Homeಮುಖಪುಟಮಹಾರಾಷ್ಟ್ರ | 'ಗಡಿಯಾರ' ಚಿಹ್ನೆಯ ಜೊತೆಗೆ 'ವಿಚಾರಣಾಧೀನ' ಎಂದು ಸೇರಿಸುವಂತೆ ಅಜಿತ್ ಪವಾರ್ ಅವರ ಎನ್‌ಸಿಪಿಗೆ...

ಮಹಾರಾಷ್ಟ್ರ | ‘ಗಡಿಯಾರ’ ಚಿಹ್ನೆಯ ಜೊತೆಗೆ ‘ವಿಚಾರಣಾಧೀನ’ ಎಂದು ಸೇರಿಸುವಂತೆ ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸುಪ್ರೀಂಕೋರ್ಟ್‌ ನಿರ್ದೇಶನ

- Advertisement -
- Advertisement -

ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯ ವೇಳೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷ ಬಳಸುವ ‘ಗಡಿಯಾರ’ ಚಿಹ್ನೆಯ ಎಲ್ಲಾ ಪ್ರಚಾರ ಸಾಮಗ್ರಿಗಳಲ್ಲಿ ‘ವಿಚಾರಣಾಧೀನ’ ಎಂದು ಸೂಚನೆ ಸೇರಿಸುವಂತೆ ಸುಪ್ರೀಂಕೋರ್ಟ್ ಗುರುವಾರ ಆದೇಶ ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ರಾಜ್ಯ ಚುನಾವಣೆಯಲ್ಲಿ ಅಜಿತ್ ಪವಾರ್ ಅವರ ಎನ್‌ಸಿಪಿ ಬಣವು ಪಕ್ಷದ ಚಿಹ್ನೆಯಾದ ‘ಗಡಿಯಾರ’ವನ್ನು ಬಳಸದಂತೆ ತಡೆಯಲು ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣವು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಮತದಾರರಲ್ಲಿ ಗೊಂದಲ ಉಂಟಾಗದಂತೆ ಅಜಿತ್ ಪವಾರ್ ಬಣಕ್ಕೆ ಹೊಸ ಚುನಾವಣಾ ಚಿಹ್ನೆ ನೀಡಬೇಕು ಎಂದು ಮನವಿಯಲ್ಲಿ ಶರದ್ ಪವಾರ್ ಅವರ ಬಣವು ಸುಪ್ರೀಂಕೋರ್ಟ್‌ಗೆ ಕೋರಿತ್ತು. ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಸಮ್ಮತತೆ ಮತ್ತು ಸ್ಪಷ್ಟತೆಯ ಅಗತ್ಯವಿದೆ ಎಂದು ಅರ್ಜಿ ವಾದಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023ರ ಜುಲೈ ತಿಂಗಳಲ್ಲಿ ಅಜಿತ್ ಪವಾರ್ ಅವರು ಪಕ್ಷದ ಹಲವಾರು ಶಾಸಕರೊಂದಿಗೆ ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರವನ್ನು ಸೇರಿಕೊಂಡಿದ್ದರು. ಈ ಸರ್ಕಾರ ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವನ್ನು ಒಳಗೊಂಡಿತ್ತು. ಸಮ್ಮಿಶ್ರ ಸರ್ಕಾರಕ್ಕೆ ಸೇರಿದ ನಂತರ ಅಜಿತ್ ಪವಾರ್ ಉಪ ಮುಖ್ಯಮಂತ್ರಿಗಿ ಅಧಿಕಾರ ವಹಿಸಿಕೊಂಡರು.

ಇದರ ನಂತರ ಎನ್‌ಸಿಪಿ ಪಕ್ಷ ವಿಭಜನೆಗೊಂಡು, ಒಂದು ಬಣ ಶರದ್ ಪವಾರ್ ಅವರನ್ನು ಬೆಂಬಲಿಸಿದರೆ, ಮತ್ತೊಂದು ಬಣ ಅಜಿತ್ ಪವಾರ್ ಅವರನ್ನು ಬೆಂಬಲಿಸಿತು.

ಫೆಬ್ರವರಿಯಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ ಎನ್‌ಸಿಪಿ ಎಂದು ಗುರುತಿಸಿ, ಗಡಿಯಾರದ ಚಿಹ್ನೆಯನ್ನು ಅವರಿಗೆ ನಿಗದಿಪಡಿಸಿತು. ಅದೆ ವೇಳೆ ಶರದ್ ಪವಾರ್ ನೇತೃತ್ವದ ಗುಂಪಿಗೆ “ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ – ಶರದ್ಚಂದ್ರ ಪವಾರ್” ಎಂಬ ಹೆಸರನ್ನು ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ “ತುತ್ತೂರು ಊದುವ ವ್ಯಕ್ತಿ” ಚಿಹ್ನೆಯನ್ನು ನಿಗದಿಪಡಿಸಿತ್ತು. ಇದನ್ನು ಶರದ್ ಪವಾರ್ ಬಣ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಮಾರ್ಚ್‌ನಲ್ಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಲೋಕಸಭೆ ಚುನಾವಣೆಗೆ ಗಡಿಯಾರದ ಚಿಹ್ನೆಯನ್ನು ಬಳಸಲು ಅನುಮತಿಸಲಾಗಿದೆ ಎಂದು ಆದೇಶಿಸಿತು.

