Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ಕೇಂದ್ರವು ಮಹಾರಾಷ್ಟ್ರದ ವಿರುದ್ಧ ಏಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಮುಸುಕಿನ ಗುದ್ದಾಟದಿಂದಾಗಿ ಮಹಾರಾಷ್ಟ್ರದಲ್ಲಿ ನೂರಕ್ಕೂ ಹೆಚ್ಚು ಕೊರೊನಾ ಲಸಿಕಾ ಕೇಂದ್ರಗಳಿಗೆ ಬೀಗ ಬಿದ್ದಿದೆ. ಲಸಿಕೆಯ ಅಗತ್ಯತೆ ಹೆಚ್ಚಿದೆ ಎಂದು ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ನಮಗಾಗುತ್ತಿರುವ ತಾರತಮ್ಯದ ಬಗ್ಗೆಯೂ ತಿಳಿಸಿದ್ದೇನೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳಿರುವ ಮಹಾರಾಷ್ಟ್ರದ ಹಲವಾರು ವ್ಯಾಕ್ಸಿನೇಷನ್ ಕೇಂದ್ರಗಳು ಲಸಿಕೆಗಳ ಕೊರತೆಯನ್ನು ಅನುಭವಿಸುತ್ತಿವೆ. ಲಸಿಕೆ ಕೊರತೆಯಿಂದಾಗಿ ಜನರಿಗೆ ಲಸಿಕೆ ನೀಡದೆ ಹಿಂತಿರುಗುವಂತೆ ಹೇಳಲಾಗುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ  ನಿನ್ನೆ (ಬುಧವಾರ) ಕೂಡ  ಹೇಳಿದ್ದಾರೆ.

ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಲಸಿಕಾ ಕೇಂದ್ರಗಳಲ್ಲಿ ನೋ ಸ್ಟಾಕ್ ಬೋರ್ಡ್ಗಳಿದ್ದರೇ ಮತ್ತೆ ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ ಬಿದ್ದಿದೆ. ಮುಂಬೈನಲ್ಲಿ 26 ಲಸಿಕೆ ಕೇಂದ್ರಗಳನ್ನು ಮುಚ್ಚಲಾಗಿದೆ. ಇವುಗಲ್ಲಿ 23 ಲಸಿಕಾ ಕೇಂದ್ರಗಳು ನವಿ ಮುಂಬೈನಲ್ಲಿವೆ. ಲಸಿಕೆ ಕೊರತೆಯಿಂದಾಗಿ ಪುಣೆ 100 ವ್ಯಾಕ್ಸಿನೇಷನ್ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಸಂಸದೆ ಸುಪ್ರಿಯಾ ಸುಲೇ ಟ್ವೀಟ್ ಮಾಡಿದ್ದಾರೆ. ಸತಾರಾ, ಸಾಂಗ್ಲಿ, ಪನ್ವೆಲಾದಲ್ಲಿನ ಕೇಂದ್ರಗಳನ್ನು ಮುಚ್ಚಲಾಗಿದೆ.

ಇದನ್ನೂ ಓದಿ: ವ್ಯಾಕ್ಸಿನೇಷನ್‌ ಕೇಂದ್ರಗಳಲ್ಲಿ ಜನ ಲಸಿಕೆಯಿಲ್ಲದೆ ಹಿಂತಿರುಗುತ್ತಿದ್ದಾರೆ : ಮಹಾರಾಷ್ಟ್ರ ಆರೋಗ್ಯ ಸಚಿವ

ಲಸಿಕೆ ನೀಡುವಂತೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಅವರೊಂದಿಗೆ ಮಾತನಾಡಿದ್ದಾರೆ. ಕೇಂದ್ರದಿಂದ ಹೆಚ್ಚಿನ ಲಸಿಕೆ ಪ್ರಮಾಣಕ್ಕಾಗಿ ನಾವು ಕಾಯುತ್ತಿದ್ದೇವೆ ಎಂದು ರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ಕೇಂದ್ರವು ಮಹಾರಾಷ್ಟ್ರದ ವಿರುದ್ಧ ಏಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ತೋಪೆ ಪ್ರಶ್ನಿಸಿದ್ದಾರೆ. ಜನಸಂಖ್ಯೆಯ ಪ್ರಕಾರ ರಾಜ್ಯಕ್ಕೆ ವಾರಕ್ಕೆ 40 ಲಕ್ಷ ಡೋಸ್ ಮತ್ತು ತಿಂಗಳಿಗೆ 1.6 ಕೋಟಿ ಲಸಿಕೆಗಳು ಬೇಕಾಗುತ್ತವೆ. ಇನ್ನು “ಮಹಾರಾಷ್ಟ್ರವು ಗುಜರಾತ್ ಜನಸಂಖ್ಯೆಗಿಂತ ದುಪ್ಪಟ್ಟು ಜನಸಂಖ್ಯೆಯನ್ನು ಹೊಂದಿದೆ. ಆದರೂ ಗುಜರಾತ್ ಮತ್ತು ನಮ್ಮ ರಾಜ್ಯಕ್ಕೆ ಸರಿ ಸಮಾನವಾಗಿ ಒಂದು ಕೋಟಿ ಡೋಸ್ ಸಿಕ್ಕಿದೆ” ಎಂದಿದ್ದಾರೆ.

ಲಸಿಕೆ ಕೊರತೆಯ ಬಗ್ಗೆ ಮಹಾರಾಷ್ಟ್ರದ ಆರೋಪಗಳು ಕೇಂದ್ರದ ಜೊತೆಗೆ ಘರ್ಷಣೆಗೆ ಕಾರಣವಾಗಿದೆ. ಮಹಾರಾಷ್ಟ್ರ ಸರ್ಕಾರವು ಜವಾಬ್ದಾರಿಯುತವಾಗಿದೆ. ಲಸಿಕೆಯನ್ನು ಸರಿಯಾಗಿ ಹಂಚಿಕೆ ಮಾಡದೆ ಲಸಿಕೆ ಇಲ್ಲ ಎನ್ನುತ್ತಿದೆ. ಅದು ಕಾರ್ಯನಿರ್ವಹಿಸಲು ಅಸಮರ್ಥವಾಗಿದೆ. ಕೊರೊನಾ ನಿಯಂತ್ರಿಸದೆ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಡಾ.ಹರ್ಷ್ ವರ್ಧನ್ ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ರಾಜೇಶ್ ತೋಪೆ, “ಇದು ಕೇಂದ್ರ ಮತ್ತು ರಾಜ್ಯವು ಕಿತ್ತಾಡುವ ವಿಷಯವಲ್ಲ. ಇದನ್ನು ರಾಜಕೀಯಗೊಳಿಸಲು ನಾವು ಬಯಸುವುದಿಲ್ಲ. ನಾವು ಯಾರನ್ನೂ ದೂಷಿಸಲು ಬಯಸುವುದಿಲ್ಲ” ಎಂದಿದ್ದಾರೆ.

ಇತ್ತ, ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷ ತುಂಬದ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ವಾರ ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...