Homeಮುಖಪುಟಮಹಾರಾಷ್ಟ್ರ | ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಸೇರಲು ಇಬ್ಬರು ಶಾಸಕರಿಗೆ ಕೋಟ್ಯಾಂತರ ರೂ. ಆಮಿಷ...

ಮಹಾರಾಷ್ಟ್ರ | ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಸೇರಲು ಇಬ್ಬರು ಶಾಸಕರಿಗೆ ಕೋಟ್ಯಾಂತರ ರೂ. ಆಮಿಷ : ಕಾಂಗ್ರೆಸ್ ಆರೋಪ

- Advertisement -
- Advertisement -

ಚುನಾವಣಾ ಹೊಸ್ತಿಲಲ್ಲಿರುವ ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಸೇರಲು ಇಬ್ಬರು ಶಾಸಕರಿಗೆ ಕೋಟ್ಯಾಂತರ ರೂಪಾಯಿ ಹಣದ ಆಮಿಷ ಒಡ್ಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಗಂಭೀರ ಆರೋಪ ಮಾಡಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಅಜಿತ್ ಪವಾರ್ ನೇತೃತ್ವ ಎನ್‌ಸಿಪಿ ಸೇರಲು ಇಬ್ಬರು ಶಾಸಕರಿಗೆ ಕೋಟ್ಯಾಂತ ರೂಪಾಯಿ ಹಣದ ಆಮಿಷವೊಡ್ಡಿರುವ ವರದಿಗಳು ಲಭ್ಯವಾಗಿದೆ. ಇದು ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಬರುತ್ತದೆ. ಗೃಹ ಖಾತೆಯ ಹೊಣೆ ಹೊತ್ತಿರುವ ಸಿಎಂ ಮೌನವಾಗಿರುವುದೇಕೆ? ಏನಾಗಿದೆ ಎಂಬುವುದನ್ನು ಜನರಿಗೆ ತಿಳಿಸುವ ಜವಾಬ್ದಾರಿ ಸಿಎಂ ಮೇಲಿದೆ” ಎಂದಿದ್ದಾರೆ.

ಪಕ್ಷಾಂತರ ಮಾಡಲು ಹಣದ ಆಮಿಷವೊಡ್ಡುವುದು ಮತ್ತು ಅದನ್ನು ಸ್ವೀಕರಿಸುವುದು ಕ್ರಿಮಿನಲ್ ಚಟುವಟಿಕೆಯಾಗಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್‌ ಉಸ್ತುವಾರಿಯೂ ಆಗಿರುವ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ. ಈ ಆರೋಪದ ಬಗ್ಗೆ ಅಜಿತ್ ಪವಾರ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನವೆಂಬರ್ 20ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ, ಆಡಳಿತರೂಢ ಮಹಾಯುತಿ ಮತ್ತು ಪ್ರತಿಪಕ್ಷಗಳ ಮಹಾ ವಿಕಾಸ್ ಅಘಾಡಿಯ ನಾಯಕರ ನಡುವೆ ನಡೆಯುತ್ತಿರುವ ವಾಗ್ವಾದ ನಡುವೆ ಚೆನ್ನಿತ್ತಲ ಅವರ ಆರೋಪ ಕೇಳಿ ಬಂದಿದೆ.

ಮಹಾರಾಷ್ಟ್ರದಲ್ಲಿ ಆಡಳಿತರೂಢ ಪಕ್ಷಗಳಾದ ಬಿಜೆಪಿ, ಶಿವಸೇನೆ (ಸಿಎಂ ಶಿಂಧೆ ಬಣ) ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಸೇರಿ ಮಹಾಯುತಿ ಒಕ್ಕೂಟ ಮಾಡಿಕೊಂಡಿದೆ. ಇದೇ ರೀತಿ ಪ್ರತಿ ಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಉದ್ದವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್ ಬಣ) ಸೇರಿ ಮಹಾ ವಿಕಾಸ್ ಆಘಾಡಿ ರಚಿಸಿಕೊಂಡಿವೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಎಲ್ಲಾ 288 ಕ್ಷೇತ್ರಗಳ ಮತ ಎಣಿಕೆ ನವೆಂಬರ್ 23 ರಂದು ನಡೆಯಲಿದೆ. 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56, ಕಾಂಗ್ರೆಸ್ 44. 2014ರಲ್ಲಿ ಬಿಜೆಪಿ 122, ಶಿವಸೇನೆ 63, ಕಾಂಗ್ರೆಸ್ 42 ಸ್ಥಾನ ಗಳಿಸಿತ್ತು. ಆದರೆ, ಈ ಬಾರಿ ಶಿವಸೇನೆ ಮತ್ತು ಎನ್‌ಸಿಪಿ ಪಕ್ಷಗಳು ಎರಡೆರಡು ಬಣಗಳಾಗಿ ವಿಭಜನೆಗೊಂಡಿವೆ. ಆದ್ದರಿಂದ ಚುನಾವಣೆ ಕಣ ರಂಗೇರಿದೆ.

ಇದನ್ನೂ ಓದಿ : “ನನಗೇನು ಅರ್ಥವಾಗಿಲ್ಲ” : ಹಿಂದಿಯಲ್ಲಿ ಪತ್ರ ಬರೆದ ಕೇಂದ್ರ ಸಚಿವರಿಗೆ ತಮಿಳಿನಲ್ಲಿ ಪ್ರತ್ಯುತ್ತರ ಕಳುಹಿಸಿದ ಡಿಎಂಕೆ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...