Homeಮುಖಪುಟಜನಾಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ತ್ರಿಭಾಷಾ ನೀತಿ ನಿರ್ಣಯ ರದ್ದು

ಜನಾಕ್ರೋಶಕ್ಕೆ ಮಣಿದ ಮಹಾರಾಷ್ಟ್ರ ಸರ್ಕಾರ: ತ್ರಿಭಾಷಾ ನೀತಿ ನಿರ್ಣಯ ರದ್ದು

- Advertisement -
- Advertisement -

ರಾಜ್ಯಾದ್ಯಂತ ಪ್ರತಿಭಟನೆಗಳ ನಂತರ ಮಹಾರಾಷ್ಟ್ರ ಸರ್ಕಾರ ಭಾನುವಾರ (ಜೂ.29) ಶಾಲೆಗಳಿಗೆ ತ್ರಿಭಾಷಾ ನೀತಿಯ ಕುರಿತ ತನ್ನ ವಿವಾದಾತ್ಮಕ ನಿರ್ಣಯಗಳನ್ನು ಹಿಂತೆಗೆದುಕೊಂಡಿದೆ.

ನೀತಿಯನ್ನು ಪರಿಶೀಲಿಸಲು ಮತ್ತು ಮುಂದಿನ ಹಂತಗಳನ್ನು ಶಿಫಾರಸು ಮಾಡಲು ಹೊಸ ತಜ್ಞರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.

ವಿಜ್ಞಾನಿ ರಘುನಾಥ್ ಮಾಶೇಲ್ಕರ್ ಅವರ ಶಿಫಾರಸುಗಳ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತೃತೀಯ ಭಾಷಾ ನೀತಿಯ ನಿರ್ಧಾರವನ್ನು ಒಪ್ಪಿಕೊಂಡಿದ್ದರು ಎಂದು ಸಿಎಂ ಇದೇ ವೇಳೆ ಹೇಳಿದ್ದಾರೆ.

“ಶಿವಸೇನೆ (ಯುಬಿಟಿ) ಸದಸ್ಯರಲ್ಲಿ ಒಬ್ಬರು ಪ್ರಾಥಮಿಕ ಶಾಲೆಯಿಂದ ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸಲು ಶಿಫಾರಸು ಮಾಡಿದ್ದರು ಮತ್ತು ವಿದ್ಯಾರ್ಥಿಗಳು ಭಾಷೆಗಳನ್ನು ಸರಿಯಾಗಿ ಕಲಿಯಲು ಸಾಧ್ಯವಾಗುವಂತೆ ಪದವಿಯವರೆಗೆ ಮರಾಠಿ, ಇಂಗ್ಲಿಷ್ ಮತ್ತು ಹಿಂದಿಯನ್ನು ಕಡ್ಡಾಯಗೊಳಿಸಬೇಕು” ಎಂದು ಸೂಚಿಸಿದ್ದರು ಎಂದಿದ್ದಾರೆ.

ಆ ಸಮಯದಲ್ಲಿ ಉದ್ಧವ್ ಠಾಕ್ರೆ ಅವರೇ ವರದಿ ಮತ್ತು ಅದರ ಶಿಫಾರಸುಗಳನ್ನು ಜಾರಿಗೆ ತರಲು ಒಪ್ಪಿಕೊಂಡಿದ್ದರು ಎಂದು ಫಡ್ನವೀಸ್ ಹೇಳಿದ್ದಾರೆ.

“ಆದರೆ ಈಗ ಉದ್ಧವ್ ಠಾಕ್ರೆ ತಮ್ಮ ನಿಲುವನ್ನು ಬದಲಾಯಿಸಿದ್ದಾರೆ ಮತ್ತು ಶಾಲೆಗಳಲ್ಲಿ ಮೂರನೇ ಭಾಷೆಯಾಗಿ ಹಿಂದಿಯನ್ನು ವಿರೋಧಿಸುತ್ತಿದ್ದಾರೆ” ಎಂದು ಫಡ್ನವೀಸ್ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ಸರ್ಕಾರವು ವಾಸ್ತವವಾಗಿ ವಿದ್ಯಾರ್ಥಿಗಳು ಶಾಲೆಯಿಂದಲೇ ಮೂರನೇ ಭಾಷೆಯನ್ನು ಕಲಿಯಲು ಅವಕಾಶಗಳನ್ನು ಸೃಷ್ಟಿಸಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಬಹು ಭಾಷೆಗಳನ್ನು ಕಲಿಯಲು ಸರಿಯಾದ ವಯಸ್ಸು ಆಗಿರುವುದರಿಂದ, ರಾಷ್ಟ್ರೀಯ ಶಿಕ್ಷಣ ನೀತಿಯು ಶಾಲಾ ಹಂತದಿಂದಲೇ ಬಹು ಭಾಷೆಗಳನ್ನು ಕಲಿಯುವುದನ್ನು ಪ್ರೋತ್ಸಾಹಿಸುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ.

