Homeಮುಖಪುಟಉತ್ತರ ಕನ್ನಡದಲ್ಲಿ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತುಗಳು

ಉತ್ತರ ಕನ್ನಡದಲ್ಲಿ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತುಗಳು

ಗಾಂಧೀಜಿ ಕಾರವಾರಕ್ಕೆ ಬಂದಿದ್ದು ಆ ವೇಳೆ ಅಡಿಯಾಗಿದ್ದ ಅಸ್ಪೃಶ್ಯತೆ ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧದ ಜನಜಾಗೃತಿ ಮೂಡಿಸಲೆಂದಾಗಿತ್ತು.

- Advertisement -
- Advertisement -

ಉತ್ತರ ಕನ್ನಡದ ಹಲವೆಡೆ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತು ಇವತ್ತಿಗೂ ಅಚ್ಚಳಿಯದೇ ಉಳಿದಿದೆ! ಜಿಲ್ಲೆಗೆ ಹಲವು ಬಾರಿ ಗಾಂಧೀಜಿ ಬಂದುಹೋಗಿದ್ದಾರೆ. ಗಾಂಧೀಜಿ ಉತ್ತರ ಕನ್ನಡಕ್ಕೆ ಆಗಮಿಸುತ್ತಿದ್ದುದು ಸ್ವಾತಂತ್ರ್ಯ ಚಳವಳಿ ಜಾಗೃತಿಗೆಂಬುದು ಸಾಮಾನ್ಯ ಅಭಿಪ್ರಾಯ. ಆದರೆ ಗಾಂಧೀ ಹೊರಟರೆಂದರೆ ಬರೀ ಸ್ವರಾಜ್ಯ ಕನಸಷ್ಟೇ ಅಲ್ಲ, ಸಾಮಾಜಿಕ ಮತ್ತು ಜೀವಪರ ತುಡಿತವೂ ಇರುತ್ತಿತ್ತು. ಉಪ್ಪು ತಯಾರಿಕೆ ಮತ್ತು ಮಾರಾಟವನ್ನು ಬ್ರಿಟಿ‍‍‍ಷ್ ಸರ್ಕಾರ ನಿಷೇಧಿಸಿದಾಗ ಗಾಂಧೀಜಿ ಆದಿಯಾಗಿ ಹಿರಿಯ ರಾಷ್ಟ್ರೀಯ ನೇತಾರರು ತಿರುಗಿ ಬಿದ್ದಿದ್ದರು. ಅಸಹಕಾರ ಚಳುವಳಿಯೊಂದೇ ಈ ಸಮಸ್ಯೆ ಪರಿಹಾರಕ್ಕೆ ತಾರಕ ತಂತ್ರವೆಂಬ ತೀರ್ಮಾನಕ್ಕೆ ಬಂದಿದ್ದರು. 20-2-1930ರಂದು ಬಳ್ಳಾರಿಯಲ್ಲಿ ಸಭೆ ಸೇರಿದ್ದ ಪ್ರದೇಶ್ ಕಾಂಗ್ರೆಸ್ ಸಮಿತಿ ಉತ್ತರ ಕನ್ನಡದ ಅಂಕೋಲಾ ಕರ್ನಾಟಕದಲ್ಲಿ ಉಪ್ಪಿನ ಸತ್ಯಾಗ್ರಹಕ್ಕೆ ಸರಿಯಾದ ಸ್ಥಳವೆಂದು ನಿರ್ಧರಿಸಿತ್ತು.

