Homeಮುಖಪುಟಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

- Advertisement -
- Advertisement -

ನವೆಂಬರ್ 23ರಂದು ಪ್ರಕಟಗೊಂಡ ವಿಧಾನಸಭಾ ಚುನಾವಣೆಯ ಫಲಿತಾಂಶದ ಅಂಕಿ-ಅಂಶಗಳಿಂದ ಅಸಮಧಾನಗೊಂಡಿರುವ ಮಹಾರಾಷ್ಟ್ರದ ಗ್ರಾಮವೊಂದರ ಜನರು, ತಾವೇ ಖಾಸಗಿಯಾಗಿ ಇಂದು (ಡಿ.3) ಮರು ಮತದಾನ ಆಯೋಜಿಸಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರದ ಮಾಲ್ಶಿರಾಸ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರ್ಕಡವಾಡಿ ಗ್ರಾಮದ ಜನರು ಬ್ಯಾಲೆಟ್ ಪೇಪರ್ (ಮತ ಪತ್ರ) ಬಳಸಿ ಮರು ಮತದಾನ ನಡೆಸಲಿದ್ದಾರೆ.

ಪರಿಶಿಷ್ಟ ಜಾತಿಗೆ (ಎಸ್‌ಟಿ) ಮೀಸಲಾದ ಮಾಲ್ಶಿರಾಸ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿ ಉತ್ತಮ್ ಜನ್ಕರ್ ಅವರು ಬಿಜೆಪಿ ಅಭ್ಯರ್ಥಿ ರಾಮ್ ಸತುಪ್ತೆ ವಿರುದ್ದ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋತರೂ ಅವರು ಮರ್ಕಡವಾಡಿ ಗ್ರಾಮದಲ್ಲಿ ಪಡೆದ ಮತಗಳ ಸಂಖ್ಯೆ ಗೆದ್ದ ಅಭ್ಯರ್ಥಿಗಿಂತ ಹೆಚ್ಚಿದೆ. ಇದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಗ್ರಾಮದಲ್ಲಿ ಹೆಚ್ಚಿನ ಮತದಾರರು ಗೆದ್ದ ಎನ್‌ಸಿಪಿ ಅಭ್ಯರ್ಥಿಯ ಬೆಂಬಲಿಗರಿದ್ದೇವೆ. ನಮ್ಮ ಮತಗಳೆಲ್ಲ ಅವರಿಗೇ ಹೋಗಿದೆ. ಹೀಗಿದ್ದರೂ, ಬಿಜೆಪಿ ಅಭ್ಯರ್ಥಿ ಹೆಚ್ಚಿನ ಮತ ಪಡೆಯಲು ಹೇಗೆ ಸಾಧ್ಯ? ಚುನಾವಣಾ ಆಯೋಗದ ಅಂಕಿ-ಅಂಶಗಳು ಸರಿಯಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮಸ್ಥರಾದ ರಂಜೀತ್ ಮರ್ಕಡ್ ಈ ಬಗ್ಗೆ ಹೇಳಿಕೆ ನೀಡಿ “ನವೆಂಬರ್ 20ರಂದು ನಡೆದ ಚುನಾವಣೆಯಲ್ಲಿ ಗ್ರಾಮದ 2000 ಮಂದಿ ಅರ್ಹ ಮತದಾರರ ಪೈಕಿ 1900ಕ್ಕೂ ಹೆಚ್ಚು ಮಂದಿ ಮತ ಚಲಾಯಿಸಿದ್ದರು. ನಮ್ಮ ಗ್ರಾಮದಲ್ಲಿ ಮತದಾರರು ಜನ್ಕರ್ ಮತ್ತು ಮೋಹಿತೆ ಪಾಟೀಲ್ ಕುಟುಂಬವನ್ನು ಬೆಂಬಲಿಸುತ್ತಾ ಬಂದಿದ್ದರು. ಆದರೆ, ಈ ಬಾರಿ ಜನ್ಕರ್‌ಗೆ 843 ಮತಗಳು ಬಂದಿದ್ದರೆ, ಸಾತ್ಪುತೆ 1003 ಮತಗಳನ್ನು ಪಡೆದಿದ್ದಾರೆ. ಚುನಾವಣಾ ಆಯೋಗದ ಅಂಕಿ ಅಂಶದ ಬಗ್ಗೆ ನಂಬಿಕೆ ಇಲ್ಲ. ಆದ್ದರಿಂದ ಡಿಸೆಂಬರ್ 3ರಂದು ಮತಪತ್ರಗಳ ಮೂಲಕ ಮರು ಮತದಾನ ಆಯೋಜಿಸಿ, ಮತ ಹಂಚಿಕೆ ಬಗ್ಗೆ ಪುರಾವೆ ತೋರಿಸಲಿದ್ದೇವೆ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಗ್ರಾಮಸ್ಥರೇ ಹಣ ಸಂಗ್ರಹಿಸಿ ಎಲ್ಲಾ ಅಭ್ಯರ್ಥಿಗಳ ಭಾವಚಿತ್ರ ಹಾಗೂ ಹೆಸರನ್ನು ಒಳಗೊಂಡ ಮತಪತ್ರ ಮುದ್ರಿಸಿದ್ದಾರೆ. ಮತಪತ್ರದ ಮೂಲಕ ತಮ್ಮ ಹಕ್ಕು ಚಲಾಯಿಸುವಂತೆ ಬ್ಯಾನರ್‌ಗಳನ್ನೂ ಗ್ರಾಮದಲ್ಲಿ ಹಾಕಲಾಗಿದೆ. ಇಡೀ ಪ್ರಕ್ರಿಯೆಯನ್ನು ನಾವು ಅನುಸರಿಸಲಿದ್ದು, ಗ್ರಾಮಸ್ಥರೆಲ್ಲರೂ ಮತ ಚಲಾಯಿಸುವಂತೆ ಕೋರಿದ್ದೇವೆ ಎಂದು ಮತ್ತೋರ್ವ ಗ್ರಾಮಸ್ಥ ಅಮಿತ್ ವಾಘ್ಮೋರೆ ವಿವರಿಸಿದ್ದಾರೆ.

