Homeಮುಖಪುಟಜನಾಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ತ್ರಿಭಾಷಾ ನೀತಿ ನಿರ್ಣಯ ರದ್ದು

ಜನಾಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ತ್ರಿಭಾಷಾ ನೀತಿ ನಿರ್ಣಯ ರದ್ದು

- Advertisement -
- Advertisement -

ರಾಜ್ಯಾದ್ಯಂತ ಪ್ರತಿಭಟನೆಗಳ ನಂತರ ಮಹಾರಾಷ್ಟ್ರ ಸರ್ಕಾರ ಭಾನುವಾರ (ಜೂ.29) ಶಾಲೆಗಳಿಗೆ ತ್ರಿಭಾಷಾ ನೀತಿಯ ಕುರಿತ ತನ್ನ ವಿವಾದಾತ್ಮಕ ನಿರ್ಣಯಗಳನ್ನು ಹಿಂತೆಗೆದುಕೊಂಡಿದೆ.

ನೀತಿಯನ್ನು ಪರಿಶೀಲಿಸಲು ಮತ್ತು ಮುಂದಿನ ಹಂತಗಳನ್ನು ಶಿಫಾರಸು ಮಾಡಲು ಹೊಸ ತಜ್ಞರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.

ವಿಜ್ಞಾನಿ ರಘುನಾಥ್ ಮಾಶೇಲ್ಕರ್ ಅವರ ಶಿಫಾರಸುಗಳ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತೃತೀಯ ಭಾಷಾ ನೀತಿಯ ನಿರ್ಧಾರವನ್ನು ಒಪ್ಪಿಕೊಂಡಿದ್ದರು ಎಂದು ಸಿಎಂ ಇದೇ ವೇಳೆ ಹೇಳಿದ್ದಾರೆ.

“ಶಿವಸೇನೆ (ಯುಬಿಟಿ) ಸದಸ್ಯರಲ್ಲಿ ಒಬ್ಬರು ಪ್ರಾಥಮಿಕ ಶಾಲೆಯಿಂದ ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸಲು ಶಿಫಾರಸು ಮಾಡಿದ್ದರು ಮತ್ತು ವಿದ್ಯಾರ್ಥಿಗಳು ಭಾಷೆಗಳನ್ನು ಸರಿಯಾಗಿ ಕಲಿಯಲು ಸಾಧ್ಯವಾಗುವಂತೆ ಪದವಿಯವರೆಗೆ ಮರಾಠಿ, ಇಂಗ್ಲಿಷ್ ಮತ್ತು ಹಿಂದಿಯನ್ನು ಕಡ್ಡಾಯಗೊಳಿಸಬೇಕು” ಎಂದು ಸೂಚಿಸಿದ್ದರು ಎಂದಿದ್ದಾರೆ.

ಆ ಸಮಯದಲ್ಲಿ ಉದ್ಧವ್ ಠಾಕ್ರೆ ಅವರೇ ವರದಿ ಮತ್ತು ಅದರ ಶಿಫಾರಸುಗಳನ್ನು ಜಾರಿಗೆ ತರಲು ಒಪ್ಪಿಕೊಂಡಿದ್ದರು ಎಂದು ಫಡ್ನವೀಸ್ ಹೇಳಿದ್ದಾರೆ.

“ಆದರೆ ಈಗ ಉದ್ಧವ್ ಠಾಕ್ರೆ ತಮ್ಮ ನಿಲುವನ್ನು ಬದಲಾಯಿಸಿದ್ದಾರೆ ಮತ್ತು ಶಾಲೆಗಳಲ್ಲಿ ಮೂರನೇ ಭಾಷೆಯಾಗಿ ಹಿಂದಿಯನ್ನು ವಿರೋಧಿಸುತ್ತಿದ್ದಾರೆ” ಎಂದು ಫಡ್ನವೀಸ್ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ಸರ್ಕಾರವು ವಾಸ್ತವವಾಗಿ ವಿದ್ಯಾರ್ಥಿಗಳು ಶಾಲೆಯಿಂದಲೇ ಮೂರನೇ ಭಾಷೆಯನ್ನು ಕಲಿಯಲು ಅವಕಾಶಗಳನ್ನು ಸೃಷ್ಟಿಸಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಬಹು ಭಾಷೆಗಳನ್ನು ಕಲಿಯಲು ಸರಿಯಾದ ವಯಸ್ಸು ಆಗಿರುವುದರಿಂದ, ರಾಷ್ಟ್ರೀಯ ಶಿಕ್ಷಣ ನೀತಿಯು ಶಾಲಾ ಹಂತದಿಂದಲೇ ಬಹು ಭಾಷೆಗಳನ್ನು ಕಲಿಯುವುದನ್ನು ಪ್ರೋತ್ಸಾಹಿಸುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ.

