Homeಮುಖಪುಟಮಹಾರಾಷ್ಟ್ರ | 'ಗಡಿಯಾರ' ಚಿಹ್ನೆಯ ಜೊತೆಗೆ 'ವಿಚಾರಣಾಧೀನ' ಎಂದು ಸೇರಿಸುವಂತೆ ಅಜಿತ್ ಪವಾರ್ ಅವರ ಎನ್‌ಸಿಪಿಗೆ...

ಮಹಾರಾಷ್ಟ್ರ | ‘ಗಡಿಯಾರ’ ಚಿಹ್ನೆಯ ಜೊತೆಗೆ ‘ವಿಚಾರಣಾಧೀನ’ ಎಂದು ಸೇರಿಸುವಂತೆ ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸುಪ್ರೀಂಕೋರ್ಟ್‌ ನಿರ್ದೇಶನ

- Advertisement -
- Advertisement -

ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯ ವೇಳೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷ ಬಳಸುವ ‘ಗಡಿಯಾರ’ ಚಿಹ್ನೆಯ ಎಲ್ಲಾ ಪ್ರಚಾರ ಸಾಮಗ್ರಿಗಳಲ್ಲಿ ‘ವಿಚಾರಣಾಧೀನ’ ಎಂದು ಸೂಚನೆ ಸೇರಿಸುವಂತೆ ಸುಪ್ರೀಂಕೋರ್ಟ್ ಗುರುವಾರ ಆದೇಶ ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ರಾಜ್ಯ ಚುನಾವಣೆಯಲ್ಲಿ ಅಜಿತ್ ಪವಾರ್ ಅವರ ಎನ್‌ಸಿಪಿ ಬಣವು ಪಕ್ಷದ ಚಿಹ್ನೆಯಾದ ‘ಗಡಿಯಾರ’ವನ್ನು ಬಳಸದಂತೆ ತಡೆಯಲು ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣವು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಮತದಾರರಲ್ಲಿ ಗೊಂದಲ ಉಂಟಾಗದಂತೆ ಅಜಿತ್ ಪವಾರ್ ಬಣಕ್ಕೆ ಹೊಸ ಚುನಾವಣಾ ಚಿಹ್ನೆ ನೀಡಬೇಕು ಎಂದು ಮನವಿಯಲ್ಲಿ ಶರದ್ ಪವಾರ್ ಅವರ ಬಣವು ಸುಪ್ರೀಂಕೋರ್ಟ್‌ಗೆ ಕೋರಿತ್ತು. ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಸಮ್ಮತತೆ ಮತ್ತು ಸ್ಪಷ್ಟತೆಯ ಅಗತ್ಯವಿದೆ ಎಂದು ಅರ್ಜಿ ವಾದಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023ರ ಜುಲೈ ತಿಂಗಳಲ್ಲಿ ಅಜಿತ್ ಪವಾರ್ ಅವರು ಪಕ್ಷದ ಹಲವಾರು ಶಾಸಕರೊಂದಿಗೆ ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರವನ್ನು ಸೇರಿಕೊಂಡಿದ್ದರು. ಈ ಸರ್ಕಾರ ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವನ್ನು ಒಳಗೊಂಡಿತ್ತು. ಸಮ್ಮಿಶ್ರ ಸರ್ಕಾರಕ್ಕೆ ಸೇರಿದ ನಂತರ ಅಜಿತ್ ಪವಾರ್ ಉಪ ಮುಖ್ಯಮಂತ್ರಿಗಿ ಅಧಿಕಾರ ವಹಿಸಿಕೊಂಡರು.

ಇದರ ನಂತರ ಎನ್‌ಸಿಪಿ ಪಕ್ಷ ವಿಭಜನೆಗೊಂಡು, ಒಂದು ಬಣ ಶರದ್ ಪವಾರ್ ಅವರನ್ನು ಬೆಂಬಲಿಸಿದರೆ, ಮತ್ತೊಂದು ಬಣ ಅಜಿತ್ ಪವಾರ್ ಅವರನ್ನು ಬೆಂಬಲಿಸಿತು.

ಫೆಬ್ರವರಿಯಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ ಎನ್‌ಸಿಪಿ ಎಂದು ಗುರುತಿಸಿ, ಗಡಿಯಾರದ ಚಿಹ್ನೆಯನ್ನು ಅವರಿಗೆ ನಿಗದಿಪಡಿಸಿತು. ಅದೆ ವೇಳೆ ಶರದ್ ಪವಾರ್ ನೇತೃತ್ವದ ಗುಂಪಿಗೆ “ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ – ಶರದ್ಚಂದ್ರ ಪವಾರ್” ಎಂಬ ಹೆಸರನ್ನು ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ “ತುತ್ತೂರು ಊದುವ ವ್ಯಕ್ತಿ” ಚಿಹ್ನೆಯನ್ನು ನಿಗದಿಪಡಿಸಿತ್ತು. ಇದನ್ನು ಶರದ್ ಪವಾರ್ ಬಣ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಮಾರ್ಚ್‌ನಲ್ಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಲೋಕಸಭೆ ಚುನಾವಣೆಗೆ ಗಡಿಯಾರದ ಚಿಹ್ನೆಯನ್ನು ಬಳಸಲು ಅನುಮತಿಸಲಾಗಿದೆ ಎಂದು ಆದೇಶಿಸಿತು.

