Homeಸಿನಿಮಾಕ್ರೀಡೆಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

ಕ್ಯಾಪ್ಟನ್ ಕೂಲ್ ಧೋನಿಗೂ ಸಿಟ್ಟು ಬಂತು ನೋಡಿ !

- Advertisement -
- Advertisement -

|ಅಂತಃಕರಣ |

ಕ್ರಿಕೆಟ್ ರಂಗದಲ್ಲಿ ಬಹಳ ಸನ್ನಿವೇಶಗಳು ನಮಗೆ ಬಹಳ ಕಡಿಮೆ ನೋಡಲು ಸಿಗುತ್ತವೆ ಅಥವಾ ನೋಡಲು ಸಿಗುವುದೇ ಇಲ್ಲ ! ಉದಾಹರಣೆಗೆ ಕ್ರಿಸ್ ಗೇಲ್ ಡೈವ್ ಮಾಡುವುದು, ವಿರಾಟ್ ಕೊಹ್ಲಿ ಕ್ರಿಕೆಟ್ ಪುಸ್ತಕದೊಳಗಿರದ ಹೊಸ ಶಾಟ್ ಹೊಡೆಯುವುದು, ತೆಂಡುಲ್ಕರ್ ಸ್ಟೇಡಿಯಂನಾಚೆ ಸಿಕ್ಸರ್ ಹೊಡೆಯುವುದು, ಕೀರನ್ ಪೊಲಾರ್ಡ್ ಕ್ಯಾಚ್ ಬಿಡುವುದು. ಇದೇ ಪಟ್ಟಿಯಲ್ಲಿ ಬರುವ ಇನ್ನೂ ಒಂದು ಅತ್ಯಂತ ವಿರಳವಾದ ಸಂಗತಿಯೇನೆಂದರೆ ಮಹೇಂದ್ರ ಸಿಂಗ್ ಧೋನಿ ಕೋಪಗೊಳ್ಳುವುದು ! ಹೌದು, ಕ್ಯಾಪ್ಟನ್ ಕೂಲ್ ಎನಿಸಿಕೊಂಡಿರುವ ಎಂ ಎಸ್ ಧೋನಿ ಕೋಪಗೊಳ್ಳುವ ಒಂದು ಸನ್ನಿವೇಶ ಮೊನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ನಿರ್ಮಾಣವಾಯಿತು.

ಏಪ್ರಿಲ್ 11ರಂದು ಜೈಪುರದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯಿತು. ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ತಂಡ 151 ರನ್ ಗಳಿಸಿತು. 152ರ ಗುರಿ ಬೆನ್ನಟ್ಟಿದ ಚೆನ್ನೈ ತಂಡ ಬಹಳ ಬೇಗ ತನ್ನ ಟಾಪ್ 4 ಆಟಗಾರರನ್ನು ಕಳೆದುಕೊಂಡಿತು. ಆ ಸಮಯದಲ್ಲಿ ಜೊತೆಯಾದ ಅಂಬಾಟಿ ರಾಯುಡು ಹಾಗೂ ಮಹೇಂದ್ರ ಸಿಂಗ್ ಧೋನಿ 95ರ ಅತ್ಯಮೂಲ್ಯ ಜೊತೆಯಾಟದೊಂದಿಗೆ ಚೆನ್ನೈ ಗೆಲುವಿನ ಸನಿಹ ಬಂದಿತು. ಕೊನೆಯ ಓವರ್‍ನಲ್ಲಿ ಚೆನ್ನೈ ತಂಡಕ್ಕೆ 18 ರನ್‍ಗಳು ಬೇಕಿತ್ತು. ಆ ಸಮಯದಲ್ಲಿ ಬೌಲ್ ಮಾಡಲು ಬಂದಿದ್ದು ಬೆನ್ ಸ್ಟೋಕ್ಸ್. ಜಡೇಜ ಸ್ಟ್ರೈಕರ್ ಆಗಿದ್ದರೆ ನಾನ್ ಸ್ಟ್ರೈಕರ್ ಆಗಿ ಎಂ ಎಸ್ ಧೋನಿ ಇದ್ದರು. ಮೊದಲ ಎಸೆತದಲ್ಲಿಯೇ ಜಡೇಜ ಸಿಕ್ಸರ್ ಹೊಡೆದು ಒತ್ತಡ ಅಲ್ಪ ಮಟ್ಟಿಗೆ ಕಮ್ಮಿ ಮಾಡಿದರು. ಎರಡನೇ ಎಸೆತದಲ್ಲಿ ಜಡೇಜ ಒಂದು ರನ್ ಓಡಿದರು ! ಅದು ನೋ ಬಾಲ್ ಸಹ ಆಗಿತ್ತು. ಫ್ರೀ ಹಿಟ್ ಎಸೆತದಲ್ಲಿ ಧೋನಿ ಎರಡು ರನ್ ಓಡಿದರು. ಕೊನೆಯ ನಾಲ್ಕು ಎಸೆತಗಳಲ್ಲಿ ತಂಡಕ್ಕೆ ಗೆಲ್ಲಲು 8 ರನ್‍ಗಳ ಅವಶ್ಯಕತೆಯಿತ್ತು. ಆ ಸಮಯದಲ್ಲಿ ಅತ್ಯುತ್ತಮ ಯಾರ್ಕರ್ ಕಾರ್ಯರೂಪಕ್ಕೆ ತಂದ ಬೆನ್ ಸ್ಟೋಕ್ಸ್ ಧೋನಿಯವರನ್ನು ಬೌಲ್ಡ್ ಮಾಡಿದರು. ದ ಗ್ರೇಟ್ ಫಿನಿಶರ್ ಅನ್ನು ಔಟ್ ಮಾಡಿದ ಖುಷಿಯಲ್ಲಿ ರಾಜಸ್ಥಾನ ತಂಡವಿತ್ತು!


