Homeಮುಖಪುಟಗಾಂಧೀಜಿಯವರ ಪುಣ್ಯ ಸ್ಮರಣೆ : ಬಾಬಾ ಸಾಹೇಬರಿಗೆ ಕೃತಜ್ಞತೆ..- ಜಿ.ರಾಜಶೇಖರ್‌

ಗಾಂಧೀಜಿಯವರ ಪುಣ್ಯ ಸ್ಮರಣೆ : ಬಾಬಾ ಸಾಹೇಬರಿಗೆ ಕೃತಜ್ಞತೆ..- ಜಿ.ರಾಜಶೇಖರ್‌

- Advertisement -
- Advertisement -

ಜನವರಿ 30, ಮಹಾತ್ಮರ ದೇಹಾಂತ್ಯದ ಪುಣ್ಯಸ್ಮರಣೆಯ ದಿನ. ಅಂದು ಭಾರತ ಸಂವಿಧಾನ ಮೊತ್ತ ಮೊದಲ ವಾಕ್ಯ ‘ಭಾರತದ ಜನತೆಯಾದ ನಾವು’, ‘WE THE PEOPLE OF INDIA’ ಎಂಬುದನ್ನೇ ಧ್ಯೇಯವಾಕ್ಯವಾಗಿಟ್ಟುಕೊಂಡು, ಉಡುಪಿ ಜನಸಾಮಾನ್ಯರು ಒಂದು ಸಾರ್ವಜನಿಕ ಮೆರವಣಿಗೆ ಹಾಗೂ ಸಭೆಗಳನ್ನು ಸಂಘಟಿಸುವ ಮೂಲಕ ಹಂತಕನ ಗುಂಡೇಟಿಗೆ ಬಲಿಯಾದ ಮಹಾತ್ಮರು ಮತ್ತು ಭಾರತ ಸಂವಿಧಾನವನ್ನು ರಚಿಸಿದ ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರಿಗೆ ತಮ್ಮ ಗೌರವ ಸಲ್ಲಿಸಬೇಕು ಎಂದು ತೀರ್ಮಾನಿಸಲಾಗಿದೆ.

ಗಾಂಧೀಜಿಯವರಿಗೆ ಗೌರವ ಸಲ್ಲಿಸುವುದು ಹೇಗೆ? ಬಾಬಾಸಾಹೇಬರನ್ನು ಕೃತಜ್ಞತಾಪೂರ್ವಕವಾಗಿ ನೆನೆಯುವುದು ಎಂದರೆ ಏನು? ಬಾಬಾ ಸಾಹೇಬರ ಅವಿರತ ಶ್ರಮದ ಫಲವಾಗಿ ರಚನೆಯಾದ ಭಾರತ ಸಂವಿಧಾನದ ಮೊದಲ ಪುಟದ ಮೇಲೆಯೇ ಚಲನಶೀಲತೆ ಮತ್ತು ಅಹಿಂಸೆಗಳ ಸಂಕೇತವಾದ ಅಶೋಕಚಕ್ರ ನಮ್ಮ ಗಮನ ಸೆಳೆಯುತ್ತದೆ. ಅಶೋಕಚಕ್ರದಡಿ “ಸತ್ಯಮೇವಜಯತೆ” ಎಂಬ ವಾಕ್ಯವಿದೆ. ಗಾಂಧೀಜಿ ಈ ಶಬ್ದವನ್ನು ಬೀಜಮಂತ್ರವಾಗಿ ಇರಿಸಿಕೊಂಡು ಬ್ರಿಟಿಷ್ ವಸಾಹತುಶಾಹಿಯ ವಿರುದ್ಧ ತನ್ನ ಸತ್ಯಾಗ್ರಹ ಹೋರಾಟವನ್ನು ರೂಪಿಸಿದ್ದರು. ಗೆದ್ದವರು ಬರೆದದ್ದು ಮಾತ್ರ ಚರಿತ್ರೆ ಎಂದು ಗೆದ್ದವರು ಹಾಗೂ ಸೋತವರು. ಎಲ್ಲರೂ ನಂಬಿದ ಕಾಲಘಟ್ಟದಲ್ಲಿ ಗಾಂಧೀಜಿ ಇತಿಹಾಸ ಚಕ್ರವನ್ನೇ ಮುನ್ನಡೆಸಿದರು. ಸಾವಿರಾರು ವರ್ಷ ಭವ್ಯ ಸಾಂಸ್ಕೃತಿಕ ಚರಿತ್ರೆ ಹೊಂದಿರುವ ನಮ್ಮೀ ಭಾರತದ ಚರಿತ್ರೆಯಲ್ಲಿ ಮೊತ್ತ ಮೊದಲ ಬಾರಿಗೆ ದೇಶದ ಎಲ್ಲ ಪ್ರಜೆಗಳೂ ಜಾತಿ, ಮತ, ಧರ್ಮಗಳ ಭೇದವನ್ನು ಲೆಕ್ಕಿಸದೆ ಹೆಣ್ಣು, ಗಂಡು ಎಂಬ ಲಿಂಗ ಅಸಮಾನತೆಯನ್ನು ಸಹ ತೊಡೆದು ಹಾಕಿ, ಭಾರತ ಒಂದು ಸ್ವತಂತ್ರ‍ ಸಮಾನ ಪ್ರಜಾಸತ್ತಾತ್ಮಕ ದೇಶ ಎಂದು ಬಾಬಾ ಸಾಹೇಬರು ಕಾರಣಪುರುಷರಾಗಿದ್ದ ಭಾರತದ ಸಂವಿಧಾನ ಪ್ರತಿಪಾದಿಸಿತು, ಇತಿಹಾಸ ಚಕ್ರ ಮತ್ತೆ ಮುನ್ನಡೆಯಿತು.

