Homeಮುಖಪುಟಮಹಾರಾಷ್ಟ್ರ | 'ಗಡಿಯಾರ' ಚಿಹ್ನೆಯ ಜೊತೆಗೆ 'ವಿಚಾರಣಾಧೀನ' ಎಂದು ಸೇರಿಸುವಂತೆ ಅಜಿತ್ ಪವಾರ್ ಅವರ ಎನ್‌ಸಿಪಿಗೆ...

ಮಹಾರಾಷ್ಟ್ರ | ‘ಗಡಿಯಾರ’ ಚಿಹ್ನೆಯ ಜೊತೆಗೆ ‘ವಿಚಾರಣಾಧೀನ’ ಎಂದು ಸೇರಿಸುವಂತೆ ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸುಪ್ರೀಂಕೋರ್ಟ್‌ ನಿರ್ದೇಶನ

- Advertisement -
- Advertisement -

ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯ ವೇಳೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷ ಬಳಸುವ ‘ಗಡಿಯಾರ’ ಚಿಹ್ನೆಯ ಎಲ್ಲಾ ಪ್ರಚಾರ ಸಾಮಗ್ರಿಗಳಲ್ಲಿ ‘ವಿಚಾರಣಾಧೀನ’ ಎಂದು ಸೂಚನೆ ಸೇರಿಸುವಂತೆ ಸುಪ್ರೀಂಕೋರ್ಟ್ ಗುರುವಾರ ಆದೇಶ ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ರಾಜ್ಯ ಚುನಾವಣೆಯಲ್ಲಿ ಅಜಿತ್ ಪವಾರ್ ಅವರ ಎನ್‌ಸಿಪಿ ಬಣವು ಪಕ್ಷದ ಚಿಹ್ನೆಯಾದ ‘ಗಡಿಯಾರ’ವನ್ನು ಬಳಸದಂತೆ ತಡೆಯಲು ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣವು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಮತದಾರರಲ್ಲಿ ಗೊಂದಲ ಉಂಟಾಗದಂತೆ ಅಜಿತ್ ಪವಾರ್ ಬಣಕ್ಕೆ ಹೊಸ ಚುನಾವಣಾ ಚಿಹ್ನೆ ನೀಡಬೇಕು ಎಂದು ಮನವಿಯಲ್ಲಿ ಶರದ್ ಪವಾರ್ ಅವರ ಬಣವು ಸುಪ್ರೀಂಕೋರ್ಟ್‌ಗೆ ಕೋರಿತ್ತು. ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಸಮ್ಮತತೆ ಮತ್ತು ಸ್ಪಷ್ಟತೆಯ ಅಗತ್ಯವಿದೆ ಎಂದು ಅರ್ಜಿ ವಾದಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023ರ ಜುಲೈ ತಿಂಗಳಲ್ಲಿ ಅಜಿತ್ ಪವಾರ್ ಅವರು ಪಕ್ಷದ ಹಲವಾರು ಶಾಸಕರೊಂದಿಗೆ ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರವನ್ನು ಸೇರಿಕೊಂಡಿದ್ದರು. ಈ ಸರ್ಕಾರ ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವನ್ನು ಒಳಗೊಂಡಿತ್ತು. ಸಮ್ಮಿಶ್ರ ಸರ್ಕಾರಕ್ಕೆ ಸೇರಿದ ನಂತರ ಅಜಿತ್ ಪವಾರ್ ಉಪ ಮುಖ್ಯಮಂತ್ರಿಗಿ ಅಧಿಕಾರ ವಹಿಸಿಕೊಂಡರು.

ಇದರ ನಂತರ ಎನ್‌ಸಿಪಿ ಪಕ್ಷ ವಿಭಜನೆಗೊಂಡು, ಒಂದು ಬಣ ಶರದ್ ಪವಾರ್ ಅವರನ್ನು ಬೆಂಬಲಿಸಿದರೆ, ಮತ್ತೊಂದು ಬಣ ಅಜಿತ್ ಪವಾರ್ ಅವರನ್ನು ಬೆಂಬಲಿಸಿತು.

ಫೆಬ್ರವರಿಯಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ ಎನ್‌ಸಿಪಿ ಎಂದು ಗುರುತಿಸಿ, ಗಡಿಯಾರದ ಚಿಹ್ನೆಯನ್ನು ಅವರಿಗೆ ನಿಗದಿಪಡಿಸಿತು. ಅದೆ ವೇಳೆ ಶರದ್ ಪವಾರ್ ನೇತೃತ್ವದ ಗುಂಪಿಗೆ “ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ – ಶರದ್ಚಂದ್ರ ಪವಾರ್” ಎಂಬ ಹೆಸರನ್ನು ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ “ತುತ್ತೂರು ಊದುವ ವ್ಯಕ್ತಿ” ಚಿಹ್ನೆಯನ್ನು ನಿಗದಿಪಡಿಸಿತ್ತು. ಇದನ್ನು ಶರದ್ ಪವಾರ್ ಬಣ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಮಾರ್ಚ್‌ನಲ್ಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಲೋಕಸಭೆ ಚುನಾವಣೆಗೆ ಗಡಿಯಾರದ ಚಿಹ್ನೆಯನ್ನು ಬಳಸಲು ಅನುಮತಿಸಲಾಗಿದೆ ಎಂದು ಆದೇಶಿಸಿತು.

