Homeಮುಖಪುಟಗಾಂಧೀಜಿಯವರ ಪುಣ್ಯ ಸ್ಮರಣೆ : ಬಾಬಾ ಸಾಹೇಬರಿಗೆ ಕೃತಜ್ಞತೆ..- ಜಿ.ರಾಜಶೇಖರ್‌

ಗಾಂಧೀಜಿಯವರ ಪುಣ್ಯ ಸ್ಮರಣೆ : ಬಾಬಾ ಸಾಹೇಬರಿಗೆ ಕೃತಜ್ಞತೆ..- ಜಿ.ರಾಜಶೇಖರ್‌

- Advertisement -
- Advertisement -

ಜನವರಿ 30, ಮಹಾತ್ಮರ ದೇಹಾಂತ್ಯದ ಪುಣ್ಯಸ್ಮರಣೆಯ ದಿನ. ಅಂದು ಭಾರತ ಸಂವಿಧಾನ ಮೊತ್ತ ಮೊದಲ ವಾಕ್ಯ ‘ಭಾರತದ ಜನತೆಯಾದ ನಾವು’, ‘WE THE PEOPLE OF INDIA’ ಎಂಬುದನ್ನೇ ಧ್ಯೇಯವಾಕ್ಯವಾಗಿಟ್ಟುಕೊಂಡು, ಉಡುಪಿ ಜನಸಾಮಾನ್ಯರು ಒಂದು ಸಾರ್ವಜನಿಕ ಮೆರವಣಿಗೆ ಹಾಗೂ ಸಭೆಗಳನ್ನು ಸಂಘಟಿಸುವ ಮೂಲಕ ಹಂತಕನ ಗುಂಡೇಟಿಗೆ ಬಲಿಯಾದ ಮಹಾತ್ಮರು ಮತ್ತು ಭಾರತ ಸಂವಿಧಾನವನ್ನು ರಚಿಸಿದ ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರಿಗೆ ತಮ್ಮ ಗೌರವ ಸಲ್ಲಿಸಬೇಕು ಎಂದು ತೀರ್ಮಾನಿಸಲಾಗಿದೆ.

ಗಾಂಧೀಜಿಯವರಿಗೆ ಗೌರವ ಸಲ್ಲಿಸುವುದು ಹೇಗೆ? ಬಾಬಾಸಾಹೇಬರನ್ನು ಕೃತಜ್ಞತಾಪೂರ್ವಕವಾಗಿ ನೆನೆಯುವುದು ಎಂದರೆ ಏನು? ಬಾಬಾ ಸಾಹೇಬರ ಅವಿರತ ಶ್ರಮದ ಫಲವಾಗಿ ರಚನೆಯಾದ ಭಾರತ ಸಂವಿಧಾನದ ಮೊದಲ ಪುಟದ ಮೇಲೆಯೇ ಚಲನಶೀಲತೆ ಮತ್ತು ಅಹಿಂಸೆಗಳ ಸಂಕೇತವಾದ ಅಶೋಕಚಕ್ರ ನಮ್ಮ ಗಮನ ಸೆಳೆಯುತ್ತದೆ. ಅಶೋಕಚಕ್ರದಡಿ “ಸತ್ಯಮೇವಜಯತೆ” ಎಂಬ ವಾಕ್ಯವಿದೆ. ಗಾಂಧೀಜಿ ಈ ಶಬ್ದವನ್ನು ಬೀಜಮಂತ್ರವಾಗಿ ಇರಿಸಿಕೊಂಡು ಬ್ರಿಟಿಷ್ ವಸಾಹತುಶಾಹಿಯ ವಿರುದ್ಧ ತನ್ನ ಸತ್ಯಾಗ್ರಹ ಹೋರಾಟವನ್ನು ರೂಪಿಸಿದ್ದರು. ಗೆದ್ದವರು ಬರೆದದ್ದು ಮಾತ್ರ ಚರಿತ್ರೆ ಎಂದು ಗೆದ್ದವರು ಹಾಗೂ ಸೋತವರು. ಎಲ್ಲರೂ ನಂಬಿದ ಕಾಲಘಟ್ಟದಲ್ಲಿ ಗಾಂಧೀಜಿ ಇತಿಹಾಸ ಚಕ್ರವನ್ನೇ ಮುನ್ನಡೆಸಿದರು. ಸಾವಿರಾರು ವರ್ಷ ಭವ್ಯ ಸಾಂಸ್ಕೃತಿಕ ಚರಿತ್ರೆ ಹೊಂದಿರುವ ನಮ್ಮೀ ಭಾರತದ ಚರಿತ್ರೆಯಲ್ಲಿ ಮೊತ್ತ ಮೊದಲ ಬಾರಿಗೆ ದೇಶದ ಎಲ್ಲ ಪ್ರಜೆಗಳೂ ಜಾತಿ, ಮತ, ಧರ್ಮಗಳ ಭೇದವನ್ನು ಲೆಕ್ಕಿಸದೆ ಹೆಣ್ಣು, ಗಂಡು ಎಂಬ ಲಿಂಗ ಅಸಮಾನತೆಯನ್ನು ಸಹ ತೊಡೆದು ಹಾಕಿ, ಭಾರತ ಒಂದು ಸ್ವತಂತ್ರ‍ ಸಮಾನ ಪ್ರಜಾಸತ್ತಾತ್ಮಕ ದೇಶ ಎಂದು ಬಾಬಾ ಸಾಹೇಬರು ಕಾರಣಪುರುಷರಾಗಿದ್ದ ಭಾರತದ ಸಂವಿಧಾನ ಪ್ರತಿಪಾದಿಸಿತು, ಇತಿಹಾಸ ಚಕ್ರ ಮತ್ತೆ ಮುನ್ನಡೆಯಿತು.