ಹಾಲೀ ಕೇಂದ್ರ ಸರಕಾರ ಇದೀಗ ಜಾರಿಗೊಳಿಸಲು ಹೊರಟಿರುವ ‘ಪೌರತ್ವ (ತಿದ್ದುಪಡಿ) ಕಾಯ್ದೆ’ ಭಾರತ ಸಂವಿಧಾನದ ಮೂಲಭೂತ ಆಶಯಗಳಿಗೆ ದ್ರೋಹ ಬಗೆದಿದೆ. ಈ ಕಾಯ್ದೆ ಪ್ರಕಾರ ನಮ್ಮ ನೆರೆಯ ಪಾಕಿಸ್ತಾನ ಬಾಂಗ್ಲಾದೇಶ ಮತ್ತು ಅಪಘಾನಿಸ್ತಾನಗಳಿಂದ ಭಾರತಕ್ಕೆ ಬಂದ ಮುಸ್ಲಿಮೇತರ ಪ್ರಜೆಗಳಿಗೆ ಮಾತ್ರ ಭಾರತದ ಪೌರರಾಗುವ ಅವಕಾಶವಿದೆ. ಹಾಗಿದ್ದರೆ, ಈಗಾಗಲೇ ದೊಡ್ಡ ಸಂಖ್ಯೆಯಲ್ಲಿ ಭಾರತದಲ್ಲಿ ನೆಲೆಸಿರುವ ಮ್ಯಾನ್ಮಾರ್‍ನ ರೋಹಿಂಗ್ಯಮುಸ್ಲಿಮರ ಪಾಡೇನು? ಶ್ರೀಲಂಕಾದ ಅಂತರ್ಯುದ್ಧದಿಂದಾಗಿ ನಿರಾಶ್ರಿತರಾದ ತಮಿಳು ಮೂಲದ ಮುಸ್ಲಿಮ್ ಸಮುದಾಯಕ್ಕೆ ಯಾರು ಉತ್ತರದಾಯಿಗಳು?