ಪೊಲೀಸರ ಅಡೆತಡೆಯನ್ನೆಲ್ಲ ಕಡೆಗಣಿಸಿ ಏಪ್ರಿಲ್ 13ರಂದು ಭರ್ಜರಿ ಮೆರವಣಿಗೆಯೊಂದಿಗೆ ಅಂಕೋಲೆಯ ಜನಸಾಗರ ಕಡಲ ಕಿನಾರೆಯತ್ತ ಹೊರಟಿತ್ತು! ಅಲ್ಲಿ ಬ್ರಿಟಿಷ್ ಸರ್ಕಾರದ ಕಾನೂನು ಧಿಕ್ಕರಿಸಿ ಉಪ್ಪು ತಯಾರಿಕೆ, ಮಾರಾಟ ಮಾಡಲಾಯಿತು. ಅಂಕೋಲೆಯ ಹಳ್ಳಿಹಳ್ಳಿಯಲ್ಲಿ ಚಳವಳಿ ಭುಗಿಲೆದ್ದಿತು! ಅಸಹಕಾರ ಚಳವಳಿ, ಕರಬಂಧಿ ಚಳವಳಿ ಮತ್ತು ಉಪ್ಪಿನ ಸತ್ಯಾಗ್ರಹದಲ್ಲಿ ಅಂಕೋಲೆ ನಿರ್ಣಾಯಕ ಪಾತ್ರ ವಹಿಸಿತ್ತು. ಹೋರಾಟಗಾರ ರೈತರು ತಮ್ಮ ಭೂಮಿ ಕಳಕೊಳ್ಳಬೇಕಾಗಿ ಬಂತು; ಆದರೂ ಅಂಜದೆ ಅಳುಕದೆ ಪೊಲೀಸರ ಲಾಠಿಗೆ ಎದೆಗೊಟ್ಟು ನಿಂತರು! ಗುಜರಾತಿನ ಬಾರ್ಡೋಲಿಯಲ್ಲಿ ನಡೆದ ಉಪ್ಪಿನ ಸತ್ಯಾಗ್ರಹದ ಮಾದರಿಯಲ್ಲೇ ಅಂಕೋಲೆಯಲ್ಲೂ ಚಳುವಳಿ ಆಗಿತ್ತು. ಅಂಕೋಲೆಗೆ ಕರ್ನಾಟಕದ ಬಾರ್ಡೋಲಿಯೆಂದು ಹೆಸರು ಬಂದಿದ್ದೇ ಈ ಯಶಸ್ವೀ ಕರನಿರಾಕರಣೆ, ಉಪ್ಪಿನ ಸತ್ಯಾಗ್ರಹದಿಂದ! ಈ ಹೊತ್ತಲ್ಲಿ ಅಂಕೋಲೆಗೆ ಬಂದಿದ್ದ ಗಾಂಧೀಜಿ ಸ್ಪೂರ್ತಿಯ ಚಿಲುಮೆಯಾಗಿದ್ದರು.