ಹಾಲೀ ಕೇಂದ್ರ ಸರಕಾರ ಇದೀಗ ಜಾರಿಗೊಳಿಸಲು ಹೊರಟಿರುವ ‘ಪೌರತ್ವ (ತಿದ್ದುಪಡಿ) ಕಾಯ್ದೆ’ ಭಾರತ ಸಂವಿಧಾನದ ಮೂಲಭೂತ ಆಶಯಗಳಿಗೆ ದ್ರೋಹ ಬಗೆದಿದೆ. ಈ ಕಾಯ್ದೆ ಪ್ರಕಾರ ನಮ್ಮ ನೆರೆಯ ಪಾಕಿಸ್ತಾನ ಬಾಂಗ್ಲಾದೇಶ ಮತ್ತು ಅಪಘಾನಿಸ್ತಾನಗಳಿಂದ ಭಾರತಕ್ಕೆ ಬಂದ ಮುಸ್ಲಿಮೇತರ ಪ್ರಜೆಗಳಿಗೆ ಮಾತ್ರ ಭಾರತದ ಪೌರರಾಗುವ ಅವಕಾಶವಿದೆ. ಹಾಗಿದ್ದರೆ, ಈಗಾಗಲೇ ದೊಡ್ಡ ಸಂಖ್ಯೆಯಲ್ಲಿ ಭಾರತದಲ್ಲಿ ನೆಲೆಸಿರುವ ಮ್ಯಾನ್ಮಾರ್‍ನ ರೋಹಿಂಗ್ಯಮುಸ್ಲಿಮರ ಪಾಡೇನು? ಶ್ರೀಲಂಕಾದ ಅಂತರ್ಯುದ್ಧದಿಂದಾಗಿ ನಿರಾಶ್ರಿತರಾದ ತಮಿಳು ಮೂಲದ ಮುಸ್ಲಿಮ್ ಸಮುದಾಯಕ್ಕೆ ಯಾರು ಉತ್ತರದಾಯಿಗಳು?

