Homeಮುಖಪುಟಇಂದು ಮಹಾರಾಷ್ಟ್ರದ 3 ದಿನದ ಬಿಜೆಪಿ ಸರ್ಕಾರಕ್ಕೆ ಮೊದಲ ಪುಣ್ಯತಿಥಿ: ಸಂಜಯ್ ರಾವತ್

ಇಂದು ಮಹಾರಾಷ್ಟ್ರದ 3 ದಿನದ ಬಿಜೆಪಿ ಸರ್ಕಾರಕ್ಕೆ ಮೊದಲ ಪುಣ್ಯತಿಥಿ: ಸಂಜಯ್ ರಾವತ್

"ಎರಡು-ಮೂರು ತಿಂಗಳಲ್ಲಿ ನಮ್ಮ (ಬಿಜೆಪಿ) ಸರ್ಕಾರ ರೂಪುಗೊಳ್ಳುತ್ತದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ರಾವ್ ಸಾಹೇಬ್ ಪಾಟೀಲ್ ಸ್ಪೋಟಕ ಹೇಳಿಕೆ ನೀಡಿದ್ದರು"

- Advertisement -
- Advertisement -

ಇನ್ನು 2-3 ತಿಂಗಳಿನಲ್ಲಿ ಸರ್ಕಾರ ರಚಿಸುತ್ತೇವೆ ಎಂದ ಬಿಜೆಪಿ ನಾಯಕ ರಾವ್ ಸಾಹೇಬ್ ಪಾಟೀಲ್ ಧಾನ್ವೆ ಹೇಳಿಕೆಗೆ ತಿರುಗೇಟು ನೀಡಿದ ಶಿವಸೇನೆ ಮುಖಂಡ ಸಂಜಯ್ ರಾವತ್, “ಕಳೆದ ವರ್ಷ ರೂಪುಗೊಂಡಿದ್ದ 3 ದಿನದ ಸರ್ಕಾರದ ತಿಥಿ ಇಂದು” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಂಜಯ್ ರಾವತ್ ಅವರ ಹೇಳಿಕೆಯನ್ನು ಎಎನ್‌ಐ ಟ್ವೀಟ್ ಮಾಡಿದ್ದು, “ಕಳೆದ ವರ್ಷ ರೂಪುಗೊಂಡ 3 ದಿನಗಳ ಸರ್ಕಾರದ ತಿಥಿ ಇಂದು. ನಮ್ಮ ಸರ್ಕಾರ ಉಳಿದ 4 ವರ್ಷಗಳನ್ನು ಪೂರ್ಣಗೊಳಿಸುತ್ತದೆ. ತಮ್ಮ ಎಲ್ಲಾ ಪ್ರಯತ್ನಗಳು ವಿಫಲವಾದ ಕಾರಣ ಹತಾಶೆಯಿಂದ ಪ್ರತಿಪಕ್ಷದ ನಾಯಕರು ಇಂತಹ ವಿಷಯಗಳನ್ನು ಹೇಳುತ್ತಾರೆ. ಮಹಾರಾಷ್ಟ್ರದ ಜನರು ನಮ್ಮ ಸರ್ಕಾರದೊಂದಿಗೆ ಇದ್ದಾರೆ ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ ಎಂದಿದ್ದಾರೆ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ನಾವು ಟ್ರಂಪ್ ಹುಚ್ಚ ಎನ್ನುವುದಿಲ್ಲ; ರಾಹುಲ್ ಗಾಂಧಿ ಬಗ್ಗೆ ಮಾತನಾಡಲು ಒಬಾಮ ಯಾರು?- ಶಿವಸೇನೆ ಪ್ರಶ್ನೆ

