Homeಮುಖಪುಟಮಹಾರಾಷ್ಟ್ರ | ಬಗೆಹರಿಯದ ಸೀಟು ಹಂಚಿಕೆ ಸಮಸ್ಯೆ; ಪ್ರಾಬಲ್ಯ ಉಳಿಸಲು ಬಿಜೆಪಿ ಹಠ?

ಮಹಾರಾಷ್ಟ್ರ | ಬಗೆಹರಿಯದ ಸೀಟು ಹಂಚಿಕೆ ಸಮಸ್ಯೆ; ಪ್ರಾಬಲ್ಯ ಉಳಿಸಲು ಬಿಜೆಪಿ ಹಠ?

- Advertisement -
- Advertisement -

ಮಹಾರಾಷ್ಟ್ರದ ಪ್ರಮುಖ ರಾಜಕೀಯ ವಿರೋಧಿ ಮೈತ್ರಿಗಳಾದ ವಿಪಕ್ಷ ಮಹಾ ವಿಕಾಸ್ ಅಘಾಡಿ ಮತ್ತು ಆಡಳಿತಾರೂಢ ಮಹಾಯುತಿ ಇದುವರೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ಪಾಳಯದಲ್ಲಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ವಿಫಲವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ಪಕ್ಷದ ನಾಯಕರು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೂಕ್ಷ್ಮವಾಗಿ ಹೊಂದಿಸುವಲ್ಲಿ ತಲ್ಲೀನರಾಗಿದ್ದಾರೆ. ಮಹಾರಾಷ್ಟ್ರ

ಮತ್ತೊಂದೆಡೆ, ಆಡಳಿತರೂಢ ಮಹಾಯುತಿ ಮೈತ್ರಿಯ ಪಕ್ಷಗಳು ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದು, ಹೆಚ್ಚಿನ ಸ್ಥಾನಗಳಿಗಾಗಿ ಹರಸಾಹಸ ಮಾಡುತ್ತಿದ್ದಾರೆ. ಆದರೂ ಬಿಜೆಪಿ ತನ್ನ ಹಠ ಮುಂದುವರೆಸಿದೆ ಎಂದು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್, ಎನ್‌ಸಿಪಿ (ಶರದ್ ಪವಾರ್), ಮತ್ತು ಶಿವಸೇನೆ (ಉದ್ಧವ್ ಠಾಕ್ರೆ) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಮೈತ್ರಿ ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರೂ, ಉಳಿದ 33 ಸ್ಥಾನಗಳ ಬಗ್ಗೆ ಇನ್ನೂ ಒಪ್ಪಂದಕ್ಕೆ ಬಂದಿಲ್ಲ. ಈ ನಡುವೆ, ಇಂಡಿಯಾ ಒಕ್ಕೂಟದ ಮಿತ್ರ ಪಕ್ಷ ಸಮಾಜವಾದಿ ಪಕ್ಷ ಕೂಡಾ ಐದು ಸ್ಥಾನಗಳಿಗೆ ಒತ್ತಾಯಿಸುತ್ತಿದೆ ಎಂದು ವರದಿಯಾಗಿದೆ.

ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, ಅಭ್ಯರ್ಥಿಗಳ ಮೂರನೇ ಮತ್ತು ಅಂತಿಮ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲಾಗುವುದು. “ನಾವು ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತೇವೆ ಮತ್ತು ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸುತ್ತದೆ” ಎಂದು ಪಟೋಲೆ ಹೇಳಿದ್ದಾರೆ. ಮಹಾರಾಷ್ಟ್ರ

