Homeಮುಖಪುಟಮಹಾರಾಷ್ಟ್ರ | ಬಗೆಹರಿಯದ ಸೀಟು ಹಂಚಿಕೆ ಸಮಸ್ಯೆ; ಪ್ರಾಬಲ್ಯ ಉಳಿಸಲು ಬಿಜೆಪಿ ಹಠ?

ಮಹಾರಾಷ್ಟ್ರ | ಬಗೆಹರಿಯದ ಸೀಟು ಹಂಚಿಕೆ ಸಮಸ್ಯೆ; ಪ್ರಾಬಲ್ಯ ಉಳಿಸಲು ಬಿಜೆಪಿ ಹಠ?

- Advertisement -
- Advertisement -

ಮಹಾರಾಷ್ಟ್ರದ ಪ್ರಮುಖ ರಾಜಕೀಯ ವಿರೋಧಿ ಮೈತ್ರಿಗಳಾದ ವಿಪಕ್ಷ ಮಹಾ ವಿಕಾಸ್ ಅಘಾಡಿ ಮತ್ತು ಆಡಳಿತಾರೂಢ ಮಹಾಯುತಿ ಇದುವರೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ಪಾಳಯದಲ್ಲಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ವಿಫಲವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ಪಕ್ಷದ ನಾಯಕರು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸೂಕ್ಷ್ಮವಾಗಿ ಹೊಂದಿಸುವಲ್ಲಿ ತಲ್ಲೀನರಾಗಿದ್ದಾರೆ. ಮಹಾರಾಷ್ಟ್ರ

ಮತ್ತೊಂದೆಡೆ, ಆಡಳಿತರೂಢ ಮಹಾಯುತಿ ಮೈತ್ರಿಯ ಪಕ್ಷಗಳು ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದು, ಹೆಚ್ಚಿನ ಸ್ಥಾನಗಳಿಗಾಗಿ ಹರಸಾಹಸ ಮಾಡುತ್ತಿದ್ದಾರೆ. ಆದರೂ ಬಿಜೆಪಿ ತನ್ನ ಹಠ ಮುಂದುವರೆಸಿದೆ ಎಂದು ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್, ಎನ್‌ಸಿಪಿ (ಶರದ್ ಪವಾರ್), ಮತ್ತು ಶಿವಸೇನೆ (ಉದ್ಧವ್ ಠಾಕ್ರೆ) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಮೈತ್ರಿ ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದರೂ, ಉಳಿದ 33 ಸ್ಥಾನಗಳ ಬಗ್ಗೆ ಇನ್ನೂ ಒಪ್ಪಂದಕ್ಕೆ ಬಂದಿಲ್ಲ. ಈ ನಡುವೆ, ಇಂಡಿಯಾ ಒಕ್ಕೂಟದ ಮಿತ್ರ ಪಕ್ಷ ಸಮಾಜವಾದಿ ಪಕ್ಷ ಕೂಡಾ ಐದು ಸ್ಥಾನಗಳಿಗೆ ಒತ್ತಾಯಿಸುತ್ತಿದೆ ಎಂದು ವರದಿಯಾಗಿದೆ.

ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, ಅಭ್ಯರ್ಥಿಗಳ ಮೂರನೇ ಮತ್ತು ಅಂತಿಮ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲಾಗುವುದು. “ನಾವು ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತೇವೆ ಮತ್ತು ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸುತ್ತದೆ” ಎಂದು ಪಟೋಲೆ ಹೇಳಿದ್ದಾರೆ. ಮಹಾರಾಷ್ಟ್ರ

