Homeಮುಖಪುಟಮಹಾರಾಷ್ಟ್ರ| ಬಂಗಾಳಿ ಭಾಷೆ ಮಾತನಾಡಿದ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ಮೇಲೆ ಹಲ್ಲೆ

ಮಹಾರಾಷ್ಟ್ರ| ಬಂಗಾಳಿ ಭಾಷೆ ಮಾತನಾಡಿದ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕರ ಮೇಲೆ ಹಲ್ಲೆ

- Advertisement -
- Advertisement -

ತಮ್ಮ ಮಾತೃ ಭಾಷೆ ಬಂಗಾಳಿಯಲ್ಲಿ ಮಾತನಾಡಿದ್ದಕ್ಕಾಗಿ ಬಾಂಗ್ಲಾದೇಶೀಯರು ಎಂದು ಶಂಕಿಸಿ ಪಶ್ಚಿಮ ಬಂಗಾಳದ ಪಶ್ಚಿಮ ಬರ್ಧಮಾನ್ ಜಿಲ್ಲೆಯ ಮೂವರು ವಲಸೆ ಕಾರ್ಮಿಕರ ಮೇಲೆ ಮಹಾರಾಷ್ಟ್ರದಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಕಾರ್ಮಿಕರು ತಮ್ಮ ರಾಜ್ಯಕ್ಕೆ ಹಿಂತಿರುಗುತ್ತಿದ್ದಾಗ ಬಿಜೆಪಿ ಆಡಳಿತ ರಾಜ್ಯದಲ್ಲಿ ದಾಳಿ ನಡೆದಿದೆ.

ದಿಲೀಪ್ ಬಾಗ್ಡಿ, ಸಮೀರ್ ಬರುಯಿ ಮತ್ತು ಪಾಂಡಬೇಶ್ವರದ ಮತ್ತೊಬ್ಬ ಸಹೋದ್ಯೋಗಿ ಎಂದು ಗುರುತಿಸಲಾದ ಸಂತ್ರಸ್ತ ಕಾರ್ಮಿಕರು, ಮಹಾರಾಷ್ಟ್ರದಿಂದ ಪಶ್ಚಿಮ ಬಂಗಾಳಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಕೆಲವು ಸ್ಥಳೀಯ ಜನರು, ನಾವು ಬಂಗಾಳಿ ಮಾತನಾಡುವುದನ್ನು ಕೇಳಿದಾಗ ತೊಂದರೆ ಪ್ರಾರಂಭವಾಯಿತು ಎಂದು ಅವರು ಹೇಳಿದ್ದಾರೆ. ಕಾರ್ಮಿಕರ ಪ್ರಕಾರ, ನಾವು ಮೊದಲು ಪ್ರಯಾಣ ಟಿಕೆಟ್‌ಗಳನ್ನು ಖರೀದಿಸುವಾಗ ಹಿಂದಿಯಲ್ಲಿ ಮಾತನಾಡುತ್ತಿದ್ದೆವು, ಆದರೆ ಖಾಸಗಿಯಾಗಿ ಮಾತನಾಡುವಾಗ ಬಂಗಾಳಿ ಮಾತಾಡುತ್ತಿದ್ದೆವು ಎಂದು ಹೇಳಿಕೊಂಡಿದ್ದಾರೆ.

ಬಂಗಾಳಿ ಮಾತನಾಡುತ್ತಿದ್ದ ಕಾರ್ಮಿಕರನ್ನು ತಡೆದ ಸ್ಥಳೀಯರು ಅವರ ಗುರುತನ್ನು ಪ್ರಶ್ನಿಸಿದರು. ನಾವು ಪಶ್ಚಿಮ ಬಂಗಾಳದ ಭಾರತೀಯ ನಾಗರಿಕರು ಎಂದು ಪದೇ ಪದೇ ಹೇಳಿಕೊಂಡರೂ, ಸ್ಥಳೀಯರು ಅವರನ್ನು ಬಾಂಗ್ಲಾದೇಶಿಗಳು ಎಂದು ಒತ್ತಾಯಿಸಿ ಥಳಿಸಿದರು ಎಂದು ಅವರು ಆರೋಪಿಸಿದರು. ನಮ್ಮನ್ನು ಬಲವಂತವಾಗಿ ಬಸ್‌ನಿಂದ ಇಳಿಸಿ ಬೇರೆ ಸ್ಥಳಕ್ಕೆ ಸ್ಥಳಾಂತರಿಸಿ, ಆಧಾರ್ ಕಾರ್ಡ್‌ಗಳನ್ನು ಪರಿಶೀಲಿಸಲಾಯಿತು ಎಂದು ಕಾರ್ಮಿಕರು ಹೇಳಿದರು.

