Homeಮುಖಪುಟಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

- Advertisement -
- Advertisement -

ನವೆಂಬರ್ 23ರಂದು ಪ್ರಕಟಗೊಂಡ ವಿಧಾನಸಭಾ ಚುನಾವಣೆಯ ಫಲಿತಾಂಶದ ಅಂಕಿ-ಅಂಶಗಳಿಂದ ಅಸಮಧಾನಗೊಂಡಿರುವ ಮಹಾರಾಷ್ಟ್ರದ ಗ್ರಾಮವೊಂದರ ಜನರು, ತಾವೇ ಖಾಸಗಿಯಾಗಿ ಇಂದು (ಡಿ.3) ಮರು ಮತದಾನ ಆಯೋಜಿಸಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರದ ಮಾಲ್ಶಿರಾಸ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರ್ಕಡವಾಡಿ ಗ್ರಾಮದ ಜನರು ಬ್ಯಾಲೆಟ್ ಪೇಪರ್ (ಮತ ಪತ್ರ) ಬಳಸಿ ಮರು ಮತದಾನ ನಡೆಸಲಿದ್ದಾರೆ.

ಪರಿಶಿಷ್ಟ ಜಾತಿಗೆ (ಎಸ್‌ಟಿ) ಮೀಸಲಾದ ಮಾಲ್ಶಿರಾಸ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿ ಉತ್ತಮ್ ಜನ್ಕರ್ ಅವರು ಬಿಜೆಪಿ ಅಭ್ಯರ್ಥಿ ರಾಮ್ ಸತುಪ್ತೆ ವಿರುದ್ದ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋತರೂ ಅವರು ಮರ್ಕಡವಾಡಿ ಗ್ರಾಮದಲ್ಲಿ ಪಡೆದ ಮತಗಳ ಸಂಖ್ಯೆ ಗೆದ್ದ ಅಭ್ಯರ್ಥಿಗಿಂತ ಹೆಚ್ಚಿದೆ. ಇದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಗ್ರಾಮದಲ್ಲಿ ಹೆಚ್ಚಿನ ಮತದಾರರು ಗೆದ್ದ ಎನ್‌ಸಿಪಿ ಅಭ್ಯರ್ಥಿಯ ಬೆಂಬಲಿಗರಿದ್ದೇವೆ. ನಮ್ಮ ಮತಗಳೆಲ್ಲ ಅವರಿಗೇ ಹೋಗಿದೆ. ಹೀಗಿದ್ದರೂ, ಬಿಜೆಪಿ ಅಭ್ಯರ್ಥಿ ಹೆಚ್ಚಿನ ಮತ ಪಡೆಯಲು ಹೇಗೆ ಸಾಧ್ಯ? ಚುನಾವಣಾ ಆಯೋಗದ ಅಂಕಿ-ಅಂಶಗಳು ಸರಿಯಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮಸ್ಥರಾದ ರಂಜೀತ್ ಮರ್ಕಡ್ ಈ ಬಗ್ಗೆ ಹೇಳಿಕೆ ನೀಡಿ “ನವೆಂಬರ್ 20ರಂದು ನಡೆದ ಚುನಾವಣೆಯಲ್ಲಿ ಗ್ರಾಮದ 2000 ಮಂದಿ ಅರ್ಹ ಮತದಾರರ ಪೈಕಿ 1900ಕ್ಕೂ ಹೆಚ್ಚು ಮಂದಿ ಮತ ಚಲಾಯಿಸಿದ್ದರು. ನಮ್ಮ ಗ್ರಾಮದಲ್ಲಿ ಮತದಾರರು ಜನ್ಕರ್ ಮತ್ತು ಮೋಹಿತೆ ಪಾಟೀಲ್ ಕುಟುಂಬವನ್ನು ಬೆಂಬಲಿಸುತ್ತಾ ಬಂದಿದ್ದರು. ಆದರೆ, ಈ ಬಾರಿ ಜನ್ಕರ್‌ಗೆ 843 ಮತಗಳು ಬಂದಿದ್ದರೆ, ಸಾತ್ಪುತೆ 1003 ಮತಗಳನ್ನು ಪಡೆದಿದ್ದಾರೆ. ಚುನಾವಣಾ ಆಯೋಗದ ಅಂಕಿ ಅಂಶದ ಬಗ್ಗೆ ನಂಬಿಕೆ ಇಲ್ಲ. ಆದ್ದರಿಂದ ಡಿಸೆಂಬರ್ 3ರಂದು ಮತಪತ್ರಗಳ ಮೂಲಕ ಮರು ಮತದಾನ ಆಯೋಜಿಸಿ, ಮತ ಹಂಚಿಕೆ ಬಗ್ಗೆ ಪುರಾವೆ ತೋರಿಸಲಿದ್ದೇವೆ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಗ್ರಾಮಸ್ಥರೇ ಹಣ ಸಂಗ್ರಹಿಸಿ ಎಲ್ಲಾ ಅಭ್ಯರ್ಥಿಗಳ ಭಾವಚಿತ್ರ ಹಾಗೂ ಹೆಸರನ್ನು ಒಳಗೊಂಡ ಮತಪತ್ರ ಮುದ್ರಿಸಿದ್ದಾರೆ. ಮತಪತ್ರದ ಮೂಲಕ ತಮ್ಮ ಹಕ್ಕು ಚಲಾಯಿಸುವಂತೆ ಬ್ಯಾನರ್‌ಗಳನ್ನೂ ಗ್ರಾಮದಲ್ಲಿ ಹಾಕಲಾಗಿದೆ. ಇಡೀ ಪ್ರಕ್ರಿಯೆಯನ್ನು ನಾವು ಅನುಸರಿಸಲಿದ್ದು, ಗ್ರಾಮಸ್ಥರೆಲ್ಲರೂ ಮತ ಚಲಾಯಿಸುವಂತೆ ಕೋರಿದ್ದೇವೆ ಎಂದು ಮತ್ತೋರ್ವ ಗ್ರಾಮಸ್ಥ ಅಮಿತ್ ವಾಘ್ಮೋರೆ ವಿವರಿಸಿದ್ದಾರೆ.

