Homeಮುಖಪುಟಮಹಾರಾಷ್ಟ್ರ | ಬಗೆಹರಿಯದ ಸೀಟು ಹಂಚಿಕೆ ಸಮಸ್ಯೆ; ಪ್ರಾಬಲ್ಯ ಉಳಿಸಲು ಬಿಜೆಪಿ ಹಠ?

ಮಹಾರಾಷ್ಟ್ರ | ಬಗೆಹರಿಯದ ಸೀಟು ಹಂಚಿಕೆ ಸಮಸ್ಯೆ; ಪ್ರಾಬಲ್ಯ ಉಳಿಸಲು ಬಿಜೆಪಿ ಹಠ?

- Advertisement -
- Advertisement -

ಮಹಾರಾಷ್ಟ್ರದ ಪ್ರಮುಖ ರಾಜಕೀಯ ವಿರೋಧಿ ಮೈತ್ರಿಗಳಾದ ವಿಪಕ್ಷ ಮಹಾ ವಿಕಾಸ್ ಅಘಾಡಿ ಮತ್ತು ಆಡಳಿತಾರೂಢ ಮಹಾಯುತಿ ಇದುವರೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ಪಾಳಯದಲ್ಲಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ವಿಫಲವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ಪಕ್ಷದ ನಾಯಕರು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೂಕ್ಷ್ಮವಾಗಿ ಹೊಂದಿಸುವಲ್ಲಿ ತಲ್ಲೀನರಾಗಿದ್ದಾರೆ. ಮಹಾರಾಷ್ಟ್ರ

ಮತ್ತೊಂದೆಡೆ, ಆಡಳಿತರೂಢ ಮಹಾಯುತಿ ಮೈತ್ರಿಯ ಪಕ್ಷಗಳು ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದು, ಹೆಚ್ಚಿನ ಸ್ಥಾನಗಳಿಗಾಗಿ ಹರಸಾಹಸ ಮಾಡುತ್ತಿದ್ದಾರೆ. ಆದರೂ ಬಿಜೆಪಿ ತನ್ನ ಹಠ ಮುಂದುವರೆಸಿದೆ ಎಂದು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್, ಎನ್‌ಸಿಪಿ (ಶರದ್ ಪವಾರ್), ಮತ್ತು ಶಿವಸೇನೆ (ಉದ್ಧವ್ ಠಾಕ್ರೆ) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಮೈತ್ರಿ ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರೂ, ಉಳಿದ 33 ಸ್ಥಾನಗಳ ಬಗ್ಗೆ ಇನ್ನೂ ಒಪ್ಪಂದಕ್ಕೆ ಬಂದಿಲ್ಲ. ಈ ನಡುವೆ, ಇಂಡಿಯಾ ಒಕ್ಕೂಟದ ಮಿತ್ರ ಪಕ್ಷ ಸಮಾಜವಾದಿ ಪಕ್ಷ ಕೂಡಾ ಐದು ಸ್ಥಾನಗಳಿಗೆ ಒತ್ತಾಯಿಸುತ್ತಿದೆ ಎಂದು ವರದಿಯಾಗಿದೆ.

ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, ಅಭ್ಯರ್ಥಿಗಳ ಮೂರನೇ ಮತ್ತು ಅಂತಿಮ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲಾಗುವುದು. “ನಾವು ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತೇವೆ ಮತ್ತು ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸುತ್ತದೆ” ಎಂದು ಪಟೋಲೆ ಹೇಳಿದ್ದಾರೆ. ಮಹಾರಾಷ್ಟ್ರ