ಮಹಾ ವಿಕಾಸ್ ಅಘಾಡಿಯ ಪಕ್ಷಗಳ ಭಿನ್ನಾಭಿಪ್ರಾಯವಿದೆ ಎಂಬ ವರದಿಗಳನ್ನು ಕಾಂಗ್ರೆಸ್‌ನ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ತಳ್ಳಿಹಾಕಿದ್ದಾರೆ. “ಕಾಂಗ್ರೆಸ್‌ನ ಚುನಾವಣಾ ಸಮಿತಿ ಮಹಾರಾಷ್ಟ್ರದ ಉಳಿದ ಸ್ಥಾನಗಳ ಬಗ್ಗೆ ಚರ್ಚಿಸಿದೆ. ನಾಳೆಯೊಳಗೆ ಸಂಪೂರ್ಣ ಪಟ್ಟಿ ಹೊರಬೀಳಲಿದೆ. ಮಹಾ ವಿಕಾಸ್ ಅಘಾಡಿ ಒಗ್ಗಟ್ಟಾಗಿದೆ,” ಎಂದು ಅವರು ಹೇಳಿದ್ದಾರೆ.

ಇತ್ತ ಆಡಳಿತರೂಢ ಮಹಾಯುತಿ ಮೈತ್ರಿಯಲ್ಲಿ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಹೆಚ್ಚಿನ ಸ್ಥಾನಗಳನ್ನು ಬಿಟ್ಟುಕೊಡದಿರಲು ಬಿಜೆಪಿ ನಿರ್ಧರಿಸಿದೆ. ದೆಹಲಿಯ ಸಭೆಯಲ್ಲಿ ಸಿಎಂ ಶಿಂಧೆ ಮಹಾಯುತಿ ಮೈತ್ರಿಗಾಗಿ ಮಹಾ ವಿಕಾಸ್ ಅಘಾಡಿ ಮೈತ್ರಿಯ ರೀತಿಯ ಸೂತ್ರವನ್ನು ಮಂಡಿಸಿದರು ಎಂದು ಮೂಲಗಳು ತಿಳಿಸಿವೆ. ಆದರೆ ಅದಕ್ಕೆ ಬಿಜೆಪಿ ನಾಯಕತ್ವ ಮಣಿಯಲು ನಿರಾಕರಿಸಿದೆ.

“ಶಿಂಧೆ ಅವರು 100 ಸ್ಥಾನಗಳನ್ನು ಕೇಳಿದ್ದಾರೆ. ಆದರೆ ಬಿಜೆಪಿ ಅವರಿಗೆ 80 ಸ್ಥಾನಗಳನ್ನು ನೀಡುವ ಆಫರ್ ನೀಡಿದೆ. ಅದೇ ರೀತಿ, ಅಜಿತ್ ಪವಾರ್ 60 ಸ್ಥಾನಗಳನ್ನು ಕೇಳಿದ್ದಾರೆ. ಆದರೆ ಬಿಜೆಪಿ ಅವರಿಗೆ ಗರಿಷ್ಠ 55 ಸ್ಥಾನಗಳನ್ನು ನೀಡುವ ಪ್ರಸ್ತಾಪ ಮಾಡಿದೆ” ಎಂದು ಬೆಳವಣಿಗೆಯ ಬಗ್ಗೆ ಶಿವಸೇನೆಯ ಹಿರಿಯ ನಾಯಕ ಹೇಳಿದ್ದಾರೆ.

“ಎನ್‌ಸಿಪಿ ಚಿಹ್ನೆಯಡಿ ಸ್ಪರ್ಧಿಸಲಿರುವ ಬಿಜೆಪಿ ನಾಯಕರಿಗೂ ಅಜಿತ್‌ ಅವಕಾಶ ಕಲ್ಪಿಸಬೇಕು. ಆದ್ದರಿಂದ, ಎನ್‌ಸಿಪಿ ನಾಯಕರಿಗೆ ಅವರ ಸ್ವಂತ ಪಕ್ಷದೊಳಗೆ ಜಾಗ ಕುಗ್ಗುತ್ತಿದೆ ಆದರೆ ಬಿಜೆಪಿ ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳುತ್ತಿದೆ” ಎಂದು ಶಿವಸೇನೆ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗುತ್ತಿಗೆ ನೌಕರರು ಮಾತೃತ್ವ ರಜೆ, ಕಾಯ್ದೆಯ ಎಲ್ಲ ಪ್ರಯೋಜನಗಳಿಗೆ ಅರ್ಹರು: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...