ಶಾಲೆಗಳಲ್ಲಿ ಯಾವುದೇ ಭಾಷೆಯನ್ನು ಹೇರುವ ಪರವಾಗಿ ಸರ್ಕಾರ ಇಲ್ಲ. ಹಿಂದಿಯನ್ನು ಮೂರನೇ ಭಾಷೆಯಾಗಿ ಕಲಿಸುವ ಬಗ್ಗೆ ಸಂಬಂಧಿತ ಎಲ್ಲರ ಜೊತೆ ಚರ್ಚೆ ಮತ್ತು ಸಮಾಲೋಚನೆ ನಡೆಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ಸರ್ವಾನುಮತದ ನಿರ್ಧಾರವಾಗಿರುತ್ತದೆ” ಎಂದು ಫಡ್ನವೀಸ್ ಸ್ಪಷ್ಟಪಡಿಸಿದ್ದಾರೆ.

ಈ ವಿಷಯದ ಕುರಿತು ಸರ್ಕಾರದ ಜಾಗೃತಿ ಪ್ರಯತ್ನಗಳ ಭಾಗವಾಗಿ ಮಹಾರಾಷ್ಟ್ರ ಶಿಕ್ಷಣ ಸಚಿವ ದಾದಾ ಭೂಸೆ ಅವರು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಭೇಟಿಯಾಗಿದ್ದಾರೆ ಎಂದು ಸಿಎಂ ಫಡ್ನವಿಸ್ ತಿಳಿಸಿದ್ದಾರೆ.

ಶಾಲೆಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಹಾಗಾಗಿ, ಜುಲೈ 5 ರಂದು ಈ ಕ್ರಮದ ವಿರುದ್ಧ ನಡೆಸಲು ಉದ್ದೇಶಿಸಲಾದ ಮೆರವಣಿಗೆಯನ್ನು ರದ್ದುಗೊಳಿಸುವುದು ಈಗ ಠಾಕ್ರೆ ಸಹೋದರರ ಮೇಲಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಶನಿವಾರ ಹೇಳಿದ್ದಾರೆ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್, ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸುವ ಸರ್ಕಾರದ ನಿರ್ಣಯವನ್ನು (ಜಿಆರ್) ರದ್ದುಗೊಳಿಸುವ ಮೂಲಕ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ‘ಬುದ್ಧಿವಂತ ನಿರ್ಧಾರ’ ತೆಗೆದುಕೊಂಡಿದ್ದಾರೆ. ಇದು ‘ಮರಾಠಿ ಏಕತೆಯ ವಿಜಯ’ ಎಂದಿದ್ದಾರೆ.

ಠಾಕ್ರೆ ಸಹೋದರರ ಹೆಚ್ಚುತ್ತಿರುವ ಪ್ರಭಾವ, ಅವರ ಹೊಸ ಏಕತೆ ಮತ್ತು ಜುಲೈ 5ರ ಮೆಗಾ ಮೆರವಣಿಗೆಯ ಸಂಭವನೀಯ ಪರಿಣಾಮವನ್ನು ರಾಜ್ಯ ಸರ್ಕಾರವು ಗ್ರಹಿಸಿದೆ. ಇದು ಮಹಾಯುತಿ ಸರ್ಕಾರವು ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಮಾಡಿದೆ ಎಂದು ರಾವತ್ ಹೇಳಿಕೊಂಡಿದ್ದಾರೆ.