ಕೊನೆಯ 3 ಎಸೆತಗಳಲ್ಲಿ 8 ರನ್ ಅಗತ್ಯವಿತ್ತು. ಹೊಸ ಬ್ಯಾಟ್ಸ್‍ಮನ್ ನ್ಯೂಜಿಲೆಂಡ್‍ನ ಮಿಷೆಲ್ ಸ್ಯಾಂಟನರ್ ಕ್ರೀಸ್‍ನಲ್ಲಿದ್ದರು. ಈ ಸಮಯದಲ್ಲಿ ಬೆನ್ ಸ್ಟೋಕ್ಸ್ ಫುಲ್ ಟಾಸ್ ಎಸೆತವನ್ನು ಬೌಲ್ ಮಾಡಿದರು. ಸ್ಟ್ರೈಟ್ ಅಂಪೈರ್ (ನಾನ್ ಸ್ಟ್ರೈಕರ್ ಕಡೆಯಿದ್ದ ಅಂಪೈರ್) ಅದನ್ನು ನೋಬಾಲ್ (ಬ್ಯಾಟ್ಸ್‍ಮನ್‍ನ ಸೊಂಟಕ್ಕಿಂತ ಮೇಲಿದ್ದ ಕಾರಣ) ಎಂದು ಸನ್ನೆ ಮಾಡಿದರು. ಆದರೆ ಅದಾದ ಕೆಲವು ಕ್ಷಣಗಳ ನಂತರ ಲೆಗ್ ಅಂಪೈರ್ ಅದು ನೋಬಾಲ್ ಅಲ್ಲ ಸರಿಯಾದ ಎಸೆತ ಎಂದರು ! ಇದನ್ನು ನೋಡಿ ಬೌಂಡರಿಯಾಚೆಗಿನ ಡಗೌಟ್‍ನಲ್ಲಿದ್ದ ಎಂ ಎಸ್ ಧೋನಿ ಪೂರ್ತಿ ಕೋಪಗೊಂಡರು. ಕ್ರೀಸ್‍ನಲ್ಲಿದ್ದ ಜಡೇಜ ಹಾಗೂ ಸ್ಯಾಂಟನರ್ ಅಂಪೈರ್‍ಗಳ ಬಳಿ ಹೋಗಿ ಪ್ರಶ್ನಿಸತೊಡಗಿದರು. ಇದರ ಮಧ್ಯೆಯೇ ಧೋನಿ ಕ್ರೀಡಾಂಗಣಕ್ಕೆ ಕಾಲಿಟ್ಟರು ! ಅಷ್ಟು ಕೋಪಗೊಂಡಿರುವ ಧೋನಿಯನ್ನು ನಾನು ಇಷ್ಟು ವರ್ಷ ಒಮ್ಮೆ ಸಹ ನೋಡಿರಲಿಲ್ಲ!

