Homeಮುಖಪುಟಮಹಾರಾಷ್ಟ್ರ| ಬಂಗಾಳಿ ಭಾಷೆ ಮಾತನಾಡಿದ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ಮೇಲೆ ಹಲ್ಲೆ

ಮಹಾರಾಷ್ಟ್ರ| ಬಂಗಾಳಿ ಭಾಷೆ ಮಾತನಾಡಿದ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ಮೇಲೆ ಹಲ್ಲೆ

- Advertisement -
- Advertisement -

ತಮ್ಮ ಮಾತೃ ಭಾಷೆ ಬಂಗಾಳಿಯಲ್ಲಿ ಮಾತನಾಡಿದ್ದಕ್ಕಾಗಿ ಬಾಂಗ್ಲಾದೇಶೀಯರು ಎಂದು ಶಂಕಿಸಿ ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯ ಮೂವರು ವಲಸೆ ಕಾರ್ಮಿಕರ ಮೇಲೆ ಮಹಾರಾಷ್ಟ್ರದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಕಾರ್ಮಿಕರು ತಮ್ಮ ರಾಜ್ಯಕ್ಕೆ ಹಿಂತಿರುಗುತ್ತಿದ್ದಾಗ ಬಿಜೆಪಿ ಆಡಳಿತ ರಾಜ್ಯದಲ್ಲಿ ದಾಳಿ ನಡೆದಿದೆ.

ದಿಲೀಪ್ ಬಾಗ್ಡಿ, ಸಮೀರ್ ಬರುಯಿ ಮತ್ತು ಪಾಂಡಬೇಶ್ವರದ ಮತ್ತೊಬ್ಬ ಸಹೋದ್ಯೋಗಿ ಎಂದು ಗುರುತಿಸಲಾದ ಸಂತ್ರಸ್ತ ಕಾರ್ಮಿಕರು, ಮಹಾರಾಷ್ಟ್ರದಿಂದ ಪಶ್ಚಿಮ ಬಂಗಾಳಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಕೆಲವು ಸ್ಥಳೀಯ ಜನರು, ನಾವು ಬಂಗಾಳಿ ಮಾತನಾಡುವುದನ್ನು ಕೇಳಿದಾಗ ತೊಂದರೆ ಪ್ರಾರಂಭವಾಯಿತು ಎಂದು ಅವರು ಹೇಳಿದ್ದಾರೆ. ಕಾರ್ಮಿಕರ ಪ್ರಕಾರ, ನಾವು ಮೊದಲು ಪ್ರಯಾಣ ಟಿಕೆಟ್‌ಗಳನ್ನು ಖರೀದಿಸುವಾಗ ಹಿಂದಿಯಲ್ಲಿ ಮಾತನಾಡುತ್ತಿದ್ದೆವು, ಆದರೆ ಖಾಸಗಿಯಾಗಿ ಮಾತನಾಡುವಾಗ ಬಂಗಾಳಿ ಮಾತಾಡುತ್ತಿದ್ದೆವು ಎಂದು ಹೇಳಿಕೊಂಡಿದ್ದಾರೆ.

ಬಂಗಾಳಿ ಮಾತನಾಡುತ್ತಿದ್ದ ಕಾರ್ಮಿಕರನ್ನು ತಡೆದ ಸ್ಥಳೀಯರು ಅವರ ಗುರುತನ್ನು ಪ್ರಶ್ನಿಸಿದರು. ನಾವು ಪಶ್ಚಿಮ ಬಂಗಾಳದ ಭಾರತೀಯ ನಾಗರಿಕರು ಎಂದು ಪದೇ ಪದೇ ಹೇಳಿಕೊಂಡರೂ, ಸ್ಥಳೀಯರು ಅವರನ್ನು ಬಾಂಗ್ಲಾದೇಶಿಗಳು ಎಂದು ಒತ್ತಾಯಿಸಿ ಥಳಿಸಿದರು ಎಂದು ಅವರು ಆರೋಪಿಸಿದರು. ನಮ್ಮನ್ನು ಬಲವಂತವಾಗಿ ಬಸ್‌ನಿಂದ ಇಳಿಸಿ ಬೇರೆ ಸ್ಥಳಕ್ಕೆ ಸ್ಥಳಾಂತರಿಸಿ, ಆಧಾರ್ ಕಾರ್ಡ್‌ಗಳನ್ನು ಪರಿಶೀಲಿಸಲಾಯಿತು ಎಂದು ಕಾರ್ಮಿಕರು ಹೇಳಿದರು.

“ನಮ್ಮ ಆಧಾರ್ ಕಾರ್ಡ್‌ಗಳನ್ನು ತೋರಿಸಿದ ನಂತರವೂ, ನಾವು ಭಾರತೀಯರು ಎಂದು ಒಪ್ಪಿಕೊಳ್ಳಲು ಅವರು ನಿರಾಕರಿಸಿದರು” ಎಂದು ಸಮೀರ್ ಬರುಯಿ ಘಟನೆಯನ್ನು ವಿವರಿಸುತ್ತಾ ಹೇಳಿದರು.