“ನಾವು ಜುಲೈ 5ರ ಮೆರವಣಿಗೆಯನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಠಾಕ್ರೆ ಬ್ರ್ಯಾಂಡ್ ಮತ್ತೊಮ್ಮೆ ದೃಢವಾಗಿ ಪುನಃ ಸ್ಥಾಪಿತವಾಗಿದೆ” ಎಂದಿದ್ದಾರೆ.

ಮುಂಬೈ ಮತ್ತು ಮಹಾರಾಷ್ಟ್ರದ ಇತರ ಭಾಗಗಳಲ್ಲಿ ಶಿವಸೇನೆ (ಯುಬಿಟಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳಲ್ಲಿ ಜೂನ್ 17 ರ ನಿರ್ಣಯದ ಪ್ರತಿಗಳನ್ನು ಸುಟ್ಟುಹಾಕಲಾಗಿತ್ತು. ಪ್ರಾದೇಶಿಕ ಭಾಷೆಗಳ ವೆಚ್ಚದಲ್ಲಿ ಸರ್ಕಾರವು ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷ ಆರೋಪಿಸಿತ್ತು.

“ನಾವು ಸರ್ಕಾರದ ನಿರ್ಣಯದ ಪ್ರತಿಗಳನ್ನು ಸುಟ್ಟು ಹಾಕಿದ್ದೇವೆ. ಅಂದರೆ, ನಾವು ಅದನ್ನು ಸ್ವೀಕರಿಸುವುದಿಲ್ಲ. ನಾವು ಹಿಂದಿಯನ್ನು ವಿರೋಧಿಸುವುದಿಲ್ಲ, ಆದರೆ ಅದರ ಹೇರಿಕೆಯನ್ನು ನಾವು ಅನುಮತಿಸುವುದಿಲ್ಲ. ಸರ್ಕಾರಕ್ಕೆ ನಮ್ಮ ಪ್ರತಿಭಟನೆಯ ಹಿಂದಿನ ಕಾರಣ ಅರ್ಥವಾಗುತ್ತಿಲ್ಲ. ಮರಾಠಿಗೆ ಅನ್ಯಾಯವಾಗಿದೆ. ವಿದ್ಯಾರ್ಥಿಗಳ ಮೇಲೆ ನೀವು ಎಷ್ಟು ಒತ್ತಡ ಹೇರುತ್ತೀರಿ ಎಂಬುದು ಪ್ರಶ್ನೆ” ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಭಾನುವಾರ ಹೇಳಿದ್ದಾರೆ.

“ತ್ರಿಭಾಷಾ ನೀತಿಗೆ ಸಂಬಂಧಿಸಿದ ಎರಡೂ ಸರ್ಕಾರಿ ನಿರ್ಣಯಗಳನ್ನು ರದ್ದುಗೊಳಿಸಲು ನಾವು ನಿರ್ಧರಿಸಿದ್ದೇವೆ” ಎಂದು ಭಾನುವಾರ ಸಂಪುಟ ಸಭೆಯ ನಂತರ ಸಿಎಂ ಫಡ್ನವಿಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಈ ನೀತಿಯನ್ನು ಹೇಗೆ ಜಾರಿಗೆ ತರಬೇಕು ಎಂಬುದನ್ನು ಅಧ್ಯಯನ ಮಾಡಲು ಡಾ. ನರೇಂದ್ರ ಜಾಧವ್ ಅವರ ನೇತೃತ್ವದಲ್ಲಿ ಹೊಸ ಸಮಿತಿಯನ್ನು ರಚಿಸಲಾಗುವುದು. ಇದಕ್ಕೆ ಸಂಬಂಧಿತ ಎಲ್ಲರ ಅಭಿಪ್ರಾಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ನಮಗೆ, ಈ ನೀತಿಯಲ್ಲಿ ಮರಾಠಿ ಕೇಂದ್ರಬಿಂದುವಾಗಿದೆ” ಎಂದು ಸಿಎಂ ಫಡ್ನವಿಸ್ ಹೇಳಿದ್ದಾರೆ.

