Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ಕೇಂದ್ರವು ಮಹಾರಾಷ್ಟ್ರದ ವಿರುದ್ಧ ಏಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಮುಸುಕಿನ ಗುದ್ದಾಟದಿಂದಾಗಿ ಮಹಾರಾಷ್ಟ್ರದಲ್ಲಿ ನೂರಕ್ಕೂ ಹೆಚ್ಚು ಕೊರೊನಾ ಲಸಿಕಾ ಕೇಂದ್ರಗಳಿಗೆ ಬೀಗ ಬಿದ್ದಿದೆ. ಲಸಿಕೆಯ ಅಗತ್ಯತೆ ಹೆಚ್ಚಿದೆ ಎಂದು ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ನಮಗಾಗುತ್ತಿರುವ ತಾರತಮ್ಯದ ಬಗ್ಗೆಯೂ ತಿಳಿಸಿದ್ದೇನೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ದೇಶದಲ್ಲೇ ಅತ್ಯಂತ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳಿರುವ ಮಹಾರಾಷ್ಟ್ರದ ಹಲವಾರು ವ್ಯಾಕ್ಸಿನೇಷನ್ ಕೇಂದ್ರಗಳು ಲಸಿಕೆಗಳ ಕೊರತೆಯನ್ನು ಅನುಭವಿಸುತ್ತಿವೆ. ಲಸಿಕೆ ಕೊರತೆಯಿಂದಾಗಿ ಜನರಿಗೆ ಲಸಿಕೆ ನೀಡದೆ ಹಿಂತಿರುಗುವಂತೆ ಹೇಳಲಾಗುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ  ನಿನ್ನೆ (ಬುಧವಾರ) ಕೂಡ  ಹೇಳಿದ್ದಾರೆ.

ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಲಸಿಕಾ ಕೇಂದ್ರಗಳಲ್ಲಿ ನೋ ಸ್ಟಾಕ್ ಬೋರ್ಡ್ಗಳಿದ್ದರೇ ಮತ್ತೆ ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ ಬಿದ್ದಿದೆ. ಮುಂಬೈನಲ್ಲಿ 26 ಲಸಿಕೆ ಕೇಂದ್ರಗಳನ್ನು ಮುಚ್ಚಲಾಗಿದೆ. ಇವುಗಲ್ಲಿ 23 ಲಸಿಕಾ ಕೇಂದ್ರಗಳು ನವಿ ಮುಂಬೈನಲ್ಲಿವೆ. ಲಸಿಕೆ ಕೊರತೆಯಿಂದಾಗಿ ಪುಣೆ 100 ವ್ಯಾಕ್ಸಿನೇಷನ್ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಸಂಸದೆ ಸುಪ್ರಿಯಾ ಸುಲೇ ಟ್ವೀಟ್ ಮಾಡಿದ್ದಾರೆ. ಸತಾರಾ, ಸಾಂಗ್ಲಿ, ಪನ್ವೆಲಾದಲ್ಲಿನ ಕೇಂದ್ರಗಳನ್ನು ಮುಚ್ಚಲಾಗಿದೆ.

ಇದನ್ನೂ ಓದಿ: ವ್ಯಾಕ್ಸಿನೇಷನ್‌ ಕೇಂದ್ರಗಳಲ್ಲಿ ಜನ ಲಸಿಕೆಯಿಲ್ಲದೆ ಹಿಂತಿರುಗುತ್ತಿದ್ದಾರೆ : ಮಹಾರಾಷ್ಟ್ರ ಆರೋಗ್ಯ ಸಚಿವ

ಲಸಿಕೆ ನೀಡುವಂತೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಅವರೊಂದಿಗೆ ಮಾತನಾಡಿದ್ದಾರೆ. ಕೇಂದ್ರದಿಂದ ಹೆಚ್ಚಿನ ಲಸಿಕೆ ಪ್ರಮಾಣಕ್ಕಾಗಿ ನಾವು ಕಾಯುತ್ತಿದ್ದೇವೆ ಎಂದು ರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

ಕೇಂದ್ರವು ಮಹಾರಾಷ್ಟ್ರದ ವಿರುದ್ಧ ಏಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ತೋಪೆ ಪ್ರಶ್ನಿಸಿದ್ದಾರೆ. ಜನಸಂಖ್ಯೆಯ ಪ್ರಕಾರ ರಾಜ್ಯಕ್ಕೆ ವಾರಕ್ಕೆ 40 ಲಕ್ಷ ಡೋಸ್ ಮತ್ತು ತಿಂಗಳಿಗೆ 1.6 ಕೋಟಿ ಲಸಿಕೆಗಳು ಬೇಕಾಗುತ್ತವೆ. ಇನ್ನು “ಮಹಾರಾಷ್ಟ್ರವು ಗುಜರಾತ್ ಜನಸಂಖ್ಯೆಗಿಂತ ದುಪ್ಪಟ್ಟು ಜನಸಂಖ್ಯೆಯನ್ನು ಹೊಂದಿದೆ. ಆದರೂ ಗುಜರಾತ್ ಮತ್ತು ನಮ್ಮ ರಾಜ್ಯಕ್ಕೆ ಸರಿ ಸಮಾನವಾಗಿ ಒಂದು ಕೋಟಿ ಡೋಸ್ ಸಿಕ್ಕಿದೆ” ಎಂದಿದ್ದಾರೆ.

ಲಸಿಕೆ ಕೊರತೆಯ ಬಗ್ಗೆ ಮಹಾರಾಷ್ಟ್ರದ ಆರೋಪಗಳು ಕೇಂದ್ರದ ಜೊತೆಗೆ ಘರ್ಷಣೆಗೆ ಕಾರಣವಾಗಿದೆ. ಮಹಾರಾಷ್ಟ್ರ ಸರ್ಕಾರವು ಜವಾಬ್ದಾರಿಯುತವಾಗಿದೆ. ಲಸಿಕೆಯನ್ನು ಸರಿಯಾಗಿ ಹಂಚಿಕೆ ಮಾಡದೆ ಲಸಿಕೆ ಇಲ್ಲ ಎನ್ನುತ್ತಿದೆ. ಅದು ಕಾರ್ಯನಿರ್ವಹಿಸಲು ಅಸಮರ್ಥವಾಗಿದೆ. ಕೊರೊನಾ ನಿಯಂತ್ರಿಸದೆ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಡಾ.ಹರ್ಷ್ ವರ್ಧನ್ ಆರೋಪಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ರಾಜೇಶ್ ತೋಪೆ, “ಇದು ಕೇಂದ್ರ ಮತ್ತು ರಾಜ್ಯವು ಕಿತ್ತಾಡುವ ವಿಷಯವಲ್ಲ. ಇದನ್ನು ರಾಜಕೀಯಗೊಳಿಸಲು ನಾವು ಬಯಸುವುದಿಲ್ಲ. ನಾವು ಯಾರನ್ನೂ ದೂಷಿಸಲು ಬಯಸುವುದಿಲ್ಲ” ಎಂದಿದ್ದಾರೆ.

ಇತ್ತ, ಗುಜರಾತ್‌ನ ಗಾಂಧಿನಗರದಲ್ಲಿರುವ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ 25 ವರ್ಷ ತುಂಬದ 900 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ವಾರ ಕೊರೊನಾ ಲಸಿಕೆ ಪಡೆದಿದ್ದಾರೆ ಎಂದು ಸ್ಕ್ರೋಲ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಮಾರ್ಚ್‌‌‌‌ನಲ್ಲಿ ಎರಡು ಪಟ್ಟು ರಫ್ತು; ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ಕೊರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...