ಸಾರಾಸಗಟಾಗಿ ಮುಸ್ಲಿಮ್ ಸಮುದಾಯಕ್ಕೆ ಒಂದು ಮನೋಧರ್ಮ ಒಂದು ಸಂಸ್ಕೃತಿ, ಒಂದು ಭಾಷೆಗಳನ್ನು ಆರೋಪಿಸುವ ಈ ಮನಃಸ್ಥಿತಿ, ಜಾಗತಿಕ ಮುಸ್ಲಿಮ್ ಸಮುದಾಯದಲ್ಲಿ ಪ್ರವಾದಿ ಅಲ್ಲಾಹುವಿನಲ್ಲಿ ನಂಬಿಕೆ ಹೊರತಾಗಿ ಬೇರೆ ಯಾವ ಬಗೆಯ ಸಮಾನತೆ ಇದೆ ಎಂಬ ಕುರಿತು ಯೋಚಿಸಬೇಕು. ದೇಶ, ಪ್ರಾಂತ್ಯ, ಭಾಷೆ, ಸಂಸ್ಕತಿ, ಆಚಾರ, ವಿಚಾರ, ಆಹಾರ, ಉಡುಪು ತೊಡಪು ಬದುಕಿನ ಈ ಎಲ್ಲ ಮೂಲಭೂತ ವಿವರಗಳಲ್ಲೂ ದೇಶದಿಂದ ದೇಶಕ್ಕೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಮುಸ್ಲಿಮ್ ಸಮುದಾಯದ ಒಳಗೇನೆ ಇರುವ ಅಪಾರ ವ್ಯತ್ಯಾಸ ಕಣ್ಣಿದ್ದವನಿಗೆ ಕಾಣಿಸುತ್ತದೆ. ನಮ್ಮ ರಾಜ್ಯದ ಮುಸ್ಲಿಮ್ ಧರ್ಮೀಯರಲ್ಲೇ ಎಷ್ಟು ವೈವಿಧ್ಯತೆಯಿದೆ! ಗುಲ್ಬರ್ಗ, ರಾಯಚೂರು, ಬಿಜಾಪುರಗಳಲ್ಲಿನ ಮುಸ್ಲಿಮರು ಮತ್ತು ಉಡುಪಿ ಮಂಗಳೂರುಗಳ ಮುಸ್ಲಿಮರ ನಡುವೆ ಎಷ್ಟು ವ್ಯತ್ಯಾಸಗಳಿವೆ!

ಕೇಂದ್ರ ಸರಕಾರ ತನ್ನ ಪೌರತ್ವ (ತಿದ್ದುಪಡಿ) ಕಾಯ್ದೆಯ ಮುಖಾಂತರ, ಮುಸ್ಲಿಮ್ ಸಮುದಾಯದ ಈ ವೈವಿಧ್ಯಮಯ ಸಂಸ್ಕೃತಿಯನ್ನೂ ಅಲ್ಲಗಳೆಯುತ್ತಿದೆ. ಒಂದು ಸಮುದಾಯದ ಸಂಸ್ಕೃತಿಯನ್ನು ಅಲ್ಲಗಳೆಯುವುದು ಎಂದರೆ ಆ ಸಮುದಾಯಕ್ಕೆ ಸೇರಿದ ಜನರ ಇರಸ್ತಿಕೆಯನ್ನೇ ಕೊನೆಗೊಳಿಸಿದಂತೆ. ಈ ಮಾತಿಗೆ ಒಂದು ಉದಾಹರಣೆ ಕೊಡುವುದಾದರೆ ದೇಶದ ಹಾಲೀ ಪ್ರಧಾನಿ ಗುಜರಾತ್‍ನ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 2002 ರಲ್ಲಿ ಸಂಭವಿಸಿದ ಮುಸ್ಲಿಂ ನರಹತ್ಯೆ ಆ ಕುರಿತು ಅವರು ಈವರೆಗೂ ದೇಶದ ಪ್ರಜೆಗಳಲ್ಲಿ ಕ್ಷಮೆ ಕೋರಿಲ್ಲ. ಅವರಿಗೆ ಆ ಕರಾಳಕೃತ್ಯದ ಬಗ್ಗೆ ವ್ಯಥೆಯೂ ಇಲ್ಲ 2002 ಕ್ಕಿಂತ ಮೊದಲು 1992 ರಲ್ಲಿ ಹಾಲೀ ಪ್ರಧಾನಿಯವರು ಮಹಾನ್ ನೇತಾರರಾಗಿರುವ ಬಿ.ಜೆ.ಪಿ ಪಕ್ಕದ ಕಾಲಾಳುಗಳೇ ಉತ್ತರ ಪ್ರದೇಶದ ಫೈಜಾಬಾದ್ ನಗರದ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿ ಧ್ವಂಸ ಮಾಡಿದರು. ಅದೇದಿನ ಸಂಜೆ ಮುಂಬೈಯಲ್ಲಿ ಪ್ರಾರಂಭವಾದ ಭೀಕರ ಕೋಮುಹಿಂಸಾಚಾರ ತಿಂಗಳುಗಟ್ಟಲೆ ಮುಂದುವರಿದು ಹತ್ತಿರತ್ತಿರ 1000 ಜನ ಮುಸ್ಲಿಮರು ಅದರಲ್ಲಿ ಪ್ರಾಣ ಕಳೆದುಕೊಂಡರು. ಹಾಗಿರುತ್ತ ಬಿ.ಜೆ.ಪಿ ಮತ್ತು ದೇಶದ ಹಾಲೀ ಪ್ರಧಾನಿಯವರಂತಹ ಜನನಾಯಕರಿಂದ ಪೌರತ್ವ ತಿದ್ದುಪಡಿ ಕಾಯ್ದೆಗಿಂತ ಉತ್ತಮವಾದ ಏನನ್ನೂ ತಾನೇ ನಿರೀಕ್ಷಿಸಲು ಸಾಧ್ಯ? ಈ ಜನ ನಾಯಕರಿಗೆ ದೇಶದ ಮುಸ್ಲಿಮರು, ಪ್ರಜೆಗಳು ಹಾಗಿರಲಿ, ಕನಿಷ್ಠ ಮನುಷ್ಯರೂ ಅಲ್ಲ!