ಲೆಗ್ ಅಂಪೈರ್ ಬಳಿ ಹೋಗಿ ಸ್ಟ್ರೈಟ್ ಅಂಪೈರ್‍ರ ಕಡೆಗೆ ಬೆರಳು ಮಾಡುತ್ತಾ ಅವರ ತಪ್ಪನ್ನು ಹೇಳತೊಡಗಿದರು. ಸ್ಟೋಕ್ಸ್, ಧೋನಿ ಹಾಗೂ ಅಂಪೈರ್‍ಗಳ ಮಧ್ಯೆ ಕೆಲವು ಕ್ಷಣಗಳ ಕಾಲ ಮಾತಿನ ಚಕಮಕಿ ನಡೆಯಿತು. ಆ ಎಸೆತವನ್ನು ನೋ ಬಾಲ್ ಎನ್ನದೇ ಸರಿಯಾದ ಎಸೆತ ಎಂದು ಪರಿಗಣಿಸಲಾಯಿತು. ಧೋನಿ ಕ್ರೀಡಾಂಗಣದಿಂದ ಹೊರನಡೆದರು.

ಅಂದ ಹಾಗೆ ಆ ಎಸೆತದಲ್ಲಿ ಎರಡು ರನ್‍ಗಳು ಬಂದವು. ಕೊನೆಯ ಎರಡು ಎಸೆತಗಳಲ್ಲಿ ಚೆನ್ನೈ ಗೆಲುವಿಗೆ 6 ರನ್ ಅಗತ್ಯವಿತ್ತು. ನಂತರದ ಎಸೆತದಲ್ಲಿ ಸಹ ಸ್ಯಾಂಟನರ್ ಎರಡು ರನ್ ಓಡಿದರು. 1 ಎಸೆತದಲ್ಲಿ 4 ರನ್‍ಗಳ ಅವಶ್ಯಕತೆಯಿತ್ತು ! ಕೊನೆಯ ಎಸೆತವನ್ನು ಸ್ಟೋಕ್ಸ್ ವೈಡ್ ಮಾಡಿದ್ದರಿಂದ ಮತ್ತೊಂದು ಅವಕಾಶ ಸ್ಯಾಂಟನರ್‍ಗೆ ದೊರೆಯಿತು. ಕೊನೆಯ ಎಸೆತದಲ್ಲಿ 3 ರನ್ ಗಳಿಸಬೇಕಾಗಿತ್ತು. ಆಗ ಸ್ಯಾಂಟನರ್ ಸ್ಟ್ರೈಟ್ ಆಗಿ ಸಿಕ್ಸ್ ಹೊಡೆದು ಚೆನ್ನೈ ತಂಡವನ್ನು ಗೆಲ್ಲಿಸಿದರು. ತಮ್ಮ ಎರಡನೇ ಪಂದ್ಯದಲ್ಲಿಯೇ ಸ್ಯಾಂಟನರ್ ಚೆನ್ನೈಗೆ ಪಂದ್ಯ ಗೆಲ್ಲಿಸಿ ತಂಡದ ಹೀರೋ ಆಗಿ ಬಿಟ್ಟರು !

ಅಂಪೈರಿಂಗ್ ವಿವಾದಕ್ಕೆ ಬರುವುದಾದರೆ ಧೋನಿಯವರು ಔಟಾದ ಮೇಲೆ ಕ್ರೀಡಾಂಗಣ ಪ್ರವೇಶಿಸಿದ್ದು ಸರಿಯಾ ಇಲ್ಲವಾ ಎಂಬ ಪ್ರಶ್ನೆ ಬರುತ್ತದೆ. ಅಷ್ಟು ಶಾಂತವಾದ ಧೋನಿ ಕೋಪಗೊಳ್ಳಲು ಕಾರಣವೇನು ಎಂಬ ಕುತೂಹಲ ಸಹ ಮೂಡುತ್ತದೆ.

