Homeಮುಖಪುಟಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

- Advertisement -
- Advertisement -

ನವೆಂಬರ್ 23ರಂದು ಪ್ರಕಟಗೊಂಡ ವಿಧಾನಸಭಾ ಚುನಾವಣೆಯ ಫಲಿತಾಂಶದ ಅಂಕಿ-ಅಂಶಗಳಿಂದ ಅಸಮಧಾನಗೊಂಡಿರುವ ಮಹಾರಾಷ್ಟ್ರದ ಗ್ರಾಮವೊಂದರ ಜನರು, ತಾವೇ ಖಾಸಗಿಯಾಗಿ ಇಂದು (ಡಿ.3) ಮರು ಮತದಾನ ಆಯೋಜಿಸಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರದ ಮಾಲ್ಶಿರಾಸ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರ್ಕಡವಾಡಿ ಗ್ರಾಮದ ಜನರು ಬ್ಯಾಲೆಟ್ ಪೇಪರ್ (ಮತ ಪತ್ರ) ಬಳಸಿ ಮರು ಮತದಾನ ನಡೆಸಲಿದ್ದಾರೆ.

ಪರಿಶಿಷ್ಟ ಜಾತಿಗೆ (ಎಸ್‌ಟಿ) ಮೀಸಲಾದ ಮಾಲ್ಶಿರಾಸ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿ ಉತ್ತಮ್ ಜನ್ಕರ್ ಅವರು ಬಿಜೆಪಿ ಅಭ್ಯರ್ಥಿ ರಾಮ್ ಸತುಪ್ತೆ ವಿರುದ್ದ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋತರೂ ಅವರು ಮರ್ಕಡವಾಡಿ ಗ್ರಾಮದಲ್ಲಿ ಪಡೆದ ಮತಗಳ ಸಂಖ್ಯೆ ಗೆದ್ದ ಅಭ್ಯರ್ಥಿಗಿಂತ ಹೆಚ್ಚಿದೆ. ಇದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಗ್ರಾಮದಲ್ಲಿ ಹೆಚ್ಚಿನ ಮತದಾರರು ಗೆದ್ದ ಎನ್‌ಸಿಪಿ ಅಭ್ಯರ್ಥಿಯ ಬೆಂಬಲಿಗರಿದ್ದೇವೆ. ನಮ್ಮ ಮತಗಳೆಲ್ಲ ಅವರಿಗೇ ಹೋಗಿದೆ. ಹೀಗಿದ್ದರೂ, ಬಿಜೆಪಿ ಅಭ್ಯರ್ಥಿ ಹೆಚ್ಚಿನ ಮತ ಪಡೆಯಲು ಹೇಗೆ ಸಾಧ್ಯ? ಚುನಾವಣಾ ಆಯೋಗದ ಅಂಕಿ-ಅಂಶಗಳು ಸರಿಯಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮಸ್ಥರಾದ ರಂಜೀತ್ ಮರ್ಕಡ್ ಈ ಬಗ್ಗೆ ಹೇಳಿಕೆ ನೀಡಿ “ನವೆಂಬರ್ 20ರಂದು ನಡೆದ ಚುನಾವಣೆಯಲ್ಲಿ ಗ್ರಾಮದ 2000 ಮಂದಿ ಅರ್ಹ ಮತದಾರರ ಪೈಕಿ 1900ಕ್ಕೂ ಹೆಚ್ಚು ಮಂದಿ ಮತ ಚಲಾಯಿಸಿದ್ದರು. ನಮ್ಮ ಗ್ರಾಮದಲ್ಲಿ ಮತದಾರರು ಜನ್ಕರ್ ಮತ್ತು ಮೋಹಿತೆ ಪಾಟೀಲ್ ಕುಟುಂಬವನ್ನು ಬೆಂಬಲಿಸುತ್ತಾ ಬಂದಿದ್ದರು. ಆದರೆ, ಈ ಬಾರಿ ಜನ್ಕರ್‌ಗೆ 843 ಮತಗಳು ಬಂದಿದ್ದರೆ, ಸಾತ್ಪುತೆ 1003 ಮತಗಳನ್ನು ಪಡೆದಿದ್ದಾರೆ. ಚುನಾವಣಾ ಆಯೋಗದ ಅಂಕಿ ಅಂಶದ ಬಗ್ಗೆ ನಂಬಿಕೆ ಇಲ್ಲ. ಆದ್ದರಿಂದ ಡಿಸೆಂಬರ್ 3ರಂದು ಮತಪತ್ರಗಳ ಮೂಲಕ ಮರು ಮತದಾನ ಆಯೋಜಿಸಿ, ಮತ ಹಂಚಿಕೆ ಬಗ್ಗೆ ಪುರಾವೆ ತೋರಿಸಲಿದ್ದೇವೆ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಗ್ರಾಮಸ್ಥರೇ ಹಣ ಸಂಗ್ರಹಿಸಿ ಎಲ್ಲಾ ಅಭ್ಯರ್ಥಿಗಳ ಭಾವಚಿತ್ರ ಹಾಗೂ ಹೆಸರನ್ನು ಒಳಗೊಂಡ ಮತಪತ್ರ ಮುದ್ರಿಸಿದ್ದಾರೆ. ಮತಪತ್ರದ ಮೂಲಕ ತಮ್ಮ ಹಕ್ಕು ಚಲಾಯಿಸುವಂತೆ ಬ್ಯಾನರ್‌ಗಳನ್ನೂ ಗ್ರಾಮದಲ್ಲಿ ಹಾಕಲಾಗಿದೆ. ಇಡೀ ಪ್ರಕ್ರಿಯೆಯನ್ನು ನಾವು ಅನುಸರಿಸಲಿದ್ದು, ಗ್ರಾಮಸ್ಥರೆಲ್ಲರೂ ಮತ ಚಲಾಯಿಸುವಂತೆ ಕೋರಿದ್ದೇವೆ ಎಂದು ಮತ್ತೋರ್ವ ಗ್ರಾಮಸ್ಥ ಅಮಿತ್ ವಾಘ್ಮೋರೆ ವಿವರಿಸಿದ್ದಾರೆ.

