Homeಮುಖಪುಟಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

- Advertisement -
- Advertisement -

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ತುಷಾರ್ ಗಾಂಧಿ ಅವರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು,​​ ”ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ನಾನು ಆಗಸ್ಟ್ 9ರಂದು ನಡೆದ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕ್ರಾಂತಿ ಮೈದಾನ ಮನೆಯಿಂದ ಹೊರಟಾಗ ಸಾಂತಾಕ್ರೂಜ್ ಪೊಲೀಸ್ ಬಂಧಿಸಿದ್ದಾರೆ. ಈ ದಿನದಂದೇ ನನ್ನನ್ನೂ ಬಂಧಿಸಿರುವುದು ನನಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

ಪೊಲೀಸ ವರದಿ ಪ್ರಕಾರ ಕ್ರಾಂತಿ ಮೈದಾನದಲ್ಲಿ ಮೌನ ಮೆರವಣಿಗೆ ಮಾಡಲು ಅವಕಾಶ ಇಲ್ಲ, ಆದರೆ ಈ ಯೋಜನೆಯನ್ನು ಅವರು ಹಾಕಿಕೊಂಡಿದ್ದಾರೆ. ಇದು ‘ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆ ಎಂದು ಹೇಳಿದ್ದಾರೆ. ಇನ್ನು ತುಷಾರ್ ಗಾಂಧಿ, ಒಂದು ವೇಳೆ ನನಗೆ ಠಾಣೆಯಿಂದ ಬಿಡುಗಡೆ ನೀಡಿದರೆ ನಾನು ಖಂಡಿತ ಕ್ರಾಂತಿ ಮೈದಾನಕ್ಕೆ ಹೋಗುತ್ತೇನೆ. ಈ ದಿನವನ್ನು ಸ್ಮರಿಸುವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಮಹಾತ್ಮಾ ಗಾಂಧಿಯವರ ಮತ್ತೊಬ್ಬ ಮರಿ ಮೊಮ್ಮಗ ಅರುಣ್ ಮಣಿಲಾಲ್ ಅವರು, ”ಕ್ವಿಟ್ ಇಂಡಿಯಾ ಚಳುವಳಿಯ ಆರಂಭದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನವನ್ನು ಆಚರಿಸಲಾಗುತ್ತದೆ. ಬ್ರಿಟಿಷರು ಭಾರತವನ್ನು ತೊರೆಯುವಂತೆ ಒತ್ತಾಯಿಸುವ ನಿರ್ಣಯವನ್ನು ಕಾಂಗ್ರೆಸ್ ಈ ದಿನ ಅಂಗೀಕರಿಸಿತು. ಇದರಲ್ಲಿ ಭಾಗವಹಿಸುವುದು ಅಥವಾ ಸ್ಮರಿಸುವುದು ಯಾವ ತಪ್ಪು ಇಲ್ಲ” ಎಂದು ಹೇಳಿದ್ದಾರೆ.

ಕ್ವಿಟ್ ಇಂಡಿಯಾ ಚಳುವಳಿಯು ಆಗಸ್ಟ್ ಚಳುವಳಿ ಎಂದು ಪ್ರಸಿದ್ಧವಾಗಿದೆ, ಇದು ಸ್ವಾತಂತ್ರ್ಯಕ್ಕಾಗಿ ಭಾರತದ ಹೋರಾಟದಲ್ಲಿ ಒಂದು ಪ್ರಮುಖ ಅಧ್ಯಾಯವಾಗಿದೆ. ಕ್ವಿಟ್ ಇಂಡಿಯಾ ಚಳುವಳಿಯ 81ನೇ ವಾರ್ಷಿಕೋತ್ಸವ ಇದಾಗಿದೆ. ಕ್ವಿಟ್ ಇಂಡಿಯಾ ಚಳುವಳಿ ದಿನವನ್ನು ಪ್ರತಿ ವರ್ಷ ಆಗಸ್ಟ್ 9 ರಂದು ಸ್ಮರಿಸಲಾಗುತ್ತದೆ. ಈ ದಿನವು ಭಾರತೀಯ ಜನತೆಯ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮಾಡಿದ ತ್ಯಾಗಕ್ಕೆ ಗೌರವವಾಗಿದೆ.

‘ಭಾರತ್ ಚೋಡೋ ಆಂದೋಲನ್’, ‘ಆಗಸ್ಟ್ ಚಳುವಳಿ’ ಅಥವಾ ‘ಆಗಸ್ಟ್ ಕ್ರಾಂತಿ’ ಎಂದೂ ಕರೆಯಲ್ಪಡುವ ಕ್ವಿಟ್ ಇಂಡಿಯಾ ಚಳುವಳಿಯು ಎರಡನೇ ಮಹಾಯುದ್ಧದ ಸಮಯದಲ್ಲಿ ಆಗಸ್ಟ್ 9, 1942 ರಂದು ಪ್ರಾರಂಭವಾಯಿತು. ಮಹಾತ್ಮಾ ಗಾಂಧಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ನೇತೃತ್ವದಲ್ಲಿ, ಇದು ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿತ್ತು. ಆಂದೋಲನವು ಬಾಂಬೆಯ (ಈಗ ಮುಂಬೈ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ಪ್ರಾರಂಭವಾಯಿತು. ಬ್ರಿಟಿಷರು ಭಾರತವನ್ನು ತೊರೆಯುವಂತೆ ಗಾಂಧಿಯವರು ಕರೆ ನೀಡಿದರು ಮತ್ತು “ಮಾಡು ಇಲ್ಲವೇ ಮಡಿ” ಎಂಬ ಘೋಷಣೆಯನ್ನು ಮಾಡಿದರು. ಅನೇಕ ಜನರು ಈ ಕರೆಯನ್ನು ಬೆಂಬಲಿಸಿದರು. ಆದಾಗ್ಯೂ, ಬ್ರಿಟಿಷ್ ಸರ್ಕಾರವು ತ್ವರಿತವಾಗಿ ಪ್ರತಿಕ್ರಿಯಿಸಿತು, ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿತು. ದೇಶಾದ್ಯಂತ ಕಾಂಗ್ರೆಸ್ ಕಚೇರಿಗಳ ಮೇಲೆ ದಾಳಿ ನಡೆಸಿದರು.

ಚಳುವಳಿಯ ಸಮಯದಲ್ಲಿ ಸುಮಾರು 1,00,000 ಜನರನ್ನು ಬಂಧಿಸಲಾಯಿತು. ಸುಮಾರು 1,000 ಜನರು ಸಾಯಿಸಲಾಯಿತು ಮತ್ತು 2,500 ಕ್ಕೂ ಹೆಚ್ಚು ಜನರು ಗಾಯಗೊಂಡರು. ಬ್ರಿಟಿಷರು ಗಾಂಧಿ ಮತ್ತು ನೆಹರೂ ಅವರಂತಹ ಪ್ರಮುಖ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಚಳವಳಿಯನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾದರು. ಇದು ಸಾವುಗಳು ಮತ್ತು ಬಂಧನಗಳಿಗೆ ಕಾರಣವಾಯಿತು. ಇದರ ಹೊರತಾಗಿಯೂ, ಕ್ವಿಟ್ ಇಂಡಿಯಾ ಚಳುವಳಿಯು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯದ ಭಾರತದ ಪ್ರಯಾಣದಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read