ಮಹಾ ವಿಕಾಸ್ ಅಘಾಡಿಯ ಪಕ್ಷಗಳ ಭಿನ್ನಾಭಿಪ್ರಾಯವಿದೆ ಎಂಬ ವರದಿಗಳನ್ನು ಕಾಂಗ್ರೆಸ್‌ನ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ತಳ್ಳಿಹಾಕಿದ್ದಾರೆ. “ಕಾಂಗ್ರೆಸ್‌ನ ಚುನಾವಣಾ ಸಮಿತಿ ಮಹಾರಾಷ್ಟ್ರದ ಉಳಿದ ಸ್ಥಾನಗಳ ಬಗ್ಗೆ ಚರ್ಚಿಸಿದೆ. ನಾಳೆಯೊಳಗೆ ಸಂಪೂರ್ಣ ಪಟ್ಟಿ ಹೊರಬೀಳಲಿದೆ. ಮಹಾ ವಿಕಾಸ್ ಅಘಾಡಿ ಒಗ್ಗಟ್ಟಾಗಿದೆ,” ಎಂದು ಅವರು ಹೇಳಿದ್ದಾರೆ.

ಇತ್ತ ಆಡಳಿತರೂಢ ಮಹಾಯುತಿ ಮೈತ್ರಿಯಲ್ಲಿ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಹೆಚ್ಚಿನ ಸ್ಥಾನಗಳನ್ನು ಬಿಟ್ಟುಕೊಡದಿರಲು ಬಿಜೆಪಿ ನಿರ್ಧರಿಸಿದೆ. ದೆಹಲಿಯ ಸಭೆಯಲ್ಲಿ ಸಿಎಂ ಶಿಂಧೆ ಮಹಾಯುತಿ ಮೈತ್ರಿಗಾಗಿ ಮಹಾ ವಿಕಾಸ್ ಅಘಾಡಿ ಮೈತ್ರಿಯ ರೀತಿಯ ಸೂತ್ರವನ್ನು ಮಂಡಿಸಿದರು ಎಂದು ಮೂಲಗಳು ತಿಳಿಸಿವೆ. ಆದರೆ ಅದಕ್ಕೆ ಬಿಜೆಪಿ ನಾಯಕತ್ವ ಮಣಿಯಲು ನಿರಾಕರಿಸಿದೆ.

“ಶಿಂಧೆ ಅವರು 100 ಸ್ಥಾನಗಳನ್ನು ಕೇಳಿದ್ದಾರೆ. ಆದರೆ ಬಿಜೆಪಿ ಅವರಿಗೆ 80 ಸ್ಥಾನಗಳನ್ನು ನೀಡುವ ಆಫರ್ ನೀಡಿದೆ. ಅದೇ ರೀತಿ, ಅಜಿತ್ ಪವಾರ್ 60 ಸ್ಥಾನಗಳನ್ನು ಕೇಳಿದ್ದಾರೆ. ಆದರೆ ಬಿಜೆಪಿ ಅವರಿಗೆ ಗರಿಷ್ಠ 55 ಸ್ಥಾನಗಳನ್ನು ನೀಡುವ ಪ್ರಸ್ತಾಪ ಮಾಡಿದೆ” ಎಂದು ಬೆಳವಣಿಗೆಯ ಬಗ್ಗೆ ಶಿವಸೇನೆಯ ಹಿರಿಯ ನಾಯಕ ಹೇಳಿದ್ದಾರೆ.

“ಎನ್‌ಸಿಪಿ ಚಿಹ್ನೆಯಡಿ ಸ್ಪರ್ಧಿಸಲಿರುವ ಬಿಜೆಪಿ ನಾಯಕರಿಗೂ ಅಜಿತ್‌ ಅವಕಾಶ ಕಲ್ಪಿಸಬೇಕು. ಆದ್ದರಿಂದ, ಎನ್‌ಸಿಪಿ ನಾಯಕರಿಗೆ ಅವರ ಸ್ವಂತ ಪಕ್ಷದೊಳಗೆ ಜಾಗ ಕುಗ್ಗುತ್ತಿದೆ ಆದರೆ ಬಿಜೆಪಿ ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳುತ್ತಿದೆ” ಎಂದು ಶಿವಸೇನೆ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗುತ್ತಿಗೆ ನೌಕರರು ಮಾತೃತ್ವ ರಜೆ, ಕಾಯ್ದೆಯ ಎಲ್ಲ ಪ್ರಯೋಜನಗಳಿಗೆ ಅರ್ಹರು: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...