Homeಮುಖಪುಟಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

- Advertisement -
- Advertisement -

ಶಿವಸೇನೆಯ ನಾಯಕ ಸಚಿವ ಏಕನಾಥ್ ಶಿಂಧೆ ಮತ್ತು ಇತರ ಶಾಸಕರು ಬಂಡಾಯವೆದ್ದ ನಂತರ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಶಿವಸೇನೆ ಬುಧವಾರ ತನ್ನ ಶಾಸಕರಿಗೆ ಸಂಜೆ 5 ಗಂಟೆಯೊಳಗೆ ಮುಂಬೈನಲ್ಲಿ ಸಭೆಗೆ ಹಾಜರಾಗುವಂತೆ ಗಡುವು ನೀಡಿದೆ. ಇಲ್ಲದಿದ್ದರೇ ಸೂಕ್ತ ಕ್ರಮವನ್ನು ಎದುರಿಸುವಂತೆ ಎಚ್ಚರಿಕೆ ನೀಡಿದೆ.

ವಾಟ್ಸಾಪ್, ಇಮೇಲ್ ಮತ್ತು ಎಸ್‌ಎಂಎಸ್ ಮೂಲಕ ಕಳುಹಿಸಿರುವ ಪತ್ರದಲ್ಲಿ ಶಿವಸೇನೆ ಎಲ್ಲಾ ಶಾಸಕರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅಧಿಕೃತ ನಿವಾಸ ವರ್ಷಾದಲ್ಲಿ ಸಭೆಗೆ ಕರೆಯಲಾಗಿದೆ ಎಂದು ತಿಳಿಸಲಾಗಿದೆ. ಕೊರೊನಾ ಪಾಸಿಟಿವ್‌ ಆಗಿರುವ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯ ಅಧ್ಯಕ್ಷತೆ ವಹಿಸುವ ನಿರೀಕ್ಷೆಯಿದೆ.

“ಇಂದು ಸಂಜೆ 5 ಗಂಟೆಗೆ ನೀವು ಈ ಸಭೆಗೆ ಹಾಜರಾಗದಿದ್ದರೆ, ನೀವು ಪಕ್ಷವನ್ನು ತೊರೆಯುವ ಉದ್ದೇಶವನ್ನು ಹೊಂದಿದ್ದೀರಿ ಎಂದು ಭಾವಿಸಲಾಗುತ್ತದೆ. ಕಾನೂನಿನ ಅಡಿಯಲ್ಲಿ ನಿಮ್ಮ ಸದಸ್ಯತ್ವವನ್ನು ರದ್ದುಗೊಳಿಸಲಾಗುತ್ತದೆ” ಎಂದು ಪತ್ರದಲ್ಲಿ ಪತ್ರದಲ್ಲಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಉದ್ಧವ್ ಸರ್ಕಾರಕ್ಕೆ ಸಂಕಷ್ಟ: 46 ಶಾಸಕರ ಬೆಂಬಲವಿದೆ, ಆದರೆ ಪಕ್ಷ ಬದಲಾಯಿಸುವುದಿಲ್ಲ ಎಂದ ಏಕನಾಥ್ ಶಿಂಧೆ

iv6hd2hk

ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಮಧ್ಯಾಹ್ನದ ಸುಮಾರಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ತಮ್ಮ ಸಂಪುಟ ಸಭೆಯನ್ನು ನಡೆಸಿದ ನಂತರ ಈ ಪತ್ರ ಕಳುಹಿಸಲಾಗಿದೆ.

ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಯಲ್ಲಿದ್ದು, ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಬಂಡಾಯ ನಾಯಕ ಏಕನಾಥ್ ಶಿಂಧೆ, ’ನನಗೆ ಸ್ವತಂತ್ರ ಶಾಸಕರು ಸೇರಿದಂತೆ 46 ಶಾಸಕರ ಬೆಂಬಲವಿದೆ. ಆದರೆ, ಪಕ್ಷವನ್ನು ಬದಲಾಯಿಸುವ ಯಾವುದೇ ಯೋಚನೆಯಿಲ್ಲ. ತಾನು ಶಿವಸೇನೆಯಿಂದ ಬೇರ್ಪಡುವುದಿಲ್ಲ ಮತ್ತು ಬಾಳಾಸಾಹೇಬ್ ಠಾಕ್ರೆಯವರ ಸಿದ್ಧಾಂತವನ್ನು ಮುಂದುವರಿಸುತ್ತೇನೆ. ನಾವು ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ’ ಎಂದು ತಿಳಿಸಿದ್ದರು.

ಇನ್ನು ಗುಜರಾತಿನ ಸೂರತ್‌ನಿಂದ ಚಾರ್ಟರ್ಡ್ ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಿದ್ದ ಬಂಡಾಯ ಶಿವಸೇನೆ ಶಾಸಕರ ನಿಖರ ಸಂಖ್ಯೆಯನ್ನು ಖಚಿತಪಡಿಸಲು ಸಾಧ್ಯವಾಗಿಲ್ಲ. ಆದರೆ ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 89 ಪ್ರಯಾಣಿಕರಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಮಾಡಿದೆ.


ಇದನ್ನೂ ಓದಿ: ಉದ್ಧವ್ ಸರ್ಕಾರಕ್ಕೆ ಸಂಕಷ್ಟ: ವಿಧಾನಸಭೆ ವಿಸರ್ಜನೆಯತ್ತ ರಾಜಕೀಯ ಬೆಳವಣಿಗೆ-ಸಂಜಯ್ ರಾವತ್ ಟ್ವೀಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...