ಸಾರಾಸಗಟಾಗಿ ಮುಸ್ಲಿಮ್ ಸಮುದಾಯಕ್ಕೆ ಒಂದು ಮನೋಧರ್ಮ ಒಂದು ಸಂಸ್ಕೃತಿ, ಒಂದು ಭಾಷೆಗಳನ್ನು ಆರೋಪಿಸುವ ಈ ಮನಃಸ್ಥಿತಿ, ಜಾಗತಿಕ ಮುಸ್ಲಿಮ್ ಸಮುದಾಯದಲ್ಲಿ ಪ್ರವಾದಿ ಅಲ್ಲಾಹುವಿನಲ್ಲಿ ನಂಬಿಕೆ ಹೊರತಾಗಿ ಬೇರೆ ಯಾವ ಬಗೆಯ ಸಮಾನತೆ ಇದೆ ಎಂಬ ಕುರಿತು ಯೋಚಿಸಬೇಕು. ದೇಶ, ಪ್ರಾಂತ್ಯ, ಭಾಷೆ, ಸಂಸ್ಕತಿ, ಆಚಾರ, ವಿಚಾರ, ಆಹಾರ, ಉಡುಪು ತೊಡಪು ಬದುಕಿನ ಈ ಎಲ್ಲ ಮೂಲಭೂತ ವಿವರಗಳಲ್ಲೂ ದೇಶದಿಂದ ದೇಶಕ್ಕೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಮುಸ್ಲಿಮ್ ಸಮುದಾಯದ ಒಳಗೇನೆ ಇರುವ ಅಪಾರ ವ್ಯತ್ಯಾಸ ಕಣ್ಣಿದ್ದವನಿಗೆ ಕಾಣಿಸುತ್ತದೆ. ನಮ್ಮ ರಾಜ್ಯದ ಮುಸ್ಲಿಮ್ ಧರ್ಮೀಯರಲ್ಲೇ ಎಷ್ಟು ವೈವಿಧ್ಯತೆಯಿದೆ! ಗುಲ್ಬರ್ಗ, ರಾಯಚೂರು, ಬಿಜಾಪುರಗಳಲ್ಲಿನ ಮುಸ್ಲಿಮರು ಮತ್ತು ಉಡುಪಿ ಮಂಗಳೂರುಗಳ ಮುಸ್ಲಿಮರ ನಡುವೆ ಎಷ್ಟು ವ್ಯತ್ಯಾಸಗಳಿವೆ!

ಕೇಂದ್ರ ಸರಕಾರ ತನ್ನ ಪೌರತ್ವ (ತಿದ್ದುಪಡಿ) ಕಾಯ್ದೆಯ ಮುಖಾಂತರ, ಮುಸ್ಲಿಮ್ ಸಮುದಾಯದ ಈ ವೈವಿಧ್ಯಮಯ ಸಂಸ್ಕೃತಿಯನ್ನೂ ಅಲ್ಲಗಳೆಯುತ್ತಿದೆ. ಒಂದು ಸಮುದಾಯದ ಸಂಸ್ಕೃತಿಯನ್ನು ಅಲ್ಲಗಳೆಯುವುದು ಎಂದರೆ ಆ ಸಮುದಾಯಕ್ಕೆ ಸೇರಿದ ಜನರ ಇರಸ್ತಿಕೆಯನ್ನೇ ಕೊನೆಗೊಳಿಸಿದಂತೆ. ಈ ಮಾತಿಗೆ ಒಂದು ಉದಾಹರಣೆ ಕೊಡುವುದಾದರೆ ದೇಶದ ಹಾಲೀ ಪ್ರಧಾನಿ ಗುಜರಾತ್‍ನ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 2002 ರಲ್ಲಿ ಸಂಭವಿಸಿದ ಮುಸ್ಲಿಂ ನರಹತ್ಯೆ ಆ ಕುರಿತು ಅವರು ಈವರೆಗೂ ದೇಶದ ಪ್ರಜೆಗಳಲ್ಲಿ ಕ್ಷಮೆ ಕೋರಿಲ್ಲ. ಅವರಿಗೆ ಆ ಕರಾಳಕೃತ್ಯದ ಬಗ್ಗೆ ವ್ಯಥೆಯೂ ಇಲ್ಲ 2002 ಕ್ಕಿಂತ ಮೊದಲು 1992 ರಲ್ಲಿ ಹಾಲೀ ಪ್ರಧಾನಿಯವರು ಮಹಾನ್ ನೇತಾರರಾಗಿರುವ ಬಿ.ಜೆ.ಪಿ ಪಕ್ಕದ ಕಾಲಾಳುಗಳೇ ಉತ್ತರ ಪ್ರದೇಶದ ಫೈಜಾಬಾದ್ ನಗರದ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿ ಧ್ವಂಸ ಮಾಡಿದರು. ಅದೇದಿನ ಸಂಜೆ ಮುಂಬೈಯಲ್ಲಿ ಪ್ರಾರಂಭವಾದ ಭೀಕರ ಕೋಮುಹಿಂಸಾಚಾರ ತಿಂಗಳುಗಟ್ಟಲೆ ಮುಂದುವರಿದು ಹತ್ತಿರತ್ತಿರ 1000 ಜನ ಮುಸ್ಲಿಮರು ಅದರಲ್ಲಿ ಪ್ರಾಣ ಕಳೆದುಕೊಂಡರು. ಹಾಗಿರುತ್ತ ಬಿ.ಜೆ.ಪಿ ಮತ್ತು ದೇಶದ ಹಾಲೀ ಪ್ರಧಾನಿಯವರಂತಹ ಜನನಾಯಕರಿಂದ ಪೌರತ್ವ ತಿದ್ದುಪಡಿ ಕಾಯ್ದೆಗಿಂತ ಉತ್ತಮವಾದ ಏನನ್ನೂ ತಾನೇ ನಿರೀಕ್ಷಿಸಲು ಸಾಧ್ಯ? ಈ ಜನ ನಾಯಕರಿಗೆ ದೇಶದ ಮುಸ್ಲಿಮರು, ಪ್ರಜೆಗಳು ಹಾಗಿರಲಿ, ಕನಿಷ್ಠ ಮನುಷ್ಯರೂ ಅಲ್ಲ!