ಶಾಲೆಗಳಲ್ಲಿ ಯಾವುದೇ ಭಾಷೆಯನ್ನು ಹೇರುವ ಪರವಾಗಿ ಸರ್ಕಾರ ಇಲ್ಲ. ಹಿಂದಿಯನ್ನು ಮೂರನೇ ಭಾಷೆಯಾಗಿ ಕಲಿಸುವ ಬಗ್ಗೆ ಸಂಬಂಧಿತ ಎಲ್ಲರ ಜೊತೆ ಚರ್ಚೆ ಮತ್ತು ಸಮಾಲೋಚನೆ ನಡೆಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ಸರ್ವಾನುಮತದ ನಿರ್ಧಾರವಾಗಿರುತ್ತದೆ” ಎಂದು ಫಡ್ನವೀಸ್ ಸ್ಪಷ್ಟಪಡಿಸಿದ್ದಾರೆ.

ಈ ವಿಷಯದ ಕುರಿತು ಸರ್ಕಾರದ ಜಾಗೃತಿ ಪ್ರಯತ್ನಗಳ ಭಾಗವಾಗಿ ಮಹಾರಾಷ್ಟ್ರ ಶಿಕ್ಷಣ ಸಚಿವ ದಾದಾ ಭೂಸೆ ಅವರು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಭೇಟಿಯಾಗಿದ್ದಾರೆ ಎಂದು ಸಿಎಂ ಫಡ್ನವಿಸ್ ತಿಳಿಸಿದ್ದಾರೆ.

ಶಾಲೆಗಳಲ್ಲಿ ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಹಾಗಾಗಿ, ಜುಲೈ 5 ರಂದು ಈ ಕ್ರಮದ ವಿರುದ್ಧ ನಡೆಸಲು ಉದ್ದೇಶಿಸಲಾದ ಮೆರವಣಿಗೆಯನ್ನು ರದ್ದುಗೊಳಿಸುವುದು ಈಗ ಠಾಕ್ರೆ ಸಹೋದರರ ಮೇಲಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಶನಿವಾರ ಹೇಳಿದ್ದಾರೆ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್, ಹಿಂದಿಯನ್ನು ಮೂರನೇ ಭಾಷೆಯಾಗಿ ಪರಿಚಯಿಸುವ ಸರ್ಕಾರದ ನಿರ್ಣಯವನ್ನು (ಜಿಆರ್) ರದ್ದುಗೊಳಿಸುವ ಮೂಲಕ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ‘ಬುದ್ಧಿವಂತ ನಿರ್ಧಾರ’ ತೆಗೆದುಕೊಂಡಿದ್ದಾರೆ. ಇದು ‘ಮರಾಠಿ ಏಕತೆಯ ವಿಜಯ’ ಎಂದಿದ್ದಾರೆ.

ಠಾಕ್ರೆ ಸಹೋದರರ ಹೆಚ್ಚುತ್ತಿರುವ ಪ್ರಭಾವ, ಅವರ ಹೊಸ ಏಕತೆ ಮತ್ತು ಜುಲೈ 5ರ ಮೆಗಾ ಮೆರವಣಿಗೆಯ ಸಂಭವನೀಯ ಪರಿಣಾಮವನ್ನು ರಾಜ್ಯ ಸರ್ಕಾರವು ಗ್ರಹಿಸಿದೆ. ಇದು ಮಹಾಯುತಿ ಸರ್ಕಾರವು ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಮಾಡಿದೆ ಎಂದು ರಾವತ್ ಹೇಳಿಕೊಂಡಿದ್ದಾರೆ.