ಕಾರ್ಮಿಕರು ತಮ್ಮ ಮೇಲೆ ತೀವ್ರ ಹಿಂಸಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಸಿ ಚಹಾವನ್ನು ತಲೆಯ ಮೇಲೆ ಸುರಿದು, ತಲೆ ಮತ್ತು ಹೊಟ್ಟೆಗೆ ಮೇಲೆ ಒದ್ದರು. ದಾಳಿ ತಡೆಯುವ ಪ್ರಯತ್ನದಲ್ಲಿ, ಓರ್ವ ಕಾರ್ಮಿಕ ಅಸ್ವಸ್ಥನಾದಂತೆ ನಟಿಸಿದ ನಂತರವೂ ಹಲ್ಲೆ ಮುಂದುವರೆಯಿತು ಎಂದು ತಮ್ಮ ಅಸಹಾಯಕ ಸ್ಥಿತಿ ಕುರಿತು ಮಾತನಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ, ವಿಶೇಷವಾಗಿ ಒಡಿಶಾ ಮತ್ತು ರಾಜಸ್ಥಾನ ಸೇರಿದಂತೆ ಬಿಜೆಪಿ ಆಡಳಿತವಿರುವ ಪ್ರದೇಶಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರ ಮೇಲೆ ಕಿರುಕುಳ ಮತ್ತು ಹಲ್ಲೆ ನಡೆಯುತ್ತಿರುವ ಬಗ್ಗೆ ಹೆಚ್ಚುತ್ತಿರುವ ದೂರುಗಳ ಮಧ್ಯೆ ಈ ಘಟನೆ ನಡೆದಿದೆ.

ಕಾರ್ಮಿಕರು ತವರಿಗೆ ಹಿಂದಿರುಗಿದ ನಂತರ, ಪಾಂಡಬೇಶ್ವರ ಶಾಸಕ ನರೇಂದ್ರನಾಥ್ ಚಕ್ರವರ್ತಿ ಭಾನುವಾರ ಅವರನ್ನು ಭೇಟಿ ಮಾಡಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ದೇಶಾದ್ಯಂತ ಬಂಗಾಳಿ ಮಾತನಾಡುವ ಜನರಿಗೆ ಹೆಚ್ಚುತ್ತಿರುವ ಪ್ರತಿಕೂಲ ವಾತಾವರಣಕ್ಕೆ ಅವರು ಕೇಂದ್ರ ಸರ್ಕಾರವನ್ನು ದೂಷಿಸಿದರು.

“ಇದು ಬಂಗಾಳಿಗಳ ವಿರುದ್ಧ ತೀವ್ರ ಕ್ರೌರ್ಯದ ಪ್ರದರ್ಶನವಾಗಿದೆ. ಪಶ್ಚಿಮ ಬಂಗಾಳವು ದೇಶದ ಎಲ್ಲ ಭಾಗಗಳ ಜನರನ್ನು ಸ್ವಾಗತಿಸಿದರೂ, ಬಂಗಾಳಿಗಳನ್ನು ಬೇರೆಡೆ ಗುರಿಯಾಗಿಸಲಾಗುತ್ತಿದೆ. ಜನರು ಇದನ್ನು ಕ್ಷಮಿಸುವುದಿಲ್ಲ” ಎಂದು ಚಕ್ರವರ್ತಿ ಹೇಳಿದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಸ್ಥಳೀಯ ಬಿಜೆಪಿ ನಾಯಕ ದಿಲೀಪ್ ಚಕ್ರವರ್ತಿ, ಪಶ್ಚಿಮ ಬಂಗಾಳ ಸರ್ಕಾರವನ್ನು ದೂಷಿಸಿ, ರಾಜ್ಯದಲ್ಲಿ ಉದ್ಯೋಗಾವಕಾಶಗಳ ಕೊರತೆಯಿಂದಾಗಿ ಕಾರ್ಮಿಕರು ಕೆಲಸ ಹುಡುಕಿಕೊಂಡು ಮಹಾರಾಷ್ಟ್ರ, ಗುಜರಾತ್ ಮತ್ತು ಛತ್ತೀಸ್‌ಗಢಕ್ಕೆ ವಲಸೆ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಘಟನೆಯ ಹಿಂದೆ ರಾಜಕೀಯ ಹಿನ್ನೆಲೆ ಇರಬಹುದು ಎಂದು ಬಿಜೆಪಿ ಸೂಚಿಸಿದ್ದು, ಕಾರ್ಮಿಕರು ನೀಡಿದ ಹೇಳಿಕೆಗಳಲ್ಲಿ ವ್ಯತ್ಯಾಸ ಇದೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...