Homeಮುಖಪುಟಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

ಮಹಾರಾಷ್ಟ್ರ: ಉದ್ಧವ್‌ ಠಾಕ್ರೆ ಅಧಿಕಾರ ಕಳೆದುಕೊಳ್ಳಲು ಕಾರಣವಾಯ್ತು- ಈ ನಾಲ್ಕು ಅಂಶ

- Advertisement -
- Advertisement -

ಜೂನ್ 29 ಬುಧವಾರದಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿ ಒಂದು ವಾರ ಕಾಲ ನಡೆದ ರಾಜಕೀಯ ಹೈಡ್ರಾಮ ಕ್ಲೈಮಾಕ್ಸ್‌ ಹಂತಕ್ಕೆ ತಲುಪಿದೆ.

ಕ್ಯಾಬಿನೆಟ್ ಮಂತ್ರಿ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಮತ್ತು 40 ಇತರ ಶಾಸಕರು ಮೊದಲು ಸೂರತ್‌ನಲ್ಲಿ, ನಂತರ ಗುವಾಹಟಿಯಲ್ಲಿ ಮೊಕ್ಕಾಂ ಹೂಡಿದಾಗ ಬಿಕ್ಕಟ್ಟು ಪ್ರಾರಂಭವಾಯಿತು. ಶಿವಸೇನೆಯು ಆಡಳಿತಾರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯಿಂದ ಹೊರಬಂದು ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸುವಂತೆ ಬಂಡಾಯ ಶಾಸಕರು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಬಹುಮತ ಸಾಬೀತುಪಡಿಸಲು ಉದ್ಧವ್ ಠಾಕ್ರೆ ಸರ್ಕಾರಕ್ಕೆ ಆದೇಶಿಸಿದ ನಂತರ, 16 ಬಂಡಾಯ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಶಿವಸೇನೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಆದಾಗ್ಯೂ, ಸುಪ್ರೀಂಕೋರ್ಟ್ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿಯಿತು. ಬಹುಮತ ಸಾಬೀತಿಗೆ ಸೂಚಿಸಿದ್ದು, ಠಾಕ್ರೆ ಅವರ ರಾಜೀನಾಮೆಗೆ ಕಾರಣವಾಯಿತು.

ಈ ಬೆಳವಣಿಗೆಗಳ ಹಿನ್ನಲೆಯಲ್ಲಿ ಉದ್ಧವ್ ಠಾಕ್ರೆ ಅವರ ಅಧಿಕಾರ ಪಥನಕ್ಕೆ ಕಾರಣವಾದ ನಾಲ್ಕು ಅಂಶಗಳನ್ನು ‘ದಿ ಕ್ವಿಂಟ್‌’ ಜಾಲತಾಣ ಪಟ್ಟಿ ಮಾಡಿದೆ.

  1. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಮೈತ್ರಿ

ಶಿವಸೇನೆ 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಎರಡು ಪಕ್ಷಗಳು 161 ಸ್ಥಾನಗಳನ್ನು ಗೆದ್ದವು. 288 ಸ್ಥಾನಗಳ ವಿಧಾನಸಭೆಯಲ್ಲಿ ಅನುಕೂಲಕರ ಬಹುಮತವಿತ್ತು. ಆದರೆ ಎರಡೂವರೆ ವರ್ಷಗಳ ನಂತರ ಮುಖ್ಯಮಂತ್ರಿ ಸ್ಥಾನವನ್ನು ಹಿಂತಿರುಗಿಸುವ ಭರವಸೆಯಿಂದ ಬಿಜೆಪಿ ಹಿಂದೆ ಸರಿದಿದ್ದರಿಂದ ಶಿವಸೇನೆಯು ಮೈತ್ರಿಯಿಂದ ಹೊರನಡೆಯಿತು.

ಇದರ ನಂತರ ಒಂದು ತಿಂಗಳ ಸುದೀರ್ಘ ರಾಜಕೀಯ ಹೈಡ್ರಾಮ ನಡೆಯಿತು. ಅಂತಿಮವಾಗಿ ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಜೊತೆಗೆ ಸೇರಿ ಶಿವಸೇನೆ ಸರ್ಕಾರವನ್ನು ರಚಿಸಿತು.

ಈ ‘ಅಸಂಭವ’ ಮೈತ್ರಿ ಕೆಲವು ತಿಂಗಳುಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದರು. ಎಂವಿಎ ಸರ್ಕಾರದ ಎರಡೂವರೆ ವರ್ಷಗಳ ಸುದೀರ್ಘ ಅವಧಿಯ ಉದ್ದಕ್ಕೂ, ಮೈತ್ರಿಯೊಳಗೆ ಆಗಾಗ್ಗೆ ಬಿರುಕುಗಳು ಕಾಣಿಸಿಕೊಂಡಿದ್ದವು.

