Homeಸಿನಿಮಾಕ್ರೀಡೆಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಲ ಮುಗಿಯಿತೆ? ಮುಂಬರುವ ಋತುಗಳ ಒಪ್ಪಂದದಲ್ಲಿ BCCI ...

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಲ ಮುಗಿಯಿತೆ? ಮುಂಬರುವ ಋತುಗಳ ಒಪ್ಪಂದದಲ್ಲಿ BCCI ಪಟ್ಟಿಯಿಂದ ಧೋನಿ ಹೊರಕ್ಕೆ..

- Advertisement -
- Advertisement -

ಭಾರತದ ಮಾಜಿ ಕ್ಯಾಪ್ಟನ್‌, ಮೊದಲ ಟಿ20 ಪ್ರಶಸ್ತಿ ಗೆದ್ದುಕೊಟ್ಟ, ಎರಡನೇ ವಿಶ್ವಕಪ್‌ ಗೆದ್ದುಕೊಟ್ಟ, ಲಕ್ಷಾಂತರ ಅಭಿಮಾನಿಗಳ ಪಾಲಿನ ಹೆಲಿಕ್ಯಾಪ್ಟರ್‌ ಶೂಟರ್‌ ಮಹೇಂದ್ರ ಸಿಂಗ್ ಧೋನಿ ಅವರ ಅಂತರಾಷ್ಟ್ರೀಯ ಕ್ರಿಕೆಟ್‌ ವೃತ್ತಿಜೀವನ ಮುಗಿಯಿತೆ ಎಂಬ ಪ್ರಶ್ನೆಗಳು ಇಂದು ಜೋರಾಗಿ ಕೇಳಿಬಂದಿವೆ. ಇದಕ್ಕೆ ಕಾರಣ ಅವರನ್ನು ಬಿಸಿಸಿಐ ಒಪ್ಪಂದದ ಪಟ್ಟಿಯಿಂದ ಕೈಬಿಡಲಾಗಿದೆ.

ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಋತುವಿಗೆ ಕೇಂದ್ರ ಒಪ್ಪಂದಗಳನ್ನು ಪ್ರಕಟಿಸಿದ್ದು ಮಹತ್ವದ ಹೆಜ್ಜೆಯಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಪಟ್ಟಿಯಿಂದ ಸಂಪೂರ್ಣವಾಗಿ ಕೈಬಿಟ್ಟಿದೆ. ಅವರು ಕಳೆದ ಋತುವಿನಲ್ಲಿ ’ಎ’ ಗ್ರೇಡ್‌ನಲ್ಲಿದ್ದರು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರಿತ್ ಬುಮ್ರಾ ಮೂವರು ಉನ್ನತ ವಿಭಾಗದಲ್ಲಿ (ಎ +) 7 ಕೋಟಿಗಳಿಂದ ವೇತನವನ್ನು ಪಡೆಯುತ್ತಾರೆ.

ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ನಂತರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಧೋನಿ ಫಾರ್ಮ್‌ ಚೆನ್ನಾಗಿಲ್ಲ. ಇದರಿಮದ ಭಾರತೀಯ ತಂಡದಲ್ಲಿ ಧೋನಿಯ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳು ಕಂಡುಬಂದಿವೆ.

ಎಂಎಸ್ ಧೋನಿ 50 ಓವರ್ ಮತ್ತು 20 ಓವರ್‌ಗಳ ವಿಶ್ವಕಪ್ ಗೆದ್ದ ಏಕೈಕ ಅಂತರರಾಷ್ಟ್ರೀಯ ನಾಯಕ. ಅವರು 2013 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತಕ್ಕೆ ಪ್ರಶಸ್ತಿಗೆ ದಕ್ಕಿಸಿಕೊಟ್ಟಿದ್ದರು. ಭಾರತಕ್ಕಾಗಿ 90 ಟೆಸ್ಟ್ ಪಂದ್ಯಗಳಲ್ಲಿ ಧೋನಿ 4876 ರನ್ ಗಳಿಸಿದ್ದಾರೆ. 350 ಏಕದಿನ ಪಂದ್ಯಗಳಲ್ಲಿ 50.57 ರ ಸರಾಸರಿಯಲ್ಲಿ ಅವರ 10,773 ರನ್ ಗಳಿಸುವಿಕೆಯು ಭಾರತದ ಅತ್ಯುತ್ತಮ 50 ಓವರ್‌ಗಳ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. 98 ಟಿ20 ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ.

