Homeಮುಖಪುಟಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ...

ಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ ಪೊಲೀಸ್

- Advertisement -
- Advertisement -

ಮುಸ್ಲಿಂ ಎನ್ನುವ ಒಂದೇ ಕಾರಣಕ್ಕೆ ಝೊಮಾಟೊ ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಕೆಲವು ಹಿಂದೂತ್ವವಾದಿ ಗೂಂಡಾಗಳು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿತ್ತು. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಸಂಬಂಧ ಮಹಾರಾಷ್ಟ್ರ ಪೊಲೀಸರು ನಾಲ್ವರು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಾರ್ಚ್ 7ರಂದು ನಾಂದೇಡ್‌ನ ಭಜರಂಗ್ ನಗರದಲ್ಲಿ ಹೋಳಿ ಆಚರಣೆಯ ಸಂದರ್ಭದಲ್ಲಿ ಈ ಘಟನೆ ನಡದಿದೆ. ಕಾನೂನು ವಿದ್ಯಾರ್ಥಿಯಾಗಿರುವ ಅಮ್ರಾನ್ ತಾಂಬೋಲಿ ಎನ್ನುವವರು ಝೊಮಾಟೊದಲ್ಲಿ ಪಾರ್ಟ್‌ಟೈಮ್ ಫುಡ್ ಡೆಲಿವರಿ ಎಕ್ಸಿಕ್ಯೂಟಿವ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಫುಡ್ ಡೆಲಿವರಿ ಮಾಡಲು ಹೋದಾಗ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು, ಭಾನುವಾರ ಎಫ್ಐಆರ್‌ ದಾಖಲಿಸಲಾಗಿದೆ.

”ಭಜರಂಗ್ ನಗರ ಪ್ರದೇಶದಲ್ಲಿ ಫುಡ್ ಡೆಲಿವರ್ ಮಾಡಿದ ಬಳಿಕ ನಾಲ್ವರು ಧರ್ಮದ ಕಾರಣದಿಂದ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ತಾಂಬೋಲಿ ಹೇಳಿಕೊಂಡಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

”ಅವರು ಇದ್ದಕ್ಕಿದ್ದಂತೆ ಬಂದು ದಾಳಿ ಮಾಡಲು ಪ್ರಾರಂಭಿಸಿದರು. ನನಗೆ ಏನನ್ನೂ ಮಾತನಾಡಲು ಅವಕಾಶವನ್ನೇ ನೀಡಲಿಲ್ಲ. ನಾನು ಮುಸ್ಲಿಂ ಎನ್ನುವ ಕಾರಣಕ್ಕೆ ಮನಬಂದಂತೆ ಹಲ್ಲೆ ಮಾಡಿದರು” ಎಂದು ಅವರು ಹೇಳಿದ್ದಾರೆ. ”ಈ ಘಟನೆಯ ನಂತರ, ನನ್ನ ಜೊಮಾಟೊ ತಂಡದ ನಾಯಕ ನನ್ನನ್ನು ಆಸ್ಪತ್ರೆಗೆ ಕರೆದೊಯ್ದರು ಮತ್ತು ಅದೇ ಸಂಜೆ, ನಾನು ದೂರು ನೀಡಲು ಪೊಲೀಸ್ ಠಾಣೆಗೆ ಹೋಗಿದ್ದೆ” ಎಂದು ಅಮ್ರಾನ್ ತಾಂಬೋಲಿ ತಿಳಿಸಿದ್ದಾರೆ.

ಇದನ್ನೂ ಓದಿ:  ದ್ವೇ‍ಷ ಭಾಷಣ: ಮಹಾರಾಷ್ಟ್ರದಲ್ಲಿ ಹಿಂದೂ ಸಂಘಟನೆಗಳಿಂದ ಮುಸ್ಲಿಮರ ಮೇಲೆ ಆರ್ಥಿಕ ಬಹಿಷ್ಕಾರಕ್ಕೆ ಕರೆ

ಈ ಘಟನೆಯು ಸಿಸಿಟಿವಿಯಲ್ಲಿ ದಾಖಲಾಗಿದೆ. ಆ ವಿಡಿಯೋದಲ್ಲಿ ತಾಂಬೋಲಿಯ ಗಡ್ಡಕ್ಕೆ ಬಣ್ಣ ಹಚ್ಚಿ ಹಣೆಗೆ ತಿಲಕವನ್ನು ಬಲವಂತವಾಗಿ ಹಾಕುತ್ತಿದ್ದಾರೆ. ಆ ಬಳಿಕೆ ದೊನ್ನೆಯಿಂದ ಹೊಡೆದು ಅವರ ಮೇಲೆ ಚಪ್ಪಲಿಗಳನ್ನು ಎಸೆಯುತ್ತಿರುವುದ್ನು ದೃಶ್ಯಾವಳಿ ತೋರಿಸುತ್ತದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸಧ್ಯ ಪೊಲೀಸರು ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 323 ಮತ್ತು 324 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಈ ಘಟನೆಯಲ್ಲಿ ಯಾವುದೇ ಕೋಮುವಾದಿ ಅಂಶ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.

”ನಾಲ್ವರು ಆರೋಪಿಗಳು ಕುಡಿದ ಮತ್ತಿನಲ್ಲಿ ಹಲ್ಲೆ ನಡೆಸಿದ್ದಾರೆ. ಆ ದುಷ್ಕರ್ಮಿಗಳನ್ನು ಈಗ ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬರು ನಮ್ಮ ದಾಖಲೆಗಳಲ್ಲಿ ಈಗಾಗಲೇ ಅಪರಾಧಿಯಾಗಿದ್ದಾರೆ. ಮುಂದೆ ನಾವು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುತ್ತೇವೆ” ಎಂದು ಪೊಲೀಸ್ ಅಧೀಕ್ಷಕ ಶ್ರೀಕೃಷ್ಣ ಕೊಕಾಟೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಅಭಿನಾಶ್ ಕುಮಾರ್ ಪತ್ರಿಕೆಗೆ ಮಾತನಾಡಿದ್ದು, ”ಪೊಲೀಸರು ಇನ್ನೂ ಸಾಕ್ಷಿಗಳಿಂದ ವಿವರವಾದ ಹೇಳಿಕೆಗಳನ್ನು ದಾಖಲಿಸಬೇಕಾಗಿದೆ ಮತ್ತು ಜೊಮಾಟೊ ಉದ್ಯೋಗಿಯ ಪೂರಕ ಹೇಳಿಕೆಗಳನ್ನು ಸಂಗ್ರಹಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...