Homeಮುಖಪುಟಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು...

ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ಯಾತ್ರೆ’ಯ ಪ್ರಚಾರಕ್ಕಾಗಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿ ವಿ.ಡಿ. ಸಾವರ್ಕರ್‌ ಚಿತ್ರವನ್ನು ಬಳಸಲಾಗಿರುವ ಘಟನೆ ಕೇರಳದ ನೆಡುಂಬಸ್ಸೆರಿ ಬಳಿಯ ಅಥಣಿಯಲ್ಲಿ ನಡೆದಿದೆ.

ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಇದರ ನಂತರ ಎಚ್ಚೆತ್ತ ಪಕ್ಷದ ಕಾರ್ಯಕರ್ತರು ಆ ಚಿತ್ರಕ್ಕೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿ ಅದನ್ನು ಮರೆಮಾಚಿದ್ದಾರೆ. ಈ ನಡುವೆ ಪಕ್ಷವೂ ಸ್ಥಳೀಯ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯನ್ನು ಘಟನೆಗೆ ಹೊಣೆಯನ್ನಾಗಿಸಿ ಅಮಾನತು ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತ್‌ ಜೋಡೊ ಯಾತ್ರೆಯನ್ನು ಸ್ವಾಗತಿಸಲು ಪಕ್ಷವು ಸ್ವಾತಂತ್ಯ್ರ ಹೋರಾಟಗಾರರ ಚಿತ್ರಗಳಿರುವ ಬ್ಯಾನರನ್ನು ಅಥಣಿಯಲ್ಲಿ ಹಾಕಿತ್ತು. ಈ ಬ್ಯಾನರ್‌ನಲ್ಲಿ ರವೀಂದ್ರ ನಾಥ್ ಠಾಗೋರ್, ಅಬ್ದುಲ್ ಕಲಾಂ ಆಜಾದ್, ಜಿ.ಬಿ. ಪಂತ್ ಸೇರಿದಂತೆ ಹಲವು ಸ್ವಾತಂತ್ಯ್ರ ಹೋರಾಟಗಾರರ ನಡುವೆ ಗಾಂಧಿ ಕೊಲೆ ಆರೋಪಿಯ ಚಿತ್ರವು ಸೇರಿಕೊಂಡಿತ್ತು. ಬ್ಯಾನರ್ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಸ್ಥಳೀಯ ಸಮಿತಿ ಕಾರ್ಯದರ್ಶಿ ಸುರೇಶ್ ಅವರನ್ನು ಅಮಾನತು ಮಾಡಿದೆ.

ವಿಷಯವು ವಿವಾದವಾಗುತ್ತಿದ್ದಂತೆ ಕಾರ್ಯಕರ್ತರು ಸಾವರ್ಕರ್‌ ಚಿತ್ರದ ಮೇಲೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿದ್ದಾರೆ. ಈ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಪ್ರವೇಶಿಸುವ ಗಂಟೆಗಳ ಮೊದಲು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಭಿಯಾನದ ಸಮನ್ವಯದಲ್ಲಿ ಗಂಭೀರ ಲೋಪ ಎಸಗಿರುವ ಸ್ಥಳೀಯ ಸಮಿತಿ ಕಾರ್ಯದರ್ಶಿ ವಿರುದ್ಧ ಜಿಲ್ಲಾ ನಾಯಕತ್ವ ಕ್ರಮ ಕೈಗೊಂಡಿದೆ.

“ಪಕ್ಷದ ಸ್ಥಳೀಯ ಕಾರ್ಯಕರ್ತರೊಬ್ಬರು ಈ ಫ್ಲೆಕ್ಸ್‌ ಕಟ್ಟಿದ್ದಾರೆ. ಅವರು ಸ್ವಾತಂತ್ಯ್ರ ಹೋರಾಟಗಾರರ ಚಿತ್ರಗಳನ್ನು ಮುದ್ರಿಸಿ ಕೊಡುವಂತೆ ಫ್ಲೆಕ್ಸ್‌‌ ಮುದ್ರಣ ಮಾರಾಟಗಾರರನ್ನು ಕೇಳಿದ್ದರು. ಅದನ್ನು ಮುದ್ರಿಸುವಾಗ ಈ ಚಿತ್ರವೂ ಪ್ರಮಾದದಿಂದಾಗಿ ಮುದ್ರಣಗೊಂಡಿದೆ. ಸಮಸ್ಯೆ ಗಮನಕ್ಕೆ ಬಂದ ಕೂಡಲೇ ತೆಗೆಸಲು ಸೂಚನೆ ನೀಡಲಾಗಿದೆ” ಎಂದು ಕಾಂಗ್ರೆಸ್‌ ಮುಖಂಡರು ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳ ವರದಿ ಮಾಡಿವೆ.

ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?: ಪಾದಯಾತ್ರೆಗಳ ಇತಿಹಾಸ ಏನು ಹೇಳುತ್ತದೆ?

ಈ ಮಧ್ಯೆ ಭಾರತ್ ಜೋಡೋ ಯಾತ್ರೆ ಇಂದು ಎರ್ನಾಕುಲಂ ಜಿಲ್ಲೆಯಲ್ಲಿ ತನ್ನ ಪ್ರವಾಸವನ್ನು ಪ್ರಾರಂಭಿಸಿತು. ನಿನ್ನೆ ಸಂಜೆ ಜಿಲ್ಲೆಯ ಗಡಿಭಾಗವಾದ ಆರೂರ್‌ನಲ್ಲಿ ಪ್ರಯಾಣ ಮುಗಿಸಿ ಬೆಳಗ್ಗೆ ಕುಂಬಳಂ ಟೋಲ್ ಜಂಕ್ಷನ್‌ನಿಂದ ಹೊರಟಿತ್ತು. ಇಂದಿನ ಯಾತ್ರೆಯು ಸುಮಾರು 18 ಕಿ.ಮೀ ಕ್ರಮಿಸಿ ಎಡಪಲ್ಲಿಯ ಸೇಂಟ್ ಜಾರ್ಜ್ ಚರ್ಚ್ ನಲ್ಲಿ ಕೊನೆಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...