“ಈ ಐತಿಹಾಸಿಕ ನಾಯಕ ಶೀಘ್ರದಲ್ಲೇ ತನ್ನ ಏಕದಿನ ವೃತ್ತಿಜೀವನವನ್ನು ಕೊನೆಗೊಳಿಸಬಹುದು ಆದರೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು. ಏಕೆಂದರೆ ಅವರು ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌‌ನಲ್ಲಿದ್ದಾರೆ” ಎಂದು ಮುಖ್ಯ ತರಬೇತುದಾರ ರವಿಶಾಸ್ತ್ರಿ ಇತ್ತೀಚಿನ ಸಂದರ್ಶನದಲ್ಲಿ ಹೇಳಿದ್ದಾರೆ.

ಜಸ್ಪ್ರೀತ್ ಬುಮ್ರಾ ಕಳೆದ ವರ್ಷದಲ್ಲಿ ದೈತ್ಯ ದಾಪುಗಾಲಿಟ್ಟಿದ್ದಾರೆ ಮತ್ತು ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತದ ವೇಗದ ಬೌಲರ್‌ ಆಗಿ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರು ಕೊಹ್ಲಿ ಮತ್ತು ರೋಹಿತ್ ಅವರ ಸಮನಾದ ಉನ್ನತ ಶ್ರೇಣಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಟೆಸ್ಟ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರೂ ಟಾಪ್ ಆರ್ಡರ್ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಅವರನ್ನು ಗ್ರೇಡ್ ಬಿ ಯಿಂದ ಗ್ರೇಡ್ ಎ ಆಗಿ ಬಡ್ತಿ ನೀಡಲಾಗಿದೆ.

ನಾಲ್ಕು ವಿಭಾಗಗಳಾಗಿ 27 ಆಟಗಾರರನ್ನು ವಿಂಗಡಿಸಲಾಗಿದ್ದು, ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರಿತ್ ಬುಮ್ರಾ ಅವರು ಎ + ವಿಭಾಗದಲ್ಲಿರುವ ಮೂವರಾಗಿದ್ದಾರೆ.

ಧೋನಿಯೊಂದಿಗೆ ಅಂಬಾಟಿ ರಾಯುಡು, ಖಲೀಲ್ ಅಹ್ಮದ್ ಮತ್ತು ದಿನೇಶ್ ಕಾರ್ತಿಕ್ ಅವರನ್ನು ಒಪ್ಪಂದದಿಂದ ಕೈಬಿಡಲಾಗಿದೆ. ಟೆಸ್ಟ್ ಓಪನರ್ ಮಾಯಾಂಕ್ ಅಗರ್ವಾಲ್ ಅವರು ವರ್ಗ ಬಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ನವದೀಪ್ ಸೈನಿ, ದೀಪಕ್ ಚಹರ್, ಶಾರ್ದುಲ್ ಠಾಕೂರ್, ಶ್ರೇಯಸ್ ಅಯ್ಯರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಸಿ ವರ್ಗದಲ್ಲಿ ಸೇರಿಸಲಾಗಿದೆ.

ಮುಂಬರುವ ‌ಋತುವಿನಲ್ಲಿ ಬಿಸಿಸಿಐ ಒಪ್ಪಂದವು ಹೀಗಿದೆ:

ವರ್ಗ ಎ: ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಶಿಖರ್ ಧವನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಕುಲದೀಪ್ ಯಾದವ್ ಮತ್ತು ರಿಷಭ್ ಪಂತ್

ವರ್ಗ ಬಿ: ವೃದ್ಧಿಮಾನ್ ಸಹಾ, ಉಮೇಶ್ ಯಾದವ್, ಯಜುವೇಂದ್ರ ಚಹಲ್, ಹಾರ್ದಿಕ್ ಪಾಂಡ್ಯ, ಮಾಯಾಂಕ್ ಅಗರ್ವಾಲ್.

ವರ್ಗ ಸಿ: ಕೇದಾರ ಜಾಧವ್, ನವದೀಪ್ ಸೈನಿ, ದೀಪಕ್ ಚಹರ್, ಮನೀಶ್ ಪಾಂಡೆ, ಹನುಮ ವಿಹಾರಿ, ಶಾರ್ದುಲ್ ಠಾಕೂರ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...