Homeಮುಖಪುಟಮಹಾರಾಷ್ಟ್ರ ಹಿಂಸಾಚಾರ: ಅಮರಾವತಿ, ಪುಣೆಯಲ್ಲಿ ಸೆಕ್ಷನ್ 144 ಜಾರಿ

ಮಹಾರಾಷ್ಟ್ರ ಹಿಂಸಾಚಾರ: ಅಮರಾವತಿ, ಪುಣೆಯಲ್ಲಿ ಸೆಕ್ಷನ್ 144 ಜಾರಿ

- Advertisement -
- Advertisement -

ಅಕ್ಟೋಬರ್ ಅಂತ್ಯದಲ್ಲಿ ತ್ರಿಪುರಾದಲ್ಲಿ ನಡೆದ ಹಿಂಸಾಚಾರದ ವಿರುದ್ಧ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆದಿದ್ದು, ಈ ವೇಳೆ ಹಲವು ಸ್ಥಳಗಳಲ್ಲಿ ಕಲ್ಲು ತೂರಾಟ ನಡೆದಿರುವ ಹಿನ್ನೆಲೆಯಲ್ಲಿ, ಅಮರಾವತಿ ಬಳಿಕ ಪುಣೆಯಲ್ಲಿಯೂ ಕೂಡ ಜಿಲ್ಲಾಡಳಿತವು ಸೆಕ್ಷನ್ 144 ಅನ್ನು ವಿಧಿಸಿದೆ.

ಜಿಲ್ಲಾಧಿಕಾರಿ ರಾಜೇಶ್ ದೇಶಮುಖ್ ಹೊರಡಿಸಿದ ಅಧಿಸೂಚನೆಯಲ್ಲಿ, ‘ಗುಂಪುಗಳ ನಡುವೆ ಕೋಮು ದ್ವೇಷ ಹರಡುವ ಸಂದೇಶಗಳು ಮತ್ತು ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಜೊತೆಗೆ ಜನರು ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ’ ಎಂದು ತಿಳಿಸಲಾಗಿದೆ ಎಂದು  ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

“ಈ ಆದೇಶ ನವೆಂಬರ್ 14 ರ ಮಧ್ಯರಾತ್ರಿಯಿಂದ ನವೆಂಬರ್ 20 ರವರೆಗೆ ಜಾರಿಯಲ್ಲಿರುತ್ತದೆ. ಆದೇಶದ ಪ್ರಕಾರ, ಸಾಮಾಜಿಕ ಮಾಧ್ಯಮಗಳಾದ Instagram, Twitter, Facebook ಮತ್ತು Whatsapp ಮೂಲಕ ಸಮಾಜದಲ್ಲಿ ಕೋಮು ದ್ವೇಷ ಉಂಟುಮಾಡುವ ಸಂದೇಶಗಳನ್ನು ಹರಡುವುದನ್ನು ನಿಷೇಧಿಸಲಾಗಿದೆ. ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಸಭೆ ನಡೆಸುವುದು, ಕೋಮು ಉದ್ವಿಗ್ನತೆಯನ್ನು ಉಂಟುಮಾಡುವ ಪೋಸ್ಟರ್‌ಗಳನ್ನು ಹಾಕುವುದನ್ನು ನಿಷೇಧಿಸಲಾಗಿದೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರು

ಸೆಕ್ಷನ್ 144 ಉಲ್ಲಂಘಿಸುವವರ ವಿರುದ್ಧ ಐಪಿಸಿ ಸೆಕ್ಷನ್ 188 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಅಕ್ಟೋಬರ್ 27 ರಂದು ತ್ರಿಪುರಾದ ಪಾಣಿಸಾಗರದಲ್ಲಿ ನಡೆದ ಹಿಂಸಾಚಾರದ ವಿರುದ್ಧ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅಮರಾವತಿ, ನಾಂದೇಡ್ ಮತ್ತು ಮಾಲೆಗಾಂವ್‌ನಲ್ಲಿ ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ.

ನಾಂದೇಡ್ ಜಿಲ್ಲೆ ಹಿಂಸಾಚಾರದಲ್ಲಿ ಪೊಲೀಸರು ಇದುವರೆಗೆ 35 ಜನರನ್ನು ಬಂಧಿಸಿದ್ದಾರೆ. ಶುಕ್ರವಾರ ಪೊಲೀಸ್ ವ್ಯಾನ್‌ಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ಸಂದರ್ಭದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಸುಮಾರು 1 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನಾಂದೇಡ್, ಮಾಲೆಗಾಂವ್, ಅಮರಾವತಿ ಮತ್ತು ಇತರ ಸ್ಥಳಗಳಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿರುವ ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಇತ್ತ, ತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ (@hwnewsnetwork) ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.


ಇದನ್ನೂ ಓದಿ: ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...