“ನಾವು ಜುಲೈ 5ರ ಮೆರವಣಿಗೆಯನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ. ಠಾಕ್ರೆ ಬ್ರ್ಯಾಂಡ್ ಮತ್ತೊಮ್ಮೆ ದೃಢವಾಗಿ ಪುನಃ ಸ್ಥಾಪಿತವಾಗಿದೆ” ಎಂದಿದ್ದಾರೆ.

ಮುಂಬೈ ಮತ್ತು ಮಹಾರಾಷ್ಟ್ರದ ಇತರ ಭಾಗಗಳಲ್ಲಿ ಶಿವಸೇನೆ (ಯುಬಿಟಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳಲ್ಲಿ ಜೂನ್ 17 ರ ನಿರ್ಣಯದ ಪ್ರತಿಗಳನ್ನು ಸುಟ್ಟುಹಾಕಲಾಗಿತ್ತು. ಪ್ರಾದೇಶಿಕ ಭಾಷೆಗಳ ವೆಚ್ಚದಲ್ಲಿ ಸರ್ಕಾರವು ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷ ಆರೋಪಿಸಿತ್ತು.

“ನಾವು ಸರ್ಕಾರದ ನಿರ್ಣಯದ ಪ್ರತಿಗಳನ್ನು ಸುಟ್ಟು ಹಾಕಿದ್ದೇವೆ. ಅಂದರೆ, ನಾವು ಅದನ್ನು ಸ್ವೀಕರಿಸುವುದಿಲ್ಲ. ನಾವು ಹಿಂದಿಯನ್ನು ವಿರೋಧಿಸುವುದಿಲ್ಲ, ಆದರೆ ಅದರ ಹೇರಿಕೆಯನ್ನು ನಾವು ಅನುಮತಿಸುವುದಿಲ್ಲ. ಸರ್ಕಾರಕ್ಕೆ ನಮ್ಮ ಪ್ರತಿಭಟನೆಯ ಹಿಂದಿನ ಕಾರಣ ಅರ್ಥವಾಗುತ್ತಿಲ್ಲ. ಮರಾಠಿಗೆ ಅನ್ಯಾಯವಾಗಿದೆ. ವಿದ್ಯಾರ್ಥಿಗಳ ಮೇಲೆ ನೀವು ಎಷ್ಟು ಒತ್ತಡ ಹೇರುತ್ತೀರಿ ಎಂಬುದು ಪ್ರಶ್ನೆ” ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಭಾನುವಾರ ಹೇಳಿದ್ದಾರೆ.

“ತ್ರಿಭಾಷಾ ನೀತಿಗೆ ಸಂಬಂಧಿಸಿದ ಎರಡೂ ಸರ್ಕಾರಿ ನಿರ್ಣಯಗಳನ್ನು ರದ್ದುಗೊಳಿಸಲು ನಾವು ನಿರ್ಧರಿಸಿದ್ದೇವೆ” ಎಂದು ಭಾನುವಾರ ಸಂಪುಟ ಸಭೆಯ ನಂತರ ಸಿಎಂ ಫಡ್ನವಿಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಈ ನೀತಿಯನ್ನು ಹೇಗೆ ಜಾರಿಗೆ ತರಬೇಕು ಎಂಬುದನ್ನು ಅಧ್ಯಯನ ಮಾಡಲು ಡಾ. ನರೇಂದ್ರ ಜಾಧವ್ ಅವರ ನೇತೃತ್ವದಲ್ಲಿ ಹೊಸ ಸಮಿತಿಯನ್ನು ರಚಿಸಲಾಗುವುದು. ಇದಕ್ಕೆ ಸಂಬಂಧಿತ ಎಲ್ಲರ ಅಭಿಪ್ರಾಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ನಮಗೆ, ಈ ನೀತಿಯಲ್ಲಿ ಮರಾಠಿ ಕೇಂದ್ರಬಿಂದುವಾಗಿದೆ” ಎಂದು ಸಿಎಂ ಫಡ್ನವಿಸ್ ಹೇಳಿದ್ದಾರೆ.

