Homeಮುಖಪುಟಜನಾಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ತ್ರಿಭಾಷಾ ನೀತಿ ನಿರ್ಣಯ ರದ್ದು

ಜನಾಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ತ್ರಿಭಾಷಾ ನೀತಿ ನಿರ್ಣಯ ರದ್ದು

- Advertisement -
- Advertisement -

ರಾಜ್ಯಾದ್ಯಂತ ಪ್ರತಿಭಟನೆಗಳ ನಂತರ ಮಹಾರಾಷ್ಟ್ರ ಸರ್ಕಾರ ಭಾನುವಾರ (ಜೂ.29) ಶಾಲೆಗಳಿಗೆ ತ್ರಿಭಾಷಾ ನೀತಿಯ ಕುರಿತ ತನ್ನ ವಿವಾದಾತ್ಮಕ ನಿರ್ಣಯಗಳನ್ನು ಹಿಂತೆಗೆದುಕೊಂಡಿದೆ.

ನೀತಿಯನ್ನು ಪರಿಶೀಲಿಸಲು ಮತ್ತು ಮುಂದಿನ ಹಂತಗಳನ್ನು ಶಿಫಾರಸು ಮಾಡಲು ಹೊಸ ತಜ್ಞರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.

ವಿಜ್ಞಾನಿ ರಘುನಾಥ್ ಮಾಶೇಲ್ಕರ್ ಅವರ ಶಿಫಾರಸುಗಳ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತೃತೀಯ ಭಾಷಾ ನೀತಿಯ ನಿರ್ಧಾರವನ್ನು ಒಪ್ಪಿಕೊಂಡಿದ್ದರು ಎಂದು ಸಿಎಂ ಇದೇ ವೇಳೆ ಹೇಳಿದ್ದಾರೆ.

“ಶಿವಸೇನೆ (ಯುಬಿಟಿ) ಸದಸ್ಯರಲ್ಲಿ ಒಬ್ಬರು ಪ್ರಾಥಮಿಕ ಶಾಲೆಯಿಂದ ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸಲು ಶಿಫಾರಸು ಮಾಡಿದ್ದರು ಮತ್ತು ವಿದ್ಯಾರ್ಥಿಗಳು ಭಾಷೆಗಳನ್ನು ಸರಿಯಾಗಿ ಕಲಿಯಲು ಸಾಧ್ಯವಾಗುವಂತೆ ಪದವಿಯವರೆಗೆ ಮರಾಠಿ, ಇಂಗ್ಲಿಷ್ ಮತ್ತು ಹಿಂದಿಯನ್ನು ಕಡ್ಡಾಯಗೊಳಿಸಬೇಕು” ಎಂದು ಸೂಚಿಸಿದ್ದರು ಎಂದಿದ್ದಾರೆ.

ಆ ಸಮಯದಲ್ಲಿ ಉದ್ಧವ್ ಠಾಕ್ರೆ ಅವರೇ ವರದಿ ಮತ್ತು ಅದರ ಶಿಫಾರಸುಗಳನ್ನು ಜಾರಿಗೆ ತರಲು ಒಪ್ಪಿಕೊಂಡಿದ್ದರು ಎಂದು ಫಡ್ನವೀಸ್ ಹೇಳಿದ್ದಾರೆ.

“ಆದರೆ ಈಗ ಉದ್ಧವ್ ಠಾಕ್ರೆ ತಮ್ಮ ನಿಲುವನ್ನು ಬದಲಾಯಿಸಿದ್ದಾರೆ ಮತ್ತು ಶಾಲೆಗಳಲ್ಲಿ ಮೂರನೇ ಭಾಷೆಯಾಗಿ ಹಿಂದಿಯನ್ನು ವಿರೋಧಿಸುತ್ತಿದ್ದಾರೆ” ಎಂದು ಫಡ್ನವೀಸ್ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ಸರ್ಕಾರವು ವಾಸ್ತವವಾಗಿ ವಿದ್ಯಾರ್ಥಿಗಳು ಶಾಲೆಯಿಂದಲೇ ಮೂರನೇ ಭಾಷೆಯನ್ನು ಕಲಿಯಲು ಅವಕಾಶಗಳನ್ನು ಸೃಷ್ಟಿಸಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಬಹು ಭಾಷೆಗಳನ್ನು ಕಲಿಯಲು ಸರಿಯಾದ ವಯಸ್ಸು ಆಗಿರುವುದರಿಂದ, ರಾಷ್ಟ್ರೀಯ ಶಿಕ್ಷಣ ನೀತಿಯು ಶಾಲಾ ಹಂತದಿಂದಲೇ ಬಹು ಭಾಷೆಗಳನ್ನು ಕಲಿಯುವುದನ್ನು ಪ್ರೋತ್ಸಾಹಿಸುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ.