ಪ್ರಾಯಶಃ ಹಿಂದಿನ ಎಸೆತದಲ್ಲಿಯೇ ಔಟಾಗಿ ತಂಡವನ್ನು ಗೆಲುವಿನ ದಡ ಸೇರಿಸಲಾಗದ ಬೇಜಾರು ಧೋನಿಯವರಿಗಿದ್ದರಬಹುದು. ಕ್ರೀಸ್‍ನಲ್ಲಿದ್ದವರಿಬ್ಬರೂ ಸಹ ಸ್ಪೆಷಲಿಸ್ಟ್ ಬ್ಯಾಟ್ಸ್‍ಮನ್‍ಗಳಲ್ಲದ ಕಾರಣ ಚೆನ್ನೈ ಆ ಸಮಯದಲ್ಲಿ ಸೋಲಿನ ಪರಿಸ್ಥಿತಿಯಲ್ಲಿಯೇ ಇತ್ತು ಎನ್ನಬಹುದು. ನಂತರದ ಎಸೆತ ನೋಬಾಲ್ ಎಂದು ಹೇಳಿ ನಂತರ ಅದನ್ನು ಹಿಂತೆಗೆದುಕೊಂಡ ಕಾರಣ ಪೂರ್ಣವಾಗಿ ಅಸಮಾಧಾನಗೊಂಡ ಧೋನಿ ಹೀಗೆ ಮಾಡಿದರು ಎನ್ನುವುದು ಒಂದು ಸಾಧ್ಯತೆಯಾದರೆ ಈ ಬಾರಿಯ ಐಪಿಎಲ್ ಅಂಪೈರ್‍ಗಳ ತಪ್ಪುಗಳಿಗೆ ಪ್ರಸಿದ್ಧವಾಗಿದೆ ಎನ್ನಬಹುದು. ಆರ್‍ಸಿಬಿ ಹಾಗೂ ಮುಂಬೈ ಎದುರಿನ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ 7 ರನ್ ಅಗತ್ಯವಿದ್ದಾಗ ಲಸಿತ್ ಮಾಲಿಂಗ ನೋಬಾಲ್ ಮಾಡಿದರು (ಗೆರೆ ದಾಟಿ). ಆದರೆ ಅಂಪೈರ್ ಅದನ್ನು ನೀಡಲಿಲ್ಲ. ಇದೇ ಕಾರಣ ಆರ್‍ಸಿಬಿ ಸೋತು ಹೋದರು ಹಾಗೂ ನಂತರ ರಿಪ್ಲೈನಲ್ಲಿ ಆ ಎಸೆತ ನೋಬಾಲ್ ಆಗಿದ್ದು ಸ್ಪಷ್ಟವಾಗಿ ಗೋಚರಿಸಿತ್ತು. ಆದರೆ ಪಂದ್ಯ ಮುಗಿದ ಕಾರಣ ಏನೂ ಮಾಡುವಂತಿರಲಿಲ್ಲ. ಆರ್‍ಸಿಬಿ ನಾಯಕ ಕೊಹ್ಲಿ ಪೋಸ್ಟ್-ಮ್ಯಾಚ್ ಪ್ರೆಸೇಂಟೇಷನ್‍ನಲ್ಲಿ ಅಸಮಾಧಾನ ವ್ಯಕ್ತಪಡಿಸಿದರೂ ಅದು ಪಂದ್ಯದ ಮೇಲೆ ಪರಿಣಾಮವೇನೂ ಬೀರಲಿಲ್ಲ. ಪಂಜಾಬ್ ಹಾಗೂ ಮುಂಬೈ ನಡುವಿನ ಪಂದ್ಯದಲ್ಲಿ ಅಂಕಿತ್ ರಜಪೂತ್ ಕೊನೆಯ ಓವರ್‍ನಲ್ಲಿ ಮಾಡಿದ ಒಂದು ಎಸೆತ ನೋ ಬಾಲ್ ಆಗಿರದಿದ್ದರೂ (ಅವರು ಗೆರೆ ದಾಟಿರದಿದ್ದರೂ) ಅಂಪೈರ್ ನೋ ಬಾಲ್ ನೀಡಿದರು. ಆ ಸಮಯದಲ್ಲಿಯೂ ಸಹ ಅದನ್ನು ಸರಿಯಾಗಿ ಗಮನಿಸದ ಫೀಲ್ಡಿಂಗ್ ಸೈಡ್ (ಪಂಜಾಬ್) ಆಟಗಾರರು ಅಂಪೈರ್‍ಗೆ ಪ್ರಶ್ನಿಸಲಿಲ್ಲ. ಆದರೆ ಈ ಸಂದರ್ಭದಲ್ಲಿ ಚೆನ್ನೈ ತಂಡಕ್ಕೆ ಅಂಪೈರ್‍ನ್ನು ಪ್ರಶ್ನಿಸುವ ಅವಕಾಶವಿತ್ತು ಹಾಗೂ ಅದನ್ನು ಜಡೇಜ ಮಾಡಿದರೂ ಅಂಪೈರ್ ಅದನ್ನು ಸರಿಯಾಗಿ ಗಣನೆಗೆ ತೆಗೆದುಕೊಳ್ಳದ ಕಾರಣ ಧೋನಿ ಕ್ರೀಡಾಂಗಣ ಪ್ರವೇಶಿಸಿ ಪ್ರಶ್ನಿಸಿದರು ಎಂದೂ ಸಹ ಹೇಳಬಹುದು. ಅಷ್ಟಕ್ಕೂ ಧೋನಿಯವರಂತಹ ಪ್ರಬುದ್ಧ ಆಟಗಾರ ಹೀಗೆ ಸುಮ್ಮನೆ ಅಥವಾ ಕ್ಷಣದ ಬಿಸಿಯಲ್ಲಿ ಮಾಡಿರುವುದಕ್ಕಂತೂ ಸಾಧ್ಯವಿಲ್ಲ ಎಂಬುದು ನನ್ನ ಅಭಿಪ್ರಾಯ. ಇಡೀ ಟೂರ್ನಮೆಂಟ್‍ನಲ್ಲಿ ಇಲ್ಲಿಯವರೆಗೆ ನಡೆದ ಅಂಪೈರಿಂಗ್ ತಪ್ಪುಗಳ ಬಿಂಬವಾಗಿ ಧೋನಿ ಅಂಪೈರ್‍ಗಳನ್ನು ಪ್ರಶ್ನಿಸಿದರು ಎಂದೂ ಹೇಳಬಹುದು. ಆದರೆ ಕ್ರೀಡಾಂಗಣವನ್ನು ಧೋನಿ ತೊರೆದ ನಂತರ ಪ್ರವೇಶಿಸಿದ್ದು ನಿಯಮಗಳಾನುಸಾರ ಖಂಡಿತವಾಗಿ ತಪ್ಪು. ಅದಕ್ಕಾಗಿ ಅವರಿಗೆ ತಮ್ಮ ಪಂದ್ಯದ ಸಂಭಾವನೆಯ 50ರಷ್ಟನ್ನು ದಂಡವಾಗಿ ಸಹ ವಿಧಿಸಲಾಯಿತು. ಧೋನಿ ಯಾಕೆ ಹಾಗೆ ಮಾಡಿದರು ಎಂಬುದಕ್ಕೆ ಸಿಎಸ್‍ಕೆ ಕೋಚ್ ಸ್ಟೀಫನ್ ಫ್ಲೆಮಿಂಗ್ ಹೇಳಿದ್ದು “ಧೋನಿ ಅಲ್ಲಿ ನಡೆದಿದ್ದುದರ ಬಗ್ಗೆ ಸರಿಯಾಗಿ ತಿಳಿದುಕೊಳ್ಳಲು ಕ್ರೀಡಾಂಗಣ ಪ್ರವೇಶಿದರು” ! ಸ್ವತಃ ಧೋನಿಯವರು ಇದರ ಬಗೆಗೆ ಇನ್ನೇನನ್ನೂ ಸಹ ಹೇಳಿಲ್ಲ. ಹಾಗಾಗಿ ಅವರು ತಮ್ಮ ಹೇಳಿಕೆ ನೀಡುವವರೆಗೆ ಎಲ್ಲವೂ ಸಾಧ್ಯತೆಗಳಷ್ಟೇ
ಏನೇ ಆಗಲಿ , ಕ್ರಿಕೆಟ್ ವಿಶ್ಲೇಷಕ ಹರ್ಷ ಭೊಗ್ಲೆ ಹೇಳಿದ ಹಾಗೆ ಧೋನಿ ಎಲ್ಲರ ಹಾಗೆ ತಾವೂ ಕೂಡ ಮನುಷ್ಯ ಎಂಬುದನ್ನು ತೋರಿಸಿಕೊಟ್ಟರು. ತಮ್ಮ ಸಿಟ್ಟನ್ನು ಕ್ರೀಡಾಂಗಣದಲ್ಲಿ ಅಷ್ಟು ತೀವ್ರವಾಗಿ ಹೊರಹಾಕಿದ್ದು ಮಾತ್ರ ಕ್ಯಾಪ್ಟನ್ ಕೂಲ್ ಅಭಿಮಾನಿಗಳಿಗೆ ಹಾಗೂ ಎಲ್ಲಾ ವೀಕ್ಷಕರಿಗೆ ಅಚ್ಚರಿಯಾಯಿತು. ನಾನಂತೂ ಅವರ ಹೇಳಿಕೆಗಾಗಿ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್‍ನಲ್ಲಿ ಕಾಯುತ್ತಿದ್ದೆ. ಆದರೆ ಅವರು ಅದರ ಬಗೆಗೆ ಏನೂ ಹೇಳಲಿಲ್ಲ.
ನಾನಂತೂ ಕ್ಯಾಪ್ಟನ್ ಕೂಲ್ ಹೇಳಿಕೆಗಾಗಿ ಕಾಯುತ್ತಿರುವೆ !!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...