Homeಸಿನಿಮಾಕ್ರೀಡೆಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಲ ಮುಗಿಯಿತೆ? ಮುಂಬರುವ ಋತುಗಳ ಒಪ್ಪಂದದಲ್ಲಿ BCCI ...

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ಕಾಲ ಮುಗಿಯಿತೆ? ಮುಂಬರುವ ಋತುಗಳ ಒಪ್ಪಂದದಲ್ಲಿ BCCI ಪಟ್ಟಿಯಿಂದ ಧೋನಿ ಹೊರಕ್ಕೆ..

- Advertisement -
- Advertisement -

ಭಾರತದ ಮಾಜಿ ಕ್ಯಾಪ್ಟನ್‌, ಮೊದಲ ಟಿ20 ಪ್ರಶಸ್ತಿ ಗೆದ್ದುಕೊಟ್ಟ, ಎರಡನೇ ವಿಶ್ವಕಪ್‌ ಗೆದ್ದುಕೊಟ್ಟ, ಲಕ್ಷಾಂತರ ಅಭಿಮಾನಿಗಳ ಪಾಲಿನ ಹೆಲಿಕ್ಯಾಪ್ಟರ್‌ ಶೂಟರ್‌ ಮಹೇಂದ್ರ ಸಿಂಗ್ ಧೋನಿ ಅವರ ಅಂತರಾಷ್ಟ್ರೀಯ ಕ್ರಿಕೆಟ್‌ ವೃತ್ತಿಜೀವನ ಮುಗಿಯಿತೆ ಎಂಬ ಪ್ರಶ್ನೆಗಳು ಇಂದು ಜೋರಾಗಿ ಕೇಳಿಬಂದಿವೆ. ಇದಕ್ಕೆ ಕಾರಣ ಅವರನ್ನು ಬಿಸಿಸಿಐ ಒಪ್ಪಂದದ ಪಟ್ಟಿಯಿಂದ ಕೈಬಿಡಲಾಗಿದೆ.

ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಋತುವಿಗೆ ಕೇಂದ್ರ ಒಪ್ಪಂದಗಳನ್ನು ಪ್ರಕಟಿಸಿದ್ದು ಮಹತ್ವದ ಹೆಜ್ಜೆಯಲ್ಲಿ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಪಟ್ಟಿಯಿಂದ ಸಂಪೂರ್ಣವಾಗಿ ಕೈಬಿಟ್ಟಿದೆ. ಅವರು ಕಳೆದ ಋತುವಿನಲ್ಲಿ ’ಎ’ ಗ್ರೇಡ್‌ನಲ್ಲಿದ್ದರು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರಿತ್ ಬುಮ್ರಾ ಮೂವರು ಉನ್ನತ ವಿಭಾಗದಲ್ಲಿ (ಎ +) 7 ಕೋಟಿಗಳಿಂದ ವೇತನವನ್ನು ಪಡೆಯುತ್ತಾರೆ.

ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ನಂತರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಧೋನಿ ಫಾರ್ಮ್‌ ಚೆನ್ನಾಗಿಲ್ಲ. ಇದರಿಮದ ಭಾರತೀಯ ತಂಡದಲ್ಲಿ ಧೋನಿಯ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳು ಕಂಡುಬಂದಿವೆ.

ಎಂಎಸ್ ಧೋನಿ 50 ಓವರ್ ಮತ್ತು 20 ಓವರ್‌ಗಳ ವಿಶ್ವಕಪ್ ಗೆದ್ದ ಏಕೈಕ ಅಂತರರಾಷ್ಟ್ರೀಯ ನಾಯಕ. ಅವರು 2013 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತಕ್ಕೆ ಪ್ರಶಸ್ತಿಗೆ ದಕ್ಕಿಸಿಕೊಟ್ಟಿದ್ದರು. ಭಾರತಕ್ಕಾಗಿ 90 ಟೆಸ್ಟ್ ಪಂದ್ಯಗಳಲ್ಲಿ ಧೋನಿ 4876 ರನ್ ಗಳಿಸಿದ್ದಾರೆ. 350 ಏಕದಿನ ಪಂದ್ಯಗಳಲ್ಲಿ 50.57 ರ ಸರಾಸರಿಯಲ್ಲಿ ಅವರ 10,773 ರನ್ ಗಳಿಸುವಿಕೆಯು ಭಾರತದ ಅತ್ಯುತ್ತಮ 50 ಓವರ್‌ಗಳ ಕ್ರಿಕೆಟಿಗರಲ್ಲಿ ಒಬ್ಬರಾಗಿದ್ದಾರೆ. 98 ಟಿ20 ಪಂದ್ಯಗಳಲ್ಲಿ 1617 ರನ್ ಗಳಿಸಿದ್ದಾರೆ.