photo courtesy : Banglore Mirror

ಕರನಿರಾಕರಣೆ ಚಳವಳಿಯು ಕರಾವಳಿ ದಾಟಿ ಮಲೆನಾಡಿಗೂ ವ್ಯಾಪಿಸಿತ್ತು. ಗಾಂಧೀಜಿ ಕುಮಟಾ-ಶಿರಸಿ-ಸಿದ್ದಾಪುರಕ್ಕೂ ಹೋಗಿ ಹೋರಾಟ ಹುರಿಗೊಳ್ಳುವಂತೆ ಮಾಡಿದ್ದರು. 1934ರಲ್ಲಿ ಸಿದ್ದಾಪುರಕ್ಕೆ ಬಂದಿದ್ದ ಗಾಂಧೀಜಿ ಸ್ವಾತಂತ್ರ್ಯ ಹೋರಾಟಗಾರ್ತಿ ಮಹಾದೇವಿತಾಯಿಯವರ ಮನೆಗೂ ಭೇಟಿ ಕೊಟ್ಟಿದ್ದರು. ಈ ಮಹಾದೇವಿತಾಯಿ ಸಿದ್ದಾಪುರದ ಪ್ರತಿಷ್ಠಿತ “ದೊಡ್ಮನೆ ಹೆಗಡೆ” ಕುಟುಂಬದವರು; ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ದೊಡ್ಡಪ್ಪನ ಮಗಳು. ಒಂದು ಮೂಲದ ಪ್ರಕಾರ ಮಹಾದೇವಿ ಬಾಲವಿಧವೆ; ಆಕೆಗೆ ಕೇಶಮುಂಡನ ಮಾಡಲಾಗಿತ್ತು. ಆಕೆಗಾಗುತ್ತಿದ್ದ ಹಿಂಸೆಯ ಸುದ್ದಿ ತಿಳಿದಿದ್ದ ಗಾಂಧೀಜಿ ಇದೊಂದು ಹೇಯ-ಬರ್ಬರ ದೌರ್ಜನ್ಯವೆಂದು ಹೇಳಿದ್ದರು; ಇಲ್ಲಾಕೆಗೆ ನೆಮ್ಮದಿಯಿಂದಿರಲು ಸಾಧ್ಯವಾಗದಿದ್ದರೆ ತಮ್ಮ ಆಶ್ರಮಕ್ಕೆ ಕರೆದೊಯ್ಯುವುದಾಗಿ ಹೇಳಿದರು. ಮಹಾದೇವಿಯೂ ಒಪ್ಪಿ ಗಾಂಧಿ ಆಶ್ರಮ ಸೇರಿಕೊಳ್ಳುತ್ತಾರೆ. ಅಕ್ಕನ ಉತ್ತರ ಭಾರತದ ಸಂಪರ್ಕ ಬಳಸಿಕೊಂಡು ರಾಮಕೃಷ್ಣ ಹೆಗಡೆ ಬನಾರಸ್ ವಿಶ್ವವಿದ್ಯಾಲಯ ಸೇರಿಕೊಳ್ಳುತ್ತಾರೆ. ಅಲ್ಲಿ ಹಿಂದಿ-ಇಂಗ್ಲಿಷ್‌ನಲ್ಲಿ ಪಾರಂಗತರಾದ ಹೆಗಡೆ ಆ ಭಾಷಾ ಚಾಕಚಾಕ್ಯತೆಯಿಂದಲೇ ರಾಷ್ಟ್ರ ನಾಯಕರ ಸಾಲಿನಲ್ಲಿ ಮಿಂಚಲು ಅವಕಾಶವೂ ಆಯಿತು!

ಇದೇ ಸಿದ್ದಾಪುರ ಹುಡದೀಬೈಲ್‍ನಲ್ಲಿ 1934ರ ಮಾರ್ಚ್‍ನಲ್ಲಿ ಗಾಂಧೀಯವರ ಭಾಷಣ ಕಾರ್ಯಕ್ರಮವಿತ್ತು. ದೊಡ್ಡ ಜನಸ್ತೋಮವೇ ನೆರೆದಿತ್ತು! ಸಿದ್ದಾಪುರದ ಮುಖಂಡರು ‘ದೇವಿ ಶಿವಪ್ಪ ಹಸ್ಲರ್’ ಎಂಬ ದಲಿತ ಮಹಿಳೆಯನ್ನು ವಾದ್ಯದೊಂದಿಗೆ ವೇದಿಕೆಗೆ ಕರೆತರುತ್ತಾರೆ. ಶಂಕರ ಗುಲ್ವಾಡಿ ಎಂಬುವರು ದೇವಿಯನ್ನು ಗಾಂಧೀಜಿಗೆ ಪರಿಚಯಿಸುತ್ತಾರೆ. ಸ್ವಾತಂತ್ರ್ಯ ಚಳವಳಿಗೆ ತನ್ನದೇ ರೀತಿಯಲ್ಲಿ ಅರ್ಪಿಸಿಕೊಂಡಿದ್ದ ಆಕೆಯ ಉದಾತ್ತತೆ-ಪ್ರಾಮಾಣಿಕತೆ ಕೇಳಿ ಗಾಂಧೀಜಿ ಕಣ್ಣಲ್ಲಿ ನೀರು ಬರುತ್ತದೆ!! “ದೇವಿಯಂಥ ಪುಣ್ಯಾತ್ಮರು ಈ ಧರೆಯಲ್ಲಿರುವುದರಿಂದಲೇ ಜಗತ್ತು ನಡೆದಿದೆ” ಎಂದವರು ಉದ್ಘರಿಸುತ್ತಾರೆ!! ಗಾಂಧೀಜಿ ಕೈಯಿಂದ ಆಕೆಗೆ ಸನ್ಮಾನವೂ ಆಗುತ್ತದೆ.

