Homeಮುಖಪುಟಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

- Advertisement -
- Advertisement -

ಜೂನ್ 29 ಬುಧವಾರದಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿ ಒಂದು ವಾರ ಕಾಲ ನಡೆದ ರಾಜಕೀಯ ಹೈಡ್ರಾಮ ಕ್ಲೈಮಾಕ್ಸ್‌ ಹಂತಕ್ಕೆ ತಲುಪಿದೆ.

ಕ್ಯಾಬಿನೆಟ್ ಮಂತ್ರಿ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಮತ್ತು 40 ಇತರ ಶಾಸಕರು ಮೊದಲು ಸೂರತ್‌ನಲ್ಲಿ, ನಂತರ ಗುವಾಹಟಿಯಲ್ಲಿ ಮೊಕ್ಕಾಂ ಹೂಡಿದಾಗ ಬಿಕ್ಕಟ್ಟು ಪ್ರಾರಂಭವಾಯಿತು. ಶಿವಸೇನೆಯು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯಿಂದ ಹೊರಬಂದು ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸುವಂತೆ ಬಂಡಾಯ ಶಾಸಕರು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಬಹುಮತ ಸಾಬೀತುಪಡಿಸಲು ಉದ್ಧವ್ ಠಾಕ್ರೆ ಸರ್ಕಾರಕ್ಕೆ ಆದೇಶಿಸಿದ ನಂತರ, 16 ಬಂಡಾಯ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಶಿವಸೇನೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಆದಾಗ್ಯೂ, ಸುಪ್ರೀಂಕೋರ್ಟ್ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿಯಿತು. ಬಹುಮತ ಸಾಬೀತಿಗೆ ಸೂಚಿಸಿದ್ದು, ಠಾಕ್ರೆ ಅವರ ರಾಜೀನಾಮೆಗೆ ಕಾರಣವಾಯಿತು.

ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ಉದ್ಧವ್ ಠಾಕ್ರೆ ಅವರ ಅಧಿಕಾರ ಪಥನಕ್ಕೆ ಕಾರಣವಾದ ನಾಲ್ಕು ಅಂಶಗಳನ್ನು ‘ದಿ ಕ್ವಿಂಟ್‌’ ಜಾಲತಾಣ ಪಟ್ಟಿ ಮಾಡಿದೆ.

  1. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿ

ಶಿವಸೇನೆ 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಎರಡು ಪಕ್ಷಗಳು 161 ಸ್ಥಾನಗಳನ್ನು ಗೆದ್ದವು. 288 ಸ್ಥಾನಗಳ ವಿಧಾನಸಭೆಯಲ್ಲಿ ಅನುಕೂಲಕರ ಬಹುಮತವಿತ್ತು. ಆದರೆ ಎರಡೂವರೆ ವರ್ಷಗಳ ನಂತರ ಮುಖ್ಯಮಂತ್ರಿ ಸ್ಥಾನವನ್ನು ಹಿಂತಿರುಗಿಸುವ ಭರವಸೆಯಿಂದ ಬಿಜೆಪಿ ಹಿಂದೆ ಸರಿದಿದ್ದರಿಂದ ಶಿವಸೇನೆಯು ಮೈತ್ರಿಯಿಂದ ಹೊರನಡೆಯಿತು.

ಇದರ ನಂತರ ಒಂದು ತಿಂಗಳ ಸುದೀರ್ಘ ರಾಜಕೀಯ ಹೈಡ್ರಾಮ ನಡೆಯಿತು. ಅಂತಿಮವಾಗಿ ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಜೊತೆಗೆ ಸೇರಿ ಶಿವಸೇನೆ ಸರ್ಕಾರವನ್ನು ರಚಿಸಿತು.

ಈ ‘ಅಸಂಭವ’ ಮೈತ್ರಿ ಕೆಲವು ತಿಂಗಳುಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದರು. ಎಂವಿಎ ಸರ್ಕಾರದ ಎರಡೂವರೆ ವರ್ಷಗಳ ಸುದೀರ್ಘ ಅವಧಿಯ ಉದ್ದಕ್ಕೂ, ಮೈತ್ರಿಯೊಳಗೆ ಆಗಾಗ್ಗೆ ಬಿರುಕುಗಳು ಕಾಣಿಸಿಕೊಂಡಿದ್ದವು.