ಆದಾಗ್ಯೂ, ಚಿಹ್ನೆಯ ಬಳಕೆಯು ವಿಚಾರಣಾಧೀನವಾಗಿದ್ದು, ಅದರ ಬಳಕೆಯು ಪ್ರಕರಣದ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ ಪಕ್ಷವು ದಿನಪತ್ರಿಕೆಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಮರಾಠಿಯಲ್ಲಿ ಸಾರ್ವಜನಿಕ ಸೂಚನೆಯನ್ನು ನೀಡಬೇಕಾಗಿತ್ತು.

ಅಜಿತ್ ಪವಾರ್ ಬಣವು ತಮ್ಮ ಚುನಾವಣಾ ಪ್ರಚಾರ ಸಾಮಗ್ರಿಗಳಲ್ಲಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಗಡಿಯಾರದ ಚಿಹ್ನೆಯ ಬಳಕೆಯನ್ನು ವಿಚಾರಣಾಧೀನ ಎಂದು ನಮೂದಿಸುವಂತೆ ಸೂಚಿಸಲಾಗಿದೆ.

ಗುರುವಾರ, ಶರದ್ ಪವಾರ್ ಬಣವನ್ನು ಪ್ರತಿನಿಧಿಸುವ ವಕೀಲ ಅಭಿಷೇಕ್ ಸಿಂಘ್ವಿ, ವಿಚಾರಣಾಧೀನ ಚಿಹ್ನೆಯಿಂದ ಯಾವುದೇ ಬಣ ಪ್ರಯೋಜನ ಪಡೆಯಬಾರದು ಎಂದು ವಾದಿಸಿದರು. ಅಜಿತ್ ಪವಾರ್ ಬಣ ತನ್ನ ಪ್ರಚಾರ ಸಾಮಗ್ರಿಯಲ್ಲಿ ಅಗತ್ಯ ಸೂಚನೆಯನ್ನು ಸೇರಿಸುತ್ತಿಲ್ಲ ಎಂದು ಆರೋಪಿಸಿದ್ದರು.

ನ್ಯಾಯಾಲಯದ ಷರತ್ತುಗಳನ್ನು ಅನುಸರಿಸದ ಕಾರಣ, ಗಡಿಯಾರದ ಚಿಹ್ನೆಯನ್ನು ಬಳಸದಂತೆ ತಡೆಯಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದು, ಅದಕ್ಕಾಗಿ ಅಜಿತ್ ಪವಾರ್ ಅವರ ಬಣದ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡ ಪ್ರಚಾರ ಪೋಸ್ಟರ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ನ್ಯಾಯಾಲಯದಲ್ಲಿ ತೋರಿಸಿದ್ದಾರೆ.

ಆದರೆ ಅಜಿತ್ ಪವಾರ್ ಗುಂಪಿನ ಪರ ಹಾಜರಾದ ವಕೀಲ ಬಲ್ಬೀರ್ ಸಿಂಗ್ ಆರೋಪವನ್ನು ತಳ್ಳಿಹಾಕಿದ್ದಾರೆ. ಎಲ್ಲಾ ಕರಪತ್ರಗಳು ಮತ್ತು ಪ್ರಚಾರ ಸಾಮಗ್ರಿಗಳಲ್ಲಿ ಅಗತ್ಯ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಸಾಮಾಗ್ರಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಮಯಾವಕಾಶ ಕೋರಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಹಿಂದಿನ ಆದೇಶಗಳನ್ನು ಪಾಲಿಸಲಾಗುವುದು ಎಂದು ದೃಢಪಡಿಸುವ ಭರವಸೆಯನ್ನು ನೀಡುವಂತೆ ಅಜಿತ್ ಪವಾರ್ ಬಣಕ್ಕೆ ನ್ಯಾಯಾಲಯ ಆದೇಶಿಸಿದೆ. ತನ್ನ ಆದೇಶಗಳನ್ನು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ ಪೀಠ, ಮುಂದಿನ ವಿಚಾರಣೆಯನ್ನು ನವೆಂಬರ್ 6ಕ್ಕೆ ನಿಗದಿಪಡಿಸಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...