ಈ ಪ್ರಾಮಾಣಿಕತೆಯ ಬಗ್ಗೆ ಒಂದು ಕತೆಯೂ ಇದೆ: ಕರ ನಿರಾಕರಣೆ ಚಳವಳಿಯಲ್ಲಿ ಭಾಗವಹಿಸಿದವರನ್ನು ಬಂಧಿಸುವುದು ಕ್ರೂರವಾಗಿ ದಂಡಿಸುವುದು ಬ್ರಿಟಿಷರ “ನೀತಿ”ಯಾಗಿದ್ದ ಕಾಲವದು. ಸಿದ್ದಾಪುರದ ಕೆಳಗಿನ ಮನೆ ನಾಗೇಶ ಹೆಗಡೆ ತನ್ನನ್ನು ಪೊಲೀಸರು ಬಂಧಿಸುತ್ತಾರೆಂದು ಖಾತ್ರಿಯಾದಾಗ ಮನೆಯಲ್ಲಿದ್ದ ಬಂಗಾರವನ್ನೆಲ್ಲ ಒಂದು ತಪ್ಪಲಿಯಲ್ಲಿ ಹಾಕಿ ಕಿರಿಯ ಮಗನಿಗೆ ಕೊಡುತ್ತಾರೆ. ಆತ ಆ ತಪ್ಪಲಿಯನ್ನು ತೋಟದಲ್ಲಿ ಹುಗಿದಿಡುತ್ತಾನೆ. ಅದು ದೇವಿಗೆ ಗೊತ್ತಿರುತ್ತದೆ. ಕೆಲವು ದಿನಗಳಲ್ಲಿ ಆತನೂ ಜೈಲು ಪಾಲಾಗುತ್ತಾನೆ. ಒಂದು ದಿನ ಜೋರು ಮಳೆಯಲ್ಲಿ ಆ ತಪ್ಪಲಿ ತೇಲಿ ಬರುವುದು ಕಂಡ ದೇವಿ ಅದನ್ನು ಜೋಪಾನವಾಗಿ ಇಡುತ್ತಾಳೆ. ಪರಮ ಕುಡುಕನಾದ ಗಂಡ ಪೀಡಿಸಿದರೂ, ಪೊಲೀಸರು ಸತಾಯಿಸಿದರೂ ದೇವಿ ಆ ಬಂಗಾರ ಮಾತ್ರ ಕೊಡುವುದಿಲ್ಲ. ನಾಗೇಶ್ ಹೆಗಡೆ ಬಿಡುಗಡೆ ಆಗುವುದನ್ನೇ ಕಾಯುತ್ತಿದ್ದ ದೇವಿ ಅಂದೇ ನಡುರಾತ್ರಿ ಆತನ ಮನೆಗ್ಹೋಗಿ ಬಂಗಾರದ ತಪ್ಪಲಿ ಒಪ್ಪಿಸುತ್ತಾಳೆ. ನಾಗೇಶ್ ಹೆಗಡೆ ಒಂದು ಬಂಗಾರದ ಸರ ಆಕೆಗೆ ಕೊಡಲು ಮುಂದಾದಾಗ ಒಲ್ಲೆ ಅಂತಾಳೆ!! ಈ ಬಂಗಾರ ತನ್ನಲ್ಲಿರುವ ತನಕ ತಾನೆಂದು ದಿನವೂ ಸರಿಯಾಗಿ ನಿದ್ದೆ ಮಾಡಿಲ್ಲ; ಈ ಚಿನ್ನ ಸಂರಕ್ಷಣೆಯಲ್ಲೇ ಗಂಡನನ್ನೂ ಕಳಕೊಂಡೆ ಎನ್ನುತ್ತ ಮನೆಯೆಡೆ ಹೆಜ್ಜೆ ಹಾಕುತ್ತಾಳೆ.