2. ಉದ್ಧವ್ ಠಾಕ್ರೆ – ರಾಜಕೀಯದಲ್ಲಿ ‘ಒಳ್ಳೆಯ ವ್ಯಕ್ತಿ’

ಉದ್ಧವ್ ಠಾಕ್ರೆ ನಿಜವಾಗಿಯೂ ರಾಜಕೀಯದಲ್ಲಿ ಒಳ್ಳೆಯ ವ್ಯಕ್ತಿ. ಶಾಂತ ಸ್ವಭಾವದವರು. ಬಿಕ್ಕಟ್ಟನ್ನು ಪರಿಣಾಮಕಾರಿಯಾಗಿ ನಿಭಾಯಿಸಿದರೂ, ಅದರ ಕ್ರೆಡಿಟ್‌ ಪಡೆಯಲು ಮಿತಿಮೀರಿ ಯತ್ನಿಸುವುದಿಲ್ಲ. ಜೊತೆಗೆ ತಮ್ಮ ಮೈತ್ರಿ ಪಾಲುದಾರರಿಗೆ ವಿಧೇಯರಾಗಿದ್ದರು.

ಏಕನಾಥ್ ಶಿಂಧೆಯವರು ಉದ್ಧವ್ ಠಾಕ್ರೆ ಅವರ ಮೂಗಿನ ನೇರದಲ್ಲಿದ್ದ ಸುಮಾರು 40 ಶಾಸಕರನ್ನು ಕರೆದುಕೊಂಡು ಹೋಗಿದ್ದು ಸಣ್ಣ ಸಾಧನೆಯಲ್ಲ. ಈ ಕುರಿತು ಶಿವಸೇನೆ ಮುಖ್ಯಸ್ಥರು ಸ್ವಲ್ಪ ಯೋಚಿಸುವುದು ಅಗತ್ಯವಿತ್ತು.

3. ಇ.ಡಿ. ಭಯದಲ್ಲಿ ಬಾಬು ಬಯ್ಯಾ

ಬಂಡಾಯಗಾರ ಏಕನಾಥ್ ಶಿಂಧೆ ಸೇರಿದಂತೆ ಹಲವಾರು ಅತೃಪ್ತ ಶಾಸಕರು ತನಿಖಾ ಸಂಸ್ಥೆಗಳ ಭಯದಲ್ಲಿದ್ದಾರೆ ಎಂಬುದು ರಹಸ್ಯವಾದ ವಿಚಾರವೇನೂ ಅಲ್ಲ. ಇವರು ಕೇಂದ್ರೀಯ ಏಜೆನ್ಸಿಗಳಿಂದ ತಪ್ಪಿಸಿಕೊಳ್ಳಬೇಕಿತ್ತು. ಹೀಗಾಗಿ ಹೆಚ್ಚಿನ ಬಂಡಾಯ ಶಾಸಕರು ಎಂವಿಎ ಮೈತ್ರಿಯನ್ನು ತೊರೆದು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಶಿಂಧೆ ಅವರ ಬೇಡಿಕೆಯನ್ನು ಬೆಂಬಲಿಸಿದರು.

ಇದನ್ನೂ ಓದಿರಿ: ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

4. ಹಿಂದುತ್ವ ಪರಂಪರೆಯ ಅಗ್ಗಜಗ್ಗಾಟ

ಉದ್ಧವ್ ಠಾಕ್ರೆಯವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ ಮೇಲೆ ಆಶ್ಚರ್ಯಕರ ರೀತಿಯಲ್ಲಿ ಹಲವು ಸಂದರ್ಭಗಳಲ್ಲಿ ಜಾತ್ಯತೀತ ನಿಲುವು ಪ್ರದರ್ಶಿಸಿದರು.

ಪ್ರವಾದಿಯವರ ವಿರುದ್ಧ ನೂಪುರ್ ಶರ್ಮಾ ಹೇಳಿಕೆ, ಹನುಮಾನ್ ಚಾಲೀಸಾ ಪಠಣ ವಿವಾದ ಸಂದರ್ಭದಲ್ಲಿ ಬಿಜೆಪಿಯನ್ನು ವಿರೋಧಿಸಿದರು. “ಅಧಿಕಾರಕ್ಕಾಗಿ ಶಿವಸೇನೆ ಮತ್ತು ಬಾಳಾಸಾಹೇಬ್ ಅವರ ಹಿಂದುತ್ವ ರಾಜಕಾರಣದ ಗುರುತನ್ನು ಉದ್ಧವ್‌ ತ್ಯಜಿಸಿದ್ದಾರೆ” ಎಂದು ಬಿಂಬಿಸಲು ಅವರ ಜಾತ್ಯತೀತ ಪ್ರತಿಕ್ರಿಯೆಗಳು ಬಳಕೆಯಾದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...