“ನಮ್ಮ ಆಧಾರ್ ಕಾರ್ಡ್‌ಗಳನ್ನು ತೋರಿಸಿದ ನಂತರವೂ, ನಾವು ಭಾರತೀಯರು ಎಂದು ಒಪ್ಪಿಕೊಳ್ಳಲು ಅವರು ನಿರಾಕರಿಸಿದರು” ಎಂದು ಸಮೀರ್ ಬರುಯಿ ಘಟನೆಯನ್ನು ವಿವರಿಸುತ್ತಾ ಹೇಳಿದರು.

ಕಾರ್ಮಿಕರು ತಮ್ಮ ಮೇಲೆ ತೀವ್ರ ಹಿಂಸಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಸಿ ಚಹಾವನ್ನು ತಲೆಯ ಮೇಲೆ ಸುರಿದು, ತಲೆ ಮತ್ತು ಹೊಟ್ಟೆಗೆ ಮೇಲೆ ಒದ್ದರು. ದಾಳಿ ತಡೆಯುವ ಪ್ರಯತ್ನದಲ್ಲಿ, ಓರ್ವ ಕಾರ್ಮಿಕ ಅಸ್ವಸ್ಥನಾದಂತೆ ನಟಿಸಿದ ನಂತರವೂ ಹಲ್ಲೆ ಮುಂದುವರೆಯಿತು ಎಂದು ತಮ್ಮ ಅಸಹಾಯಕ ಸ್ಥಿತಿ ಕುರಿತು ಮಾತನಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ, ವಿಶೇಷವಾಗಿ ಒಡಿಶಾ ಮತ್ತು ರಾಜಸ್ಥಾನ ಸೇರಿದಂತೆ ಬಿಜೆಪಿ ಆಡಳಿತವಿರುವ ಪ್ರದೇಶಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರ ಮೇಲೆ ಕಿರುಕುಳ ಮತ್ತು ಹಲ್ಲೆ ನಡೆಯುತ್ತಿರುವ ಬಗ್ಗೆ ಹೆಚ್ಚುತ್ತಿರುವ ದೂರುಗಳ ಮಧ್ಯೆ ಈ ಘಟನೆ ನಡೆದಿದೆ.

ಕಾರ್ಮಿಕರು ತವರಿಗೆ ಹಿಂದಿರುಗಿದ ನಂತರ, ಪಾಂಡಬೇಶ್ವರ ಶಾಸಕ ನರೇಂದ್ರನಾಥ್ ಚಕ್ರವರ್ತಿ ಭಾನುವಾರ ಅವರನ್ನು ಭೇಟಿ ಮಾಡಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ದೇಶಾದ್ಯಂತ ಬಂಗಾಳಿ ಮಾತನಾಡುವ ಜನರಿಗೆ ಹೆಚ್ಚುತ್ತಿರುವ ಪ್ರತಿಕೂಲ ವಾತಾವರಣಕ್ಕೆ ಅವರು ಕೇಂದ್ರ ಸರ್ಕಾರವನ್ನು ದೂಷಿಸಿದರು.

“ಇದು ಬಂಗಾಳಿಗಳ ವಿರುದ್ಧ ತೀವ್ರ ಕ್ರೌರ್ಯದ ಪ್ರದರ್ಶನವಾಗಿದೆ. ಪಶ್ಚಿಮ ಬಂಗಾಳವು ದೇಶದ ಎಲ್ಲ ಭಾಗಗಳ ಜನರನ್ನು ಸ್ವಾಗತಿಸಿದರೂ, ಬಂಗಾಳಿಗಳನ್ನು ಬೇರೆಡೆ ಗುರಿಯಾಗಿಸಲಾಗುತ್ತಿದೆ. ಜನರು ಇದನ್ನು ಕ್ಷಮಿಸುವುದಿಲ್ಲ” ಎಂದು ಚಕ್ರವರ್ತಿ ಹೇಳಿದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಸ್ಥಳೀಯ ಬಿಜೆಪಿ ನಾಯಕ ದಿಲೀಪ್ ಚಕ್ರವರ್ತಿ, ಪಶ್ಚಿಮ ಬಂಗಾಳ ಸರ್ಕಾರವನ್ನು ದೂಷಿಸಿ, ರಾಜ್ಯದಲ್ಲಿ ಉದ್ಯೋಗಾವಕಾಶಗಳ ಕೊರತೆಯಿಂದಾಗಿ ಕಾರ್ಮಿಕರು ಕೆಲಸ ಹುಡುಕಿಕೊಂಡು ಮಹಾರಾಷ್ಟ್ರ, ಗುಜರಾತ್ ಮತ್ತು ಛತ್ತೀಸ್‌ಗಢಕ್ಕೆ ವಲಸೆ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಘಟನೆಯ ಹಿಂದೆ ರಾಜಕೀಯ ಹಿನ್ನೆಲೆ ಇರಬಹುದು ಎಂದು ಬಿಜೆಪಿ ಸೂಚಿಸಿದ್ದು, ಕಾರ್ಮಿಕರು ನೀಡಿದ ಹೇಳಿಕೆಗಳಲ್ಲಿ ವ್ಯತ್ಯಾಸ ಇದೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...