Homeಕರೋನಾ ತಲ್ಲಣಮಹಾರಾಷ್ಟ್ರದ ಮೊದಲ ಒಮೈಕ್ರಾನ್‌ ರೋಗಿ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

ಮಹಾರಾಷ್ಟ್ರದ ಮೊದಲ ಒಮೈಕ್ರಾನ್‌ ರೋಗಿ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಪತ್ತೆಯಾದ ಮೊದಲ ಒಮೈಕ್ರಾನ್‌ ಸೋಂಕಿತ 33 ವರ್ಷದ ಮೆರೈನ್ ಎಂಜಿನಿಯರ್ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ. ಅವರ ಕೊರೊನಾ ಪರೀಕ್ಷೆಯು ನೆಗೆಟಿವ್‌ ಬಂದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಇಂದು ವರದಿ ಮಾಡಿದೆ. ಮುಂಬೈ ಸಮೀಪದ ಕಲ್ಯಾಣ್-ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ ನಿವಾಸಿಯಾಗಿರುವ ವ್ಯಕ್ತಿಯು ಕೊರೊನಾ ಲಸಿಕೆಯನ್ನು ಪಡೆದಿರಲಿಲ್ಲ.

ನವೆಂಬರ್ ಕೊನೆಯ ವಾರದಲ್ಲಿ ಮುಂಬೈಗೆ ತಲುಪುವ ಮೊದಲು ಅವರು ದಕ್ಷಿಣ ಆಫ್ರಿಕಾದಿಂದ ದುಬೈ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಅವರನ್ನು ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಏಳು ದಿನಗಳ ಕಾಲ ಹೋಮ್ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರು ಲಸಿಕೆ ಪಡೆದುಕೊಳ್ಳಲು ಪ್ರಯತ್ನಿಸಿದ್ದರಾದರೂ, ಖಾಸಗಿ ವ್ಯಾಪಾರಿ ಹಡಗಿನಲ್ಲಿ ಕೆಲಸ ಮಾಡುತ್ತಿದ್ದರಿಂದ ಅವರಿಗೆ ಅದು ಸಾಧ್ಯವಾಗಿರಲಿಲ್ಲ. ಈ ವರ್ಷದ ಏಪ್ರಿಲ್‌ನಲ್ಲಿ ಅವರು ಭಾರತದಿಂದ ತೆರಳಿದ್ದರು. ಆ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು ಮುಂಚೂಣಿ ಕೆಲಸಗಾರರಿಗೆ ಮಾತ್ರ ಕೊರೊನಾ ಲಸಿಕೆ ಲಭ್ಯವಿತ್ತು.

ಇದನ್ನೂ ಓದಿ:ಮಾರ್ಚ್‌ ಹೊತ್ತಿಗೆ ಮಹಾರಾಷ್ಟ್ರದಲ್ಲಿ BJP ಸರ್ಕಾರ ರಚಿಸಲಿದೆ: ಒಕ್ಕೂಟ ಸರ್ಕಾರದ ಸಚಿವ

ಮಹಾರಾಷ್ಟ್ರದಲ್ಲಿ ಆರೋಗ್ಯ ಅಧಿಕಾರಿಗಳು ಅವರ ಸ್ವ್ಯಾಬ್ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದರು. ಪರೀಕ್ಷಾ ವರದಿಯಲ್ಲಿ ಅವರಿಗೆ ಒಮೈಕ್ರಾನ್‌ ಸೋಂಕಿರುವುದು ದೃಢವಾಗಿತ್ತು. ನಂತರ ಅವರನ್ನು ಕಲ್ಯಾಣ್ ಪಟ್ಟಣದ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗಿತ್ತು. ಅಲ್ಲಿಂದ ಅವರನ್ನು ಬುಧವಾರ ಸಂಜೆ 6 ಗಂಟೆಗೆ ಬಿಡುಗಡೆ ಮಾಡಲಾಗಿದೆ ಎಂದು ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಕಾರ್ಪೊರೇಷನ್ (ಕೆಡಿಎಂಸಿ) ಆಯುಕ್ತ ಡಾ. ವಿಜಯ್ ಸೂರ್ಯವಂಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ. “ಕಾಕತಾಳಿಯವಾಗಿ, ಇಂದು ಅವರ ಜನ್ಮದಿನವಾಗಿತ್ತು” ಎಂದು ಆಯುಕ್ತರು ಹೇಳಿದ್ದಾರೆ.

“ಅವರ ಪರಿಕ್ಷಾ ವರದಿ ನೆಗೆಟಿವ್‌ ಬಂದಿರುವುದರಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. ಸ್ಟ್ಯಾಂಡರ್ಡ್ ಪ್ರೋಟೋಕಾಲ್ ಪ್ರಕಾರ, ಅವರ ಎರಡು ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಯಿತು, ಅವು ಎರಡರಲ್ಲೂ ನೆಗೆಟಿವ್ ಬಂದಿದೆ. ಈಗ ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಮತ್ತು ಯಾವುದೇ ರೋಗಲಕ್ಷಣಗಳಿಲ್ಲ” ಎಂದು ಆಯುಕ್ತರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಇದುವರೆಗೆ 10 ಒಮಿಕ್ರಾನ್ ರೂಪಾಂತರದ ಪ್ರಕರಣಗಳು ವರದಿ ಆಗಿದೆ.

ಅಂತರಾಷ್ಟ್ರೀಯ ಪ್ರಯಾಣಿಕರಿಗೆ, ವಿಶೇಷವಾಗಿ “ಅಪಾಯದಲ್ಲಿರುವ” ದೇಶಗಳಿಂದ ಬರುವ ಪ್ರಯಾಣಿಕರಿಗೆ ಮಹಾರಾಷ್ಟ್ರವು ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಚಿವ ಆದಿತ್ಯ ಠಾಕ್ರೆ ಅವರು ಬೂಸ್ಟರ್ ಶಾಟ್‌ಗಳನ್ನು ಅನುಮತಿಸಲು, ಲಸಿಕೆ ಅಂತರವನ್ನು ಕಡಿಮೆ ಮಾಡಲು ಮತ್ತು ಲಸಿಕೆಗಳ ಕಟ್-ಆಫ್ ವಯಸ್ಸನ್ನು 15 ಕ್ಕೆ ಇಳಿಸಲು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....