ಭಾರತ ಸಂವಿಧಾನದ ಪ್ರಾಥಮಿಕ ಪರಿಚಯವೂ ಇಲ್ಲದ ಈ ಬೇಜವಾಬ್ದಾರಿ ಜನಗಳ ಪಕ್ಷ ಬಿ.ಜೆ.ಪಿ, ಇಂದು ಮುಸ್ಲಿಮ್ ಸಮುದಾಯದ ತರುಣರ ಮೇಲೆ ಲವ್‍ಜೆಹಾದ್‍ನ ಹಸಿಹಸಿ ಸುಳ್ಳು ಆರೋಪ ಹೊರಿಸುತ್ತಿರುವುದು ಆ ಪಕ್ಷದ ಮುಸ್ಲಿಮ್ ದ್ವೇಷ ಮಾತ್ರವಲ್ಲ ಹಿಂದೂ ತರುಣಿಯರ ಬಗ್ಗೆ ಅವರಿಗೆ ಎಂತಹ ಕೀಳು ಅಭಿಪ್ರಾಯವಿದೆ ಎಂಬುದಕ್ಕೆ ಕೂಡ ಉದಾಹರಣೆಯಾಗಿದೆ. ಇದೇ ಬಿ.ಜೆ.ಪಿಯ ದ.ಕ ಜಿಲ್ಲೆಯ ಒಬ್ಬ ಪುಢಾರಿ ಕಲ್ಲಡ್ಕ ಪ್ರಭಾಕರ ಭಟ್ಟ, ಈಗ ಕನಕಪುರದ ಪ್ರಸ್ತಾಪಿತ ಯೇಸುಕ್ರಿಸ್ತನ ಪ್ರತಿಮೆ ಬಗ್ಗೆ ಬಾಯಿಗೆ ಬಂದದ್ದನ್ನೆಲ್ಲ ವದರುತ್ತಿದ್ದಾನೆ. ಆ ಪಕ್ಷ ಬರೇ ಬೇಜವಾಬ್ದಾರಿ ಜನಗಳ ಪಕ್ಷ ಮಾತ್ರವಲ್ಲ, ಮಹಾನೀಚರ ಪರ ಕೂಡ ಎಂಬ ಮಾತಿಗೆ ಈತ ನಡೆದಾಡುವ ಒಂದು ನಿದರ್ಶನವಾಗಿದ್ದಾನೆ. ಈತನಿಗೆ ಗಾಂಧೀಜಿ ಸದಾ ಹೇಳುತ್ತಿದ್ದ. ‘ಈಶ್ವರ ಅಲ್ಲಾ ತೇರೇನಾಮ್ ಸಬ್ ಕೋ ಸನ್ಮತಿ ದೇ ಭಗವಾನ್’ ಎಂಬ ಭಜನೆಯ ಸೊಲ್ಲನ್ನು ಯಾರಾದರೂ ನೆನಪಿಸಬೇಕು, ಆ ಮುಖಾಂತರವಾದ ಈತನಿಗೆ ‘ಸನ್ಮತಿ’ ದೊರೆಯಲಿ ಎಂದು ಪ್ರಾರ್ಥಿಸಬೇಕು. ಹಾಗೆಯೇ ಶಿಕ್ಷಣ ಸಂಸ್ಥೆಯೊಂದರ ಮಾಲಿಕನಾಗಿರುವ ಈ ಮೂರ್ಖನಿಗೆ ಗಾಂಧೀಜಿಯವರಿಗೆ ಬೈಬಲ್‍ನ ‘ಬೆಟ್ಟದ ಮೇಲಣ ಬೋಧನೆ’- SERMON ON THE MOUNT ಕೂಡ ತುಂಬ ಪ್ರಿಯವಾಗಿತ್ತು ಎಂಬುದನ್ನು ತಿಳಿಹೇಳಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...