ಆದಾಗ್ಯೂ, ಚಿಹ್ನೆಯ ಬಳಕೆಯು ವಿಚಾರಣಾಧೀನವಾಗಿದ್ದು, ಅದರ ಬಳಕೆಯು ಪ್ರಕರಣದ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ ಪಕ್ಷವು ದಿನಪತ್ರಿಕೆಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಮರಾಠಿಯಲ್ಲಿ ಸಾರ್ವಜನಿಕ ಸೂಚನೆಯನ್ನು ನೀಡಬೇಕಾಗಿತ್ತು.

ಅಜಿತ್ ಪವಾರ್ ಬಣವು ತಮ್ಮ ಚುನಾವಣಾ ಪ್ರಚಾರ ಸಾಮಗ್ರಿಗಳಲ್ಲಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಗಡಿಯಾರದ ಚಿಹ್ನೆಯ ಬಳಕೆಯನ್ನು ವಿಚಾರಣಾಧೀನ ಎಂದು ನಮೂದಿಸುವಂತೆ ಸೂಚಿಸಲಾಗಿದೆ.

ಗುರುವಾರ, ಶರದ್ ಪವಾರ್ ಬಣವನ್ನು ಪ್ರತಿನಿಧಿಸುವ ವಕೀಲ ಅಭಿಷೇಕ್ ಸಿಂಘ್ವಿ, ವಿಚಾರಣಾಧೀನ ಚಿಹ್ನೆಯಿಂದ ಯಾವುದೇ ಬಣ ಪ್ರಯೋಜನ ಪಡೆಯಬಾರದು ಎಂದು ವಾದಿಸಿದರು. ಅಜಿತ್ ಪವಾರ್ ಬಣ ತನ್ನ ಪ್ರಚಾರ ಸಾಮಗ್ರಿಯಲ್ಲಿ ಅಗತ್ಯ ಸೂಚನೆಯನ್ನು ಸೇರಿಸುತ್ತಿಲ್ಲ ಎಂದು ಆರೋಪಿಸಿದ್ದರು.

ನ್ಯಾಯಾಲಯದ ಷರತ್ತುಗಳನ್ನು ಅನುಸರಿಸದ ಕಾರಣ, ಗಡಿಯಾರದ ಚಿಹ್ನೆಯನ್ನು ಬಳಸದಂತೆ ತಡೆಯಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದು, ಅದಕ್ಕಾಗಿ ಅಜಿತ್ ಪವಾರ್ ಅವರ ಬಣದ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡ ಪ್ರಚಾರ ಪೋಸ್ಟರ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ನ್ಯಾಯಾಲಯದಲ್ಲಿ ತೋರಿಸಿದ್ದಾರೆ.

ಆದರೆ ಅಜಿತ್ ಪವಾರ್ ಗುಂಪಿನ ಪರ ಹಾಜರಾದ ವಕೀಲ ಬಲ್ಬೀರ್ ಸಿಂಗ್ ಆರೋಪವನ್ನು ತಳ್ಳಿಹಾಕಿದ್ದಾರೆ. ಎಲ್ಲಾ ಕರಪತ್ರಗಳು ಮತ್ತು ಪ್ರಚಾರ ಸಾಮಗ್ರಿಗಳಲ್ಲಿ ಅಗತ್ಯ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಸಾಮಾಗ್ರಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಮಯಾವಕಾಶ ಕೋರಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಹಿಂದಿನ ಆದೇಶಗಳನ್ನು ಪಾಲಿಸಲಾಗುವುದು ಎಂದು ದೃಢಪಡಿಸುವ ಭರವಸೆಯನ್ನು ನೀಡುವಂತೆ ಅಜಿತ್ ಪವಾರ್ ಬಣಕ್ಕೆ ನ್ಯಾಯಾಲಯ ಆದೇಶಿಸಿದೆ. ತನ್ನ ಆದೇಶಗಳನ್ನು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ ಪೀಠ, ಮುಂದಿನ ವಿಚಾರಣೆಯನ್ನು ನವೆಂಬರ್ 6ಕ್ಕೆ ನಿಗದಿಪಡಿಸಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...