Homeಮುಖಪುಟಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

- Advertisement -
- Advertisement -

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ತುಷಾರ್ ಗಾಂಧಿ ಅವರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು,​​ ”ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ನಾನು ಆಗಸ್ಟ್ 9ರಂದು ನಡೆದ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕ್ರಾಂತಿ ಮೈದಾನ ಮನೆಯಿಂದ ಹೊರಟಾಗ ಸಾಂತಾಕ್ರೂಜ್ ಪೊಲೀಸ್ ಬಂಧಿಸಿದ್ದಾರೆ. ಈ ದಿನದಂದೇ ನನ್ನನ್ನೂ ಬಂಧಿಸಿರುವುದು ನನಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

ಪೊಲೀಸ ವರದಿ ಪ್ರಕಾರ ಕ್ರಾಂತಿ ಮೈದಾನದಲ್ಲಿ ಮೌನ ಮೆರವಣಿಗೆ ಮಾಡಲು ಅವಕಾಶ ಇಲ್ಲ, ಆದರೆ ಈ ಯೋಜನೆಯನ್ನು ಅವರು ಹಾಕಿಕೊಂಡಿದ್ದಾರೆ. ಇದು ‘ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆ ಎಂದು ಹೇಳಿದ್ದಾರೆ. ಇನ್ನು ತುಷಾರ್ ಗಾಂಧಿ, ಒಂದು ವೇಳೆ ನನಗೆ ಠಾಣೆಯಿಂದ ಬಿಡುಗಡೆ ನೀಡಿದರೆ ನಾನು ಖಂಡಿತ ಕ್ರಾಂತಿ ಮೈದಾನಕ್ಕೆ ಹೋಗುತ್ತೇನೆ. ಈ ದಿನವನ್ನು ಸ್ಮರಿಸುವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಮಹಾತ್ಮಾ ಗಾಂಧಿಯವರ ಮತ್ತೊಬ್ಬ ಮರಿ ಮೊಮ್ಮಗ ಅರುಣ್ ಮಣಿಲಾಲ್ ಅವರು, ”ಕ್ವಿಟ್ ಇಂಡಿಯಾ ಚಳುವಳಿಯ ಆರಂಭದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನವನ್ನು ಆಚರಿಸಲಾಗುತ್ತದೆ. ಬ್ರಿಟಿಷರು ಭಾರತವನ್ನು ತೊರೆಯುವಂತೆ ಒತ್ತಾಯಿಸುವ ನಿರ್ಣಯವನ್ನು ಕಾಂಗ್ರೆಸ್ ಈ ದಿನ ಅಂಗೀಕರಿಸಿತು. ಇದರಲ್ಲಿ ಭಾಗವಹಿಸುವುದು ಅಥವಾ ಸ್ಮರಿಸುವುದು ಯಾವ ತಪ್ಪು ಇಲ್ಲ” ಎಂದು ಹೇಳಿದ್ದಾರೆ.

ಕ್ವಿಟ್ ಇಂಡಿಯಾ ಚಳುವಳಿಯು ಆಗಸ್ಟ್ ಚಳುವಳಿ ಎಂದು ಪ್ರಸಿದ್ಧವಾಗಿದೆ, ಇದು ಸ್ವಾತಂತ್ರ್ಯಕ್ಕಾಗಿ ಭಾರತದ ಹೋರಾಟದಲ್ಲಿ ಒಂದು ಪ್ರಮುಖ ಅಧ್ಯಾಯವಾಗಿದೆ. ಕ್ವಿಟ್ ಇಂಡಿಯಾ ಚಳುವಳಿಯ 81ನೇ ವಾರ್ಷಿಕೋತ್ಸವ ಇದಾಗಿದೆ. ಕ್ವಿಟ್ ಇಂಡಿಯಾ ಚಳುವಳಿ ದಿನವನ್ನು ಪ್ರತಿ ವರ್ಷ ಆಗಸ್ಟ್ 9 ರಂದು ಸ್ಮರಿಸಲಾಗುತ್ತದೆ. ಈ ದಿನವು ಭಾರತೀಯ ಜನತೆಯ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮಾಡಿದ ತ್ಯಾಗಕ್ಕೆ ಗೌರವವಾಗಿದೆ.

‘ಭಾರತ್ ಚೋಡೋ ಆಂದೋಲನ್’, ‘ಆಗಸ್ಟ್ ಚಳುವಳಿ’ ಅಥವಾ ‘ಆಗಸ್ಟ್ ಕ್ರಾಂತಿ’ ಎಂದೂ ಕರೆಯಲ್ಪಡುವ ಕ್ವಿಟ್ ಇಂಡಿಯಾ ಚಳುವಳಿಯು ಎರಡನೇ ಮಹಾಯುದ್ಧದ ಸಮಯದಲ್ಲಿ ಆಗಸ್ಟ್ 9, 1942 ರಂದು ಪ್ರಾರಂಭವಾಯಿತು. ಮಹಾತ್ಮಾ ಗಾಂಧಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ನೇತೃತ್ವದಲ್ಲಿ, ಇದು ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿತ್ತು. ಆಂದೋಲನವು ಬಾಂಬೆಯ (ಈಗ ಮುಂಬೈ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ಪ್ರಾರಂಭವಾಯಿತು. ಬ್ರಿಟಿಷರು ಭಾರತವನ್ನು ತೊರೆಯುವಂತೆ ಗಾಂಧಿಯವರು ಕರೆ ನೀಡಿದರು ಮತ್ತು “ಮಾಡು ಇಲ್ಲವೇ ಮಡಿ” ಎಂಬ ಘೋಷಣೆಯನ್ನು ಮಾಡಿದರು. ಅನೇಕ ಜನರು ಈ ಕರೆಯನ್ನು ಬೆಂಬಲಿಸಿದರು. ಆದಾಗ್ಯೂ, ಬ್ರಿಟಿಷ್ ಸರ್ಕಾರವು ತ್ವರಿತವಾಗಿ ಪ್ರತಿಕ್ರಿಯಿಸಿತು, ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿತು. ದೇಶಾದ್ಯಂತ ಕಾಂಗ್ರೆಸ್ ಕಚೇರಿಗಳ ಮೇಲೆ ದಾಳಿ ನಡೆಸಿದರು.

ಚಳುವಳಿಯ ಸಮಯದಲ್ಲಿ ಸುಮಾರು 1,00,000 ಜನರನ್ನು ಬಂಧಿಸಲಾಯಿತು. ಸುಮಾರು 1,000 ಜನರು ಸಾಯಿಸಲಾಯಿತು ಮತ್ತು 2,500 ಕ್ಕೂ ಹೆಚ್ಚು ಜನರು ಗಾಯಗೊಂಡರು. ಬ್ರಿಟಿಷರು ಗಾಂಧಿ ಮತ್ತು ನೆಹರೂ ಅವರಂತಹ ಪ್ರಮುಖ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಚಳವಳಿಯನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾದರು. ಇದು ಸಾವುಗಳು ಮತ್ತು ಬಂಧನಗಳಿಗೆ ಕಾರಣವಾಯಿತು. ಇದರ ಹೊರತಾಗಿಯೂ, ಕ್ವಿಟ್ ಇಂಡಿಯಾ ಚಳುವಳಿಯು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯದ ಭಾರತದ ಪ್ರಯಾಣದಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...