ಆದಾಗ್ಯೂ, ಚಿಹ್ನೆಯ ಬಳಕೆಯು ವಿಚಾರಣಾಧೀನವಾಗಿದ್ದು, ಅದರ ಬಳಕೆಯು ಪ್ರಕರಣದ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ ಪಕ್ಷವು ದಿನಪತ್ರಿಕೆಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಮರಾಠಿಯಲ್ಲಿ ಸಾರ್ವಜನಿಕ ಸೂಚನೆಯನ್ನು ನೀಡಬೇಕಾಗಿತ್ತು.

ಅಜಿತ್ ಪವಾರ್ ಬಣವು ತಮ್ಮ ಚುನಾವಣಾ ಪ್ರಚಾರ ಸಾಮಗ್ರಿಗಳಲ್ಲಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಗಡಿಯಾರದ ಚಿಹ್ನೆಯ ಬಳಕೆಯನ್ನು ವಿಚಾರಣಾಧೀನ ಎಂದು ನಮೂದಿಸುವಂತೆ ಸೂಚಿಸಲಾಗಿದೆ.

ಗುರುವಾರ, ಶರದ್ ಪವಾರ್ ಬಣವನ್ನು ಪ್ರತಿನಿಧಿಸುವ ವಕೀಲ ಅಭಿಷೇಕ್ ಸಿಂಘ್ವಿ, ವಿಚಾರಣಾಧೀನ ಚಿಹ್ನೆಯಿಂದ ಯಾವುದೇ ಬಣ ಪ್ರಯೋಜನ ಪಡೆಯಬಾರದು ಎಂದು ವಾದಿಸಿದರು. ಅಜಿತ್ ಪವಾರ್ ಬಣ ತನ್ನ ಪ್ರಚಾರ ಸಾಮಗ್ರಿಯಲ್ಲಿ ಅಗತ್ಯ ಸೂಚನೆಯನ್ನು ಸೇರಿಸುತ್ತಿಲ್ಲ ಎಂದು ಆರೋಪಿಸಿದ್ದರು.

ನ್ಯಾಯಾಲಯದ ಷರತ್ತುಗಳನ್ನು ಅನುಸರಿಸದ ಕಾರಣ, ಗಡಿಯಾರದ ಚಿಹ್ನೆಯನ್ನು ಬಳಸದಂತೆ ತಡೆಯಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದು, ಅದಕ್ಕಾಗಿ ಅಜಿತ್ ಪವಾರ್ ಅವರ ಬಣದ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡ ಪ್ರಚಾರ ಪೋಸ್ಟರ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ನ್ಯಾಯಾಲಯದಲ್ಲಿ ತೋರಿಸಿದ್ದಾರೆ.

ಆದರೆ ಅಜಿತ್ ಪವಾರ್ ಗುಂಪಿನ ಪರ ಹಾಜರಾದ ವಕೀಲ ಬಲ್ಬೀರ್ ಸಿಂಗ್ ಆರೋಪವನ್ನು ತಳ್ಳಿಹಾಕಿದ್ದಾರೆ. ಎಲ್ಲಾ ಕರಪತ್ರಗಳು ಮತ್ತು ಪ್ರಚಾರ ಸಾಮಗ್ರಿಗಳಲ್ಲಿ ಅಗತ್ಯ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಸಾಮಾಗ್ರಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಮಯಾವಕಾಶ ಕೋರಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಹಿಂದಿನ ಆದೇಶಗಳನ್ನು ಪಾಲಿಸಲಾಗುವುದು ಎಂದು ದೃಢಪಡಿಸುವ ಭರವಸೆಯನ್ನು ನೀಡುವಂತೆ ಅಜಿತ್ ಪವಾರ್ ಬಣಕ್ಕೆ ನ್ಯಾಯಾಲಯ ಆದೇಶಿಸಿದೆ. ತನ್ನ ಆದೇಶಗಳನ್ನು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ ಪೀಠ, ಮುಂದಿನ ವಿಚಾರಣೆಯನ್ನು ನವೆಂಬರ್ 6ಕ್ಕೆ ನಿಗದಿಪಡಿಸಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...