ತ್ರಿಭಾಷಾ ನೀತಿ ನಿರ್ಣಯ ಮತ್ತು ಜನಾಕ್ರೋಶ

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ 2020ರಲ್ಲಿ ಜಾರಿಗೆ ತಂದಿರುವ ವಿವಾದಾತ್ಮಕ ರಾಷ್ಟ್ರೀಯ ಶಿಕ್ಷಣ ಅಥವಾ ಹೊಸ ಶಿಕ್ಷಣ ನೀತಿಗೆ (ಎನ್‌ಇಪಿ) ಸಂಬಂಧಿಸಿದಂತೆ, ಮಹಾರಾಷ್ಟ್ರದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ 1 ರಿಂದ 5ನೇ ತರಗತಿವರೆಗಿನ ಮಕ್ಕಳು ಮರಾಠಿ, ಇಂಗ್ಲಿಷ್ ಜೊತೆಗೆ ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದನ್ನು ಸರ್ಕಾರ ಕಡ್ಡಾಯ ಮಾಡಿತ್ತು.

ಮೂರನೇ ಭಾಷೆಯಾಗಿ ಹಿಂದಿ ಕಡ್ಡಾಯಗೊಳಿಸಿ ಏಪ್ರಿಲ್ 16, 2025ರಂದು ಸರ್ಕಾರ ನಿರ್ಣಯ ತೆಗೆದುಕೊಂಡಿತ್ತು. ಇದಕ್ಕೆ ಮರಾಠಿ ಸಾಹಿತಿಗಳು, ಭಾಷಾಪರ ಸಂಘಟನೆಗಳು, ವಿರೋಧ ಪಕ್ಷಗಳು ಮತ್ತು ನಾಗರಿಕ ಗುಂಪುಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಸರ್ಕಾರ ಮರಾಠಿ ಭಾಷೆ ಕಲಿಸು ಹಣದಲ್ಲಿ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರತಿಭಟನೆಗೆ ಬೆದರಿದ ಸರ್ಕಾರ ಜೂನ್ 17ರಂದು ನಿರ್ಣಯಕ್ಕೆ ತಿದ್ದುಪಡಿ ತಂದು, ಹಿಂದಿ ಕಡ್ಡಾಯವಲ್ಲ ಮೂರನೇ ಸಾಮಾನ್ಯ ಭಾಷೆಯಾಗಿ ಕಲಿಯಬೇಕು ಎಂದಿತ್ತು. ಅಂದರೆ, ಹಿಂದಿ ಮೂರನೇ ಭಾಷೆಯಾಗಿ ಇರುತ್ತದೆ. ಮಕ್ಕಳು ಅದನ್ನು ಕಲಿಯಲು ಇಚ್ಚಿಸದಿದ್ದರೆ ಇತರ ಭಾಷೆಗಳನ್ನು ಕಲಿಯಬಹುದು ಎಂದು ಹೇಳಿತ್ತು. ಇತರ ಭಾಷೆಗಳ ಆಯ್ಕೆಗೆ ತರಗತಿಯಲ್ಲಿ ಕನಿಷ್ಠ 20 ಮಕ್ಕಳು ಇರಬೇಕು ಎಂದು ಷರತ್ತು ವಿಧಿಸಿತ್ತು. ಇದಕ್ಕೂ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹಿಂದಿ ಹೇರಿಕೆಯನ್ನು ಆರೋಪಿಸಿ ಪ್ರತಿಪಕ್ಷ ಶಿವಸೇನೆ(ಯುಬಿಟಿ) ಜುಲೈ 5ರಂದು ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳುವುದಾಗಿ ಘೋಷಿಸಿತ್ತು.

ಎಲ್ಲೆಡೆಯಿಂದ ವಿರೋಧಗಳು ವ್ಯಕ್ತವಾಗುತ್ತಿದ್ದಂತೆ ಜೂನ್ 29 ಭಾನುವಾರ ಸಂಪುಟ ಸಭೆ ನಡೆಸಿದ ಸಿಎಂ ದೇವೇಂದ್ರ ಫಡ್ನವಿಸ್ ವಿವಾದಾತ್ಮಕ ತ್ರಿಭಾಷಾ ನೀತಿ ನಿರ್ಣಯಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ.

ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...