Homeಮುಖಪುಟಇಂದು ಮಹಾರಾಷ್ಟ್ರದ 3 ದಿನದ ಬಿಜೆಪಿ ಸರ್ಕಾರಕ್ಕೆ ಮೊದಲ ಪುಣ್ಯತಿಥಿ: ಸಂಜಯ್ ರಾವತ್

ಇಂದು ಮಹಾರಾಷ್ಟ್ರದ 3 ದಿನದ ಬಿಜೆಪಿ ಸರ್ಕಾರಕ್ಕೆ ಮೊದಲ ಪುಣ್ಯತಿಥಿ: ಸಂಜಯ್ ರಾವತ್

"ಎರಡು-ಮೂರು ತಿಂಗಳಲ್ಲಿ ನಮ್ಮ (ಬಿಜೆಪಿ) ಸರ್ಕಾರ ರೂಪುಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ರಾವ್ ಸಾಹೇಬ್ ಪಾಟೀಲ್ ಸ್ಪೋಟಕ ಹೇಳಿಕೆ ನೀಡಿದ್ದರು"

- Advertisement -
- Advertisement -

ಇನ್ನು 2-3 ತಿಂಗಳಿನಲ್ಲಿ ಸರ್ಕಾರ ರಚಿಸುತ್ತೇವೆ ಎಂದ ಬಿಜೆಪಿ ನಾಯಕ ರಾವ್ ಸಾಹೇಬ್ ಪಾಟೀಲ್ ಧಾನ್ವೆ ಹೇಳಿಕೆಗೆ ತಿರುಗೇಟು ನೀಡಿದ ಶಿವಸೇನೆ ಮುಖಂಡ ಸಂಜಯ್ ರಾವತ್, “ಕಳೆದ ವರ್ಷ ರೂಪುಗೊಂಡಿದ್ದ 3 ದಿನದ ಸರ್ಕಾರದ ತಿಥಿ ಇಂದು” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಂಜಯ್ ರಾವತ್ ಅವರ ಹೇಳಿಕೆಯನ್ನು ಎಎನ್‌ಐ ಟ್ವೀಟ್ ಮಾಡಿದ್ದು, “ಕಳೆದ ವರ್ಷ ರೂಪುಗೊಂಡ 3 ದಿನಗಳ ಸರ್ಕಾರದ ತಿಥಿ ಇಂದು. ನಮ್ಮ ಸರ್ಕಾರ ಉಳಿದ 4 ವರ್ಷಗಳನ್ನು ಪೂರ್ಣಗೊಳಿಸುತ್ತದೆ. ತಮ್ಮ ಎಲ್ಲಾ ಪ್ರಯತ್ನಗಳು ವಿಫಲವಾದ ಕಾರಣ ಹತಾಶೆಯಿಂದ ಪ್ರತಿಪಕ್ಷದ ನಾಯಕರು ಇಂತಹ ವಿಷಯಗಳನ್ನು ಹೇಳುತ್ತಾರೆ. ಮಹಾರಾಷ್ಟ್ರದ ಜನರು ನಮ್ಮ ಸರ್ಕಾರದೊಂದಿಗೆ ಇದ್ದಾರೆ ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ ಎಂದಿದ್ದಾರೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ನಾವು ಟ್ರಂಪ್ ಹುಚ್ಚ ಎನ್ನುವುದಿಲ್ಲ; ರಾಹುಲ್ ಗಾಂಧಿ ಬಗ್ಗೆ ಮಾತನಾಡಲು ಒಬಾಮ ಯಾರು?- ಶಿವಸೇನೆ ಪ್ರಶ್ನೆ

ಇದನ್ನೂ ಓದಿ: ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ನಿನ್ನೆ ಸ್ಫೋಟಕ ವಿಷಯವನ್ನು ಹೇಳಿದ್ದ ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ರಾವ್ ಸಾಹೇಬ್ ಪಾಟೀಲ್, “ನಮ್ಮ ಸರ್ಕಾರ ರಚನೆಯಾಗುವುದಿಲ್ಲ ಎಂದು ನೀವು ಭಾವಿಸಬೇಡಿ. ಎರಡು-ಮೂರು ತಿಂಗಳಲ್ಲಿ ನಮ್ಮ ಸರ್ಕಾರ ರೂಪುಗೊಳ್ಳುತ್ತದೆ. ಈ ಮತದಾನದ ಫಲಿತಾಂಶಕ್ಕಾಗಿ ನಾವು ಕಾಯುತ್ತಿದ್ದೇವೆ” ಎಂದು ಪರಭಾನಿಯ ವಿಧಾನ ಪರಿಷತ್ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು.

ಇಂದು ಬೆಳಿಗ್ಗೆ ಶಿವಸೇನೆ ಶಾಸಕರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದನ್ನು ಖಂಡಿಸಿದ್ದ ಸಂಜಯ್ ರಾವತ್, “ಮುಂದಿನ 25 ವರ್ಷಗಳ ಕಾಲ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಬಿಜೆಪಿ ಪಕ್ಷವು ಮರೆತುಬಿಡಬೇಕು. ನೀವು ಇಂದು ಪ್ರಾರಂಭಿಸಿದ್ದೀರಿ, ಅದನ್ನು ಹೇಗೆ ಕೊನೆಗೊಳಿಸಬೇಕು ಎಂದು ನಮಗೆ ತಿಳಿದಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

“ಶಾಸಕರು ಮನೆಯಲ್ಲಿ ಇಲ್ಲದಿದ್ದಾಗ ಅವರ ಆಸ್ತಿಗಳ ಮೇಲೆ ದಾಳಿ ನಡೆಸಲಾಗಿದೆ. ನೀವು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಜನರಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದೀರಿ. ಈ ಕ್ರಮಗಳು ನಿಮಗೆ ಹಿನ್ನಡೆ ಉಂಟುಮಾಡುತ್ತವೆ. ನಿಮ್ಮ ಸಮಯ ಹತ್ತಿರವಾಗಿದೆ ಎಂದು ನಾನು ಭಾವಿಸುತ್ತೇನೆ. ಅದು ಸಿಬಿಐ ಅಥವಾ ಇ.ಡಿ ಆಗಿರಲಿ. ನಮ್ಮ ಸರ್ಕಾರ, ಶಾಸಕರು ಮತ್ತು ನಾಯಕರು ಯಾರಿಗೂ ಶರಣಾಗುವುದಿಲ್ಲ. ನಾವು ಹೋರಾಟ ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದರು.

ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆ ವಿವಾದದ ನಂತರ ಶಿವಸೇನೆ ಕಳೆದ ವರ್ಷ ಬಿಜೆಪಿಯೊಂದಿಗಿನ ತನ್ನ ದೀರ್ಘಕಾಲದ ಸಂಬಂಧವನ್ನು ಕಡಿದುಕೊಂಡಿತು. ನಂತರ ಸೈದ್ಧಾಂತಿಕ ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆಗೆ ಮೈತ್ರಿ ಮಾಡಿಕೊಂಡು ಶಿವಸೇನೆ ಅಧಿಕಾರಕ್ಕೆ ಬಂದಿತ್ತು. ಅಂದಿನಿಂದ ಬಿಜೆಪಿ ಮತ್ತು ಶಿವಸೇನೆಯ ನಡುವೆ ಬಹಿರಂಗ ಗುದ್ದಾಟ ನಡೆಯುತ್ತಿದೆ.


ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....