photo courtesy : Kamat Potpouri

ಗಾಂಧೀಜಿ ಶಿರಸಿಗೆ ಹಲವು ಬಾರಿ ಬಂದುಹೋಗಿದ್ದಾರೆ. ಆದರೆ ದಾಖಲೆಯಲ್ಲಿರುವುದು ಕೆಲವು ಸಂದರ್ಭಗಳಷ್ಟೇ. 1934 ಮಾರ್ಚ್ 1ರಂದು ಶಿರಸಿಯ ಬಿಡಕಿಬೈಲ್‍ನಲ್ಲಿ ಗಾಂಧೀಜಿಯವರ ಸಾರ್ವಜನಿಕ ಸಭೆ ಏರ್ಪಾಡಾಗಿತ್ತು. ಸಭೆಯ ನಂತರ ಆ ಬಯಲಲ್ಲೇ ಹೋರಾಟಗಾರರ ಜತೆ ಗಾಂಧೀಜಿ ಸಂವಾದ ನಡೆಸುತ್ತಾರೆ. ಇದಾದ ಬಳಿಕ ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಾಲಯದ ಧರ್ಮದರ್ಶಿ ಎಸ್.ಎನ್ ಕೇಶವೈನ್ ದೇವಾಲಯಕ್ಕೆ ಹೋಗೋಣ ಎನ್ನುತ್ತಾರೆ. “ನಾನು ಬರಬೇಕೆಂದಿದ್ದರೆ ದೇವಾಲಯದಲ್ಲಿ ನಡೆಯುವ ಕೋಣಬಲಿ ನಿಲ್ಲಿಸಬೇಕು; ಜಾತಿ ಭೇದವಿಲ್ಲದೆ ಎಲ್ಲರಿಗೂ ಪ್ರವೇಶ ಕಲ್ಪಿಸಬೇಕು” ಎಂದು ಗಾಂಧಿ ಹಠ ಹಿಡಿಯುತ್ತಾರೆ. ಇದಕ್ಕೆ ದೇವಾಲಯದ ಆಡಳಿತ ಮಂಡಳಿ ಒಪ್ಪಿದ ನಂತರವೇ ದರ್ಶನಕ್ಕೆ ಹೋಗುತ್ತಾರೆ. ಅಂದಿನಿಂದ ಶಿರಸಿ ಜಾತ್ರೆ ಹೊತ್ತಲ್ಲಿ ನಡೆಯುತ್ತಿದ್ದ ಪ್ರಾಣಿ ವಧೆ ನಿಷೇಧಿಸಲಾಗಿದೆ. ಆದರೂ ಸಿರಿಂಜ್‍ನಿಂದ ಕೋಣನ ರಕ್ತ ತೆಗೆದು “ಬ್ರಾಹ್ಮಣ ದೇವಿಗೆ” ಅರ್ಪಣೆ ಮಾಡಿ ಆಕೆ ಚಮಗಾರ (ದಲಿತ) ಯುವಕನ ಮೋಹಿಸಿ ಮೋಸಹೋದೆನೆಂದು ಜಿದ್ದಿಗೆ ಬಿದ್ದ “ಪುರಾಣ” ಬೇಡವೆಂದರೂ ನೆನಪಾಗುವಂತೆ ಮಾಡಲಾಗುತ್ತಿದೆ.…