ಇದನ್ನೂ ಓದಿ: ಬಿಹಾರದಲ್ಲಿ ನಿಜವಾದ ವಿಜೇತ ಆರ್‌‌ಜೆಡಿ ನಾಯಕ ತೇಜಸ್ವಿ ಯಾದವ್: ಶಿವಸೇನೆ

ನಿನ್ನೆ ಸ್ಫೋಟಕ ವಿಷಯವನ್ನು ಹೇಳಿದ್ದ ಕೇಂದ್ರ ಸಚಿವ ಮತ್ತು ಬಿಜೆಪಿ ಮುಖಂಡ ರಾವ್ ಸಾಹೇಬ್ ಪಾಟೀಲ್, “ನಮ್ಮ ಸರ್ಕಾರ ರಚನೆಯಾಗುವುದಿಲ್ಲ ಎಂದು ನೀವು ಭಾವಿಸಬೇಡಿ. ಎರಡು-ಮೂರು ತಿಂಗಳಲ್ಲಿ ನಮ್ಮ ಸರ್ಕಾರ ರೂಪುಗೊಳ್ಳುತ್ತದೆ. ಈ ಮತದಾನದ ಫಲಿತಾಂಶಕ್ಕಾಗಿ ನಾವು ಕಾಯುತ್ತಿದ್ದೇವೆ” ಎಂದು ಪರಭಾನಿಯ ವಿಧಾನ ಪರಿಷತ್ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದರು.

ಇಂದು ಬೆಳಿಗ್ಗೆ ಶಿವಸೇನೆ ಶಾಸಕರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದನ್ನು ಖಂಡಿಸಿದ್ದ ಸಂಜಯ್ ರಾವತ್, “ಮುಂದಿನ 25 ವರ್ಷಗಳ ಕಾಲ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಬಿಜೆಪಿ ಪಕ್ಷವು ಮರೆತುಬಿಡಬೇಕು. ನೀವು ಇಂದು ಪ್ರಾರಂಭಿಸಿದ್ದೀರಿ, ಅದನ್ನು ಹೇಗೆ ಕೊನೆಗೊಳಿಸಬೇಕು ಎಂದು ನಮಗೆ ತಿಳಿದಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

“ಶಾಸಕರು ಮನೆಯಲ್ಲಿ ಇಲ್ಲದಿದ್ದಾಗ ಅವರ ಆಸ್ತಿಗಳ ಮೇಲೆ ದಾಳಿ ನಡೆಸಲಾಗಿದೆ. ನೀವು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಜನರಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದೀರಿ. ಈ ಕ್ರಮಗಳು ನಿಮಗೆ ಹಿನ್ನಡೆ ಉಂಟುಮಾಡುತ್ತವೆ. ನಿಮ್ಮ ಸಮಯ ಹತ್ತಿರವಾಗಿದೆ ಎಂದು ನಾನು ಭಾವಿಸುತ್ತೇನೆ. ಅದು ಸಿಬಿಐ ಅಥವಾ ಇ.ಡಿ ಆಗಿರಲಿ. ನಮ್ಮ ಸರ್ಕಾರ, ಶಾಸಕರು ಮತ್ತು ನಾಯಕರು ಯಾರಿಗೂ ಶರಣಾಗುವುದಿಲ್ಲ. ನಾವು ಹೋರಾಟ ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದರು.

ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆ ವಿವಾದದ ನಂತರ ಶಿವಸೇನೆ ಕಳೆದ ವರ್ಷ ಬಿಜೆಪಿಯೊಂದಿಗಿನ ತನ್ನ ದೀರ್ಘಕಾಲದ ಸಂಬಂಧವನ್ನು ಕಡಿದುಕೊಂಡಿತು. ನಂತರ ಸೈದ್ಧಾಂತಿಕ ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆಗೆ ಮೈತ್ರಿ ಮಾಡಿಕೊಂಡು ಶಿವಸೇನೆ ಅಧಿಕಾರಕ್ಕೆ ಬಂದಿತ್ತು. ಅಂದಿನಿಂದ ಬಿಜೆಪಿ ಮತ್ತು ಶಿವಸೇನೆಯ ನಡುವೆ ಬಹಿರಂಗ ಗುದ್ದಾಟ ನಡೆಯುತ್ತಿದೆ.


ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...