ಶಾಲೆಗಳಲ್ಲಿ ಯಾವುದೇ ಭಾಷೆಯನ್ನು ಹೇರುವ ಪರವಾಗಿ ಸರ್ಕಾರ ಇಲ್ಲ. ಹಿಂದಿಯನ್ನು ಮೂರನೇ ಭಾಷೆಯಾಗಿ ಕಲಿಸುವ ಬಗ್ಗೆ ಸಂಬಂಧಿತ ಎಲ್ಲರ ಜೊತೆ ಚರ್ಚೆ ಮತ್ತು ಸಮಾಲೋಚನೆ ನಡೆಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ಸರ್ವಾನುಮತದ ನಿರ್ಧಾರವಾಗಿರುತ್ತದೆ” ಎಂದು ಫಡ್ನವೀಸ್ ಸ್ಪಷ್ಟಪಡಿಸಿದ್ದಾರೆ.

ಈ ವಿಷಯದ ಕುರಿತು ಸರ್ಕಾರದ ಜಾಗೃತಿ ಪ್ರಯತ್ನಗಳ ಭಾಗವಾಗಿ ಮಹಾರಾಷ್ಟ್ರ ಶಿಕ್ಷಣ ಸಚಿವ ದಾದಾ ಭೂಸೆ ಅವರು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಭೇಟಿಯಾಗಿದ್ದಾರೆ ಎಂದು ಸಿಎಂ ಫಡ್ನವಿಸ್ ತಿಳಿಸಿದ್ದಾರೆ.

ಶಾಲೆಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಹಾಗಾಗಿ, ಜುಲೈ 5 ರಂದು ಈ ಕ್ರಮದ ವಿರುದ್ಧ ನಡೆಸಲು ಉದ್ದೇಶಿಸಲಾದ ಮೆರವಣಿಗೆಯನ್ನು ರದ್ದುಗೊಳಿಸುವುದು ಈಗ ಠಾಕ್ರೆ ಸಹೋದರರ ಮೇಲಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಶನಿವಾರ ಹೇಳಿದ್ದಾರೆ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್, ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸುವ ಸರ್ಕಾರದ ನಿರ್ಣಯವನ್ನು (ಜಿಆರ್) ರದ್ದುಗೊಳಿಸುವ ಮೂಲಕ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ‘ಬುದ್ಧಿವಂತ ನಿರ್ಧಾರ’ ತೆಗೆದುಕೊಂಡಿದ್ದಾರೆ. ಇದು ‘ಮರಾಠಿ ಏಕತೆಯ ವಿಜಯ’ ಎಂದಿದ್ದಾರೆ.

ಠಾಕ್ರೆ ಸಹೋದರರ ಹೆಚ್ಚುತ್ತಿರುವ ಪ್ರಭಾವ, ಅವರ ಹೊಸ ಏಕತೆ ಮತ್ತು ಜುಲೈ 5ರ ಮೆಗಾ ಮೆರವಣಿಗೆಯ ಸಂಭವನೀಯ ಪರಿಣಾಮವನ್ನು ರಾಜ್ಯ ಸರ್ಕಾರವು ಗ್ರಹಿಸಿದೆ. ಇದು ಮಹಾಯುತಿ ಸರ್ಕಾರವು ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಮಾಡಿದೆ ಎಂದು ರಾವತ್ ಹೇಳಿಕೊಂಡಿದ್ದಾರೆ.