ಗ್ರಾಮಸ್ಥರ ಚುನಾವಣಾ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡಲು ಸರ್ಕಾರಿ ಅಧಿಕಾರಿಯನ್ನು ನೇಮಿಸುವಂತೆ ಕೋರಲಾಗಿತ್ತು. ಅದನ್ನು ತಿರಸ್ಕರಿಸಲಾಗಿದೆ ಎಂದು ವರದಿಯಾಗಿದೆ.

ಗ್ರಾಮಸ್ಥರ ನಡೆಗೆ ಸೊಲ್ಲಾಪುರ ಜಿಲ್ಲಾಡಳಿತ ಕಳವಳ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳು ಉದ್ವಿಗ್ನತೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ. ಖಾಸಗಿಯಾಗಿ ಮರು ಮತದಾನ ಮಾಡದಂತೆ ಸೂಚಿಸಿ ಹಲವು ಗ್ರಾಮಸ್ಥರಿಗೆ ಜಿಲ್ಲಾಡಳಿತ ನೋಟಿಸ್ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸೊಲ್ಲಾಪುರ ಎಸ್ಪಿ ಅತುಲ್ ಕುಲಕರ್ಣಿ ಮಾತನಾಡಿ, “ನಾವು ಮುಂಜಾಗ್ರತಾ ಸೂಚನೆಗಳನ್ನು ನೀಡಿದ್ದೇವೆ. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಗ್ರಾಮಸ್ಥರೊಂದಿಗೆ ಸಹಕರಿಸಲು ಮನವಿ ಮಾಡಿದ್ದೇವೆ. ಅನಧಿಕೃತ ಮರು ಮತದಾನ ಕೈಬಿಡುವಂತೆ ಜಿಲ್ಲಾಡಳಿತ ಮನವೊಲಿಸುವ ಪ್ರಯತ್ನ ಮಾಡುತ್ತಿದೆ” ಎಂದಿದ್ದಾರೆ.

ಎಚ್ಚರಿಕೆಗಳ ನಡುವೆಯೂ “ನಾವು ಮರು ಮತದಾನ ನಡೆಸಿಯೇ ತೀರುತ್ತೇವೆ” ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ನೂತನ ಶಾಸಕ ಉತ್ತಮ್ ಜನ್ಕರ್, ” ಗ್ರಾಮಸ್ಥರು ದೃಢ ಸಂಕಲ್ಪ ಮಾಡಿದ್ದಾರೆ. ಅವರು ಯಾವುದೇ ಸಮಸ್ಯೆಯಿಲ್ಲದೆ ಚುನಾವಣೆ ನಡೆಸಲಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊಸ ವಕ್ಫ್ ಬೋರ್ಡ್ ರಚಿಸಲಾಗುವುದು..’; ಆಂಧ್ರಪ್ರದೇಶ ಸರ್ಕಾರದಿಂದ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...