ಗ್ರಾಮಸ್ಥರ ಚುನಾವಣಾ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡಲು ಸರ್ಕಾರಿ ಅಧಿಕಾರಿಯನ್ನು ನೇಮಿಸುವಂತೆ ಕೋರಲಾಗಿತ್ತು. ಅದನ್ನು ತಿರಸ್ಕರಿಸಲಾಗಿದೆ ಎಂದು ವರದಿಯಾಗಿದೆ.

ಗ್ರಾಮಸ್ಥರ ನಡೆಗೆ ಸೊಲ್ಲಾಪುರ ಜಿಲ್ಲಾಡಳಿತ ಕಳವಳ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳು ಉದ್ವಿಗ್ನತೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ. ಖಾಸಗಿಯಾಗಿ ಮರು ಮತದಾನ ಮಾಡದಂತೆ ಸೂಚಿಸಿ ಹಲವು ಗ್ರಾಮಸ್ಥರಿಗೆ ಜಿಲ್ಲಾಡಳಿತ ನೋಟಿಸ್ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸೊಲ್ಲಾಪುರ ಎಸ್ಪಿ ಅತುಲ್ ಕುಲಕರ್ಣಿ ಮಾತನಾಡಿ, “ನಾವು ಮುಂಜಾಗ್ರತಾ ಸೂಚನೆಗಳನ್ನು ನೀಡಿದ್ದೇವೆ. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಗ್ರಾಮಸ್ಥರೊಂದಿಗೆ ಸಹಕರಿಸಲು ಮನವಿ ಮಾಡಿದ್ದೇವೆ. ಅನಧಿಕೃತ ಮರು ಮತದಾನ ಕೈಬಿಡುವಂತೆ ಜಿಲ್ಲಾಡಳಿತ ಮನವೊಲಿಸುವ ಪ್ರಯತ್ನ ಮಾಡುತ್ತಿದೆ” ಎಂದಿದ್ದಾರೆ.

ಎಚ್ಚರಿಕೆಗಳ ನಡುವೆಯೂ “ನಾವು ಮರು ಮತದಾನ ನಡೆಸಿಯೇ ತೀರುತ್ತೇವೆ” ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ನೂತನ ಶಾಸಕ ಉತ್ತಮ್ ಜನ್ಕರ್, ” ಗ್ರಾಮಸ್ಥರು ದೃಢ ಸಂಕಲ್ಪ ಮಾಡಿದ್ದಾರೆ. ಅವರು ಯಾವುದೇ ಸಮಸ್ಯೆಯಿಲ್ಲದೆ ಚುನಾವಣೆ ನಡೆಸಲಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊಸ ವಕ್ಫ್ ಬೋರ್ಡ್ ರಚಿಸಲಾಗುವುದು..’; ಆಂಧ್ರಪ್ರದೇಶ ಸರ್ಕಾರದಿಂದ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...