Homeಮುಖಪುಟಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

- Advertisement -
- Advertisement -

ಶಿವಸೇನೆಯ ನಾಯಕ ಸಚಿವ ಏಕನಾಥ್ ಶಿಂಧೆ ಮತ್ತು ಇತರ ಶಾಸಕರು ಬಂಡಾಯವೆದ್ದ ನಂತರ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಶಿವಸೇನೆ ಬುಧವಾರ ತನ್ನ ಶಾಸಕರಿಗೆ ಸಂಜೆ 5 ಗಂಟೆಯೊಳಗೆ ಮುಂಬೈನಲ್ಲಿ ಸಭೆಗೆ ಹಾಜರಾಗುವಂತೆ ಗಡುವು ನೀಡಿದೆ. ಇಲ್ಲದಿದ್ದರೇ ಸೂಕ್ತ ಕ್ರಮವನ್ನು ಎದುರಿಸುವಂತೆ ಎಚ್ಚರಿಕೆ ನೀಡಿದೆ.

ವಾಟ್ಸಾಪ್, ಇಮೇಲ್ ಮತ್ತು ಎಸ್‌ಎಂಎಸ್ ಮೂಲಕ ಕಳುಹಿಸಿರುವ ಪತ್ರದಲ್ಲಿ ಶಿವಸೇನೆ ಎಲ್ಲಾ ಶಾಸಕರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧಿಕೃತ ನಿವಾಸ ವರ್ಷಾದಲ್ಲಿ ಸಭೆಗೆ ಕರೆಯಲಾಗಿದೆ ಎಂದು ತಿಳಿಸಲಾಗಿದೆ. ಕೊರೊನಾ ಪಾಸಿಟಿವ್‌ ಆಗಿರುವ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯ ಅಧ್ಯಕ್ಷತೆ ವಹಿಸುವ ನಿರೀಕ್ಷೆಯಿದೆ.

“ಇಂದು ಸಂಜೆ 5 ಗಂಟೆಗೆ ನೀವು ಈ ಸಭೆಗೆ ಹಾಜರಾಗದಿದ್ದರೆ, ನೀವು ಪಕ್ಷವನ್ನು ತೊರೆಯುವ ಉದ್ದೇಶವನ್ನು ಹೊಂದಿದ್ದೀರಿ ಎಂದು ಭಾವಿಸಲಾಗುತ್ತದೆ. ಕಾನೂನಿನ ಅಡಿಯಲ್ಲಿ ನಿಮ್ಮ ಸದಸ್ಯತ್ವವನ್ನು ರದ್ದುಗೊಳಿಸಲಾಗುತ್ತದೆ” ಎಂದು ಪತ್ರದಲ್ಲಿ ಪತ್ರದಲ್ಲಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಉದ್ಧವ್ ಸರ್ಕಾರಕ್ಕೆ ಸಂಕಷ್ಟ: 46 ಶಾಸಕರ ಬೆಂಬಲವಿದೆ, ಆದರೆ ಪಕ್ಷ ಬದಲಾಯಿಸುವುದಿಲ್ಲ ಎಂದ ಏಕನಾಥ್ ಶಿಂಧೆ

iv6hd2hk

ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಮಧ್ಯಾಹ್ನದ ಸುಮಾರಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ತಮ್ಮ ಸಂಪುಟ ಸಭೆಯನ್ನು ನಡೆಸಿದ ನಂತರ ಈ ಪತ್ರ ಕಳುಹಿಸಲಾಗಿದೆ.

ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಯಲ್ಲಿದ್ದು, ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಬಂಡಾಯ ನಾಯಕ ಏಕನಾಥ್ ಶಿಂಧೆ, ’ನನಗೆ ಸ್ವತಂತ್ರ ಶಾಸಕರು ಸೇರಿದಂತೆ 46 ಶಾಸಕರ ಬೆಂಬಲವಿದೆ. ಆದರೆ, ಪಕ್ಷವನ್ನು ಬದಲಾಯಿಸುವ ಯಾವುದೇ ಯೋಚನೆಯಿಲ್ಲ. ತಾನು ಶಿವಸೇನೆಯಿಂದ ಬೇರ್ಪಡುವುದಿಲ್ಲ ಮತ್ತು ಬಾಳಾಸಾಹೇಬ್ ಠಾಕ್ರೆಯವರ ಸಿದ್ಧಾಂತವನ್ನು ಮುಂದುವರಿಸುತ್ತೇನೆ. ನಾವು ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ’ ಎಂದು ತಿಳಿಸಿದ್ದರು.

ಇನ್ನು ಗುಜರಾತಿನ ಸೂರತ್‌ನಿಂದ ಚಾರ್ಟರ್ಡ್ ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಿದ್ದ ಬಂಡಾಯ ಶಿವಸೇನೆ ಶಾಸಕರ ನಿಖರ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ. ಆದರೆ ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 89 ಪ್ರಯಾಣಿಕರಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಮಾಡಿದೆ.


ಇದನ್ನೂ ಓದಿ: ಉದ್ಧವ್ ಸರ್ಕಾರಕ್ಕೆ ಸಂಕಷ್ಟ: ವಿಧಾನಸಭೆ ವಿಸರ್ಜನೆಯತ್ತ ರಾಜಕೀಯ ಬೆಳವಣಿಗೆ-ಸಂಜಯ್ ರಾವತ್ ಟ್ವೀಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...