ಭಾರತ ಸಂವಿಧಾನದ ಪ್ರಾಥಮಿಕ ಪರಿಚಯವೂ ಇಲ್ಲದ ಈ ಬೇಜವಾಬ್ದಾರಿ ಜನಗಳ ಪಕ್ಷ ಬಿ.ಜೆ.ಪಿ, ಇಂದು ಮುಸ್ಲಿಮ್ ಸಮುದಾಯದ ತರುಣರ ಮೇಲೆ ಲವ್‍ಜೆಹಾದ್‍ನ ಹಸಿಹಸಿ ಸುಳ್ಳು ಆರೋಪ ಹೊರಿಸುತ್ತಿರುವುದು ಆ ಪಕ್ಷದ ಮುಸ್ಲಿಮ್ ದ್ವೇಷ ಮಾತ್ರವಲ್ಲ ಹಿಂದೂ ತರುಣಿಯರ ಬಗ್ಗೆ ಅವರಿಗೆ ಎಂತಹ ಕೀಳು ಅಭಿಪ್ರಾಯವಿದೆ ಎಂಬುದಕ್ಕೆ ಕೂಡ ಉದಾಹರಣೆಯಾಗಿದೆ. ಇದೇ ಬಿ.ಜೆ.ಪಿಯ ದ.ಕ ಜಿಲ್ಲೆಯ ಒಬ್ಬ ಪುಢಾರಿ ಕಲ್ಲಡ್ಕ ಪ್ರಭಾಕರ ಭಟ್ಟ, ಈಗ ಕನಕಪುರದ ಪ್ರಸ್ತಾಪಿತ ಯೇಸುಕ್ರಿಸ್ತನ ಪ್ರತಿಮೆ ಬಗ್ಗೆ ಬಾಯಿಗೆ ಬಂದದ್ದನ್ನೆಲ್ಲ ವದರುತ್ತಿದ್ದಾನೆ. ಆ ಪಕ್ಷ ಬರೇ ಬೇಜವಾಬ್ದಾರಿ ಜನಗಳ ಪಕ್ಷ ಮಾತ್ರವಲ್ಲ, ಮಹಾನೀಚರ ಪರ ಕೂಡ ಎಂಬ ಮಾತಿಗೆ ಈತ ನಡೆದಾಡುವ ಒಂದು ನಿದರ್ಶನವಾಗಿದ್ದಾನೆ. ಈತನಿಗೆ ಗಾಂಧೀಜಿ ಸದಾ ಹೇಳುತ್ತಿದ್ದ. ‘ಈಶ್ವರ ಅಲ್ಲಾ ತೇರೇನಾಮ್ ಸಬ್ ಕೋ ಸನ್ಮತಿ ದೇ ಭಗವಾನ್’ ಎಂಬ ಭಜನೆಯ ಸೊಲ್ಲನ್ನು ಯಾರಾದರೂ ನೆನಪಿಸಬೇಕು, ಆ ಮುಖಾಂತರವಾದ ಈತನಿಗೆ ‘ಸನ್ಮತಿ’ ದೊರೆಯಲಿ ಎಂದು ಪ್ರಾರ್ಥಿಸಬೇಕು. ಹಾಗೆಯೇ ಶಿಕ್ಷಣ ಸಂಸ್ಥೆಯೊಂದರ ಮಾಲಿಕನಾಗಿರುವ ಈ ಮೂರ್ಖನಿಗೆ ಗಾಂಧೀಜಿಯವರಿಗೆ ಬೈಬಲ್‍ನ ‘ಬೆಟ್ಟದ ಮೇಲಣ ಬೋಧನೆ’- SERMON ON THE MOUNT ಕೂಡ ತುಂಬ ಪ್ರಿಯವಾಗಿತ್ತು ಎಂಬುದನ್ನು ತಿಳಿಹೇಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...