“ನಾವು ಜುಲೈ 5ರ ಮೆರವಣಿಗೆಯನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಠಾಕ್ರೆ ಬ್ರ್ಯಾಂಡ್ ಮತ್ತೊಮ್ಮೆ ದೃಢವಾಗಿ ಪುನಃ ಸ್ಥಾಪಿತವಾಗಿದೆ” ಎಂದಿದ್ದಾರೆ.

ಮುಂಬೈ ಮತ್ತು ಮಹಾರಾಷ್ಟ್ರದ ಇತರ ಭಾಗಗಳಲ್ಲಿ ಶಿವಸೇನೆ (ಯುಬಿಟಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳಲ್ಲಿ ಜೂನ್ 17 ರ ನಿರ್ಣಯದ ಪ್ರತಿಗಳನ್ನು ಸುಟ್ಟುಹಾಕಲಾಗಿತ್ತು. ಪ್ರಾದೇಶಿಕ ಭಾಷೆಗಳ ವೆಚ್ಚದಲ್ಲಿ ಸರ್ಕಾರವು ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷ ಆರೋಪಿಸಿತ್ತು.

“ನಾವು ಸರ್ಕಾರದ ನಿರ್ಣಯದ ಪ್ರತಿಗಳನ್ನು ಸುಟ್ಟು ಹಾಕಿದ್ದೇವೆ. ಅಂದರೆ, ನಾವು ಅದನ್ನು ಸ್ವೀಕರಿಸುವುದಿಲ್ಲ. ನಾವು ಹಿಂದಿಯನ್ನು ವಿರೋಧಿಸುವುದಿಲ್ಲ, ಆದರೆ ಅದರ ಹೇರಿಕೆಯನ್ನು ನಾವು ಅನುಮತಿಸುವುದಿಲ್ಲ. ಸರ್ಕಾರಕ್ಕೆ ನಮ್ಮ ಪ್ರತಿಭಟನೆಯ ಹಿಂದಿನ ಕಾರಣ ಅರ್ಥವಾಗುತ್ತಿಲ್ಲ. ಮರಾಠಿಗೆ ಅನ್ಯಾಯವಾಗಿದೆ. ವಿದ್ಯಾರ್ಥಿಗಳ ಮೇಲೆ ನೀವು ಎಷ್ಟು ಒತ್ತಡ ಹೇರುತ್ತೀರಿ ಎಂಬುದು ಪ್ರಶ್ನೆ” ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಭಾನುವಾರ ಹೇಳಿದ್ದಾರೆ.

“ತ್ರಿಭಾಷಾ ನೀತಿಗೆ ಸಂಬಂಧಿಸಿದ ಎರಡೂ ಸರ್ಕಾರಿ ನಿರ್ಣಯಗಳನ್ನು ರದ್ದುಗೊಳಿಸಲು ನಾವು ನಿರ್ಧರಿಸಿದ್ದೇವೆ” ಎಂದು ಭಾನುವಾರ ಸಂಪುಟ ಸಭೆಯ ನಂತರ ಸಿಎಂ ಫಡ್ನವಿಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಈ ನೀತಿಯನ್ನು ಹೇಗೆ ಜಾರಿಗೆ ತರಬೇಕು ಎಂಬುದನ್ನು ಅಧ್ಯಯನ ಮಾಡಲು ಡಾ. ನರೇಂದ್ರ ಜಾಧವ್ ಅವರ ನೇತೃತ್ವದಲ್ಲಿ ಹೊಸ ಸಮಿತಿಯನ್ನು ರಚಿಸಲಾಗುವುದು. ಇದಕ್ಕೆ ಸಂಬಂಧಿತ ಎಲ್ಲರ ಅಭಿಪ್ರಾಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ನಮಗೆ, ಈ ನೀತಿಯಲ್ಲಿ ಮರಾಠಿ ಕೇಂದ್ರಬಿಂದುವಾಗಿದೆ” ಎಂದು ಸಿಎಂ ಫಡ್ನವಿಸ್ ಹೇಳಿದ್ದಾರೆ.

