Homeಮುಖಪುಟಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

- Advertisement -
- Advertisement -

ಮಹಾತ್ಮ ಗಾಂಧಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು ಕ್ವಿಟ್ ಇಂಡಿಯಾ ದಿನದ ಸ್ಮರಣಾರ್ಥವಾಗಿ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದಾಗ ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ತುಷಾರ್ ಗಾಂಧಿ ಅವರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು,​​ ”ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ನಾನು ಆಗಸ್ಟ್ 9ರಂದು ನಡೆದ ಕ್ವಿಟ್ ಇಂಡಿಯಾ ದಿನದ ನೆನಪಿಗಾಗಿ ಕ್ರಾಂತಿ ಮೈದಾನ ಮನೆಯಿಂದ ಹೊರಟಾಗ ಸಾಂತಾಕ್ರೂಜ್ ಪೊಲೀಸ್ ಬಂಧಿಸಿದ್ದಾರೆ. ಈ ದಿನದಂದೇ ನನ್ನನ್ನೂ ಬಂಧಿಸಿರುವುದು ನನಗೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

ಪೊಲೀಸ ವರದಿ ಪ್ರಕಾರ ಕ್ರಾಂತಿ ಮೈದಾನದಲ್ಲಿ ಮೌನ ಮೆರವಣಿಗೆ ಮಾಡಲು ಅವಕಾಶ ಇಲ್ಲ, ಆದರೆ ಈ ಯೋಜನೆಯನ್ನು ಅವರು ಹಾಕಿಕೊಂಡಿದ್ದಾರೆ. ಇದು ‘ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆ ಎಂದು ಹೇಳಿದ್ದಾರೆ. ಇನ್ನು ತುಷಾರ್ ಗಾಂಧಿ, ಒಂದು ವೇಳೆ ನನಗೆ ಠಾಣೆಯಿಂದ ಬಿಡುಗಡೆ ನೀಡಿದರೆ ನಾನು ಖಂಡಿತ ಕ್ರಾಂತಿ ಮೈದಾನಕ್ಕೆ ಹೋಗುತ್ತೇನೆ. ಈ ದಿನವನ್ನು ಸ್ಮರಿಸುವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಮಹಾತ್ಮಾ ಗಾಂಧಿಯವರ ಮತ್ತೊಬ್ಬ ಮರಿ ಮೊಮ್ಮಗ ಅರುಣ್ ಮಣಿಲಾಲ್ ಅವರು, ”ಕ್ವಿಟ್ ಇಂಡಿಯಾ ಚಳುವಳಿಯ ಆರಂಭದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನವನ್ನು ಆಚರಿಸಲಾಗುತ್ತದೆ. ಬ್ರಿಟಿಷರು ಭಾರತವನ್ನು ತೊರೆಯುವಂತೆ ಒತ್ತಾಯಿಸುವ ನಿರ್ಣಯವನ್ನು ಕಾಂಗ್ರೆಸ್ ಈ ದಿನ ಅಂಗೀಕರಿಸಿತು. ಇದರಲ್ಲಿ ಭಾಗವಹಿಸುವುದು ಅಥವಾ ಸ್ಮರಿಸುವುದು ಯಾವ ತಪ್ಪು ಇಲ್ಲ” ಎಂದು ಹೇಳಿದ್ದಾರೆ.

ಕ್ವಿಟ್ ಇಂಡಿಯಾ ಚಳುವಳಿಯು ಆಗಸ್ಟ್ ಚಳುವಳಿ ಎಂದು ಪ್ರಸಿದ್ಧವಾಗಿದೆ, ಇದು ಸ್ವಾತಂತ್ರ್ಯಕ್ಕಾಗಿ ಭಾರತದ ಹೋರಾಟದಲ್ಲಿ ಒಂದು ಪ್ರಮುಖ ಅಧ್ಯಾಯವಾಗಿದೆ. ಕ್ವಿಟ್ ಇಂಡಿಯಾ ಚಳುವಳಿಯ 81ನೇ ವಾರ್ಷಿಕೋತ್ಸವ ಇದಾಗಿದೆ. ಕ್ವಿಟ್ ಇಂಡಿಯಾ ಚಳುವಳಿ ದಿನವನ್ನು ಪ್ರತಿ ವರ್ಷ ಆಗಸ್ಟ್ 9 ರಂದು ಸ್ಮರಿಸಲಾಗುತ್ತದೆ. ಈ ದಿನವು ಭಾರತೀಯ ಜನತೆಯ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮಾಡಿದ ತ್ಯಾಗಕ್ಕೆ ಗೌರವವಾಗಿದೆ.