2. ಉದ್ಧವ್ ಠಾಕ್ರೆ – ರಾಜಕೀಯದಲ್ಲಿ ‘ಒಳ್ಳೆಯ ವ್ಯಕ್ತಿ’

ಉದ್ಧವ್ ಠಾಕ್ರೆ ನಿಜವಾಗಿಯೂ ರಾಜಕೀಯದಲ್ಲಿ ಒಳ್ಳೆಯ ವ್ಯಕ್ತಿ. ಶಾಂತ ಸ್ವಭಾವದವರು. ಬಿಕ್ಕಟ್ಟನ್ನು ಪರಿಣಾಮಕಾರಿಯಾಗಿ ನಿಭಾಯಿಸಿದರೂ, ಅದರ ಕ್ರೆಡಿಟ್‌ ಪಡೆಯಲು ಮಿತಿಮೀರಿ ಯತ್ನಿಸುವುದಿಲ್ಲ. ಜೊತೆಗೆ ತಮ್ಮ ಮೈತ್ರಿ ಪಾಲುದಾರರಿಗೆ ವಿಧೇಯರಾಗಿದ್ದರು.

ಏಕನಾಥ್ ಶಿಂಧೆಯವರು ಉದ್ಧವ್ ಠಾಕ್ರೆ ಅವರ ಮೂಗಿನ ನೇರದಲ್ಲಿದ್ದ ಸುಮಾರು 40 ಶಾಸಕರನ್ನು ಕರೆದುಕೊಂಡು ಹೋಗಿದ್ದು ಸಣ್ಣ ಸಾಧನೆಯಲ್ಲ. ಈ ಕುರಿತು ಶಿವಸೇನೆ ಮುಖ್ಯಸ್ಥರು ಸ್ವಲ್ಪ ಯೋಚಿಸುವುದು ಅಗತ್ಯವಿತ್ತು.

3. ಇ.ಡಿ. ಭಯದಲ್ಲಿ ಬಾಬು ಬಯ್ಯಾ

ಬಂಡಾಯಗಾರ ಏಕನಾಥ್ ಶಿಂಧೆ ಸೇರಿದಂತೆ ಹಲವಾರು ಅತೃಪ್ತ ಶಾಸಕರು ತನಿಖಾ ಸಂಸ್ಥೆಗಳ ಭಯದಲ್ಲಿದ್ದಾರೆ ಎಂಬುದು ರಹಸ್ಯವಾದ ವಿಚಾರವೇನೂ ಅಲ್ಲ. ಇವರು ಕೇಂದ್ರೀಯ ಏಜೆನ್ಸಿಗಳಿಂದ ತಪ್ಪಿಸಿಕೊಳ್ಳಬೇಕಿತ್ತು. ಹೀಗಾಗಿ ಹೆಚ್ಚಿನ ಬಂಡಾಯ ಶಾಸಕರು ಎಂವಿಎ ಮೈತ್ರಿಯನ್ನು ತೊರೆದು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಶಿಂಧೆ ಅವರ ಬೇಡಿಕೆಯನ್ನು ಬೆಂಬಲಿಸಿದರು.

ಇದನ್ನೂ ಓದಿರಿ: ಮುಂದಿನ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ: ಸಿದ್ದರಾಮಯ್ಯ

4. ಹಿಂದುತ್ವ ಪರಂಪರೆಯ ಅಗ್ಗಜಗ್ಗಾಟ

ಉದ್ಧವ್ ಠಾಕ್ರೆಯವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದ ಮೇಲೆ ಆಶ್ಚರ್ಯಕರ ರೀತಿಯಲ್ಲಿ ಹಲವು ಸಂದರ್ಭಗಳಲ್ಲಿ ಜಾತ್ಯತೀತ ನಿಲುವು ಪ್ರದರ್ಶಿಸಿದರು.

ಪ್ರವಾದಿಯವರ ವಿರುದ್ಧ ನೂಪುರ್ ಶರ್ಮಾ ಹೇಳಿಕೆ, ಹನುಮಾನ್ ಚಾಲೀಸಾ ಪಠಣ ವಿವಾದ ಸಂದರ್ಭದಲ್ಲಿ ಬಿಜೆಪಿಯನ್ನು ವಿರೋಧಿಸಿದರು. “ಅಧಿಕಾರಕ್ಕಾಗಿ ಶಿವಸೇನೆ ಮತ್ತು ಬಾಳಾಸಾಹೇಬ್ ಅವರ ಹಿಂದುತ್ವ ರಾಜಕಾರಣದ ಗುರುತನ್ನು ಉದ್ಧವ್‌ ತ್ಯಜಿಸಿದ್ದಾರೆ” ಎಂದು ಬಿಂಬಿಸಲು ಅವರ ಜಾತ್ಯತೀತ ಪ್ರತಿಕ್ರಿಯೆಗಳು ಬಳಕೆಯಾದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...