ತ್ರಿಭಾಷಾ ನೀತಿ ನಿರ್ಣಯ ಮತ್ತು ಜನಾಕ್ರೋಶ

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ 2020ರಲ್ಲಿ ಜಾರಿಗೆ ತಂದಿರುವ ವಿವಾದಾತ್ಮಕ ರಾಷ್ಟ್ರೀಯ ಶಿಕ್ಷಣ ಅಥವಾ ಹೊಸ ಶಿಕ್ಷಣ ನೀತಿಗೆ (ಎನ್‌ಇಪಿ) ಸಂಬಂಧಿಸಿದಂತೆ, ಮಹಾರಾಷ್ಟ್ರದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ 1 ರಿಂದ 5ನೇ ತರಗತಿವರೆಗಿನ ಮಕ್ಕಳು ಮರಾಠಿ, ಇಂಗ್ಲಿಷ್ ಜೊತೆಗೆ ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದನ್ನು ಸರ್ಕಾರ ಕಡ್ಡಾಯ ಮಾಡಿತ್ತು.

ಮೂರನೇ ಭಾಷೆಯಾಗಿ ಹಿಂದಿ ಕಡ್ಡಾಯಗೊಳಿಸಿ ಏಪ್ರಿಲ್ 16, 2025ರಂದು ಸರ್ಕಾರ ನಿರ್ಣಯ ತೆಗೆದುಕೊಂಡಿತ್ತು. ಇದಕ್ಕೆ ಮರಾಠಿ ಸಾಹಿತಿಗಳು, ಭಾಷಾಪರ ಸಂಘಟನೆಗಳು, ವಿರೋಧ ಪಕ್ಷಗಳು ಮತ್ತು ನಾಗರಿಕ ಗುಂಪುಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಸರ್ಕಾರ ಮರಾಠಿ ಭಾಷೆ ಕಲಿಸು ಹಣದಲ್ಲಿ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರತಿಭಟನೆಗೆ ಬೆದರಿದ ಸರ್ಕಾರ ಜೂನ್ 17ರಂದು ನಿರ್ಣಯಕ್ಕೆ ತಿದ್ದುಪಡಿ ತಂದು, ಹಿಂದಿ ಕಡ್ಡಾಯವಲ್ಲ ಮೂರನೇ ಸಾಮಾನ್ಯ ಭಾಷೆಯಾಗಿ ಕಲಿಯಬೇಕು ಎಂದಿತ್ತು. ಅಂದರೆ, ಹಿಂದಿ ಮೂರನೇ ಭಾಷೆಯಾಗಿ ಇರುತ್ತದೆ. ಮಕ್ಕಳು ಅದನ್ನು ಕಲಿಯಲು ಇಚ್ಚಿಸದಿದ್ದರೆ ಇತರ ಭಾಷೆಗಳನ್ನು ಕಲಿಯಬಹುದು ಎಂದು ಹೇಳಿತ್ತು. ಇತರ ಭಾಷೆಗಳ ಆಯ್ಕೆಗೆ ತರಗತಿಯಲ್ಲಿ ಕನಿಷ್ಠ 20 ಮಕ್ಕಳು ಇರಬೇಕು ಎಂದು ಷರತ್ತು ವಿಧಿಸಿತ್ತು. ಇದಕ್ಕೂ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹಿಂದಿ ಹೇರಿಕೆಯನ್ನು ಆರೋಪಿಸಿ ಪ್ರತಿಪಕ್ಷ ಶಿವಸೇನೆ(ಯುಬಿಟಿ) ಜುಲೈ 5ರಂದು ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳುವುದಾಗಿ ಘೋಷಿಸಿತ್ತು.

ಎಲ್ಲೆಡೆಯಿಂದ ವಿರೋಧಗಳು ವ್ಯಕ್ತವಾಗುತ್ತಿದ್ದಂತೆ ಜೂನ್ 29 ಭಾನುವಾರ ಸಂಪುಟ ಸಭೆ ನಡೆಸಿದ ಸಿಎಂ ದೇವೇಂದ್ರ ಫಡ್ನವಿಸ್ ವಿವಾದಾತ್ಮಕ ತ್ರಿಭಾಷಾ ನೀತಿ ನಿರ್ಣಯಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ.

ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...