“ಈ ಐತಿಹಾಸಿಕ ನಾಯಕ ಶೀಘ್ರದಲ್ಲೇ ತನ್ನ ಏಕದಿನ ವೃತ್ತಿಜೀವನವನ್ನು ಕೊನೆಗೊಳಿಸಬಹುದು ಆದರೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು. ಏಕೆಂದರೆ ಅವರು ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌‌ನಲ್ಲಿದ್ದಾರೆ” ಎಂದು ಮುಖ್ಯ ತರಬೇತುದಾರ ರವಿಶಾಸ್ತ್ರಿ ಇತ್ತೀಚಿನ ಸಂದರ್ಶನದಲ್ಲಿ ಹೇಳಿದ್ದಾರೆ.

ಜಸ್ಪ್ರೀತ್ ಬುಮ್ರಾ ಕಳೆದ ವರ್ಷದಲ್ಲಿ ದೈತ್ಯ ದಾಪುಗಾಲಿಟ್ಟಿದ್ದಾರೆ ಮತ್ತು ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತದ ವೇಗದ ಬೌಲರ್‌ ಆಗಿ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರು ಕೊಹ್ಲಿ ಮತ್ತು ರೋಹಿತ್ ಅವರ ಸಮನಾದ ಉನ್ನತ ಶ್ರೇಣಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಟೆಸ್ಟ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರೂ ಟಾಪ್ ಆರ್ಡರ್ ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಅವರನ್ನು ಗ್ರೇಡ್ ಬಿ ಯಿಂದ ಗ್ರೇಡ್ ಎ ಆಗಿ ಬಡ್ತಿ ನೀಡಲಾಗಿದೆ.

ನಾಲ್ಕು ವಿಭಾಗಗಳಾಗಿ 27 ಆಟಗಾರರನ್ನು ವಿಂಗಡಿಸಲಾಗಿದ್ದು, ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರಿತ್ ಬುಮ್ರಾ ಅವರು ಎ + ವಿಭಾಗದಲ್ಲಿರುವ ಮೂವರಾಗಿದ್ದಾರೆ.

ಧೋನಿಯೊಂದಿಗೆ ಅಂಬಾಟಿ ರಾಯುಡು, ಖಲೀಲ್ ಅಹ್ಮದ್ ಮತ್ತು ದಿನೇಶ್ ಕಾರ್ತಿಕ್ ಅವರನ್ನು ಒಪ್ಪಂದದಿಂದ ಕೈಬಿಡಲಾಗಿದೆ. ಟೆಸ್ಟ್ ಓಪನರ್ ಮಾಯಾಂಕ್ ಅಗರ್ವಾಲ್ ಅವರು ವರ್ಗ ಬಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ನವದೀಪ್ ಸೈನಿ, ದೀಪಕ್ ಚಹರ್, ಶಾರ್ದುಲ್ ಠಾಕೂರ್, ಶ್ರೇಯಸ್ ಅಯ್ಯರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಸಿ ವರ್ಗದಲ್ಲಿ ಸೇರಿಸಲಾಗಿದೆ.

ಮುಂಬರುವ ‌ಋತುವಿನಲ್ಲಿ ಬಿಸಿಸಿಐ ಒಪ್ಪಂದವು ಹೀಗಿದೆ:

ವರ್ಗ ಎ: ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಶಿಖರ್ ಧವನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಕುಲದೀಪ್ ಯಾದವ್ ಮತ್ತು ರಿಷಭ್ ಪಂತ್

ವರ್ಗ ಬಿ: ವೃದ್ಧಿಮಾನ್ ಸಹಾ, ಉಮೇಶ್ ಯಾದವ್, ಯಜುವೇಂದ್ರ ಚಹಲ್, ಹಾರ್ದಿಕ್ ಪಾಂಡ್ಯ, ಮಾಯಾಂಕ್ ಅಗರ್ವಾಲ್.

ವರ್ಗ ಸಿ: ಕೇದಾರ ಜಾಧವ್, ನವದೀಪ್ ಸೈನಿ, ದೀಪಕ್ ಚಹರ್, ಮನೀಶ್ ಪಾಂಡೆ, ಹನುಮ ವಿಹಾರಿ, ಶಾರ್ದುಲ್ ಠಾಕೂರ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...