ಮಹಾ ವಿಕಾಸ್ ಅಘಾಡಿಯ ಪಕ್ಷಗಳ ಭಿನ್ನಾಭಿಪ್ರಾಯವಿದೆ ಎಂಬ ವರದಿಗಳನ್ನು ಕಾಂಗ್ರೆಸ್‌ನ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ತಳ್ಳಿಹಾಕಿದ್ದಾರೆ. “ಕಾಂಗ್ರೆಸ್‌ನ ಚುನಾವಣಾ ಸಮಿತಿ ಮಹಾರಾಷ್ಟ್ರದ ಉಳಿದ ಸ್ಥಾನಗಳ ಬಗ್ಗೆ ಚರ್ಚಿಸಿದೆ. ನಾಳೆಯೊಳಗೆ ಸಂಪೂರ್ಣ ಪಟ್ಟಿ ಹೊರಬೀಳಲಿದೆ. ಮಹಾ ವಿಕಾಸ್ ಅಘಾಡಿ ಒಗ್ಗಟ್ಟಾಗಿದೆ,” ಎಂದು ಅವರು ಹೇಳಿದ್ದಾರೆ.

ಇತ್ತ ಆಡಳಿತರೂಢ ಮಹಾಯುತಿ ಮೈತ್ರಿಯಲ್ಲಿ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಹೆಚ್ಚಿನ ಸ್ಥಾನಗಳನ್ನು ಬಿಟ್ಟುಕೊಡದಿರಲು ಬಿಜೆಪಿ ನಿರ್ಧರಿಸಿದೆ. ದೆಹಲಿಯ ಸಭೆಯಲ್ಲಿ ಸಿಎಂ ಶಿಂಧೆ ಮಹಾಯುತಿ ಮೈತ್ರಿಗಾಗಿ ಮಹಾ ವಿಕಾಸ್ ಅಘಾಡಿ ಮೈತ್ರಿಯ ರೀತಿಯ ಸೂತ್ರವನ್ನು ಮಂಡಿಸಿದರು ಎಂದು ಮೂಲಗಳು ತಿಳಿಸಿವೆ. ಆದರೆ ಅದಕ್ಕೆ ಬಿಜೆಪಿ ನಾಯಕತ್ವ ಮಣಿಯಲು ನಿರಾಕರಿಸಿದೆ.

“ಶಿಂಧೆ ಅವರು 100 ಸ್ಥಾನಗಳನ್ನು ಕೇಳಿದ್ದಾರೆ. ಆದರೆ ಬಿಜೆಪಿ ಅವರಿಗೆ 80 ಸ್ಥಾನಗಳನ್ನು ನೀಡುವ ಆಫರ್ ನೀಡಿದೆ. ಅದೇ ರೀತಿ, ಅಜಿತ್ ಪವಾರ್ 60 ಸ್ಥಾನಗಳನ್ನು ಕೇಳಿದ್ದಾರೆ. ಆದರೆ ಬಿಜೆಪಿ ಅವರಿಗೆ ಗರಿಷ್ಠ 55 ಸ್ಥಾನಗಳನ್ನು ನೀಡುವ ಪ್ರಸ್ತಾಪ ಮಾಡಿದೆ” ಎಂದು ಬೆಳವಣಿಗೆಯ ಬಗ್ಗೆ ಶಿವಸೇನೆಯ ಹಿರಿಯ ನಾಯಕ ಹೇಳಿದ್ದಾರೆ.

“ಎನ್‌ಸಿಪಿ ಚಿಹ್ನೆಯಡಿ ಸ್ಪರ್ಧಿಸಲಿರುವ ಬಿಜೆಪಿ ನಾಯಕರಿಗೂ ಅಜಿತ್‌ ಅವಕಾಶ ಕಲ್ಪಿಸಬೇಕು. ಆದ್ದರಿಂದ, ಎನ್‌ಸಿಪಿ ನಾಯಕರಿಗೆ ಅವರ ಸ್ವಂತ ಪಕ್ಷದೊಳಗೆ ಜಾಗ ಕುಗ್ಗುತ್ತಿದೆ ಆದರೆ ಬಿಜೆಪಿ ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳುತ್ತಿದೆ” ಎಂದು ಶಿವಸೇನೆ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗುತ್ತಿಗೆ ನೌಕರರು ಮಾತೃತ್ವ ರಜೆ, ಕಾಯ್ದೆಯ ಎಲ್ಲ ಪ್ರಯೋಜನಗಳಿಗೆ ಅರ್ಹರು: ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...