ಗ್ರಾಮಸ್ಥರ ಚುನಾವಣಾ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡಲು ಸರ್ಕಾರಿ ಅಧಿಕಾರಿಯನ್ನು ನೇಮಿಸುವಂತೆ ಕೋರಲಾಗಿತ್ತು. ಅದನ್ನು ತಿರಸ್ಕರಿಸಲಾಗಿದೆ ಎಂದು ವರದಿಯಾಗಿದೆ.

ಗ್ರಾಮಸ್ಥರ ನಡೆಗೆ ಸೊಲ್ಲಾಪುರ ಜಿಲ್ಲಾಡಳಿತ ಕಳವಳ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳು ಉದ್ವಿಗ್ನತೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ. ಖಾಸಗಿಯಾಗಿ ಮರು ಮತದಾನ ಮಾಡದಂತೆ ಸೂಚಿಸಿ ಹಲವು ಗ್ರಾಮಸ್ಥರಿಗೆ ಜಿಲ್ಲಾಡಳಿತ ನೋಟಿಸ್ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸೊಲ್ಲಾಪುರ ಎಸ್ಪಿ ಅತುಲ್ ಕುಲಕರ್ಣಿ ಮಾತನಾಡಿ, “ನಾವು ಮುಂಜಾಗ್ರತಾ ಸೂಚನೆಗಳನ್ನು ನೀಡಿದ್ದೇವೆ. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಗ್ರಾಮಸ್ಥರೊಂದಿಗೆ ಸಹಕರಿಸಲು ಮನವಿ ಮಾಡಿದ್ದೇವೆ. ಅನಧಿಕೃತ ಮರು ಮತದಾನ ಕೈಬಿಡುವಂತೆ ಜಿಲ್ಲಾಡಳಿತ ಮನವೊಲಿಸುವ ಪ್ರಯತ್ನ ಮಾಡುತ್ತಿದೆ” ಎಂದಿದ್ದಾರೆ.

ಎಚ್ಚರಿಕೆಗಳ ನಡುವೆಯೂ “ನಾವು ಮರು ಮತದಾನ ನಡೆಸಿಯೇ ತೀರುತ್ತೇವೆ” ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ನೂತನ ಶಾಸಕ ಉತ್ತಮ್ ಜನ್ಕರ್, ” ಗ್ರಾಮಸ್ಥರು ದೃಢ ಸಂಕಲ್ಪ ಮಾಡಿದ್ದಾರೆ. ಅವರು ಯಾವುದೇ ಸಮಸ್ಯೆಯಿಲ್ಲದೆ ಚುನಾವಣೆ ನಡೆಸಲಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊಸ ವಕ್ಫ್ ಬೋರ್ಡ್ ರಚಿಸಲಾಗುವುದು..’; ಆಂಧ್ರಪ್ರದೇಶ ಸರ್ಕಾರದಿಂದ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...