‘ಭಾರತ್ ಚೋಡೋ ಆಂದೋಲನ್’, ‘ಆಗಸ್ಟ್ ಚಳುವಳಿ’ ಅಥವಾ ‘ಆಗಸ್ಟ್ ಕ್ರಾಂತಿ’ ಎಂದೂ ಕರೆಯಲ್ಪಡುವ ಕ್ವಿಟ್ ಇಂಡಿಯಾ ಚಳುವಳಿಯು ಎರಡನೇ ಮಹಾಯುದ್ಧದ ಸಮಯದಲ್ಲಿ ಆಗಸ್ಟ್ 9, 1942 ರಂದು ಪ್ರಾರಂಭವಾಯಿತು. ಮಹಾತ್ಮಾ ಗಾಂಧಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ನೇತೃತ್ವದಲ್ಲಿ, ಇದು ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿತ್ತು. ಆಂದೋಲನವು ಬಾಂಬೆಯ (ಈಗ ಮುಂಬೈ) ಗೋವಾಲಿಯಾ ಟ್ಯಾಂಕ್ ಮೈದಾನದಲ್ಲಿ ಪ್ರಾರಂಭವಾಯಿತು. ಬ್ರಿಟಿಷರು ಭಾರತವನ್ನು ತೊರೆಯುವಂತೆ ಗಾಂಧಿಯವರು ಕರೆ ನೀಡಿದರು ಮತ್ತು “ಮಾಡು ಇಲ್ಲವೇ ಮಡಿ” ಎಂಬ ಘೋಷಣೆಯನ್ನು ಮಾಡಿದರು. ಅನೇಕ ಜನರು ಈ ಕರೆಯನ್ನು ಬೆಂಬಲಿಸಿದರು. ಆದಾಗ್ಯೂ, ಬ್ರಿಟಿಷ್ ಸರ್ಕಾರವು ತ್ವರಿತವಾಗಿ ಪ್ರತಿಕ್ರಿಯಿಸಿತು, ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸಿತು. ದೇಶಾದ್ಯಂತ ಕಾಂಗ್ರೆಸ್ ಕಚೇರಿಗಳ ಮೇಲೆ ದಾಳಿ ನಡೆಸಿದರು.

ಚಳುವಳಿಯ ಸಮಯದಲ್ಲಿ ಸುಮಾರು 1,00,000 ಜನರನ್ನು ಬಂಧಿಸಲಾಯಿತು. ಸುಮಾರು 1,000 ಜನರು ಸಾಯಿಸಲಾಯಿತು ಮತ್ತು 2,500 ಕ್ಕೂ ಹೆಚ್ಚು ಜನರು ಗಾಯಗೊಂಡರು. ಬ್ರಿಟಿಷರು ಗಾಂಧಿ ಮತ್ತು ನೆಹರೂ ಅವರಂತಹ ಪ್ರಮುಖ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಚಳವಳಿಯನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾದರು. ಇದು ಸಾವುಗಳು ಮತ್ತು ಬಂಧನಗಳಿಗೆ ಕಾರಣವಾಯಿತು. ಇದರ ಹೊರತಾಗಿಯೂ, ಕ್ವಿಟ್ ಇಂಡಿಯಾ ಚಳುವಳಿಯು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯದ ಭಾರತದ ಪ್ರಯಾಣದಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...