗೆ ಮೈತ್ರಿ ಮಾಡಿಕೊಂಡು ಶಿವಸೇನೆ ಅಧಿಕಾರಕ್ಕೆ ಬಂದಿತ್ತು. ಅಂದಿನಿಂದ ಬಿಜೆಪಿ ಮತ್ತು ಶಿವಸೇನೆಯ ನಡುವೆ ಬಹಿರಂಗ ಗುದ್ದಾಟ ನಡೆಯುತ್ತಿದೆ.


ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...