27 ಫೆಬ್ರುವರಿ 1934 ರಂದು ಗಾಂಧೀಜಿ ಕಡಲನಗರಿ ಕಾರವಾರಕ್ಕೆ ಬಂದಿದ್ದರು. ಮರುದಿನ ಗಾಂಧೀಜಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತಾಡುವುದಿತ್ತು. ಅಂದು ಅವರು ಕಾರವಾರಾಕ್ಕೆ ಸ್ವಾತಂತ್ರ್ಯ ಸಂಗ್ರಾಮದ ಸಂದೇಶ ಸಾರಲು ಬಂದಿದ್ದರೆಂಬುದು ಸಾಮಾನ್ಯ ಅಭಿಪ್ರಾಯ. ವಾಸ್ತವವೆಂದರೆ, ಗಾಂಧೀಜಿ ಕಾರವಾರಕ್ಕೆ ಬಂದಿದ್ದು ಆ ವೇಳೆ ಅಡಿಯಾಗಿದ್ದ ಅಸ್ಪೃಶ್ಯತೆ ಮತ್ತು ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿರುದ್ಧದ ಜನಜಾಗೃತಿ ಮೂಡಿಸಲೆಂದಾಗಿತ್ತು. ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ಕಾರವಾರದ ಸುಬ್ಬರಾವ್ ಹಳದೀಪುರ್ಕರ್ ಸಹೋದರ ಕೃಷ್ಣರಾವ್ ಆಸ್ಥೆಯಿಂದ ಗಾಂಧಿಜೀಯವರನ್ನು ಕರೆಸಿದ್ದರು.

ಕುಂದಾಪುರದಿಂದ ‘ದಯಾವತಿ’ ಎಂಬ ಬೋಟ್‍ನಲ್ಲಿ ಕಾರವಾರ ತಲುಪಿದ್ದ ಗಾಂಧೀಜಿ ಹಳದಿಪುರ್ಕರ್ ಮನೆಯಲ್ಲೇ ವಾಸ್ತವ್ಯ ಮಾಡಿದ್ದರು. ಮರುದಿನದ ಸಭೆಗಾಗಿ ರಾತ್ರಿ ಸಮಾಲೋಚನೆ ನಡೆಸಿದ್ದರು. ಗೀತಾಂಜಲಿ ಟಾಕೀಸ್ ಹಿಂದಿನ ಬಯಲಲ್ಲಿ ಸಾರ್ವಜನಿಕ ಸಭೆಯ ವೇದಿಕೆ ಸಿದ್ಧ ಮಾಡಲಾಗಿತ್ತು. ಅಲ್ಲಿ ಗಾಂಧೀಜಿಗೆ ಶ್ರೀಗಂಧದ ಪೆಟ್ಟಿಗೆ ಮತ್ತು ಬೆಳ್ಳಿ ಡಬ್ಬಿಯಲ್ಲಿ “ಮಾನಪತ್ರ” ಅರ್ಪಿಸಲಾಗಿತ್ತು. ಕಾಣಿಕೆ ಪಡೆಯಲು ನಯವಾಗಿ ನಿರಾಕರಿಸಿದ ಗಾಂಧೀಜಿ ಅದನ್ನು ಅದೇ ಸಭೆಯಲ್ಲಿ ಹರಾಜು ಹಾಕಿದ್ದರು. ಉತ್ತರ ಕನ್ನಡಕ್ಕೆ ಗಾಂಧೀಜಿಯವರ ಚಿಂತನೆಗಳ ಜತೆಜತೆಗೇ ಒಡನಾಟವೂ ಸಿಕ್ಕಿದ್ದು ವಿಶೇಷವಾಗಿದೆ!

  • ಶುದ್ದೋಧನ

ಇದನ್ನೂ ಓದಿ: ಗಾಂಧಿ ಜಯಂತಿ: ಅಂಕೋಲೆಯ ಆಗೇರ ಮನೆಯಲ್ಲಿ ಗಾಂಧಿಗೆ ನಿತ್ಯವೂ ಪೂಜೆ!!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...