ತ್ರಿಭಾಷಾ ನೀತಿ ನಿರ್ಣಯ ಮತ್ತು ಜನಾಕ್ರೋಶ

ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ 2020ರಲ್ಲಿ ಜಾರಿಗೆ ತಂದಿರುವ ವಿವಾದಾತ್ಮಕ ರಾಷ್ಟ್ರೀಯ ಶಿಕ್ಷಣ ಅಥವಾ ಹೊಸ ಶಿಕ್ಷಣ ನೀತಿಗೆ (ಎನ್‌ಇಪಿ) ಸಂಬಂಧಿಸಿದಂತೆ, ಮಹಾರಾಷ್ಟ್ರದ ಸರ್ಕಾರಿ ಮತ್ತು ಖಾಸಗಿ ಶಾಲೆಗಳ 1 ರಿಂದ 5ನೇ ತರಗತಿವರೆಗಿನ ಮಕ್ಕಳು ಮರಾಠಿ, ಇಂಗ್ಲಿಷ್ ಜೊತೆಗೆ ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದನ್ನು ಸರ್ಕಾರ ಕಡ್ಡಾಯ ಮಾಡಿತ್ತು.

ಮೂರನೇ ಭಾಷೆಯಾಗಿ ಹಿಂದಿ ಕಡ್ಡಾಯಗೊಳಿಸಿ ಏಪ್ರಿಲ್ 16, 2025ರಂದು ಸರ್ಕಾರ ನಿರ್ಣಯ ತೆಗೆದುಕೊಂಡಿತ್ತು. ಇದಕ್ಕೆ ಮರಾಠಿ ಸಾಹಿತಿಗಳು, ಭಾಷಾಪರ ಸಂಘಟನೆಗಳು, ವಿರೋಧ ಪಕ್ಷಗಳು ಮತ್ತು ನಾಗರಿಕ ಗುಂಪುಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಸರ್ಕಾರ ಮರಾಠಿ ಭಾಷೆ ಕಲಿಸು ಹಣದಲ್ಲಿ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರತಿಭಟನೆಗೆ ಬೆದರಿದ ಸರ್ಕಾರ ಜೂನ್ 17ರಂದು ನಿರ್ಣಯಕ್ಕೆ ತಿದ್ದುಪಡಿ ತಂದು, ಹಿಂದಿ ಕಡ್ಡಾಯವಲ್ಲ ಮೂರನೇ ಸಾಮಾನ್ಯ ಭಾಷೆಯಾಗಿ ಕಲಿಯಬೇಕು ಎಂದಿತ್ತು. ಅಂದರೆ, ಹಿಂದಿ ಮೂರನೇ ಭಾಷೆಯಾಗಿ ಇರುತ್ತದೆ. ಮಕ್ಕಳು ಅದನ್ನು ಕಲಿಯಲು ಇಚ್ಚಿಸದಿದ್ದರೆ ಇತರ ಭಾಷೆಗಳನ್ನು ಕಲಿಯಬಹುದು ಎಂದು ಹೇಳಿತ್ತು. ಇತರ ಭಾಷೆಗಳ ಆಯ್ಕೆಗೆ ತರಗತಿಯಲ್ಲಿ ಕನಿಷ್ಠ 20 ಮಕ್ಕಳು ಇರಬೇಕು ಎಂದು ಷರತ್ತು ವಿಧಿಸಿತ್ತು. ಇದಕ್ಕೂ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹಿಂದಿ ಹೇರಿಕೆಯನ್ನು ಆರೋಪಿಸಿ ಪ್ರತಿಪಕ್ಷ ಶಿವಸೇನೆ(ಯುಬಿಟಿ) ಜುಲೈ 5ರಂದು ಬೃಹತ್ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳುವುದಾಗಿ ಘೋಷಿಸಿತ್ತು.

ಎಲ್ಲೆಡೆಯಿಂದ ವಿರೋಧಗಳು ವ್ಯಕ್ತವಾಗುತ್ತಿದ್ದಂತೆ ಜೂನ್ 29 ಭಾನುವಾರ ಸಂಪುಟ ಸಭೆ ನಡೆಸಿದ ಸಿಎಂ ದೇವೇಂದ್ರ ಫಡ್ನವಿಸ್ ವಿವಾದಾತ್ಮಕ ತ್ರಿಭಾಷಾ ನೀತಿ ನಿರ್ಣಯಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ.

ಸುಳ್ಳು ಸುದ್ದಿ ಪ್ರಸಾರ: ಎರಡು ನ್ಯೂಸ್ ಚಾನೆಲ್‌ಗಳ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...